Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಾನು ಹಾಗೂ ನನ್ನ ದಾಖಲೆಗಳು ಕ್ಲೀನ್ ಆಗಿವೆ; ಡಿಸಿಎಂ ಡಿ.ಕೆ.ಶಿವಕುಮಾರ್

by cklbkrish October 19, 2023
written by cklbkrish October 19, 2023 0 comments 1 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
Share 2FacebookTwitterPinterestEmail
84

ಬಿಜೆಪಿ ಕುತಂತ್ರ ಫಲಿಸುವುದಿಲ್ಲ ಎಂದು ತಿರುಗೇಟು

ಬೆಂಗಳೂರು/ ಕೊಚ್ಚಿನ್: “ನಾನು ಮತ್ತು ನನ್ನ ದಾಖಲೆಗಳು ಎರಡೂ ಕ್ಲೀನ್ ಇವೆ. ಬಿಜೆಪಿಯ ಯಾವುದೇ ಕುತಂತ್ರಗಳು ಫಲ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿರುವ ಬಗ್ಗೆ ದೇವನಹಳ್ಳಿ ವಿಮಾನ ನಿಲ್ದಾಣ ಹಾಗೂ ಕೇರಳದ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಅವರು ಈ ರೀತಿ ಪ್ರತಿಕ್ರಿಯಿಸಿದರು;

“ಬಿಜೆಪಿಯ ಕುತಂತ್ರದಿಂದ ಅಕ್ರಮ ಆಸ್ತಿ ಗಳಿಕೆಯ ಪ್ರಕರಣವನ್ನ ಬಲವಂತವಾಗಿ ನನ್ನ ಮೇಲೆ ಹಾಕಲಾಗಿದೆ. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಇದ್ದ ಅಡ್ವೋಕೇಟ್ ಜನರಲ್ ಅವರೇ ‘ಇದು ಸಿಬಿಐ’ಗೆ ನೀಡುವಂತಹ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಆದರೂ ಕಾನೂನು ಬಾಹಿರವಾಗಿ ಸಿಬಿಐಗೆ ಪ್ರಕರಣ ವಹಿಸಿ, ನನ್ನ ಮೇಲೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ. ನಾವು ನ್ಯಾಯಾಲಯಕ್ಕೆ ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿ ಇಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೆವು'” ಎಂದರು.

“ಶೇ.90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ನ್ಯಾಯಾಲಯದ ಮುಂದೆ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ ಕುಟುಂಬದವರು ನನ್ನ ಆಸ್ತಿ ಯಾವುದು, ನನ್ನ ಹೆಂಡತಿಯ ಆಸ್ತಿ ಯಾವುದು ಎಂದು ಹೇಳಬೇಕು. ನನ್ನನ್ನೇ ಕರೆಸದೆ, ವಿಚಾರಣೆ ಮಾಡದೇ ಹೇಗೆ ಶೇಕಡಾ 90 ರಷ್ಟು ತನಿಖೆ ಮಾಡಿದರೋ ಗೊತ್ತಿಲ್ಲ” ಎಂದರು.

“ನನಗೆ ನ್ಯಾಯಲಯದ ಬಗ್ಗೆ ಗೌರವ, ನಂಬಿಕೆಯಿದೆ. ಅಗತ್ಯ ಸಂದರ್ಭದಲ್ಲಿ ಸೂಕ್ತ ಉತ್ತರ ಕೊಡುತ್ತೇನೆ. ಏನೇ ಪ್ರೇರಣೆ ಇರಬಹುದು, ಆದರೆ ನಾನು ಕಾನೂನು ಚೌಕಟ್ಟಿನಲ್ಲೇ ಹೋರಾಟ ಮಾಡುತ್ತೇನೆ. ಬಿಜೆಪಿ ಏನೇ ಷಡ್ಯಂತ್ರ ಮಾಡಿದರೂ ನ್ಯಾಯಾಲಯ ಹಾಗೂ ನನ್ನ ಪಟ್ಟಿ ತಕ್ಕ ಉತ್ತರ ನೀಡಲಿ” ಎಂದು ತಿಳಿಸಿದರು.

ಇತ್ತೀಚೆಗೆ ನಡೆದ ಇ.ಡಿ ದಾಳಿ ವೇಳೆ ಕರ್ನಾಟಕದಲ್ಲಿ ದೊರೆತ ಹಣ ಕಾಂಗ್ರೆಸ್ ಪಕ್ಷದ್ದು ಎನ್ನುವ ಪ್ರತಿಪಕ್ಷದವರ ಆರೋಪಗಳ ಬಗ್ಗೆ ಕೇಳಿದಾಗ “ಇಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಎಲ್ಲಿಯೂ ಸಹ ಕಾಂಗ್ರೆಸ್ ಪಕ್ಷದ ಹಾಗೂ ಪಕ್ಷಕ್ಕೆ ಸಂಬಂಧಿಸಿದವರ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಏನು ಸ್ಪಷ್ಟನೆ ನೀಡಬೇಕೋ ಅದನ್ನು ಇ.ಡಿ ಅವರೇ ಬಿಜೆಪಿ ಮತ್ತು ಜೆಡಿಎಸ್ ಗೆಳೆಯರಿಗೆ ನೀಡಿದ್ದಾರೆ” ಎಂದು ತಿರುಗೇಟು ನೀಡಿದರು.

ಅದಾನಿಯವರು ಕಲ್ಲಿದ್ದಲು ಹಗರಣ ನಡೆಸಿದ್ದಾರೆ ಎನ್ನುವ ರಾಹುಲ್ ಗಾಂಧಿ ಅವರ ಆರೋಪದ ಬಗ್ಗೆ ಕೇಳಿದಾಗ “ರಾಹುಲ್ ಗಾಂಧಿ ಅವರು ಸುಮ್ಮನೆ ಆರೋಪ ಮಾಡುವವರಲ್ಲ, ಒಳನೋಟ ಹಾಗೂ ಆಳವಾದ ಜ್ಞಾನ ಹೊಂದಿರುವ ನಾಯಕ. ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಮಾಹಿತಿಯಿಲ್ಲದ ವಿಚಾರವನ್ನು ತಿಳಿದುಕೊಂಡು ಮಾತನಾಡಬೇಕು ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಥಿತಿಗತಿ ಹೇಗಿದೆ ಎನ್ನುವ ಪ್ರಶ್ನೆಗೆ “ಇಡೀ ದೇಶಕ್ಕೆ ಕರ್ನಾಟಕ ಮಾದರಿಯನ್ನು ಕೊಟ್ಟಿದ್ದೇವೆ. ‘ಇಂಡಿಯಾ’ ಒಕ್ಕೂಟ ರೂಪು ಪಡೆದುಕೊಂಡಿದ್ದೇ ಕರ್ನಾಟಕದಲ್ಲಿ, ನಾವು ಅತ್ಯಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತೇವೆ ಎನ್ನುವ ಆತ್ಮವಿಶ್ವಾಸ ಬಲವಾಗಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ನಿಮ್ಮನ್ನು ಕಿಂಗ್ ಮೇಕರ್ ಎಂದು ಜನ ಕರೆಯುತ್ತಾರೆ, ರಾಜನ ಸ್ಥಾನದಲ್ಲಿ ಯಾವಾಗ ಕುಳಿತುಕೊಳ್ಳುತ್ತೀರಿ ಎಂದು ಕೇಳಿದಾಗ “ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ” ಎಂದರು.

Share this:

  • WhatsApp
  • Post
  • Tweet
  • Print
  • Email
assets casecbidisproportionate assets casedk shivakumarhigh courtkarnataka
Share 2 FacebookTwitterPinterestEmail
cklbkrish

previous post
ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹ
next post
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ