Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಂಗಳೂರು ನಗರಕ್ಕೆ 24 ಟಿಎಂಸಿ ನೀರು

by KM Shivaraju November 8, 2023
written by KM Shivaraju November 8, 2023 0 comments 2 minutes read
ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕದ ಏಕನಾಥ್ಸಿಂಧೆ ಯಾರು ಎಂದು ಬಹಿರಂಗಪಡಿಸದಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಆಗುವುದಾಗಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಔತಣಕೂಟದ ಸಭೆಗಳನ್ನು ನಡೆಸಿದ ಬೆನ್ನಲ್ಲೇ ರಮೇಶ್ ಇಂತಹ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ತುರ್ತು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಪತನದ ಮಾಹಿತಿ ನೀಡಿದ್ದಲ್ಲದೆ, ನ್ಯಾವ್ಯಾರೂ ಈ ಸರ್ಕಾರವನ್ನು ಬೀಳಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಆಗುತ್ತದೆ. ಬಿಜೆಪಿ ಆಪರೇಷನ್ ಕಮಲದಿಂದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನವಾಗಲಿಲ್ಲ. ಶಿವಕುಮಾರ್ ಅವರ ದುರಂಹಕಾರದ ವರ್ತನೆ ಪ್ರತಿಭಟಿಸಿ ಹೊರಬಂದ ಕಾರಣ ಅಂದು ಸರ್ಕಾರ ಪತನಗೊಂಡಿತು. ಬೆಳಗಾವಿ ರಾಜಕೀಯವೇ ಸರ್ಕಾರಕ್ಕೆ ಕಂಟಕ ಬೆಳಗಾವಿ ರಾಜಕೀಯವೇ ಇಂದಿನ ಸರ್ಕಾರದ ಪತನಕ್ಕೂ ಮೂಲ ಕಾರಣವಾಗುತ್ತದೆ ಎಂದ ರಮೇಶ್, ಯಾವಾಗ, ಏನಾಗಲಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ ಅವರ ಆತ್ಮೀಯನಾಗಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ನಿತ್ಯ ಡಿಕೆಶಿ ನಾಟಕ ಮಂಡಳಿ ಆಪರೇಷನ್ ಕಮಲ ಮಾಡುತ್ತಿರುವ ಬಗ್ಗೆ ಮಾತನಾಡುತ್ತಿದೆ. ಮೈತ್ರಿ ಸರಕಾರ ಬಿದ್ದಾಗ ಬಿಜೆಪಿಯೇನೂ ನಮ್ಮನ್ನು ಆಪರೇಷನ್ ಮಾಡಿರಲಿಲ್ಲ. ನಾವೇ ಮೈತ್ರಿ ಸರಕಾರ ತೆಗೆದು ಬಿಜೆಪಿಗೆ ಸೇರಿದೆವು. ಈಗ ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ಹೆಣಗಾಡುತ್ತಿದೆ. ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು. ಸುಳ್ಳು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಎಲ್ಲ ರಂಗದಲ್ಲೂ ಫೇಲ್ ಆಗಿದೆ. ಸರಕಾರ ಪತನ ಆಗುವುದು ಬೇಡ, ಮುಂದುವರೆಯಲಿ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಡಿಕೆಶಿ ಇರುವ ಸರಕಾರ ಯಾವಾಗಲೂ ಡೇಂಜರ್. ಡಿಕೆಶಿ ಅಧಿಕಾರ ಇದ್ದಾಗ ಒಂದು ರೀತಿ ಇರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಇನ್ನೊಂದು ರೀತಿ ಇರುತ್ತಾರೆ. ಡಿಕೆಶಿಯೇ ಸಿಡಿ ಮಾಸ್ಟರ್, ಅದೇ ಅವರ ಶಕ್ತಿ. ಸಿಡಿ ಇಟ್ಟುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು. ಸಿಡಿ ಇಟ್ಟುಕೊಂಡು ನೆಲಮಂಗಲ ಮಾಜಿ ಶಾಸಕ ನಾಗರಾಜ್ಗೆ ಡಿಕೆಶಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.ನಿನ್ನ ಹಾಗೂ ರಮೇಶ್ ಜಾರಕಿಹೊಳಿದು ಬಹಳಷ್ಟಾಗಿದೆ. ಎಸ್ಐಟಿ ಕ್ಯಾನ್ಸಲ್ ಮಾಡಿ ಮರು ತನಿಖೆಗೆ ಆದೇಶಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಎಷ್ಟೇ ಸಿಡಿ ಬಂದರೂ ನಾನು ಹೆದರಲ್ಲ. ಮರು ತನಿಖೆ ಆದರೆ ಸಿಬಿಐನಿಂದ ಆಗಲಿ ಎಂದು ನಾನು ಕೋರ್ಟ್ ಮೊರೆ ಹೋಗುವೆ ಎಂದು ಅವರು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು. ವಿನಾಕಾರಣ ನನ್ನ ಮೇಲೆ ಡಿಕೆಶಿ ಹಗೆತನ ಸಾಧಿಸುತ್ತಿದ್ದಾರೆ. ಹೆಚ್ಡಿಕೆ ಜತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಬೆಳವಣಿಗೆ ಆಗಿ ಸರಕಾರ ಪತನವಾಗಲಿದೆ ಎಂದರು. ರಮೇಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ ಎಂದಷ್ಟೇ ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಆಸಕ್ತಿ ತೋರಲಿಲ್ಲ.
2FacebookTwitterPinterestEmail
96
ಕೆಆರ್‌ಎಸ್‌ನ ಒಳಹರಿವು ಸಂಪೂರ್ಣ ನಿಂತಿದೆ

ಬೆಂಗಳೂರು:ರಾಜಧಾನಿ ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಕಾವೇರಿ ನೀರನ್ನು ಮೀಸಲಾಗಿಡಲು ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ ಅದನ್ನ ಬಳಸಿಕೊಳ್ಳಬೇಕು ಎಂದು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕೃಷ್ಣರಾಜ ಸಾಗರ ಜಲಾಶಯಕ್ಕೆ ಸಮಾನಾಂತರವಾಗಿ ಮೇಕೆ ದಾಟು ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಣೆಕಟ್ಟು ನಿರ್ಮಾಣ ಕಾರ್ಯಕ್ಕೆ ಪೂರಕವಾಗಿ ಈ ಆದೇಶ ಹೊರಬಿದ್ದಿದೆ.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ರಾಜ್ಯ ಸರ್ಕಾರ ಬಹು ವರ್ಷಗಳ ನಂತರ ಪಾಲನೆ ಮಾಡಿದ್ದು, ಇನ್ನು ಮುಂದೆ ಬೆಂಗಳೂರು ನಗರಕ್ಕೆ 18 ಟಿಎಂಸಿ ಬದಲು 24 ಟಿಎಂಸಿ ನೀರು ಮೀಸಲಿಡಲಾಗಿದೆ.

ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ಪ್ರತಿವರ್ಷ ಕರ್ನಾಟಕಕ್ಕೆ ನಿಗದಿ ಪಡಿಸಿದ ನೀರನ್ನು ಬಳಕೆ ಮಾಡಿಕೊಳ್ಳಬೇಕಿದ್ದು, ಅದರಲ್ಲಿ ಬೆಂಗಳೂರಿಗೆ 24 ಟಿಎಂಸಿ ಪ್ರಮಾಣದ ನೀರು ನಿಗದಿ ಆದೇಶ ಹೊರಡಿಸಿದೆ.

ಆದೇಶಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಲಸಂಪನ್ಮೂಲ ಇಲಾಖೆ ಹೊಣೆ ಹೊತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 2018ರಲ್ಲಿ ಸುಪ್ರೀಂಕೋರ್ಟ್ ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 24 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ಎಂದು ನಿಗದಿ ಮಾಡಿತ್ತು ಎಂದರು.

ಆದರೆ ಇದುವರೆಗೂ ಯಾರೂ ಸಹ ಈ ವಿಚಾರವಾಗಿ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ, ಈ ಮೊದಲು ಕಡಿಮೆ ನೀರು ನಿಗದಿ ಮಾಡಲಾಗಿತ್ತು, ಈಗ ಉಳಿಕೆ ೬ ಟಿಎಂಸಿ ನೀರನ್ನು ಬಳಸಿಕೊಂಡು, ಒಟ್ಟಾರೆ ಕುಡಿಯುವ ಉದ್ದೇಶಕ್ಕೆ 24 ಟಿಎಂಸಿ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 89ನೇ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಮೇಕೆದಾಟು ಅಣೆಕಟ್ಟು ವಿಚಾರ ಪ್ರಸ್ತಾಪ ಮಾಡಿದ್ದಾರೆ, ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರವಾಗಿ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ, ವಿಚಾರ ಮಂಡಲಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.

ಮೇಕೆದಾಟು ಯೋಜನೆ ಪ್ರಾರಂಭ ಮಾಡಲು ಅನುಮತಿ ನೀಡಬೇಕು ಎಂದು ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ಮನವಿ ಮಾಡುತ್ತೇವೆ.

ಸಂಕಷ್ಟ ಸಂದರ್ಭದಲ್ಲಿ ನೀರು ಹರಿಸಲು ಈ ಯೋಜನೆ ಸಹಕಾರಿಯಾಗುತ್ತದೆ, ಅಲ್ಲದೇ ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಪ್ರಯೋಜನವಾಗಲಿದೆ.

ಕಾವೇರಿ ನೀರು ಎಷ್ಟು ಪ್ರಮಾಣ ಉಳಿದುಕೊಳ್ಳುತ್ತದೆ, ಎಷ್ಟು ಹರಿದು ಹೋಗುತ್ತದೆ, ಎಷ್ಟು ಬಳಕೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಾಧಿಕಾರದ ಮುಂದೆ ಪ್ರಾತ್ಯಕ್ಷಿಕೆ ನೀಡುವ ವೇಳೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ.

ಸಂಕಷ್ಟ ಕಾಲದಲ್ಲೂ 300 ರಿಂದ 400 ಟಿಎಂಸಿ ನೀರು ಬಿಡಬೇಕು ಎಂದು ತಮಿಳುನಾಡಿನವರು ಕೇಳಿದ್ದರು, ಕೆಆರ್‌ಎಸ್‌ನ ಒಳಹರಿವು ಸಂಪೂರ್ಣವಾಗಿ ನಿಂತಿದೆ, ಇಂತಹ ಪರಿಸ್ಥಿತಿಯನ್ನು ಮನದಟ್ಟು ಮಾಡಿಕೊಡಬೇಕು ಎಂದು ನಿರ್ಧಾರ ಮಾಡಿದ್ದೇವೆ.

ಕುಡಿಯುವ ನೀರಿಗೆ ಮೊದಲ ಆದ್ಯತೆ, ತಮಿಳುನಾಡು ಏನೇ ಆಕ್ಷೇಪ ವ್ಯಕ್ತಪಡಿಸಿದರೂ, ಕರ್ನಾಟಕದ ಹಕ್ಕನ್ನು ಬಿಟ್ಟು ಕೊಡುವುದಿಲ್ಲ, ಈ ಹಿಂದೆ ನೀಡಿರುವ ಆದೇಶವನ್ನೇ ಪಾಲಿಸುತ್ತಿದ್ದೇವೆ.

ಕೆಆರ್‌ಎಸ್ ಅಥವಾ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಭಾಗದಲ್ಲಾದರೂ ನೀರನ್ನು ಮೀಸಲಿರಿಸುತ್ತೇವೆ.

ಬೆಂಗಳೂರು ಬೆಳೆಯುತ್ತಿದೆ, ಮುಂದಿನ 20 ವರ್ಷವನ್ನು ಗಮನದಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಬೇಕಿದೆ.

ಆನೇಕಲ್, ಹಾರೋಹಳ್ಳಿ, ಬೆಂಗಳೂರು ಉತ್ತರ ಸೇರಿದಂತೆ ಸುತ್ತಲಿನ ಪ್ರದೇಶಗಳಿಗೆ ನೀರು ಕೊಡಲೇಬೇಕು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನೀರು ಕೊಡುತ್ತಿದ್ದೇವೆ.

ತಮಿಳುನಾಡಿನವರು ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ, ಅವರ ರಾಜ್ಯದ ಒಂದಷ್ಟು ನದಿಗಳನ್ನು ಜೋಡಣೆ ಮಾಡುವ ಕುರಿತು ಪ್ರಸ್ತಾಪ ಇಟ್ಟಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudelhidk shivakumarindiakarnatakakmskmskannadapolitics
2 FacebookTwitterPinterestEmail
KM Shivaraju

previous post
ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೊಂದಾಯಿಸಿ
next post
ಮೂಡಿಗೆರೆ ಆನೆಗಳ ಸ್ಥಳಾಂತರಕ್ಕೆ ಕ್ರಮ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ