Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೇಕೆದಾಟು ವಿಚಾರದಲ್ಲಿ ತಪ್ಪು ಮಾಹಿತಿ ನಿಲ್ಲಿಸಿ: ಸಿಎಂಗೆ ಜಲಶಕ್ತಿ ಸಚಿವ ತಾಕೀತು

ಗಜೇಂದ್ರಸಿಂಗ್ ಶೇಖಾವತ್

by cklbkrish October 30, 2023
written by cklbkrish October 30, 2023 0 comments 1 minutes read
2FacebookTwitterPinterestEmail
91

ಕನ್ನಡದಲ್ಲಿ ಟ್ವೀಟ್ ಮಾಡಿ ಟಾಂಗ್ ಕೊಟ್ಟ ಗಜೇಂದ್ರಸಿಂಗ್ ಶೇಖಾವತ್

ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಖಾರವಾಗಿ ತಿಳಿಸಿದ್ದಾರೆ.

ಕೆಂದ್ರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಅವರು ಪ್ರತಿನಿತ್ಯ ಟ್ವೀಟ್ ಮಾಡುತ್ತಿರುವ ಬೆನ್ನಲ್ಲೇ, ಶೇಖಾವತ್ ಅವರು, ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಪ್ರತ್ಯೇಕವಾಗಿ ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೃಷ್ಣರಾಜಸಾಗರ ಅಣೆಕಟ್ಟೆಗೆ ಸಮಾನಂತರವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಸಂಬಂಧಿಸಿದ ನಿಮಗೆ ವಿವರಣೆ ನೀಡುತ್ತಿರುವವರು ಸರಿಯಾಗಿ ಮಾಹಿತಿ ನೀಡುತ್ತಿಲ್ಲ.

ಅವರ ಮಾತನ್ನೇ ಕೇಳಿ ನೀವು ಜನರಿಗೆ ಸುಳ್ಳು ಸುದ್ದಿ ನೀಡಬಾರದು. ಇದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ ಎಂದು ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ.

 ಕೇಂದ್ರ ಸರ್ಕಾರದ ವಿರುದ್ಧ ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು  ತೋರಬಹುದು ತಿಳಿಸಿದ್ದಾರೆ.

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಮೊದಲನೆಯದಾಗಿ ಸಿಡಬ್ಲ್ಯುಎಂಎಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ, ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ  ಈ  ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ ಎಂದಿದ್ದಾರೆ.

ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ. ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ? ಎಂದು ಅವರು ಪ್ರಶ್ನಿಸಿದ್ದಾರೆ.

ಕಳೆದ ೨೦೧೭ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ ೫ ಯೋಜನೆಗಳಲ್ಲಿ ಮೂರು  ಪೂರ್ಣಗೊಂಡಿವೆ. ಎರಡು ಕಾಮಗಾರಿ ಚಾಲನೆಯಲ್ಲಿವೆ.

ಈ ಯೋಜನೆಗಾಗಿ ಕೇಂದ್ರದ ಪಾಲಿನ ೧೨೩೮.೩೦ ಕೋಟಿ ರೂ.ಗಳ ಪೈಕಿ ೧೧೯೦.೦೫ ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ? ಎಂದು ಅವರು ಕೇಳಿದ್ದಾರೆ.

ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ ೬೨೯.೫೪ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ, ಅ.೨೮ರವರೆಗೆ ಕೇವಲ ೨೭೪.೦೫ ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ ಎಂದು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
CauverycentralGajendra Singh ShekhawatkarnatakakmskmskannadamekedatuSiddaramaiah
2 FacebookTwitterPinterestEmail
cklbkrish

previous post
ಹೊಸ ತಳಿಗಳ ತ್ವರಿತ ಬೀಜ ವಿತರಣೆಗೆ ಒಪ್ಪಂದ
next post
ಮಹಾರಾಷ್ಟ್ರದ ಶಿವಸೇನೆ – ಕಾಂಗ್ರೆಸ್ ಸರಕಾರದಂತೆ ಸಿದ್ದು ಸರಕಾರವೂ ಪತನ ಗ್ಯಾರಂಟಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ