Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಪೊಲೀಸ್ ಇಲಾಖೆಯಲ್ಲಿ 4547ಹುದ್ದೆಯನ್ನು ಭರ್ತಿ

by KM Shivaraju November 22, 2023
written by KM Shivaraju November 22, 2023 0 comments 2 minutes read
5FacebookTwitterPinterestEmail
230

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಣೆ

ಬೆಂಗಳೂರು: ಇಲಾಖೆಯಲ್ಲಿ ಖಾಲಿ ಇರುವ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 4547 ಹುದ್ದೆಯನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಪೈಕಿ1547 ಮಂದಿ ಪೋಲೀಸ್ ಸಬ್ ಇನ್ಸ್ ಪೆಕ್ಟರ್‌ಗಳು,3000 ಮಂದಿ ಕಾನ್ಸ್‌ಟೇಬಲ್‌ಗಳ ಹುದ್ದೆಗಳಿವೆ ಎಂದರು.

ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ545 ಮಂದಿ ಪೋಲೀಸ್ ಸಬ್‌ಇನ್ಸ್ ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಅಂತ್ಯದೊಳಗಾಗಿ ಭರ್ತಿ ಮಾಡಲಾಗುವುದು. ತದ ನಂತರ 402 ಪೋಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಹುದ್ದೆ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ತದ ನಂತರ 600ಮಂದಿ ಪೋಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುವುದು. ಒಟ್ಟಾರೆಯಾಗಿ 1547 ಪಿ.ಎಸ್.ಐ ಹುದ್ದೆಗಳನ್ನು ಮುಂದಿನ ಆರು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದರು.

ಇದೇ ರೀತಿ ಮೂರು ಸಾವಿರ ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆದಷ್ಟು ತ್ವರಿತವಾಗಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.

ಹದಿನೈದು ಸಾವಿರ ಕಾನ್ಸ್‌ಟೇಬಲ್‌ಗಳ ಅಗತ್ಯ

ಪೋಲೀಸ್ ಇಲಾಖೆಗೆ ಇನ್ನೂ ಹದಿನೈದು ಸಾವಿರ ಕಾನ್ಸ್‌ಟೇಬಲ್‌ಗಳ ಅಗತ್ಯವಿದ್ದು, ಹಂತ ಹಂತವಾಗಿ ಇದನ್ನು ಭರ್ತಿ ಮಾಡಿಕೊಳ್ಳಲಾಗುವುದು. ಆಯ್ಕೆಯಾಗುವವರಿಗೆ ತರಬೇತಿ ನೀಡುವ ಅಗತ್ಯವಿರುವುದರಿಂದ ಒಂದೇ ಕಂತಿನಲ್ಲಿ ಇಷ್ಟು ಮಂದಿಯನ್ನು ನೇಮಕ ಮಾಡಿಕೊಳ್ಳುವುದು ಕಷ್ಟ ಎಂದರು.

ಪ್ರತಿ ವರ್ಷ ನಿವೃತ್ತಿಯಾಗುವ ಪೋಲೀಸ್ ಸಿಬ್ಬಂದಿಗಳ ಜಾಗಕ್ಕೆ ಹೊಸ ನೇಮಕಾತಿ ಮಾಡಿಕೊಳ್ಳಲು ಈಗ ಹಣಕಾಸು ಇಲಾಖೆಯ ಒಪ್ಪಿಗೆ ಪಡೆಯಬೇಕು. ಆದರೆ, ನಿವೃತ್ತರ ಜಾಗಕ್ಕೆ ಹೊಸಬರನ್ನು ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಒಪ್ಪಿಗೆ ಬೇಕಿಲ್ಲ ಎಂದವರು ಪ್ರತಿಪಾದಿಸಿದರು.

ನಿವೃತ್ತ ಪೋಲೀಸ್ ಸಿಬ್ಬಂದಿಗಳ ಜಾಗಕ್ಕೆ ಹೊಸಬರನ್ನು ನೇಮಕ ಮಾಡಲು ಹಣಕಾಸು ಇಲಾಖೆಯ ಒಪ್ಪಿಗೆ ಬೇಕಿಲ್ಲ ಎಂದು ಈ ಹಿಂದೆ ನಾವು ಅಧಿಕಾರದಲ್ಲಿದ್ದಾಗ ಕಾನೂನು ತಂದಿದ್ದೆವು. ಆದರೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನಿವೃತ್ತ ಪೋಲೀಸ್ ಸಿಬ್ಬಂದಿಗಳ ಜಾಗಕ್ಕೆ ಹೊಸಬರನ್ನು ನೇಮಕ ಮಾಡಲು ಹಣಕಾಸು ಇಲಾಖೆಯ ಒಪ್ಪಿಗೆ ಪಡೆಯಬೇಕು ಎಂದು ನಿಯಮ ಬದಲಿಸಿದೆ.

ಎರಡು ವರ್ಷಗಳ ನಂತರ ವರ್ಗಾವಣೆ ಕಾನೂನು


ಆದರೆ ಹೊಸ ಹುದ್ದೆಗಳ ಸೃಷ್ಟಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡುವುದು ಸರಿ. ಆದರೆ ಅಸ್ತಿತ್ವದಲ್ಲಿರುವ ಹುದ್ದೆಗಳ ಅನುಮತಿಗೆ ಅದರ ಅನುಮತಿ ಬೇಕಿಲ್ಲ. ಮುಂದಿನ ದಿನಗಳಲ್ಲಿ ಈ ನಿಯಮವನ್ನು ಬದಲಿಸಿ ಕಾನೂನು ರೂಪಿಸಲಾಗುವುದು ಎಂದರು.

ಪೋಲೀಸ್ ಇಲಾಖೆಯಲ್ಲಿ ಪ್ರತಿ ವರ್ಷ ವರ್ಗಾವಣೆ ಮಾಡಲಾಗುತ್ತಿದ್ದು, ಇನ್ನು ಮುಂದೆ ಎರಡು ವರ್ಷಗಳ ನಂತರ ವರ್ಗಾವಣೆ ಮಾಡಬೇಕು ಎಂಬ ಕಾನೂನನ್ನು ರೂಪಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು.

ರಾಜ್ಯದ ಹಲವು ಜಿಲ್ಲೆ ಡ್ರಗ್ ಮುಕ್ತವೆಂದು ಘೋಷಿಸಲು ಸಿದ್ಧತೆ

ರಾಜ್ಯದಲ್ಲಿ ಡ್ರಗ್ಸ್ ಜಾಲದ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳನ್ನು ಡ್ರಗ್ ಮುಕ್ತ ಜಿಲ್ಲೆಗಳೆಂದು ಘೋಷಿಸಲು ಸಿದ್ಧತೆ ನಡೆಸಲಾಗಿದೆ ಎಂದು ನುಡಿದರು.

ಸಿಂಥೆಟಿಕ್ ಡ್ರಗ್ ವಿಷಯದಲ್ಲಿ ಸರ್ಕಾರಕ್ಕೆ ಆತಂಕವಿದ್ದು ಗಾಂಜಾದಂತಹ ಮಾದಕ ವಸ್ತುಗಳಿಗಿಂತ ಎಂ.ಡಿ.ಎಂ.ಎ ನಂತಹ ಸಿಂಥೆಟಿಕ್ ಡ್ರಗ್‌ಗಳು ತುಂಬ ಅಪಾಯಕಾರಿ ಎಂದರಲ್ಲದೆ, ಡ್ರಗ್ಸ್ ಜಾಲದ ವಿರುದ್ಧ ಪೋಲೀಸ್ ಇಲಾಖೆ ಹಿಂದೆಂದಿಗಿಂತ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸ್ಪಷ್ಟ ಪಡಿಸಿದರು.

ಸೈಬರ್ ಅಪರಾಧಗಳನ್ನು ತಡೆಗಟ್ಟಲು ಸೂಕ್ತ ಕಾನೂನು ರೂಪಿಸುವ ಸಂಬಂಧ ಚರ್ಚೆ ನಡೆದಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಪರಿಣಾಮಕಾರಿಯಾದ ಹೆಜ್ಜೆ ಇಡಲಾಗುವುದು ಎಂದು ವಿವರಿಸಿದರು.

ರೌಡಿಗಳನ್ನು ಹತ್ತಿಕ್ಕಲು ಪೋಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಏನೇ ಮಾಡಿದರೂ ನಿಯಂತ್ರಣಕ್ಕೆ ಬರದ ರೌಡಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಪೋಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ನುಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
government jobs kms kmskannada police recruitment dr g parmeshwar 4547 post statekarnataka
5 FacebookTwitterPinterestEmail
KM Shivaraju

previous post
25 ನಿಗಮ-ಮಂಡಳಿ ಅಧ್ಯಕ್ಷರ ನೇಮಕ
next post
ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಸೇರಿ ಐವರ ಬಂಧನಕ್ಕೆ ಆಗ್ರಹ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ