Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇವೇಗೌಡರ ತವರು ಕ್ಷೇತ್ರ ಹಾಸನದಿಂದ ಸ್ಪರ್ಧೆಗಿಳಿಸಲು ಕುಮಾರಸ್ವಾಮಿ ಕಸರತ್ತು

by KM Shivaraju November 12, 2023
written by KM Shivaraju November 12, 2023 0 comments 1 minutes read
Share 4FacebookTwitterPinterestEmail
178

ರಾಜಕೀಯಕ್ಕೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಕರೆತರುವ ಯತ್ನ

ಬೆಂಗಳೂರು: ಖ್ಯಾತ ಹೃದಯತಜ್ಞ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನು ರಾಜಕೀಯಕ್ಕೆ ಕರೆತರುವ ಯತ್ನ ನಡೆದಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತವರು ಹಾಸನ ಲೋಕಸಭಾ ಕ್ಷೇತ್ರದಿಂದ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಮುಂದಾಗಿದೆ.

 ದೇವೇಗೌಡ ಅವರನ್ನು ಹಾಸನದಿಂದ ಕಣಕ್ಕಿಳಿಸುವ ಬಗ್ಗೆ ಒಂದೆಡೆ ಚಿಂತನೆ ನಡೆಸಿದ್ದರೆ, ಮತ್ತೊಂದೆಡೆ ಅವರ ಆರೋಗ್ಯ ಚುನಾವಣಾ ಕಣಕ್ಕಿಳಿಯಲು ಅವಕಾಶ ಕೊಡಲಿದೆಯೇ ಎಂಬ ಜಿಜ್ಞಾಸೆಯೂ ಇದೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜಂಟಿಯಾಗಿ ಹೆಚ್ಚು ಸ್ಥಾನ ಗಳಿಸಬೇಕು. ಇದಕ್ಕಾಗಿ ತಮ್ಮಗೆ ದೊರೆಯುವ ಕ್ಷೇತ್ರಗಳಲ್ಲಿ ವರ್ಚಸ್ವಿ ಹಾಗೂ ಪ್ರಭಾವಿ ಮುಖಂಡರನ್ನು ಕಣಕ್ಕಿಳಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.

ಮಂಜುನಾಥ್ ಅವರು ಲೋಕಸಭೆಗೆ ಆಯ್ಕೆಯಾಗಿ ಮತ್ತೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ, ಪ್ರಧಾನಿ ನರೇಂದ್ರ ಮೋದಿ ಅವರು, ಇಂಥವರನ್ನು ಗುರುತಿಸಿ ಕೇಂದ್ರದಲ್ಲಿ ಮಂತ್ರಿ ಮಾಡಬಹುದು.

ಒಂದು ವೇಳೆ ಮಂಜುನಾಥ್ ಮಂತ್ರಿಯಾದರೆ, ಜಯದೇವ ಆಸ್ಪತ್ರೆಯ ಮಾದರಿಯಲ್ಲಿ ರಾಷ್ಟ್ರಮಟ್ಟಕ್ಕೆ ಆರೋಗ್ಯಕ್ಕೆ ಒತ್ತು ಕೊಟ್ಟು ಜನಸೇವೆ ಮಾಡುತ್ತಾರೆ ಎಂಬ ಚಿಂತನೆ ಕುಮಾರಸ್ವಾಮಿ ಅವರಲ್ಲಿದೆ.

ಜಯದೇವ ಸಂಸ್ಥೆಯ ನಿರ್ದೇಶಕರ ಹುದ್ದೆಯ ವಿಸ್ತರಣೆ ಸಮಯ ಇನ್ನು ಮೂರು ತಿಂಗಳು ಮಾತ್ರ. ಈಗಾಗಲೇ ಮೂರು ಬಾರಿ ಅವಧಿಯನ್ನು ಸರ್ಕಾರಗಳು ವಿಸ್ತರಣೆ ಮಾಡಿವೆ.

ಡಾ.ಸುಧಾಕರ್ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಈ ಸಂಸ್ಥೆಯ ನಿರ್ದೇಶಕ ಹುದ್ದೆಗೆ ಬೇರೆಯವರನ್ನು ನೇಮಕ ಮಾಡಲು ಮುಂದಾಗಿದ್ದರು. ಆದರೆ, ಮಾಹಿತಿ ತಂತ್ರಜ್ಞಾನದ ಖ್ಯಾತ ಉದ್ಯಮಿಯೊಬ್ಬರು ಮಧ್ಯೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಒಂದು ವರ್ಷದ ಮಟ್ಟಿಗೆ ವಿಸ್ತರಣೆ ಮಾಡಲಾಗಿತ್ತು.

ನಂತರ ಬದಲಾದ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಅಲ್ಪ ಸಮಯದಲ್ಲಿ ಮುಗಿದಿದ್ದಅವರ ಅವಧಿಯನ್ನು ಆರು ತಿಂಗಳ ಮಟ್ಟಿಗೆ ವಿಸ್ತರಣೆ ಮಾಡಿದ್ದಾರೆ.

ನಿರ್ದೇಶಕ ಹುದ್ದೆಯಿಂದ ನಿವೃತ್ತರಾದ ನಂತರ ರಾಜಕೀಯಕ್ಕೆ ಬಂದು ಜನಸೇವೆ ಮಾಡಲಿ ಎಂಬುದು ಗೌಡರು ಕುಟುಂಬದ ಅಪೇಕ್ಷೆಯಾಗಿದೆ.

ಹಾಸನ ಲೋಕಸಭಾ ಕ್ಷೇತ್ರದಿಂದ ದೇವೇಗೌಡರು ಕಣಕ್ಕಿಳಿದರೆ, ಪಕ್ಷ ಆ ಕ್ಷೇತ್ರವನ್ನು ಉಳಿಸಿಕೊಳ್ಳಲಿದೆ. ಅವರನ್ನು ಹೊರತುಪಡಿಸಿದರೆ ಮಂಜುನಾಥ್ ಅವರಿಂದ ಮಾತ್ರ ಸಾಧ್ಯ ಎಂಬುದು ಚುನಾವಣಾ ಪೂರ್ವ ಸಮೀಕ್ಷೆಯಿಂದ ಗೊತ್ತಾಗಿದೆ.

ಮಾಜಿ ಪ್ರಧಾನಿ ಹಾಗೂ ರಾಜಕೀಯದ ಕುಟುಂಬದಲ್ಲಿದ್ದರೂ ಎಂದೂ ಕೂಡ ಮಂಜುನಾಥ್ ರಾಜಕೀಯ ಮಾಡಿರಲಿಲ್ಲ. ವೈದ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಅವರು, ರಾಜಕೀಯಕ್ಕೂ ಪ್ರವೇಶ ಮಾಡಲಿದ್ದಾರೆಯೇ ಎಂಬ ತೀವ್ರ ಕುತೂಹಲ ಕೆರಳಿಸಿದೆ.

ಮೂಲತಃ ಚನ್ನರಾಯಪಟ್ಟಣದವರಾದ ಅವರು, ಚುನಾವಣೆ ಸ್ಪರ್ಧೆ ಅಥವಾ ರಾಜಕೀಯ ಪ್ರವೇಶದ ಕುರಿತಂತೆ ಯಾವ ನಿಲುವು ತಳೆಯಲಿದ್ದಾರೆ ಎಂಬುದು ಕೂಡ ಸ್ಪಷ್ಟವಿಲ್ಲ. 

ಕುಮಾರಸ್ವಾಮಿ ಅವರ ಪ್ರಯತ್ನಕ್ಕೆ ಸಹಮತ ವ್ಯಕ್ತಪಡಿಸುತ್ತಾರೆಯೋ ಅಥವಾ ನಿರಾಕರಿಸುತ್ತಾರೆಯೋ ಎಂಬುದನ್ನು ಕಾದು ನೋಡಬೇಕು. ಇದುವರೆಗೂ ರಾಜಕೀಯ ಪ್ರವೇಶದ ಬಗ್ಗೆ ಬಹಿರಂಗವಾಗಿ ಅವರಾಗಲಿ, ಅವರ ಕುಟುಂಬದವರಾಗಲಿ ಹೇಳಿಕೆ ನೀಡಿಲ್ಲ.

ಅವರ ಸಹೋದರ ಸಿ.ಎನ್.ಬಾಲಕೃಷ್ಣ ಅವರು, ಚನ್ನರಾಯಪಟ್ಟಣ ಒಳಪಡುವ ಶ್ರವಣಬೆಳಗೊಳ ಕ್ಷೇತ್ರದಿಂದ ಮೂರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿ ಮನೆ ಮಾತಾಗಿರುವ ಮಂಜುನಾಥ್ ಚುನಾವಣಾ ಕಣಕ್ಕೆ ಧುಮಿಕಿದರೆ ಭಾರೀ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ಹೊಂದಿದ್ದಾರೆ.

Share this:

  • WhatsApp
  • Post
  • Tweet
  • Print
  • Email
Cn manjunathHassanhd kumaraswamyjdspolitics
Share 4 FacebookTwitterPinterestEmail
KM Shivaraju

previous post
ಲಿಂಗಾಯಿತ-ಒಕ್ಕಲಿಗ ಸಮುದಾಯದ ಓಲೈಕೆ ತಂತ್ರ
next post
ಕಾಡಂಚಿನ ಗ್ರಾಮಗಳಿಗೆ ಹಗಲು 3 ಫೇಸ್ ವಿದ್ಯುತ್

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ