Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಕನ್ನಡ ಓದಲು, ಬರೆಯಲು ಬಾರದವರ ಸಮೀಕ್ಷೆಆಗಬೇಕು

by admin October 16, 2023
written by admin October 16, 2023 0 comments 1 minutes read
0FacebookTwitterPinterestEmail
480

ಐತಿಹಾಸಿಕ ದಸರಾಗೆ ಚಾಲನೆ ನೀಡಿದ ನಂತರ ನಾದಬ್ರಹ್ಮ ಹಂಸಲೇಖ ಮಾತು

ಮೈಸೂರು: ಕನ್ನಡ ಓದಲು, ಬರೆಯಲು ಬಾರದವರ ಸಮೀಕ್ಷೆ ಆಗಬೇಕು ಎಂದು ನಾದಬ್ರಹ್ಮ ಹಂಸಲೇಖ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ದೇವಿ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 10-15ರ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸಿ ಹಂಸಲೇಖ ಅವರು
ವಿಶ್ವವಿಖ್ಯಾತ ಐತಿಹಾಸಿಕ ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು.

ಪೂಜ್ಯ ಕನ್ನಡಿಗರಿಗೆ, ಪೂಜ್ಯ ಕನ್ನಡಕ್ಕೆ,ಈ ದೇವಾಲಯ ಪ್ರೇಮಾಲಯಕ್ಕೆ ನನ್ನ ಸಾವಿರ ಶರಣು ಎಂದು ಭಾಷಣ ಆರಂಭಿಸಿದ ಹಂಸಲೇಖ, ಕನ್ನಡ ಅರ್ಥ ಆಗುತ್ತೆ, ಆದರೆ ಓದಲು- ಬರೆಯಲು ಬರಲ್ಲ ಎನ್ನುವವರ ಸಮೀಕ್ಷೆ ಆಗಬೇಕು ಎಂದು ತಿಳಿಸಿದರು.

ಕನ್ನಡ ಗೊತ್ತಿಲ್ಲದವರಿಗೆ 30 ದಿನಗಳಲ್ಲಿ ಭಾಷೆ ಕಲಿಸಬೇಕು,ಕನ್ನಡ ಕಲಿತವರಿಗೆ ಜಮೀನು ಆರ್‌ಟಿಸಿ ಮಾದರಿಯಲ್ಲಿ ಕನ್ನಡ ಪಟ್ಟ ಕೊಡಬೇಕು ಎಂದು ಹೇಳಿದರು.

ಪ್ರತಿಮೆ, ಉದ್ಯಮ ವಿನಿಮಯ ಆಗಬೇಕು. ಹುಬ್ಬಳ್ಳಿ- ಬೆಳಗಾಂ ಪ್ರತಿಭೆ, ಉದ್ಯಮಗಳು ಬೆರೆಯುತ್ತಿವೆ,ಮಂಗಳೂರು- ಮೈಸೂರು ನಡುವೆ ಸಾಂಸ್ಕೃತಿಕ ವಿನಿಮಯ ಆಗಬೇಕು ಎಂದು ಅಭಿಪ್ರಾಯ ಪಟ್ಟರು.

ಮೈಸೂರು ದಸರಾ -2023ರ ಉದ್ಘಾಟನೆಯ ಕೆಲವು ಸ್ಮರಣೀಯ ಕ್ಷಣಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.#ಮೈಸೂರುದಸರಾ2023 #MysuruDasara2023 pic.twitter.com/Vz81AZ2W9B

— Siddaramaiah (@siddaramaiah) October 15, 2023

ಕರ್ನಾಟಕದ ಏಕೀಕರಣಕ್ಕೆ ಈಗ ಐದಶ ಅಂದರೆ ಐವತ್ತು, ಏಕೀಕರಣಕ್ಕೆ ಐವತ್ತು ತುಂಬಿದೆ ಅದಕ್ಕಾಗಿ ಕರ್ನಾಟಕ ಐದಶ ಅಂತಾ ಕರೆಯೋಣ, ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ 50 ವರ್ಷ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ ಇದು ಬಹಳ ಬೆಲೆ ಬಾಳುವಂತಹದ್ದು ಈ ಅವಕಾಶ ನಿರಾಯಾಸವಾಗಿ ಬಂದಿಲ್ಲ. ಇದಕ್ಕಾಗಿ ಸಾವಿರ ಮೆಟ್ಟಿಲು ಹಾಗೂ ಸಾವಿರಾರು ಮೆಟ್ಟಿಲು ಹತ್ತಿ ಬಂದಿದ್ದೇನೆ.

ಈ ಅವಕಾಶಕ್ಕೆ ಯಾರು ಕಾರಣ ಯಾರನ್ನು ಮೊದಲು ನೆನೆಯಲಿ, ಅಪ್ಪ ಗೋವಿಂದರಾಜ ಮಾನೆ, ಅಮ್ಮ ರಾಜಮ್ಮ, ಗುರು ನೀಲಕಂಠ ಅಥವಾ ನಾದ ನಾಟಕರಂಗ, ಸರ್ಕಾರ ಅಥವಾ ಸಂವಿಧಾನವನ್ನೇ, ಸಂವಿಧಾನದ ಗುಡ್ ಶಪರ್ಡ್ ಸಿದ್ದರಾಮಯ್ಯ ಅವರನ್ನೇ,
ಪ್ರಬಲ ಶಕ್ತಿ ಸಂಘಟಕ ಡಿಸಿಎಂ ಡಿ ಕೆ ಶಿವಕುಮಾರ್, ನನ್ನ ಹೆಸರು ಸೂಚಿಸಿದ ಡಾ ಎಚ್ ಸಿ ಮಹದೇವಪ್ಪ ಅವರನ್ನೇ, ನನ್ನ ಹೆಂಡತಿ ಮಕ್ಕಳು ಅಭಿಮಾನಿಗಳನ್ನೇ, ಅಥವಾ ಭೂಮಿ ತಾಯಿಯನ್ನೇ ಯಾರು ಯಾರು ಅಂತಾ ಹೇಳಲಿ ಎಂದು ಮನದುಂಬಿ ನುಡಿದರು.

ಇಲ್ಲಿ ನಿಂತು ಭೂಮಿ ತಾಯಿಯನ್ನ ಒಂದು ಘಳಿಗೆ ನೆನೆಯುತ್ತೇನೆ. ಕೊಂಕಣ ಸುತ್ತಿ ಮೈಲಾರಕ್ಕೆ ಬಂದು ಈ ರೀತಿ ಧನ್ಯವಾದ ಹೇಳೋದು ನಮ್ಮ ಸಿನಿಮಾದವರ ಕೆಲಸ ಎಂದು ಭಾಷಣದುದ್ದಕ್ಕೂ ಕನ್ನಡದ ಮೇಲಿನ ಪ್ರೀತಿ ಮೆರೆದರು.

ಸಾಮಾನ್ಯ ವ್ಯಕ್ತಿ ಕೈಯಲ್ಲಿ ದಸರಾ ಉದ್ಘಾಟನೆ ಸಿಎಂ ಆಸೆ ಎಂದಿದ್ದರು ಹಾಗಾಗಿ ನನಗೆ ಉದ್ಘಾಟನೆ ಭಾಗ್ಯ ಸಿಕ್ಕಿದೆ, 50 ವರ್ಷಗಳು ನನ್ನ ಸಾಧನೆಗೆ ಕಾರಣರಾದವರನ್ನು ಮತ್ತು ಭೂಮಿ ತಾಯಿಯನ್ನ ನೆನೆದಿದ್ದೇನೆ ಎಂದು ಹಂಸಲೇಖ ತಿಳಿಸಿದರು.

ಸಮಾರಂಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್, ಸಚಿವರುಗಳಾದ ಡಾ. ಹೆಚ್. ಸಿ ಮಹದೇವಪ್ಪ, ಶಿವರಾಜ್ ತಂಗಡಡಗಿ, ಕೆ ಜೆ ಜಾರ್ಜ್, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಶ್ರೀವತ್ಸ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು,ಜಿ.ಟಿ ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dasarahamsalekhakannadakarnatakamysuru dasaranadahabba
0 FacebookTwitterPinterestEmail
admin

previous post
ಪ್ರಭಾವಿ ಸಚಿವರ ಜತೆ ಗೋವಾ ಸಿಎಂ, ಬಿಜೆಪಿ ಮುಖಂಡರ ಸಂಪರ್ಕ
next post
5 ರಾಜ್ಯಗಳ ಚುನಾವಣೆಗೂ ನಮಗೂ ಏನು ಸಂಬಂಧ?; ನಾವು ತನಿಖೆ ಮಾಡಲ್ಲಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ