Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‍- ಬಿಜೆಪಿಗೆ ಕಾಂತರಾಜ್‍ ವರದಿಯೇ ಬ್ರಹ್ಮಾಸ್ತ್ರ

by cklbkrish November 3, 2023
written by cklbkrish November 3, 2023 0 comments 2 minutes read
2FacebookTwitterPinterestEmail
54

ಬೆಂಗಳೂರು:ಕಾಂತರಾಜ್ ವರದಿಯನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ವರಿಷ್ಠರು ತಂತ್ರಗಾರಿಕೆಯ ಬಲೆ ಎಣೆದಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಬೆಂಬಲ ಸೂಚಿಸಿರುವ ಬೆನ್ನಲ್ಲೇ  ಎಚ್ಚೆತ್ತ ಬಿಜೆಪಿ ಇಂತಹ ವರದಿಗಳಿಗೆ ವಿರೋಧ ವ್ಯಕ್ತಪಡಿಸಿದೆ.

ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ (ಕಾಂತರಾಜ್ ವರದಿ) ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಘೋಷಿಸಿದ್ದಾರೆ.

ಜಾತಿಗಣತಿ ಇಕ್ಕಟ್ಟಿಗೆ ರಾಜ್ಯ ಸರ್ಕಾರ ಸಿಲುಕಿಸಲು ಬಿಜೆಪಿ ತಂತ್ರ

ಇದರ ಬೆನ್ನಲ್ಲೇ ಕಾಂತರಾಜ್ ವರದಿಯ ಪರ ಮತ್ತು ವಿರೋಧದ ಚರ್ಚೆ ತಾರಕಕ್ಕೇರಿದ್ದು, ಈ ವಿಚಾರ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಸಂಘರ್ಷಕ್ಕೆ ಅಸ್ತ್ರವಾಗಿದೆ.

ಜಾತಿ ಗಣತಿ ವರದಿ ವಿಚಾರದಲ್ಲಿ ಮುಖ್ಯಮಂತ್ರಿ ತೆಗೆದುಕೊಳ್ಳುವ ನಿರ್ಧಾರದಿಂದ ಅವರಿಗೇ ಮುಳುವಾಗಿಸಲು ಬಿಜೆಪಿ ನಿನ್ನೆ ದೆಹಲಿಯಲ್ಲಿ ಕಾರ್ಯತಂತ್ರ ರೂಪಿಸಿದೆ.

ಕರ್ನಾಟಕದ ಹಿಂದುಳಿದ ವರ್ಗಕ್ಕೆ ಸೇರಿದ ಕೆ.ಎಸ್. ಈಶ್ವರಪ್ಪ ಸೇರಿದಂತೆ ಬಿಜೆಪಿಯ ಪ್ರಮುಖರನ್ನು ನಿನ್ನೆ ದೆಹಲಿಗೆ ಕರೆಸಿಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡಾ, ರಾಜ್ಯ ನಾಯಕರೊಂದಿಗೆ ಈ ಸಂಬಂಧ ಸುದೀರ್ಘ ಚರ್ಚೆ ನಡೆಸಿ ವರದಿಯನ್ನು ವಿರೋಧಿಸುವಂತೆ ಆದೇಶ ಮಾಡಿ ಕಳುಹಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದ ಸಮಯದಲ್ಲೇ ರಾಜ್ಯ ಒಕ್ಕಲಿಗರ ಸಂಘದವರು ಬೆಂಗಳೂರಿನಲ್ಲಿ ತಮ್ಮ ಸಮುದಾಯದ ಮಠಾಧೀಶರ ಸಮ್ಮುಖದಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಿ ಕಾಂತರಾಜ್ ವರದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ: ಈಶ್ವರಪ್ಪ ಭವಿಷ್ಯ

ದೆಹಲಿಯಿಂದ ಹಿಂದಿರುಗುತ್ತಿದ್ದಂತೆ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂತರಾಜ್ ವರದಿ ಸ್ವೀಕರಿಸಿದ ದಿನವೇ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ವರದಿಯನ್ನು ಬೆಂಕಿಗೆ ಹಾಕಿ ಅದನ್ನು ಒಪ್ಪಲು ಸಾಧ್ಯವಿಲ್ಲ. ನಾನು ಮುಖ್ಯಮಂತ್ರಿ ಅವರಿಗೆ ಕಿವಿಮಾತು ಹೇಳುತ್ತೇನೆ, ಜಾತಿ-ಜಾತಿ ನಡುವೆ ಸಂಘರ್ಷ ಹುಟ್ಟುಹಾಕುವ ಇಂತಹ ವರದಿಗೆ ಆಸ್ಪದ ಕೊಡಬೇಡಿ.

ಕಳೆದ ೮ ವರ್ಷಗಳ ಹಿಂದೆ ಅವೈಜ್ಞಾನಿಕವಾಗಿ ಸಿದ್ಧಗೊಂಡಿರುವ ವರದಿಗೆ ಕಾರ್ಯದರ್ಶಿಗಳ ಸಹಿಯೇ ಇಲ್ಲ, ಅಂತಹ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ. ನಾನೂ ಹಿಂದುಳಿದ ವರ್ಗಕ್ಕೆ ಸೇರಿದವನೇ, ಈ ವರದಿಯಿಂದ ಯಾವ ವರ್ಗಕ್ಕೂ ಲಾಭವಾಗುವುದಿಲ್ಲ. ಅಪ್ಪ-ಅಮ್ಮ ಇಲ್ಲದ ಕೂಸನ್ನು ಬೀದಿಗೆ ತಂದು ಬೆಂಕಿ ಹಚ್ಚಬೇಡಿ, ಅದರ ಬದಲು ವರದಿಯನ್ನೇ ಸುಟ್ಟುಹಾಕಿ ಎಂದು ಖಾರವಾಗಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಛಾಂಪಿಯನ್ ಎಂದು ಬಿಂಬಿಸಿಕೊಳ್ಳಲು ಅವೈಜ್ಞಾನಿಕ ವರದಿಗೆ ಜೀವ ತುಂಬಲು ಹೊರಟಿದ್ದಾರೆ. ಈ ವರದಿಗೆ ಒಕ್ಕಲಿಗ ಮತ್ತು ವೀರಶೈವ ಸಮುದಾಯದ ಸಂಘಟನೆಗಳು ಮತ್ತು ಮುಖಂಡರು ಈಗಾಗಲೇ ವಿರೋಧ ವ್ಯಕ್ತಪಡಿಸಿ ಯಾವುದೇ ಕಾರಣಕ್ಕೂ ಅನುಷ್ಠಾನಗೊಳಿಸಬಾರದೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರಮುಖ ಸಮುದಾಯಗಳ ವಿರೋಧ ವ್ಯಕ್ತಪಡಿಸಿರುವುದನ್ನೇ ಬಿಜೆಪಿ ರಾಜಕೀಯ ದಾಳವಾಗಿ ಬಳಸಿಕೊಳ್ಳಲು ಹೊರಟಿದ್ದು, ಕಾಂತರಾಜ್ ವರದಿಯನ್ನೇ ನೇರವಾಗಿ ವಿರೋಧ ವ್ಯಕ್ತಪಡಿಸಿದೆ.

ಲೋಕಸಭೆ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಕಾಂತರಾಜ್ ವರದಿಯ ಪರ ಮತ್ತು ವಿರೋಧದ ಚರ್ಚೆ ತಾರಕಕ್ಕೇರಿದೆ. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಪ್ರತಿಷ್ಠೆಯ ವಿಚಾರ. ರಾಜಕೀಯ ಸಂಘರ್ಷಕ್ಕೆಕ್ಕೆ ಇದೇ ಪ್ರಮುಖ ಅಸ್ತ್ರ, ವರದಿ ಸ್ವೀಕಾರಕ್ಕೂ ಮುನ್ನವೇ ಲಾಭ-ನಷ್ಟದ ಲೆಕ್ಕಾಚಾರ ಜೋರಾಗಿದೆ.

ಇದಕ್ಕೂ ಮೊದಲು ವರದಿ ಅನುಷ್ಠಾನಗೊಳಿಸುವಂತೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ಪಿ.ಸಿ ಮೋಹನ್ ಎಲ್ಲರೂ ಒತ್ತಾಯಿಸಿದ್ದರು.  ನಿನ್ನೆ ದೆಹಲಿಯಲ್ಲಿ ನಡೆದ ಸಭೆಯಿಂದ ಹಿಂದಿರುಗುತ್ತಿದ್ದಂತೆ ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ಬಹುಸಂಖ್ಯಾತರ ವಿರುದ್ಧವಾಗಿ ವರದಿ ಸ್ವೀಕರಿದ್ದೇ ಆದರೆ, ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಮತ್ತು ಸರ್ಕಾರ ಪತನಗೊಳಿಸಲು ಸಮುದಾಯಗಳು ಒಂದಾಗಿ ಸಂಘರ್ಷಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcaste censuseeshwarappakarnatakakmskannadanewspolitics
2 FacebookTwitterPinterestEmail
cklbkrish

previous post
ಹದ್ದು ಮೀರಿ ಮಾತನಾಡಿದವರಿಗೆಲ್ಲಾ ನೋಟಿಸ್ : ಕೆಪಿಸಿಸಿ
next post
ಸಿದ್ದರಾಮಯ್ಯ ಬಳಿಕ ಪರಮೇಶ್ವರ್‍ ಮುಖ್ಯಮಂತ್ರಿಯಂತೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ