Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿಯಿಂದ ಬರ ಪರಿಸ್ಥಿತಿ ಅಧ್ಯಯನ

by cklbkrish October 30, 2023
written by cklbkrish October 30, 2023 0 comments 2 minutes read
2FacebookTwitterPinterestEmail
83

ಕಮಲ ಪಾಳೆಯದಿಂದ17 ತಂಡಗಳ ರಾಜ್ಯ ಪ್ರವಾಸ

ಬೆಂಗಳೂರು: ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳು ರಾಜ್ಯದ ಎಲ್ಲ 33 ಜಿಲ್ಲೆಗಳಿಗೆ ಪ್ರವಾಸ ಮಾಡಲಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ತಂಡ 2 ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ಯಡಿಯೂರಪ್ಪನವರ ತಂಡ ತುಮಕೂರು, ಮಧುಗಿರಿ, ಬೆಂಗಳೂರಿನ ಪ್ರವಾಸ ಮಾಡಲಿದೆ. ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ತಂಡವು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ಸಿ.ಟಿ.ರವಿಯವರ ತಂಡವು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದೆ ಎಂದರು.

ಈಶ್ವರಪ್ಪ ಅವರ ತಂಡ ಬಳ್ಳಾರಿ, ಕೊಪ್ಪಳ, ಸದಾನಂದಗೌಡರ ತಂಡ- ಮಂಡ್ಯ, ಹಾಸನ, ಗೋವಿಂದ ಕಾರಜೋಳ ಅವರು ಧಾರವಾಡ ಮತ್ತು ವಿಜಯನಗರ, ಬಸನಗೌಡ ಪಾಟೀಲ ಯತ್ನಾಳರು ಮೈಸೂರು, ಚಾಮರಾಜನಗರ- ಹೀಗೆ ವಿವಿಧ ತಂಡಗಳು ವಿವಿಧ ಜಿಲ್ಲೆಗಳಿಗೆ ತೆರಳುತ್ತಿವೆ ಎಂದು ವಿವರ ನೀಡಿದರು.

ನವೆಂಬರ್ 10ರಂದು ಬರ ಪರಿಸ್ಥಿತಿ ಸಂಬಂಧ ವರದಿಯನ್ನು ಬಿಡುಗಡೆ ಮಾಡಲಿದ್ದು, ಅದನ್ನು ಸರಕಾರಕ್ಕೆ ಸಲ್ಲಿಸಲಿದ್ದೇವೆ ಎಂದರು. ಬರದ ಕುರಿತು ಚರ್ಚೆಗೆ ಅಧಿವೇಶನದಲ್ಲಿ ವಿಶೇಷ ಸಮಯ ನಿಗದಿಗೆ ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದ ಅಣೆಕಟ್ಟುಗಳಲ್ಲಿ ನೀರಿಲ್ಲ. ಜಮೀನುಗಳು ಒಡೆದು ಹೋಗಿವೆ. ಕುಡಿಯುವ ನೀರು ಲಭಿಸುತ್ತಿಲ್ಲ. ಟ್ಯಾಂಕರ್‍ಗಳಲ್ಲಿ ನೀರು ಪೂರೈಸುವ ಪರಿಸ್ಥಿತಿ ಇದೆ. ಕರೆಂಟ್ ದುಬಾರಿಯಾಗಿದೆ. ಸಣ್ಣ ಕೈಗಾರಿಕೆಗಳು ಬಂದ್ ಆಗಿವೆ ಎಂದು ವಿವರಿಸಿದರು.

ಬೋರ್‍ವೆಲ್‍ಗಳು ಬತ್ತಿ ಹೋಗಿವೆ. ನೀರಿದ್ದರೂ ಅದನ್ನು ಸರಬರಾಜು ಮಾಡಲು ವಿದ್ಯುತ್ ಇಲ್ಲ. ಎಪಿಎಂಸಿಗಳಿಗೆ ಸಂಪೂರ್ಣ ವ್ಯಾಪಾರ ಇಲ್ಲವಾಗಿದೆ. ಇದು ಸೇರಿ ಗೋಶಾಲೆಗಳಿಗೆ ಭೇಟಿ ಮಾಡಲು 17 ತಂಡಗಳನ್ನು ಪಕ್ಷವು ನಿಯೋಜಿಸಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಳಿನ್‍ಕುಮಾರ್ ಕಟೀಲ್, ಸಿ.ಟಿ.ರವಿ, ವಿಜಯೇಂದ್ರ, ಅರವಿಂದ ಬೆಲ್ಲದ, ಶ್ರೀರಾಮುಲು, ಕೆ.ಎಸ್.ಈಶ್ವರಪ್ಪ, ಅರವಿಂದ ಲಿಂಬಾವಳಿ, ಬಸನಗೌಡ ಪಾಟೀಲ ಯತ್ನಾಳ, ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ವಿಶ್ವೇóಶ್ವರ ಹೆಗಡೆ ಕಾಗೇರಿ, ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಡಿ.ವಿ.ಸದಾನಂದ ಗೌಡರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ.

ರಾಜ್ಯದ ಎಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಈ ತಂಡದಲ್ಲಿ ಇರುತ್ತಾರೆ. ಎಲ್ಲ 33 ಜಿಲ್ಲೆಗಳಿಗೆ 17 ತಂಡಗಳು ಪ್ರವಾಸ ಮಾಡಲಿವೆ ಎಂದು ತಿಳಿಸಿದರು.

ಕಲೆಕ್ಷನ್ ಸರ್ಕಾರ- ರವಿಕುಮಾರ್ ಟೀಕೆ

ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಸರ್ಕಾರ ನಿಲ್ಲಿಸಿಲ್ಲ. ಇದೊಂದು ಎಟಿಎಂ ಸರ್ಕಾರ. ಇದೊಂದು ಲೂಟಿ ಸರ್ಕಾರ ಎಂದು ಟೀಕಿಸಿದರು. ವರ್ಗಾವಣೆ ದಂಧೆ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ಷೇಪಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ನಡೆಸಿದ ಎಫ್‍ಡಿಎ ಪರೀಕ್ಷೆಯಲ್ಲಿ 20 ಜನರಿಗೆ ನಿಗದಿತ ಅವಧಿಗೆ ಬದಲಿಗೆ ಒಂದು ಗಂಟೆ ಹೆಚ್ಚುವರಿ ಅವಧಿಯನ್ನು ನೀಡಿದ್ದು ಯಾಕೆ? ಎಂದು ಕೇಳಿದ ಅವರು, ಈ ಸಂಬಂಧ 9 ಜನರನ್ನು ಮಾತ್ರ ಬಂಧಿಸಲಾಗಿದೆ. ಯಾಕೆ ಆರ್.ಡಿ.ಪಾಟೀಲ್ ಬಂಧಿಸಿಲ್ಲ? ನಿಮ್ಮ ಕಾರ್ಯಕರ್ತನೆಂದು ಬಂಧಿಸಿಲ್ಲವೇ ಎಂದು ಪ್ರಶ್ನಿಸಿದರು.

ಈ ವಿಷಯವನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಳ್ಳಲಿದೆ. ಕೂಡಲೇ ಆರೋಪಿಗಳೆಲ್ಲರನ್ನು ಬಂಧಿಸಿ ಎಂದು ಅವರು ಆಗ್ರಹಿಸಿದರು. ಕಲಬುರ್ಗಿ, ಯಾದಗಿರಿಯಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದ ಅವರು, ಅಧಿಕಾರಿಗಳು, ಸಚಿವರ ಸಹಕಾರ ಇಲ್ಲದೆ ಹೀಗಾಗಲು ಸಾಧ್ಯವಿಲ್ಲ ಎಂದು ಆರೋಪಿಸಿದರು. ಇದರ ಬಗ್ಗೆ ಸಮಗ್ರ ತನಿಖೆ ಮಾಡಿಸಲು ಒತ್ತಾಯಿಸಿದರು. ಈ ಕುರಿತು ಅಧ್ಯಯನಕ್ಕೆ ತಂಡವೊಂದು ಕಲಬುರ್ಗಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpbsykarnataka bjp presidentravikumarteamtour
2 FacebookTwitterPinterestEmail
cklbkrish

previous post
ಕೆಎಸ್ ಆರ್ ಟಿಸಿ ನೌಕರರಿಗೆ ರಾಜ್ಯೋತ್ಸವದ ಕೊಡುಗೆ
next post
ಕೃಷಿ ಕ್ಷೇತ್ರ ಸುಧಾರಣೆ; ಉದ್ಯಮಿಗಳ ಜತೆ ಕೃಷಿ ಸಚಿವರ ಸಭೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ