Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜಭವನದಲ್ಲಿ ಪಸರಿಸಿದ ಕನ್ನಡದ ಕಂಪು

ಕನ್ನಡ ಕಂಪನ್ನು ಸಾರಿದ ಕಲಾವಿದರು:

by cklbkrish November 1, 2023
written by cklbkrish November 1, 2023 0 comments 2 minutes read
2FacebookTwitterPinterestEmail
101

ಕರ್ನಾಟಕ, ಕನ್ನಡಾಂಬೆಗೆ ನಮಿಸಿದ ರಾಜ್ಯಪಾಲರು

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಆರೋಗ್ಯಕರ ಮತ್ತು ಸಮೃದ್ಧವಾಗಿಸಲು ಹಾಗೂ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಎಂದು ಕರೆ ನೀಡಿದರು. ಅಲ್ಲದೆ, ರಾಜ್ಯದ ಜನತೆಗೆ ಕನ್ನಡ ಭಾಷೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದರು.

ರಾಜಭವನ, ಕರ್ನಾಟಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಕರ್ನಾಟಕ ರಾಜ್ಯವು ತನ್ನ ಐತಿಹಾಸಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಮತ್ತು ಕಲಾ ಸಾಹಿತ್ಯ, ಸಮನ್ವಯ ಮತ್ತು ಸಾಮರಸ್ಯಕ್ಕೆ ಹೆಸರುವಾಸಿಯಾಗಿದೆ ಎಂದರು.

ಈ ರಾಜ್ಯವು ತನ್ನ ನೈಸರ್ಗಿಕ ಸೌಂದರ್ಯ, ದೇವಾಲಯಗಳು ಮತ್ತು ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಕರ್ನಾಟಕ ರಾಜ್ಯವು ವಾಣಿಜ್ಯ ದೃಷ್ಟಿಯಿಂದ ಉತ್ತಮವಾಗಿ ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ರಾಜ್ಯವಾಗಿದ್ದು, ಸರ್ಕಾರ ಮತ್ತು ದಕ್ಷ ಆಡಳಿತವು ರಾಜ್ಯಕ್ಕೆ ವಿಶೇಷ ಗುರುತನ್ನು ನೀಡಿದೆ. ಕರ್ನಾಟಕ ರಾಜ್ಯವು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಪ್ರಗತಿ ಸಾಧಿಸಿದೆ. ದೇಶದ ಅಭಿವೃದ್ಧಿ ಮತ್ತು ಪ್ರಗತಿಗೆ ಗಣನೀಯ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ.

ಶಿಕ್ಷಣ, ಆರೋಗ್ಯ, ಕೃಷಿ, ಮಾಹಿತಿ ಮತ್ತು ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೈಗಾರಿಕೆ ಮತ್ತು ವಾಣಿಜ್ಯ, ಸ್ಟಾರ್ಟ್‌ಅಪ್‌ಗಳು, ಸಂಶೋಧನಾ ಕೇಂದ್ರಗಳು, ಏರೋಸ್ಪೇಸ್, ​​ಕೃತಕ ಬುದ್ಧಿಮತ್ತೆ, ಇಂಧನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರ್ನಾಟಕ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಪ್ರಶಂಸಿದರು.

ಕರ್ನಾಟಕ ರಾಜ್ಯೋತ್ಸವವು ಹೆಮ್ಮೆ ಮತ್ತು ಏಕತೆಯ ಆಚರಣೆಯಾಗಿದೆ. ನಮ್ಮ ಐತಿಹಾಸಿಕ, ಧಾರ್ಮಿಕ, ಸಾಂಸ್ಕೃತಿಕ ಸಂಪ್ರದಾಯಗಳನ್ನು ನೆನಪಿಟ್ಟುಕೊಳ್ಳಲು ಮತ್ತು ನಮ್ಮ ರಾಜ್ಯದ ಸಾಧನೆಗಳನ್ನು ಗೌರವಿಸಲು ಇದು ಒಂದು ಅವಕಾಶ. ಈ ದಿನ  ಕರ್ನಾಟಕ ರಾಜ್ಯದ ಕಲೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ವಿವಿಧ ವರ್ಣರಂಜಿತ ಮತ್ತು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಗಿದೆ. ಅದ್ಭುತವಾದ ಕಾರ್ಯಕ್ರಮಗಳನ್ನು ಪ್ರಸ್ತುತಿಪಡಿಸಿದೆ ಎಲ್ಲಾ ಕಲಾವಿದರಿಗೆ ಅಭಿನಂದನೆಗಳು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸಂಸ್ಥಾಪನಾ ದಿನದ ಜೊತೆಗೆ ಇಂದು ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ಕೇರಳ, ತಮಿಳುನಾಡು, ಹರಿಯಾಣ, ಪಂಜಾಬ್ ಮತ್ತು ಅಂಡಮಾನ್ ನಿಕೋಬಾರ್, ಚಂಡೀಗಢ, ದೆಹಲಿ, ಲಕ್ಷದ್ವೀಪ ಮತ್ತು ಪುದುಚೇರಿಗಳ ಸಂಸ್ಥಾಪನಾ ದಿನವೂ ಆಗಿದೆ. ಈ ಎಲ್ಲಾ ರಾಜ್ಯಗಳ ನಿವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೇಳಿದರು.

 ಕನ್ನಡ ಕಂಪನ್ನು ಸಾರಿದ ಕಲಾವಿದರು:

ಸಂಜೆ ರಾಷ್ಟ್ರಗೀತೆ ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮವು ವಿದ್ಯುಕ್ತವಾಗಿ ಆರಂಭಗೊಂಡಿತು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು. ಮೊದಲಿಗೆ ನಾಗಚಂದ್ರಿಕಾ ಕೆ. ಎಸ್. ಮತ್ತು ತಂಡದವರು ” ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’… ‘ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು’… ಡಾ. ದ. ರಾ ಬೆಂದ್ರೆ ಅವರ ರಚನೆಯ “ಒಂದೇ ಒಂದೇ ಕರ್ನಾಟಕ ಒಂದೇ ” ಗೀತ ಗಾಯನದ ಪ್ರಸ್ತುತಿಯ ಜೊತೆ ಜೊತೆಗೆ ನೆರದಿದ್ದ ಪ್ರೇಕ್ಷಕರು ಕೈ ಕರತಾಳ ತಟ್ಟುವ ಮೂಲಕ ಸಂಗೀತವನ್ನು ಆಸ್ವಾದಿಸಿದರು.

ನಂತರ ಬೆಂಗಳೂರಿನ ರಂಗ ಚಾರಕ ಟ್ರಸ್ಟ್ ವತಿಯ ಹಿದಾಯುತ್ ಅಹಮದ್ ಅವರ ತಂಡದಿಂದ ಸಂಪ್ರದಾಯದ ಡೊಳ್ಳು ಕುಣಿತ ರಂಜಿಸಿತು.

ಧರಣಿ ಟಿ.ಕಶ್ಯಪ್ ಮತ್ತು ತಂಡದವರಿಂದ ಕುವೆಂಪು ಅವರ ಬಾಗಿಲೋಳು ಕೈ ಮುಗಿದು ಒಳಗೆ ಬಾ ಯಾತ್ರಿಕನೇ… ಕುಚುಪುಡಿ ಶೈಲಿಯ ನೃತ್ಯ ಪ್ರದರ್ಶನ ಹಾಗೂ ತೊಡೆಯ ಮಂಗಳಂ ಮತ್ತು ಅಂಬಾ ಜಗದ್ ಜನನಿ –  ಭರತನಾಟ್ಯ ಮನ ಸೂರೆಗೊಂಡಿತು.

ಶ್ರೀನಿವಾಸ ಅಸ್ಥನಾ ಮತ್ತು ತಂಡದವರು ಯಕ್ಷಗಾನದಲ್ಲಿ ಪ್ರಸ್ತುತ ಪಡಿಸಿದ ‘ಮಹಿಷ ವಧೆ’ ಪ್ರಸಂಗದ ಮೂಲಕ ತಾಯಿ ದೇವಿಯ ಮಹಾತ್ಮೆ ಬಹಳ ಸುಂದರವಾಗಿ ಮೂಡಿಬಂತು.

ರಾಜಭವನದ ವಿಶೇಷ ಕಾರ್ಯದರ್ಶಿಗಳಾದ ಆರ್ ಪ್ರಭುಶಂಕರ್ ಅವರು ಸ್ವಾಗತ ಭಾಷಣ ಮಾಡಿದರು. ಇನ್ನು ಕಾರ್ಯಕ್ರಮದ ಸಂಪೂರ್ಣ ನಿರೂಪಣೆ ಹಾಗೂ ಕನ್ನಾಟಕ ರಾಜ್ಯ ಸೇರಿದಂತೆ ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ಕೇರಳ, ತಮಿಳುನಾಡು, ಹರಿಯಾಣ, ಪಂಜಾಬ್ ಮತ್ತು ಅಂಡಮಾನ್ ನಿಕೋಬಾರ್, ಚಂಡೀಗಢ, ದೆಹಲಿ, ಲಕ್ಷದ್ವೀಪ ಮತ್ತು ಪುದುಚೇರಿಗಳ ರಾಜ್ಯಗಳ ಸಂಸ್ಥಾಪನಾ ದಿನಗಳ ಅಂಗವಾಗಿ ರಾಜ್ಯಗಳ ಕುರಿತ ಮಾಹಿತಿಯನ್ನು ವಿಸ್ತಾರವಾಗಿ ವಿವರಣೆ ನೀಡಿದ ಚೈತ್ರಾ ಅವರು ರಾಜ್ಯಪಾಲರ ಅಭಿನಂದನೆಗೆ ಭಾಜನರಾದರು. ನಂತರ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ತೆರೆ ಬಿದ್ದಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurugovernorkannadakarnatakakarnataka rajyotsavakmskmskannadarajabhavan
2 FacebookTwitterPinterestEmail
cklbkrish

previous post
ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ 102 ಕೋಟಿ ಹಣ
next post
68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ