Friday, May 23, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, May 23, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪುತ್ರ ಯತೀಂದ್ರಗೆ ವರುಣಾ ಕ್ಷೇತ್ರವನ್ನು ಹೊರಗುತ್ತಿಗೆ ಕೊಟ್ಟಿದ್ದೀರಾ?

by KM Shivaraju November 19, 2023
written by KM Shivaraju November 19, 2023 0 comments 3 minutes read
Share 2FacebookTwitterPinterestEmail
271
ಸಿಎಂ ಸಿದ್ದರಾಮಯ್ಯ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ವರುಣಾ ಕ್ಷೇತ್ರವನ್ನು ನಿಮ್ಮ ಮಗನಿಗೆ ಹೊರಗುತ್ತಿಗೆ ಕೊಟ್ಟಿದ್ದೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನೀವು ಮತ್ತು ನಿಮ್ಮ ಮಗ ಫೋನ್ ನಲ್ಲಿ ಮಾತನಾಡಿದ್ದು ವರ್ಗಾವಣೆ ದಂಧೆಯ ಬಗ್ಗೆ ಎಂಬುದು ಸತ್ಯ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳ ಕರ್ತವ್ಯ ಹಂಚಿಕೆ ಪಟ್ಟಿಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ಅವರು, ವಿಡಿಯೋದಲ್ಲಿ ನಿಮ್ಮ ಮಗ ಡಾ.ಯತೀಂದ್ರ ಅವರು ಮತನಾಡಿದ ಆರ್.ಮಹದೇವು ಅವರಿಗೂ ವರುಣಾ ಕ್ಷೇತ್ರ, ಶಿಕ್ಷಣ ಇಲಾಖೆ ಹಾಗೂ ಸಿಎಸ್ ಬಗ್ಗೆ ಅವರಿಗೆ ಸಂಬಂಧ ಇಲ್ಲ ಎಂದು ಕುಟುಕಿದ್ದಾರೆ.

ಅಲ್ಲದೆ, ಕ್ಯಾಶ್ ಫಾರ್ ಪೋಸ್ಟಿಂಗ್ ಹ್ಯಾಷ್ ಟ್ಯಾಗ್ ಜತೆ ಸಿಎಸ್ ಆರ್ ಎಂದರೆ ʼಕರಪ್ಟ್ ಸನ್ ಆಫ್ ಸಿದ್ದರಾಮಯ್ಯʼ ಎಂದು ಹೇಳಿದ್ದಾರೆ.

ಸಚಿವರೋ, ನಿಮ್ಮ ಗಸ್ತಿಗೆ ನಿಂತ ಬೌನ್ಸರುಗಳೋ?

ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ? ಒಂದು ವಿಡಿಯೋ ಬಗ್ಗೆ ಪ್ರಶ್ನಿಸಿದ್ದಕ್ಕೆ ನಿಮಗೆ, ನಿಮ್ಮ ಸಂಪುಟಕ್ಕೆ ನಿದ್ದೆಯೇ ಹಾರಿ ಹೋಗಿದೆ. ಕೆಲಸ ಬಿಟ್ಟು ನಿಮಗೆ ಸುವ್ವಿಸುವ್ವಾಲೆ ಹಾಡುತ್ತಿದೆ. ಅವರು ಸಚಿವರೋ, ನಿಮ್ಮ ಗಸ್ತಿಗೆ ನಿಂತ ಬೌನ್ಸರುಗಳೋ?? ಸಚಿವರನ್ನು ಗುಂಪು ಗುಂಪಾಗಿ ಛೂ ಬಿಟ್ಟರೆ ಕುಮಾರಸ್ವಾಮಿ ಹೆದರಿ ಓಡುತ್ತಾರೆಂದು ಭಾವಿಸಿದರೆ ಅದು ನಿಮ್ಮ ಪೆದ್ದುತನವಷ್ಟೇ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

 ಹಿಂಬಾಗಿಲಿನಿಂದ ಮಗನಿಗೆ ಅಧಿಕಾರ ಕೊಡಲು ಕೆ.ಡಿ.ಪಿ ಪಟ್ಟ

ವರುಣಾದ ಜನ ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನೀವೇ ಅವರ ಕೆಲಸ ಮಾಡಬೇಕು. ನಿಮ್ಮ ಪುತ್ರನಿಗೆ ಕ್ಷೇತ್ರದ ‘ಹೊರಗುತ್ತಿಗೆ’ (Out source) ಯಾಕೆ? ಸಿಎಂ ಆಗಿದ್ದಾಗ ನಾನು ನನ್ನ ಮಗನಿಗೆ ಕ್ಷೇತ್ರದ ಹೊರಗುತ್ತಿಗೆ ನೀಡಿದ್ದಿಲ್ಲ. ನೀವು ಮಗನಿಗೆ ವರುಣಾದ ಹೊರಗುತ್ತಿಗೆ ನೀಡಿದ್ದೀರಿ. ಅಷ್ಟೇ ಅಲ್ಲ, ನಿಮ್ಮ ಪುತ್ರ ಮಹಾಶಯರನ್ನು ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿ, ಅವರ ನೇತೃತ್ವದಲ್ಲಿ ಕೆ.ಡಿ.ಪಿ ಸಭೆ ನಡೆಸಲು ಹಾಗೂ ಸರಕಾರಿ ಅಧಿಕಾರಿಗಳ ಸಭೆ ನಡೆಸಿ ದರ್ಬಾರ್‌ ಮಾಡಲು ಅನುವು ಮಾಡಿಕೊಟ್ಟಿದ್ದೀರಿ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ? ಇದ್ದರೆ ತಿಳಿಸಿ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ತಿಳಿದಮಟ್ಟಿಗೆ ಈವರೆಗೆ ಯಾವ ಸಿಎಂ ಕೂಡ ಸ್ವಕ್ಷೇತ್ರದ ಹೊರಗುತ್ತಿಗೆ ಮಕ್ಕಳಿಗೆ ಕೊಟ್ಟಿದ್ದಿಲ್ಲ. ನೀವು ಕೊಟ್ಟು ಮೇಲ್ಪಂಕ್ತಿ ಹಾಕಿದ್ದೀರಿ. ಹಿಂಬಾಗಿಲಿನಿಂದ ಮಗನಿಗೆ ಅಧಿಕಾರ ಕೊಡಲು ಕೆ.ಡಿ.ಪಿ ಪಟ್ಟ ಕಟ್ಟಿದ್ದೀರಿ.  ಸಂವಿಧಾನದಲ್ಲಿ ಇದಕ್ಕೆ ಅವಕಾಶವಿರುವ ಯಾವುದಾದರೂ ವಿಧಿ-ವಿಧಾನ ಇದೆಯಾ? ಇದ್ದರೆ ತಿಳಿಸಿ ಎಂದು ಒತ್ತಾಯ ಮಾಡಿದ್ದಾರೆ.

ʼಕರಪ್ಟ್ ಸನ್ ಆಫ್ ಸಿದ್ದರಾಮಯ್ಯʼ

ನನಗೆ ತಿಳಿದಂತೆ CSR ಎಂದರೆ, ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಲಿಟಿ (Corporate social responsibility). ಈಗ ಅದು ʼಕರಪ್ಟ್ ಸನ್ ಆಫ್ ಸಿದ್ದರಾಮಯ್ಯʼ (Corrupt Son Of Siddaramaiah) ಆಗಿದೆ. ರಾಜ್ಯದಲ್ಲಿ CSR ಕಲೆಕ್ಷನ್ ಮಾಡಲು ನಿಮ್ಮ ಸುಪುತ್ರನಿಗೆ ಹೊರಗುತ್ತಿಗೆಯನ್ನು ನೀವೇ ಕೊಟ್ಟಿದ್ದೀರಾ, ಹೇಗೆ? 224 ಕ್ಷೇತ್ರಗಳ CSR ಉಸ್ತುವಾರಿ ಅವರದ್ದೇನಾ? 2% CSR ಮೇಲೂ ನಿಮ್ಮ ಕಾಕದೃಷ್ಟಿ ಬಿದ್ದಂತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಮಹದೇವು ಜವಾಬ್ದಾರಿಗೆ ದಾಖಲೆ ಕೊಟ್ಟ ಮಾಜಿ ಸಿಎಂ

ನಿಮ್ಮ ಸಚಿವಾಲಯದ ಅಧಿಕಾರಿಗಳ ಕರ್ತವ್ಯ ಹಂಚಿಕೆ ಪಟ್ಟಿ ಪ್ರಕಾರ, ವಿಶೇಷ ಕರ್ತವ್ಯಾಧಿಕಾರಿ ಆರ್.‌ಮಹದೇವುಗೆ ಶಿಕ್ಷಣ ಇಲಾಖೆ ಹೊಣೆ ಇಲ್ಲ. ಜಂಟಿ ಕಾರ್ಯದರ್ಶಿ ಎಂ.ರಾಮಯ್ಯಗೆ ಆ ಹೊಣೆ ಇದೆ. ವರುಣಾ ಹೊಣೆ ಇನ್ನೊಬ್ಬ ವಿಶೇಷ ಕರ್ತವ್ಯಾಧಿಕಾರಿ ಕೆ.ಎನ್.‌ವಿಜಯ್‌ ರದ್ದು. ಇದು ಸತ್ಯಸ್ಥಿತಿ. ಅಪರ ಸತ್ಯಹರಿಶ್ಚಂದ್ರರಾದ ನೀವೇ ಸುಳ್ಳು ಹೇಳೋದೇ? ಎಂದು ಸಿಎಂಗೆ ಕೇಳಿರುವ ಅವರು, ಯತೀಂದ್ರರು ಶಿಕ್ಷಣದ ಕುರಿತು ಎಂ.ರಾಮಯ್ಯ ಜತೆ, ವರುಣಾ ಬಗ್ಗೆ ಕೆ.ಎನ್.ವಿಜಯ್‌ ಜತೆ ಚರ್ಚಿಸದೆ, ಇವೆರಡಕ್ಕೂ ಸಂಬಂಧವಿಲ್ಲದವೇ ‘ಸಿಆಸು’ ಸಚಿವರ ಆಪ್ತಶಾಖೆ, ವರ್ಗಾವಣೆ -ಸೇವಾ ಹೊಣೆಯ ಮಹದೇವು ಜತೆ ಫೋನ್‌ ಚರ್ಚೆ ನಡೆಸಿದ್ದೇಕೆ? CSRಗೂ ಅವರಿಗೂ ಸಂಬಂಧವೇನು? CSR ಶಿಕ್ಷಣ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಮಧು ಬಂಗಾರಪ್ಪ ಕೂಡ ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜನಹಿತಕ್ಕಾಗಿ ದನಿಯೆತ್ತಿದ ನನ್ನನ್ನು,  ತಂದೆ, ಅಣ್ಣ, ಮಗನನ್ನು ಎಳೆತಂದು ಕಟ್ಟಿ ಹಾಕಲು ಸಾಧ್ಯವಿಲ್ಲ ಸಿದ್ದರಾಮಯ್ಯನವರೇ? ಕಷ್ಟದಲ್ಲಿರುವ ಜನ ‘ಎಲ್ಲಿದ್ದೀಯಪ್ಪ ಕುಮಾರಣ್ಣ?’ ಎಂದರೆ ಓಡಿ ಹೋಗುತ್ತೇನೆ. ಸತ್ಯಕ್ಕೆ ಸಮಾಧಿ ಕಟ್ಟಲು ನೀವು ಸೃಷ್ಟಿಸುತ್ತಿರುವ ಸುಳ್ಳಿನಸೌಧದ ಅಡಿಪಾಯವೇ ಈಗ ಕುಸಿಯುತ್ತಿದೆ. ಮಾಡದ ತಪ್ಪಿಗೆ ವಿದ್ಯುತ್‌ ಪ್ರಕರಣದಲ್ಲಿ ದಂಡ ತೆತ್ತಿದ್ದೇನೆ, ವಿಷಾದಿಸಿದ್ದೇನೆ. ಈಗ ನಿಮ್ಮ ಪ್ರತಿಷ್ಠೆ ಮೂರಾಬಟ್ಟೆಯಾಗಿದ್ದು ಇರಲಿ, ನಿಮ್ಮ ಪುತ್ರನನ್ನು ಇನ್ನೂ ಸಮರ್ಥನೆ ಮಾಡುತ್ತಿದ್ದೀರಲ್ಲಾ? ಎಂದು ಅವರು ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

‘ಪೆನ್‌’ಡ್ರೈವ್‌ ಇದೆ, ಕಳೆದಿಲ್ಲ

ನಿಮ್ಮ, ನಿಮ್ಮ ಪುತ್ರನಿಂದ ಇಡೀ ಕರ್ನಾಟಕ ತಲೆ ತಗ್ಗಿಸುವಂತೆ ಆಗಿದೆ. ಕಾಸಿಗಾಗಿ ಹುದ್ದೆ ದಂಧೆಯಿಂದ ಕರುನಾಡನ್ನು ಕುಖ್ಯಾತಗೊಳಿಸಿದ್ದೀರಿ. ಹೋದ ಮಾನ ವಾಪಸ್‌ ಪಡೆಯಲಿಕ್ಕೇನು ಮಾಡುತ್ತೀರಿ? ವಿಧಾನಸೌಧದ ಮುಂದೆ ತಲೆತಗ್ಗಿಸಿ ನಿಂತು ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೀರಾ? ಅಷ್ಟು ನೈತಿಕ ಧೈರ್ಯ ನಿಮಗೆ ಉಂಟೇ? ಎಂದು ಸವಾಲು ಹಾಕಿರುವ ಅವರು ಕುಮಾರಸ್ವಾಮಿ,  ಪೆನ್‌’ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ? ಸಿಎಂ ಸಾಹೇಬರೇ, ಎಂದು ತಿರುಗೇಟು ನೀಡಿದ್ದಾರೆ.

ನನ್ನ ಮಾನಸಿಕ ಸ್ವಾಸ್ಥ್ಯ ಇರಲಿ. ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತುಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಸಿಎಂಗೆ ಪ್ರತ್ಯುತ್ತರ ಕೊಟ್ಟಿದ್ದಾರೆ ಕುಮಾರಸ್ವಾಮಿ.

Share this:

  • WhatsApp
  • Post
  • Tweet
  • Print
  • Email
kmsKumaraswamy allegationSiddaramaiahtransfer racketyathindra
Share 2 FacebookTwitterPinterestEmail
KM Shivaraju

previous post
ಕುಮಾರಸ್ವಾಮಿವಿರುದ್ಧಕೆರಳಿದಮಂತ್ರಿಮಂಡಲ
next post
ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸುವ ಅವಶ್ಯಕತೆಯಿಲ್ಲ

You may also like

ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

May 23, 2025

ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

May 23, 2025

ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

May 22, 2025

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

May 22, 2025

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

May 22, 2025

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025

Categories

  • Special Story (181)
  • ಅಂಕಣ (102)
  • ಉದ್ಯೋಗ (240)
  • ದಿನ ಭವಿಷ್ಯ (110)
  • ರಾಜಕೀಯ (1,588)
  • ರಾಜ್ಯ (1,877)
  • ರಾಷ್ಟ್ರ (1,849)
  • ವಿಶ್ಲೇಷಣೆ (184)
  • ಶಿಕ್ಷಣ (319)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

    May 23, 2025
  • ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

    May 23, 2025
  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025

KMS Special

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

May 23, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ