Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ

by cklbkrish October 25, 2023
written by cklbkrish October 25, 2023 1 comment 2 minutes read
2FacebookTwitterPinterestEmail
102

ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ

ಮೈಸೂರು: ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಹೆಚ್.ಡಿ.ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಮುಖ್ಯ ಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೆ ಎಂದರು.

ತಪ್ಪುದಾರಿಗೆ ಎಳೆಯುತ್ತಿದ್ದಾರೆ
ಕುಮಾರಸ್ವಾಮಿ ಅವರ ಸರ್ಕಾರವನ್ನು ಸಿದ್ದರಾಮಯ್ಯ ಅವರೇ ಬೀಳಿಸಿದ್ದು, ಅದನ್ನು ಅವರು ಒಪ್ಪಿಕೊಳ್ಳಲಿ ಎಂದಿರುವ ಬಗ್ಗೆ ಮಾತನಾಡಿ ಅದನ್ನು ಅವರು ವಿಧಾನಮಂಡಲದ ವಿಶ್ವಾಸ ಮತಯಾಚನೆಯಾದ ಸಂದರ್ಭದಲ್ಲಿ ಉತ್ತರ ನೀಡಿದಾಗ ಈ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ರೆಕಾರ್ಡ್ ನಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ.ಈಗ ಬೇರೆ ತರ ಹೇಳುತ್ತಿದ್ದಾರೆ. ಹಾಗಾದರೆ ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಶಾಸಕರು, ಸಚಿವರನ್ನು ಭೇಟಿ ಮಾಡದೆ ಹೋಟೆಲಿನಲ್ಲಿ ಕುಳಿತಿದ್ದರು ಎಂದರು.

ಬಿಜೆಪಿ ಅವರಿಗಿಂತ ಹೆಚ್.ಡಿ.ಕುಮಾರಸ್ವಾಮಿ ಹೆಚ್ಚು ಹತಾಶರಾಗಿದ್ದಾರೆ
ಬಿಜೆಪಿ ಗಿಂತಲೂ ಕುಮಾರಸ್ವಾಮಿ ಅವರು ಹೆಚ್ಚು ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರಾಜಕೀಯವಾಗಿ ಹತಾಶರಾದವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು. ಬಿಜೆಪಿಗಿಂತ ಜಾಸ್ತಿ ಹತಾಶರಾಗಿರುವುದು ಕುಮಾರಸ್ವಾಮಿ. ಬಿಜೆಪಿ ಜೊತೆ ಸೇರದೇ ಹೋಗಿದ್ದಾರೆ ಒಂದು ಸ್ಥಾನವನ್ನೂ ಗೆಲ್ಲಲು ಆಗುತ್ತಿರಲಿಲ್ಲ. ಕುರುಡರು, ಹೆಳವರ ರೀತಿ ಒಬ್ಬರಿಗೊಬ್ಬರು ಅವಲಂಬಿತರಾಗಿದ್ದಾರೆ ಎಂದರು.

ಚುನಾವಣೆ ಪ್ರಯುಕ್ತ ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ

ಹೈ ಕಮಾಂಡಿಗೆ ದೂರು ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಂಚ ರಾಜ್ಯಗಳ ಚುನಾವಣೆ ಬಂದಿರುವುದರಿಂದ ನೆಪಮಾಡಿಕೊಂಡು ಸುಳ್ಳು ಹೇಳುತ್ತಾರೆ. ಇಂದಿನವರೆಗೆ ನಾವು ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ. ಅದಕ್ಕಾಗಿ ಯಾರ ಬಳಿಯೂ ಹಣ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ವಿದ್ಯುತ್ ಕ್ಷಾಮ: ಕೃತಕ ಅಭಾವವಲ್ಲ

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುವುದು, ಎಲ್ಲಾ ಸಕ್ಕರೆ ಕಾರ್ಖಾನೆ ಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ಆಗುತ್ತದೆ. ಅದರಿಂದ ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳುವಂತೆ ಇದು ಕೃತಕವಾಗಿ ಆಗಿರುವ ಅಭಾವವಲ್ಲ. 2 ಬಾರಿ ಮುಖ್ಯಮಂತ್ರಿಯಾದವರು ಸತ್ಯ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ.

ಬೆಂಗಳೂರಿಗೆ ರಾಮನಗರ ಸೇರ್ಪಡೆ ಹೇಳಿಕೆ: ಡಿಸಿಎಂ ಜೊತೆ ಚರ್ಚೆ
ರಾಮನಗರವನ್ನು ಬೆಂಗಳೂರಿಗೆ ಸೇ ರ್ಪಡೆ ಮಾಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿಗಳು ಈ ಪ್ರಶ್ನೆಯನ್ನು ಅವರನ್ನೇ ಕೇಳಿ ಎಂದರು.ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ಬಿಜೆಪಿಗೆ ಮಾನ , ಮರ್ಯಾದೆ ಇದೆಯೇ
ಬಿಜೆಪಿ ಎಟಿಎಂ ಸರ್ಕಾರ ಎಂದು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಸುಳ್ಳು ಆರೋಪ. ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25.ಕೋಟಿ ಚುನಾವಣೆ ಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ , ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದರು. ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. . ಬರದ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿ ಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.

30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳು

ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯ ಹಾಳು ಮಾಡಿದ್ದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ಈಗ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ
ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಚಿವರಾಗಬೇಕೆಂದು ಬಯಸುವುದರಲ್ಲಿ ತಪ್ಪಿಲ್ಲ.ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ
ಜಾತಿಜನಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯ ನಂತರ ಅವರ ಮೇಲಿನ ವಿಪಕ್ಷಗಳ ಆರೋಪಗಳು ಹೆಚ್ಚಾಗಿದೆ ಎಂಬ ಬಗ್ಗೆ ಉತ್ತರಿಸಿ ರಾಜಕೀಯ ವಾಗಿ ಹತಾಶರಾಗಿಮಾತನಾಡುತ್ತಾರೆ. ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hd kumaraswamykarnatakakmskmskannadanewspoliticsSiddaramaiah
2 FacebookTwitterPinterestEmail
cklbkrish

previous post
ನಾನು ಹಾಗೂ ನನ್ನ ದಾಖಲೆಗಳು ಕ್ಲೀನ್ ಆಗಿವೆ; ಡಿಸಿಎಂ ಡಿ.ಕೆ.ಶಿವಕುಮಾರ್
next post
ಬುದ್ಧಿ, ಪ್ರಜ್ಞೆ, ಸಾಮಾನ್ಯ ಜ್ಞಾನ ಎಂದ ಡಿಕೆಶಿಗೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ