Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ನ.24ಕ್ಕೆ ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಕೆ

by KM Shivaraju November 10, 2023
written by KM Shivaraju November 10, 2023 0 comments 1 minutes read
Share 5FacebookTwitterPinterestEmail
99

ಮೂಲ ಪ್ರತಿ ನಾಪತ್ತೆಯಾದರೂ ವರದಿ ಸಲ್ಲಿಸಲು ತಯಾರಿ; ಒಕ್ಕಲಿಗ, ಲಿಂಗಾಯಿತರ ವಿರೋಧದ ನಡುವೆಯೂ ಆಯೋಗದ ಹಠ

ಬೆಂಗಳೂರು: ಕಾಂತರಾಜ್ ಅಧ್ಯಕ್ಷತೆಯಲ್ಲಿ ಸಿದ್ಧಪಡಿಸಲಾಗಿದ್ದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯ ಮೂಲ ಪ್ರತಿಯೇ ನಾಪತ್ತೆಯಾಗಿದೆ ಎಂಬ ವಿವಾದದ ನಡುವೆಯೇ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನವೆಂಬರ್ 24ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂಬ ಹಿನ್ನೆಲೆಯಲ್ಲಿ ಒಕ್ಕಲಿಗ ಹಾಗೂ ವೀರಶೈವ-ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿ, ಮರು ಸಮೀಕ್ಷೆಗೆ ಒತ್ತಾಯಿಸಿವೆ.

ಕಳೆದ 2015ರಲ್ಲಿ ಆಯೋಗದ ವತಿಯಿಂದ ಕೈಗೊಳ್ಳಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಗಳ ಸಹಿ ಇಲ್ಲ ಎಂದು ಹಾಲಿ ಅಧ್ಯಕ್ಷರು, 2021ರ ಅಕ್ಟೋಬರ್ 5ರಂದೇ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು.

2021ರ ಆಗಸ್ಟ್ 26ರಂದು ಆಯೋಗದ ಕಚೇರಿಯಲ್ಲಿ ಇರಿಸಲಾಗಿದ್ದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ್ದ ಅಂಕಿ-ಅಂಶಗಳು ಹಾಗೂ ಇತರೆ ವಿವರಗಳನ್ನು ಒಳಗೊಂಡ ಸೀಲ್ಡ್ ಬಾಕ್ಸ್‌ಗಳನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿ ಅವರ ಸಮ್ಮುಖದಲ್ಲಿ ಮಹಜರು ನಡೆಸಿ ತೆರೆಯಲಾಗಿತ್ತು.

ಮುದ್ರಿತ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದೆ ಇರುವುದನ್ನು ಆಯೋಗ ಗಮನಿಸಿತ್ತು.
ಇದಕ್ಕೆ ಸಂಬಂಧಿಸಿದಂತೆ ಮೂಲ ಪ್ರತಿ ಸೀಲ್ಡ್ ಬಾಕ್ಸ್‌ನಲ್ಲಿ ಲಭ್ಯವಿಲ್ಲದೆ ಇರುವುದರಿಂದ, ಹಸ್ತ ಪ್ರತಿಯನ್ನು ಕೂಡಲೇ ಆಯೋಗದ ಕಚೇರಿಗೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಗಿತ್ತು.

ಸೂಚನೆಗೆ ಸಂಬಂಧಪಟ್ಟವರು ಉತ್ತರ ನೀಡಿದ್ದು, ಆ ಪತ್ರದ ಪ್ರತಿಯನ್ನೂ ಲಗತ್ತಿಸಿ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲಾಗಿದೆ.
ಇದಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟ ಪಡಿಸುವಂತೆ ಕೋರಿದ್ದ ಪತ್ರ ಬಹಿರಂಗಗೊಂಡಿದೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಂದುಳಿದ ವರ್ಗಗಳ ಜಾತಿ ಗಣತಿಯನ್ನು ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌ನ ಅಧಿನಾಯಕ ರಾಹುಲ್ ಗಾಂಧಿ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಹುಲ್ ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಾ, ಕಾಂತರಾಜ್ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕೋರಿದ್ದರು.

ಮುಖ್ಯಮಂತ್ರಿ ಅವರ ಹೇಳಿಕೆ ಬೆನ್ನಲ್ಲೇ ಕಾಂತರಾಜ್ ವರದಿ ಬಗ್ಗೆ ಪರ ಮತ್ತು ವಿರೋಧ ಹೇಳಿಕೆಗಳು ವ್ಯಕ್ತವಾದವು.

ಬರುವ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ವರದಿ ಬಗ್ಗೆ ಏನು ನಿರ್ಧಾರ ಕೈಗೊಳ್ಳುತ್ತಾರೋ ಕಾದುನೋಡಬೇಕಿದೆ.

Share this:

  • WhatsApp
  • Post
  • Tweet
  • Print
  • Email
bjpcaste censuscaste politicscongress governamentjdskarnatakanewsvakkaligaveerashaiva
Share 5 FacebookTwitterPinterestEmail
KM Shivaraju

previous post
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ
next post
545 ಪಿಎಸ್ ಐ ನೇಮಕಾತಿಗೆ ಮರು ಪರೀಕ್ಷೆ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ