Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸ್ಥಳ, ಸಮಯ, ದಿನ ಫಿಕ್ಸ್‌ ಮಾಡಿ: ಡಿಸಿಎಂ ಡಿಕೆಶಿ ಬಹಿರಂಗ ಚರ್ಚೆ ಸವಾಲ್ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

by cklbkrish October 26, 2023
written by cklbkrish October 26, 2023 1 comment 5 minutes read
4FacebookTwitterPinterestEmail
114

ನೈಸ್ ಯೋಜನೆಗೆ ನೋಟಿಫೈ ಆಗಿದ್ದ 8 ಎಕರೆ ಭೂಮಿ ಕಬಳಿಸಿದ ಡಿ.ಕೆ.ಬ್ರದರ್ಸ್; ತಾವರೆಕೆರೆಯ ಒಂದೇ ಕಂಪೊಂಡಿನ 900 ಎಕರೆ ಭೂಮಿಯಲ್ಲಿ 350 ಎಕರೆ ಯಾರದು?

ಬೆಂಗಳೂರು: ಬಹಿರಂಗ ಚರ್ಚೆಗೆ ಬರುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಕಿರುವ ಸವಾಲನ್ನು ಸ್ವೀಕರಿಸಿದ್ದೇನೆ. ವಿಧಾನಸಭೆಯಲ್ಲಿಯೇ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು ಅವರು.

ಹೆಚ್ಚು ಟಿಆರ್ ಪಿ ಇರುವ ಚಾನೆಲ್ ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಬಹಿರಂಗ ಸವಾಲು ಹಾಕಿದ್ದಾರೆ. ಅದು ಹಾಗಿರಲಿ, ರಾಮನಗರ ಜಿಲ್ಲೆಯ ಅಭಿವೃದ್ಧಿಯನ್ನು ಯಾರು ಮಾಡಿದರು ಎಂಬ ವಿಷಯವೂ ಸೇರಿದಂತೆ; ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೆಂಗಳೂರು ಸುತ್ತ ಇರುವ ಭೂಮಿಗಳನ್ನು ಯಾರು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂಬ ಬಗ್ಗೆಯೂ ಬಹಿರಂಗ ಚರ್ಚೆ ಸದನದಲ್ಲಿಯೇ ನಡೆಯಲಿ. ದಾಖಲೆ ಸಮೇತ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಘೋಷಿಸಿದರು ಮಾಜಿ ಮುಖ್ಯಮಂತ್ರಿಗಳು.

ಕನಕಪುರ ಸೇರಿ ರಾಮನಗರ ಜಿಲ್ಲೆಯ ಭೂಮಿಯನ್ನು ಲೂಟಿ ಮಾಡಲು ಬೆಂಗಳೂರು ದಕ್ಷಿಣ ಜಿಲ್ಲೆ ಎನ್ನುತ್ತಿದ್ದಾರೆ. ಯಾರಿಗೆ ದಕ್ಷಣಿಯಾಗಿ ಕೊಡಲು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುತ್ತಿದ್ದಿರಿ? ಎಂದು ಅವರು ನೇರ ಪ್ರಶ್ನೆ ಕೇಳಿದ್ದಾರೆ.

ನೈಸ್ ಭೂಮಿ ಕಬಳಿಸಿದ ಡಿಕೆ ಬ್ರದರ್ಸ್

ನೈಸ್ ಜಮೀನನ್ನು ಅಕ್ರಮವಾಗಿ ಡಿ.ಕೆ.ಸುರೇಶ್ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಹೊಸಕೆರೆ‌ಹಳ್ಳಿ ಬಳಿ 8 ಎಕರೆ ನೈಸ್ ಗೆ ಅಂತ ನೋಟಿಫಿಕೇಶನ್ ಆಗಿತ್ತು ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಈ ಜಮೀನು ಡಿ.ಕೆ.ಸುರೇಶ್ ಖರೀದಿ ಮಾಡಿದ್ದಾರೆ. ಭಾಗ್ಯಲಕ್ಷಿ, ಅಮಾಸೆಗೌಡ ಎಂಬುವವರ ಹೆಸರಲ್ಲಿ ಈ ಭೂಮಿ ಇತ್ತು. ಇದನ್ನು ನೈಸ್ ಯೋಜನೆಗೆ ನೋಟಿಫೈ ಮಾಡಲಾಗಿತ್ತು. ಇದನ್ನು ಡಿ.ಕೆ.ಸುರೇಶ್ ಯಾವ ಆಧಾರದಲ್ಲಿ ಖರೀದಿ ಮಾಡುತ್ತಾರೆ ಎನ್ನುವುದು ನನ್ನ ಪ್ರಶ್ನೆ. ಅಧಿಕಾರಿಗಳು ಈ ಪ್ರಕರಣದಲ್ಲಿ ಶಾಮೀಲಾಗಿ ಡಿ.ಕೆ.ಸುರೇಶ್ ಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ 8 ಎಕರೆ ಜಾಗವನ್ನು ಶೋಭಾ ಡೆವಲಪರ್ ಗೆ ಕೊಡಲಾಗಿದೆ. ಅಲ್ಲಿ ಈಗಾಗಲೇ ಅಪಾರ್ಟ್ ಮೆಂಟ್ ಬಂದಿದೆ. ಇದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪಾತ್ರವೂ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಈ ಎಂಟು ಎಕರೆ ಕರ್ಮಕಾಂಡದ ಬಗ್ಗೆ ನನ್ನ ಬಳಿ ದಾಖಲೆ ಇದೆ. ಈ ಬಗ್ಗೆಯೂ ಬಹಿರಂಗವಾಗಿ ಚರ್ಚೆ ಮಾಡೋಣ. ಅಧಿವೇಶನ ಕರೆಯಲಿ. ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಅವರು ಸವಾಲು ಹಾಕಿದರು.

ತಾವರೆಕೆರೆ ಬಳಿ ಒಂದೇ ಕಂಪೊಂಡಿನಲ್ಲಿ 900 ಎಕರೆಯಷ್ಟು ಭೂಮಿ ಇದೆ. ಅದರಲ್ಲಿ 350 ಎಕರೆ ಯಾರದ್ದು? ಆ ಭೂಮಿಗೆ ಅಪ್ಪ ಅಮ್ಮ ಯಾರು? ಅಂತಹ ಪಾಪದ ಭೂಮಿಗಳ ಬೆಲೆ ಹೆಚ್ಚಿಸಿಕೊಂಡು ದುಡ್ಡು ಮಾಡುವುದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ಮಾಡಬೇಕಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಕರ್ನಾಟಕದವರು ಬೆಂಗಳೂರಿನಲ್ಲಿ ಇದ್ದಾರೆ. ಬೆಂಗಳೂರು ನಗರವು ಕರ್ನಾಟಕದ ಒಂದು ಭಾಗ. ನಮ್ಮ ಬ್ರ್ಯಾಂಡ್ ಬೆಂಗಳೂರು ಎನ್ನುವರಿಗೆ ಈ ನಗರವೇನು ಪಿತ್ರಾರ್ಜಿತ ಆಸ್ತಿಯೇ? ನಮ್ಮನ್ನು ವಲಸಿಗರು ಎನ್ನುವ ಇವರಿಗೆ ಅದು ಅರ್ಥ ಆಗಬೇಕು. ಡಿಕೆಶಿ ಬೆಂಗಳೂರಿನವರು ಅಲ್ಲ. ಅವರ ಮೂಲ ಬೆಂಗಳೂರು ಅಲ್ಲವೇ ಅಲ್ಲ ಎಂದು ಅವರು ಕಿಡಿಕಾರಿದರು.

ನನ್ನ ಬಳಿಯೂ ಸಾಕಷ್ಟು ಸರಕಿದೆ, ಉತ್ತರಿಸುತ್ತೇನೆ

ವಿಜಯದಶಮಿ ಆಸುಪಾಸಿನಲ್ಲಿ ಸಿಎಂ ಮತ್ತೆ ಡಿಸಿಎಂ ವೈಯಕ್ತಿಕವಾಗಿ ನನ್ನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ದಾಖಲೆ ಸಮೇತ ಮಾತಾಡಲು ಬಂದಿದ್ದೇನೆ. ಟಿಆರ್ ಪಿ ಹೆಚ್ಚು ಇರುವ ಚಾನಲ್ ನಲ್ಲಿ ನಾನು ಚರ್ಚೆಗೆ ಸಿದ್ದ ಅಂದಿದ್ದಾರೆ ಡಿಸಿಎಂ. ಟಿಆರ್ ಪಿ ಇರುವ ಚಾನೆಲ್ ಇರಲಿ, ವಿಧಾನಸಭೆಯಲ್ಲಿಯೇ ಚರ್ಚೆಗೆ ನಾನು ಸಿದ್ಧನಿದ್ದೇನೆ. ಅವರು ಚರ್ಚೆಗೆ ಬರಲಿ. ನಾನು ಕೂಡ ಸವಾಲನ್ನು ಸ್ವೀಕಾರ ಮಾಡ್ತೀನಿ. ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದರು.

ನಾನು ಬಿಡದಿಯಲ್ಲಿ ಖರೀದಿ‌ ಮಾಡಿರುವ 44 ಎಕರೆ ಜಾಗ ರಾಜಕೀಯಕ್ಕೆ ಬರುವ ಮುನ್ನ ತೆಗೆದುಕೊಂಡಿದ್ದು. ಸಿನಿಮಾದಿಂದ ಬಂದ ಹಣದಲ್ಲಿ 4 ಸಾವಿರದಿಂದ 12 ಸಾವಿರ ಹಣ ಕೊಟ್ಟು ಖರೀದಿ ಮಾಡಿದ್ದ ಭೂಮಿ ಅದು. ಮಾಲ್ ಆರಂಭ ಮಾಡಿ ಬಿಸಿನೆಸ್ ಪ್ಯಾಶನ್ ಅಂತ ನಾನು ಹಣ‌ ಸಂಪಾದನೆ ಮಾಡಿಲ್ಲ ಎಂದು ಅವರು ಹೇಳಿದರು.

1,400 ಕೋಟಿ ರೂ. ಹೇಗೆ ಸಂಪಾದನೆ ಮಾಡಿದಿರಿ?

ಡಿ.ಕೆ.ಶಿವಕುಮಾರ್ ಅವರೇ 1,400 ಕೋಟಿ ರೂಪಾಯಿ ಹೇಗೆ ಸಂಪಾದನೆ ಮಾಡಿದಿರಿ ಎಂದು ಹೇಳಿ. ನನಗೆ ನೀವು ಹೇಳುವುದು ಬೇಡ, ಕನಕಪುರದ ಜನತೆಗಾದರೂ ಹೇಳಿ, 1,400 ಕೋಟಿ ರೂಪಾಯಿ ‌ಖರೀದಿ ಹೇಗೆ ಮಾಡಿದ್ದು ಅಂತ ತಿಳಿಸಿ. ನಿಮ್ಮ ಮತದಾರರಿಗಾದರೂ ಸತ್ಯ ಹೇಳಿ ಎಂದು ಅವರು ಒತ್ತಾಯ ಮಾಡಿದರು.

ಬೆಂಗಳೂರು: ಬಹಿರಂಗ ಚರ್ಚೆಗೆ ಬರುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಕಿರುವ ಸವಾಲನ್ನು ಸ್ವೀಕರಿಸಿದ್ದೇನೆ. ವಿಧಾನಸಭೆಯಲ್ಲಿಯೇ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು ಅವರು.

ಹೆಚ್ಚು ಟಿಆರ್ ಪಿ ಇರುವ ಚಾನೆಲ್ ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಬಹಿರಂಗ ಸವಾಲು ಹಾಕಿದ್ದಾರೆ. ಅದು ಹಾಗಿರಲಿ, ರಾಮನಗರ ಜಿಲ್ಲೆಯ ಅಭಿವೃದ್ಧಿಯನ್ನು ಯಾರು ಮಾಡಿದರು ಎಂಬ ವಿಷಯವೂ ಸೇರಿದಂತೆ; ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೆಂಗಳೂರು ಸುತ್ತ ಇರುವ ಭೂಮಿಗಳನ್ನು ಯಾರು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂಬ ಬಗ್ಗೆಯೂ ಬಹಿರಂಗ ಚರ್ಚೆ ಸದನದಲ್ಲಿಯೇ ನಡೆಯಲಿ. ದಾಖಲೆ ಸಮೇತ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಘೋಷಿಸಿದರು ಮಾಜಿ ಮುಖ್ಯಮಂತ್ರಿಗಳು.

ಕನಕಪುರ ಸೇರಿ ರಾಮನಗರ ಜಿಲ್ಲೆಯ ಭೂಮಿಯನ್ನು ಲೂಟಿ ಮಾಡಲು ಬೆಂಗಳೂರು ದಕ್ಷಿಣ ಜಿಲ್ಲೆ ಎನ್ನುತ್ತಿದ್ದಾರೆ. ಯಾರಿಗೆ ದಕ್ಷಣಿಯಾಗಿ ಕೊಡಲು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುತ್ತಿದ್ದಿರಿ? ಎಂದು ಅವರು ನೇರ ಪ್ರಶ್ನೆ ಕೇಳಿದ್ದಾರೆ.

ಬುದ್ಧಿ, ಪ್ರಜ್ಞೆ, ಸಾಮಾನ್ಯ ಜ್ಞಾನ ಎಂದ ಡಿಕೆಶಿಗೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ನೈಸ್ ಭೂಮಿ ಕಬಳಿಸಿದ ಡಿಕೆ ಬ್ರದರ್ಸ್

ನೈಸ್ ಜಮೀನನ್ನು ಅಕ್ರಮವಾಗಿ ಡಿ.ಕೆ.ಸುರೇಶ್ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಹೊಸಕೆರೆ‌ಹಳ್ಳಿ ಬಳಿ 8 ಎಕರೆ ನೈಸ್ ಗೆ ಅಂತ ನೋಟಿಫಿಕೇಶನ್ ಆಗಿತ್ತು ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಈ ಜಮೀನು ಡಿ.ಕೆ.ಸುರೇಶ್ ಖರೀದಿ ಮಾಡಿದ್ದಾರೆ. ಭಾಗ್ಯಲಕ್ಷಿ, ಅಮಾಸೆಗೌಡ ಎಂಬುವವರ ಹೆಸರಲ್ಲಿ ಈ ಭೂಮಿ ಇತ್ತು. ಇದನ್ನು ನೈಸ್ ಯೋಜನೆಗೆ ನೋಟಿಫೈ ಮಾಡಲಾಗಿತ್ತು. ಇದನ್ನು ಡಿ.ಕೆ.ಸುರೇಶ್ ಯಾವ ಆಧಾರದಲ್ಲಿ ಖರೀದಿ ಮಾಡುತ್ತಾರೆ ಎನ್ನುವುದು ನನ್ನ ಪ್ರಶ್ನೆ. ಅಧಿಕಾರಿಗಳು ಈ ಪ್ರಕರಣದಲ್ಲಿ ಶಾಮೀಲಾಗಿ ಡಿ.ಕೆ.ಸುರೇಶ್ ಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ 8 ಎಕರೆ ಜಾಗವನ್ನು ಶೋಭಾ ಡೆವಲಪರ್ ಗೆ ಕೊಡಲಾಗಿದೆ. ಅಲ್ಲಿ ಈಗಾಗಲೇ ಅಪಾರ್ಟ್ ಮೆಂಟ್ ಬಂದಿದೆ. ಇದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪಾತ್ರವೂ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಈ ಎಂಟು ಎಕರೆ ಕರ್ಮಕಾಂಡದ ಬಗ್ಗೆ ನನ್ನ ಬಳಿ ದಾಖಲೆ ಇದೆ. ಈ ಬಗ್ಗೆಯೂ ಬಹಿರಂಗವಾಗಿ ಚರ್ಚೆ ಮಾಡೋಣ. ಅಧಿವೇಶನ ಕರೆಯಲಿ. ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಅವರು ಸವಾಲು ಹಾಕಿದರು.

ತಾವರೆಕೆರೆ ಬಳಿ ಒಂದೇ ಕಂಪೊಂಡಿನಲ್ಲಿ 900 ಎಕರೆಯಷ್ಟು ಭೂಮಿ ಇದೆ. ಅದರಲ್ಲಿ 350 ಎಕರೆ ಯಾರದ್ದು? ಆ ಭೂಮಿಗೆ ಅಪ್ಪ ಅಮ್ಮ ಯಾರು? ಅಂತಹ ಪಾಪದ ಭೂಮಿಗಳ ಬೆಲೆ ಹೆಚ್ಚಿಸಿಕೊಂಡು ದುಡ್ಡು ಮಾಡುವುದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ಮಾಡಬೇಕಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಕರ್ನಾಟಕದವರು ಬೆಂಗಳೂರಿನಲ್ಲಿ ಇದ್ದಾರೆ. ಬೆಂಗಳೂರು ನಗರವು ಕರ್ನಾಟಕದ ಒಂದು ಭಾಗ. ನಮ್ಮ ಬ್ರ್ಯಾಂಡ್ ಬೆಂಗಳೂರು ಎನ್ನುವರಿಗೆ ಈ ನಗರವೇನು ಪಿತ್ರಾರ್ಜಿತ ಆಸ್ತಿಯೇ? ನಮ್ಮನ್ನು ವಲಸಿಗರು ಎನ್ನುವ ಇವರಿಗೆ ಅದು ಅರ್ಥ ಆಗಬೇಕು. ಡಿಕೆಶಿ ಬೆಂಗಳೂರಿನವರು ಅಲ್ಲ. ಅವರ ಮೂಲ ಬೆಂಗಳೂರು ಅಲ್ಲವೇ ಅಲ್ಲ ಎಂದು ಅವರು ಕಿಡಿಕಾರಿದರು.

ನನ್ನ ಬಳಿಯೂ ಸಾಕಷ್ಟು ಸರಕಿದೆ, ಉತ್ತರಿಸುತ್ತೇನೆ

ವಿಜಯದಶಮಿ ಆಸುಪಾಸಿನಲ್ಲಿ ಸಿಎಂ ಮತ್ತೆ ಡಿಸಿಎಂ ವೈಯಕ್ತಿಕವಾಗಿ ನನ್ನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ದಾಖಲೆ ಸಮೇತ ಮಾತಾಡಲು ಬಂದಿದ್ದೇನೆ. ಟಿಆರ್ ಪಿ ಹೆಚ್ಚು ಇರುವ ಚಾನಲ್ ನಲ್ಲಿ ನಾನು ಚರ್ಚೆಗೆ ಸಿದ್ದ ಅಂದಿದ್ದಾರೆ ಡಿಸಿಎಂ. ಟಿಆರ್ ಪಿ ಇರುವ ಚಾನೆಲ್ ಇರಲಿ, ವಿಧಾನಸಭೆಯಲ್ಲಿಯೇ ಚರ್ಚೆಗೆ ನಾನು ಸಿದ್ಧನಿದ್ದೇನೆ. ಅವರು ಚರ್ಚೆಗೆ ಬರಲಿ. ನಾನು ಕೂಡ ಸವಾಲನ್ನು ಸ್ವೀಕಾರ ಮಾಡ್ತೀನಿ. ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದರು.

ನಾನು ಬಿಡದಿಯಲ್ಲಿ ಖರೀದಿ‌ ಮಾಡಿರುವ 44 ಎಕರೆ ಜಾಗ ರಾಜಕೀಯಕ್ಕೆ ಬರುವ ಮುನ್ನ ತೆಗೆದುಕೊಂಡಿದ್ದು. ಸಿನಿಮಾದಿಂದ ಬಂದ ಹಣದಲ್ಲಿ 4 ಸಾವಿರದಿಂದ 12 ಸಾವಿರ ಹಣ ಕೊಟ್ಟು ಖರೀದಿ ಮಾಡಿದ್ದ ಭೂಮಿ ಅದು. ಮಾಲ್ ಆರಂಭ ಮಾಡಿ ಬಿಸಿನೆಸ್ ಪ್ಯಾಶನ್ ಅಂತ ನಾನು ಹಣ‌ ಸಂಪಾದನೆ ಮಾಡಿಲ್ಲ ಎಂದು ಅವರು ಹೇಳಿದರು.

1,400 ಕೋಟಿ ರೂ. ಹೇಗೆ ಸಂಪಾದನೆ ಮಾಡಿದಿರಿ?

ಡಿ.ಕೆ.ಶಿವಕುಮಾರ್ ಅವರೇ 1,400 ಕೋಟಿ ರೂಪಾಯಿ ಹೇಗೆ ಸಂಪಾದನೆ ಮಾಡಿದಿರಿ ಎಂದು ಹೇಳಿ. ನನಗೆ ನೀವು ಹೇಳುವುದು ಬೇಡ, ಕನಕಪುರದ ಜನತೆಗಾದರೂ ಹೇಳಿ, 1,400 ಕೋಟಿ ರೂಪಾಯಿ ‌ಖರೀದಿ ಹೇಗೆ ಮಾಡಿದ್ದು ಅಂತ ತಿಳಿಸಿ. ನಿಮ್ಮ ಮತದಾರರಿಗಾದರೂ ಸತ್ಯ ಹೇಳಿ ಎಂದು ಅವರು ಒತ್ತಾಯ ಮಾಡಿದರು.

ನಾನು ಹಾಗೂ ನನ್ನ ದಾಖಲೆಗಳು ಕ್ಲೀನ್ ಆಗಿವೆ; ಡಿಸಿಎಂ ಡಿ.ಕೆ.ಶಿವಕುಮಾರ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dk shivakumardk sureshhd kumaraswamykarnatakaland grabenewsnice road
4 FacebookTwitterPinterestEmail
cklbkrish

previous post
ಹೌದು, ಸಿದ್ದರಾಮಯ್ಯಗೆ ನಾನೇ ವಿಲನ್!
next post
ವಿದ್ಯುತ್‌ ಖರೀದಿಯಲ್ಲಿ ಅಕ್ರಮ ನಡೆದಿಲ್ಲ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ