Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

by cklbkrish October 31, 2023
written by cklbkrish October 31, 2023 0 comments 1 minutes read
2FacebookTwitterPinterestEmail
78

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಘೋಷಣೆ

ಬೆಂಗಳೂರು: ಕರ್ನಾಟಕರತ್ನ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದಲ್ಲಿಅನುಷ್ಠಾನಕ್ಕೆ ತರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳ ವ್ಯಾಪ್ತಿಯಲ್ಲಿ 10 ಹಬ್ಸ್, ಹಾಗೂ 85 ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಸ್ಪೋಕ್ ಕೇಂದ್ರಗಳನ್ನ ರೂಪಿಸುವ ಮೂಲಕ, ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಂತಹ ಒಂದು ಪರಿಣಾಮಕಾರಿ ಚಿಕಿತ್ಸಾ ಕಾರ್ಯಕ್ರಮವನ್ನ ಪುನಿತ್ ರಾಜಕುಮಾರ್ ಹೆಸರಿನಲ್ಲಿ ಜಾರಿಗೆ ತರಲಾಗುವುದು ಎಂದು ಹೇಳಿದರು.

ಪುನಿತ್ ರಾಜಕುಮಾರ್ ಹೃದಯಜ್ಯೋತಿ ಕಾರ್ಯಕ್ರಮದ ಇನ್ನೊಂದು ಭಾಗವಾಗಿ 2 ಕೋಟಿ ರೂ. ವೆಚ್ಚದಲ್ಲಿ ಎಇಡಿ(Automated External Defibrillator) ಸಾಧನಗಳನ್ನು ಅಳವಡಿಸಲು ನಿರ್ಧರಿಸಿದ್ದೇವೆ.

ಹೃದಯಾಘಾತಕ್ಕೆ ಒಳಗಾದವರಿಗೆ ಸುವರ್ಣ ಸಮಯದೊಳಗೆ ಚಿಕಿತ್ಸೆ ಕೊಡುವುದು ಬಹಳ ಮುಖ್ಯ. ಇತ್ತಿಚೆಗೆ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುವುದನ್ನು ನಾವು ನೋಡ್ತಿದ್ದೇವೆ. ಅಧ್ಯಯನದ ಪ್ರಕಾರ ಹೃದಯಾಘಾತಕ್ಕೆ ಈಡಾಗುವರಲ್ಲಿ ಶೇ. 35 ರಷ್ಟು ಮಂದಿ 40ರ ಆಸುಪಾಸಿನ ವಯಸ್ಸಿನವರು ಎಂಬುದು ಕಳವಳಿಕಾರಿ ಸಂಗತಿ.

 ಇಂಥಹ ಸಂದರ್ಭದಲ್ಲಿ ಜನಸಾಮಾನ್ಯರ ನೆರವಿಗೆ ಧಾವಿಸುವುದು ಆರೋಗ್ಯ ಸಚಿವನಾಗಿ ನನ್ನ ಆದ್ಯ ಕರ್ತವ್ಯ ಎಂದು ನಾನು ಭಾವಿಸಿದ್ದೇನೆ. ಹೃದಯಾಘಾತ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನು ಉಳಿಸಬೇಕು. ಮತ್ತೆ ಸುವರ್ಣ ಸಮಯದ ಒಳಗೆ, ಸಕಾಲಕ್ಕೆ ಅವರಿಗೆ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ನಮ್ಮ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದೆ.

ಎರಡು ರೀತಿಯಲ್ಲಿ ಕಾರ್ಯಕ್ರಮ ಜಾರಿಗೆ ತರಲಾಗ್ತಿದೆ. ಹಬ್ ಅಂಡ್ ಸ್ಪೋಕ್ ಮಾದರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಇಡಿ ಸಾಧನಗಳಗಳನ್ನು ಅಳವಡಿಸುವುದು. ಈ ಕೇಂದ್ರಗಳು ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ.

85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳನ್ನಾಗಿ ರೂಪಿಸುತ್ತಿದ್ದೇವೆ. ಜಯದೇವ ಹೃದ್ರೋಗ ಸಂಸ್ಥೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಸೇರಿದಂತೆ ಒಟ್ಟು 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 10 ಹಬ್ ಗಳನ್ನು ರಚಿಸಲಾಗಿದೆ.

ಯಾರಿಗೇ ಎದೆನೋವು ಕಾಣಿಸಿಕೊಂಡರೂ ಅವರು ನಮ್ಮ ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದರೆ ತಕ್ಷಣ ಇಸಿಜಿ ಮಾಡಲಾಗುತ್ತದೆ. ಜೊತೆಗೆ ಎ1 ತಂತ್ರಜ್ಞಾನದ ಮೂಲಕ ಅವರ ಪರಿಸ್ಥಿತಿ ಕ್ರಿಟಿಕಲ್ ಇದೆಯಾ, ಇಲ್ವಾ ಅನ್ನೋದನ್ನು ಸ್ಥಳದಲ್ಲಯೇ ನಾಲ್ಕರಿಂದ ಐದು ನಿಮಿಷದೊಳಗೆ ಪತ್ತೆ ಹಚ್ಚಲಾಗುತ್ತದೆ. ಟ್ರೈಕಾಗ್ ಸಂಸ್ಥೆಯವರ ಈ ತಂತ್ರಜ್ಞಾನದ ಸಹಾಯ ಪಡೆದು ಕ್ರಿಟಿಕಲ್ ಅಥವಾ ನಾನ್ ಕ್ರಿಟಿಕಲ್ ಅನ್ನೋದನ್ನ ಪತ್ತೆ ಹಚ್ಚುವ ವ್ಯವಸ್ಥೆ ಕಲ್ಪಿಸಲಾಗಿದೆ.

ಯಾರು ಕ್ರಿಟಿಕಲ್ ಹಂತದಲ್ಲಿದ್ದಾರೆ, ಅವರಿಗೆ ಸ್ಪೋಕ್ ಕೇಂದ್ರಗಳಲ್ಲೇ ಅಂದ್ರೆ ತಾಲೂಕು ಆಸ್ಪತ್ರೆಗಳಲ್ಲೇ ಉಚಿತವಾಗಿ ಇಂಜೆಕ್ಷನ್ ನ ಕೊಡಲಾಗುತ್ತದೆ. ಈ ಇಂಜೆಕ್ಷನ್ ಹಠಾತ್ ಹೃದಯಾಘಾತ ಆಗುವುದನ್ನು ತಡೆಯುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಹೀಗಾಗಿ ಕ್ರಿಟಿಕಲ್ ಹಂತದಲ್ಲಿ ಇರುವವರಿಗೆ ತಕ್ಷಣಕ್ಕೆ ಹಾರ್ಟ್ ಅಟ್ಯಾಕ್  ಆಗದಂತೆ ನೋಡಿಕೊಳ್ಳುವಲ್ಲಿ ಈ ಚಿಕಿತ್ಸೆ ಸಹಕಾರಿಯಾಗಲಿದೆ.

ಒಂದು ಚುಚ್ಚುಮದ್ದಿಗೆ ಖಾಸಗಿ ಆಸ್ಪತ್ರೆಗಳಲ್ಲಿ 30 ರಿಂದ 45 ಸಾವಿರ  ಚಾರ್ಜ್ ಮಾಡುತ್ತಿದ್ದಾರೆ. ಆದರೆ, ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಇಂಜೆಕ್ಷನ್  ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudineshdinesh gunduraohealthkarnatakakmskmskannada
2 FacebookTwitterPinterestEmail
cklbkrish

previous post
ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ
next post
ಬರಗಾಲ ಸರಿಯಾಗಿ ನಿರ್ವಹಿಸಿ. ಅಧಿಕಾರಿಗಳ ಬೇಜವಾಬ್ದಾರಿಯನ್ನು ಸರ್ಕಾರ ಸುತಾರಾಂ ಸಹಿಸಲ್ಲ: ಮುಖ್ಯಮಂತ್ರಿ ಎಚ್ಚರಿಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ