Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹೌದು, ಸಿದ್ದರಾಮಯ್ಯಗೆ ನಾನೇ ವಿಲನ್!

by cklbkrish October 26, 2023
written by cklbkrish October 26, 2023 0 comments 1 minutes read
2FacebookTwitterPinterestEmail
108

ಸರಕಾರ ಬೀಳಿಸಿದ್ದ ಸಿದ್ದರಾಮಯ್ಯಗೆ ವಿಲನ್ ಆಗದೇ ಫ್ರೆಂಡ್ ಆಗಲು ಸಾಧ್ಯವೇ?; ಸಿಎಂಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ಅವರು ಟಾಂಗ್ ನೀಡಿದರು.

ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ.

ಸರಕಾರ ಬೀಳಿಸಿದ್ದ ಸಿದ್ದರಾಮಯ್ಯ

ನನ್ನ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ. ಬಿಜೆಪಿ‌ಯವರು ಸರ್ಕಾರ ಬೀಳಿಸಿದ್ದರು ಅಂತ ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ ಎಂದ ಅವರು ರಮೇಶ್ ಜಾರಕಿಹೋಳಿ ಯಾರು? ಅವರಿಗೂ ನನಗೂ ಯಾವ ಶತ್ರುತ್ವ ಇತ್ತಾ? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ‌ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ‌ಸಮ್ಮಿಶ್ರ ಸರಕಾರ ಬಿದ್ದು ಹೋಯಿತು ಎಂದು ಅವರು ನೇರ ಆರೋಪ ಮಾಡಿದರು.

ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ‌ ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್ ನಿಂದ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಾ ಪ್ರಹಾರ ನಡೆಸಿದ ಅವರು; ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ. ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು ಅವರು.

ಗೃಹಲಕ್ಷ್ಮಿ ರಾಜಸ್ಥಾನದಲ್ಲಿ ಯಾಕೆ 10 ಸಾವಿರ‌ ಕೊಡ್ತಿದ್ದೀರಾ? ಎಲ್ಲಾ ಕಡೆ ಗ್ಯಾರಂಟಿಗಳನ್ನು ಕೊಡುತ್ತಿದೆ ಕಾಂಗ್ರೆಸ್. ಈ ಕಾರಣಕ್ಕೆ ಎಲ್ಲ ಯೋಜನೆಗಳು ಹಳ್ಳ ಹಿಡಿದು ಹೋಗಿವೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ ಥೂ ಎಂದು ಉಗಿಯೋ ಕಾಲ ಬರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congresshd kumaraswamyjdskarnatakanewspoliticsSiddaramaiahvillain
2 FacebookTwitterPinterestEmail
cklbkrish

previous post
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ
next post
ಸ್ಥಳ, ಸಮಯ, ದಿನ ಫಿಕ್ಸ್‌ ಮಾಡಿ: ಡಿಸಿಎಂ ಡಿಕೆಶಿ ಬಹಿರಂಗ ಚರ್ಚೆ ಸವಾಲ್ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ