Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಡಿ.ಕೆ.ಶಿವಕುಮಾರ್ ಸಿಎಂ ಗಾದಿ ತಪ್ಪಿಸಲು ಷಡ್ಯಂತರ

by cklbkrish October 28, 2023
written by cklbkrish October 28, 2023 0 comments 2 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
2FacebookTwitterPinterestEmail
113

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸರ್ಕಾರದ ಮಟ್ಟದಲ್ಲೇ ದೊಡ್ಡ ಷಡ್ಯಂತರ ನಡೆದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಯಕನ ಆಯ್ಕೆ ವಿಚಾರದಲ್ಲಿ ಉಂಟಾಗಿದ್ದ ಗೊಂದಲವನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪ್ರಸಕ್ತ ಅವಧಿಯನ್ನು ಸಮನಾಗಿ ಹಂಚಿಕೊಳ್ಳುವ ಎಐಸಿಸಿಯ ಸೂತ್ರಕ್ಕೆ ತಲೆಬಾಗಿದ್ದರು.

ಇದರಂತೆ ಸಿದ್ದರಾಮಯ್ಯ ಈಗಾಗಲೇ ಮುಖ್ಯಮಂತ್ರಿಯಾಗಿ ೫ ತಿಂಗಳ ಆಡಳಿತ ಪೂರ್ಣಗೊಳಿಸಿದ್ದಾರೆ. ಅಷ್ಟೇ ಅಲ್ಲ, ಚುನಾವಣಾ ಸಂದರ್ಭದಲ್ಲಿ ನೀಡಿದ್ದ ೫ ಗ್ಯಾರಂಟಿ ಭರವಸೆಗಳನ್ನು ಬಹುತೇಕ ಈಡೇರಿಸಿದ್ದಾರೆ.

ಇದರ ನಡುವೆ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯನ್ನು ಮೊಟಕುಗೊಳಿಸಿ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಗಾದಿಗೆ ತರುವ ಯತ್ನ ಕಾಂಗ್ರೆಸ್‌ನಲ್ಲೇ ನಡೆದಿದ್ದರೆ, ಮತ್ತೊಂದೆಡೆ ಸೂತ್ರದಂತೆ ಅಧಿಕಾರ ದೊರಕದಂತೆ ಮಾಡಲು ಮುಖ್ಯಮಂತ್ರಿ ಅವರ ಆಪ್ತರ ಬಣ ಟೊಂಕ ಕಟ್ಟಿ ನಿಂತಿದೆ.

ಸರ್ಕಾರದ ಮಟ್ಟದಲ್ಲೇ ನಡೆಯುತ್ತಿರುವ ತಂತ್ರಗಾರಿಕೆ

ಕಳೆದ ಎರಡು ದಿನಗಳಿಂದ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ್ದ ಸಚಿವರು, ಶಾಸಕರು ನಿರಂತರ ಔತಣಕೂಟ ಸಭೆಗಳನ್ನು ನಡೆಸಿ ಶಿವಕುಮಾರ್‌ಗೆ ಅಧಿಕಾರ ತಪ್ಪಿಸಲು ದೊಡ್ಡ ಷಡ್ಯಂತರವೇ ನಡೆದಿದೆ.

ಮೊದಲು ಸ್ಯಾಂಕಿಟ್ಯಾಂಕಿ ರಸ್ತೆಯಲ್ಲಿರುವ ಸಪ್ತ ಸಚಿವರ ವಸತಿಗೃಹದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ಆನಂತರ ಸಹಕಾರ ಸಚಿವ ರಾಜಣ್ಣ, ನಿನ್ನೆ ರಾತ್ರಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಯಲ್ಲಿ ಔತಣ ಕೂಟ ನಡೆದಿದ್ದು, ಎಲ್ಲಾ ಸಭೆಗಳಲ್ಲೂ ಮುಖ್ಯಮಂತ್ರಿ ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ.

ಸರಣಿ ಔತಣಕೂಟಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ದೂರ ಇಟ್ಟಿದ್ದಾರೆ. ಈ ಸಭೆಗಳಲ್ಲಿ ಎಸ್ಸಿ ಎಸ್ಟಿ ಸಮಾಜಕ್ಕೆ ಸೇರಿದ ಸಚಿವರು, ಶಾಸಕರಷ್ಟೇ ಭಾಗಿಯಾಗಿದ್ದರು.

ಶಿವಕುಮಾರ್ ಮತ್ತು ಅವರ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರು ಎಲ್ಲಾ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.

ಅಷ್ಟೇ ಅಲ್ಲ, ಅವರ ಆಪ್ತ ಸಚಿವ ಶಾಸಕರ ಒತ್ತಡವೂ ಹೆಚ್ಚಿದೆ. ನಮ್ಮ ಇಲಾಖೆಗಳಲ್ಲಿ ಹಸ್ತಕ್ಷೇಪವೇ ನಡೆದರೆ, ನಮಗೇನು ಕೆಲಸವಿರುತ್ತದೆ. ಇದಕ್ಕೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಅಧಿಕಾರ ಸೂತ್ರವನ್ನು ಶಿವಕುಮಾರ್ ಅವರು ಉಲ್ಲಂಘನೆ ಮಾಡಲು ಹೊರಟಂತಿದೆ. ಉಪ ಮುಖ್ಯಮಂತ್ರಿ ದೊರೆತೆ ಇಷ್ಟು ಆರ್ಭಟ ನಡೆಯುತ್ತಿದೆ.

ಇನ್ನೂ ಮುಖ್ಯಮಂತ್ರಿ ಸ್ಥಾನ ದೊರೆತರೆ ಗತಿಯೇನು? ನಿಮ್ಮ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಐದು ವರ್ಷ ನೀವೇ ಮುಖ್ಯಮಂತ್ರಿಯಾಗಿರಿ. ಮುಂದಿನ ಅವಧಿಗೆ ಹೈಕಮಾಂಡ್ ಬೇರೆ ತೀರ್ಮಾನ ಮಾಡಿಕೊಳ್ಳಲಿ ಎಂದಿದ್ದಾರೆ.

ಒಂದು ವೇಳೆ ವರಿಷ್ಠರ ತೀರ್ಮಾನಕ್ಕೆ ತಲೆಬಾಗಿದರೆ, ನಾವು ಪರ‍್ಯಾಯ ನಾಯಕತ್ವ. ಅದರಲ್ಲೂ ನಮ್ಮ ಸಮುದಾಯದವರಿಗೆ ಅವಕಾಶ ದೊರೆಯಲಿ ಅದಕ್ಕೆ ನಾವು ಬೆಂಬಲವಾಗಿ ನಿಲ್ಲುತ್ತೇವೆ ಎನ್ನುವ ಮೂಲಕ ಶಿವಕುಮಾರ್ ವಿರುದ್ಧ ಅಪಸ್ವರ ಎತ್ತಿದ್ದಾರೆ.

ಎಲ್ಲರ ಮಾತನ್ನು ಆಲಿಸಿದ ಮುಖ್ಯಮಂತ್ರಿ ಅವರು, ಸದ್ಯಕ್ಕೆ ನನ್ನ ಕೈ ಕಟ್ಟಿ ಹಾಕಲಾಗಿದೆ. ಯಾವುದೇ ರಾಜಕೀಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ.

ಎಐಸಿಸಿ ಅಧ್ಯಕ್ಷರಿಂದ ನಮಗೆ ಸೂಕ್ತ ಸಹಕಾರ ಸಿಗುತ್ತಿಲ್ಲ. ಮತ್ತೊಂದೆಡೆ ಕೇಂದ್ರ ಸರ್ಕಾರ ಆದಾಯ ತೆರಿಗೆ ದಾಳಿ ನಡೆಸುವ ಮೂಲಕ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿದೆ.

ಈಗ ಯಾರಿಗೂ ಉಪ ಮುಖ್ಯಮಂತ್ರಿ ಹುದ್ದೆ ಅಥವಾ ಇನ್ಯಾವುದೇ ಹುದ್ದೆ ನೀಡಲು ಸಾಧ್ಯವಿಲ್ಲ. ಮುಂದೆ ನೋಡೋಣ ಎಂದು ತಿಳಿಸಿದ್ದಾರೆ. ಆದರೆ, ಅವರ ಮಾತಿನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಔತಣಕೂಟದಲ್ಲಿ ಭಾಗವಹಿಸಿದ್ದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಬಿ.ನಾಗೇಂದ್ರ ಅವರು ಪ್ರತ್ಯೇಕವಾಗಿ ಮಾತನಾಡಿ, ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ.

ಅಧಿಕಾರ ಹಂಚಿಕೆ ಸಂಬಂಧಿಸಿದಂತೆ ನಮಗೇನೂ ತಿಳಿದಿದಲ್ಲ. ಸಮಯ ಸಂದರ್ಭ ನೋಡಿ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ರಾಜಣ್ಣ ತಿಳಿಸಿದ್ದಾರೆ.

ಆಪರೇಷನ್ ಕಮಲ, ಆಪರೇಷನ್ ಹಸ್ತಾ ಎರಡೂ ನಡೆಯುತ್ತಿದೆ. ಜೆಡಿಎಸ್‌ನ ಮೂರನೇ ಎರಡರಷ್ಟು ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಅವರು ಲೋಕಸಭಾ ಚುನಾವಣೆಗೂ ಮುನ್ನ ನಮ್ಮ ಪಕ್ಷದ ಕೈ ಹಿಡಿಯಬಹುದು ಎಂದಿದ್ದಾರೆ.

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷ ಕೆಲವು ಶಾಸಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅದು ಅವರ ಅಭಿಪ್ರಾಯವಷ್ಟೇ. ತೀರ್ಮಾನವಲ್ಲ. ಹೇಳಿಕೊಂಡು ತಿರುಗುತ್ತಿದ್ದಾರೆ. ತಿರುಗಲಿ ಎಂದು ತಿಳಿಸಿದ್ದಾರೆ.

ಈ ಮಧ್ಯೆ ಮಹದೇವಪ್ಪ ಮಾತನಾಡಿ, ಸಿಎಂ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಪೂರ್ಣಾವಧಿ ವರೆಗೂ ಇರುತ್ತಾರೆ ಎಂದು ಚುಟುಕಾಗಿ ಹೇಳಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡುತ್ತೀರ ಎಂಬ ಪ್ರಶ್ನೆಗೆ ಬುದ್ಧಿ ಇಲ್ಲದವರು ಹೇಳುತ್ತಾರೆ ಎಂದು ಖಾರವಾಗಿ ನುಡಿದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2 FacebookTwitterPinterestEmail
cklbkrish

previous post
ಡಿ.ಕೆ.ಶಿವಕುಮಾರ್‌ಗೆ ಸಿಎಂ ಪಟ್ಟ ತಪ್ಪಿಸಲು ಷಡ್ಯಂತರ
next post
ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಸಲ್ಲಿಕೆ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ