Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಾದ್ಯಂತ ಬಿಜೆಪಿ ಉಗ್ರ ಹೋರಾಟ

by KM Shivaraju November 23, 2023
written by KM Shivaraju November 23, 2023 0 comments 2 minutes read
2FacebookTwitterPinterestEmail
412
ವಿವಾದಾತ್ಮಕ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ವರದಿ ತರಾತುರಿಯಲ್ಲಿ ಪಡೆಯಬಾರದು

ಬೆಂಗಳೂರು:ವಿವಾದಾತ್ಮಕವಾದ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ವರದಿಯನ್ನು ಸರ್ಕಾರ ತರಾತುರಿಯಲ್ಲಿ ಪಡೆಯಲು ಮುಂದಾದರೆ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಇಂದಿಲ್ಲಿ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಿಷ್ಕೃತ ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿವೆ ಎಂದಿದ್ದಾರೆ.

ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ

ವರದಿಯ ಮೂಲಪ್ರತಿ ಕಾಣೆಯಾಗಿದೆ, ಅದಕ್ಕೆ ಕಾರ್ಯದರ್ಶಿ ಸಹಿ ಇಲ್ಲ, ಇದೊಂದು ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ, ವರದಿಗೆ ಸಚಿವ ಸಂಪುಟದಲ್ಲೇ ಸಹಮತ ಇಲ್ಲ, ಇಂತಹ ವಿವಾದಾತ್ಮಕ ವರದಿ ಸ್ವೀಕರಿಸಲು ಆತುರ ಏಕೆ ಎಂದು ಪ್ರಶ್ನಿಸಿದರು.

ಕೋಟಿಗಟ್ಟಲೇ ಹಣ ವೆಚ್ಚ ಮಾಡಿ ಸಿದ್ಧಪಡಿಸಿದ ವರದಿ ಹೇಗೆ ಕಳುವಾಯಿತು ಎಂಬ ಬಗ್ಗೆ ತನಿಖೆ ನಡೆಸಲಿಲ್ಲ, ಮೂಲ ವರದಿ ಕಳುವಾಗಿದ್ದರೂ ಅದರ ದತ್ತಾಂಶ ಆಧಾರದ ಮೇಲೆ ಪರಿಷ್ಕೃತ ವರದಿ ಸಿದ್ಧಪಡಿಸುವುದು ಸರಿಯಲ್ಲ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಕರ್ನಾಟಕದ 10 ವರ್ಷಗಳ ಹಿಂದಿನ ಜನಸಂಖ್ಯೆಗೂ, ಈಗಿನ ಜನಸಂಖ್ಯೆಗೂ ಸಾಕಷ್ಟು ವ್ಯತ್ಯಾಸ ಇದೆ, ಸಮೀಕ್ಷೆ ನಡೆಸುವವರು ತಮ್ಮ ಮನೆಗಳಿಗೆ ಬಂದಿರಲಿಲ್ಲ ಎಂಬುದಾಗಿ ಸಾರ್ವಜನಿಕರಿಂದಲೂ ವ್ಯಾಪಕ ದೂರುಗಳು ಬಂದಿವೆ, ಇಷ್ಟಾದರೂ ವರದಿ ಸ್ವೀಕರಿಸುತ್ತೇನೆ ಎಂದು ಮುಖ್ಯಮಂತ್ರಿ ಆತುರ ತೋರುತ್ತಿರುವುದು ಜನರಲ್ಲಿ ಸಂಶಯ ಹುಟ್ಟು ಹಾಕಿದೆ.

ಕಾಂಗ್ರೆಸ್ ವರಿಷ್ಠರನ್ನು ಓಲೈಸುವ ಹುನ್ನಾರ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಓಲೈಸುವ ಹುನ್ನಾರ ಇದ್ದಂತಿದೆ.

ಇಂತಹ ನಡುವಳಿಕೆಯ ಹಿಂದೆ ಏನನ್ನೂ ಮುಚ್ಚಿಡುತ್ತಿರುವ, ಯಾರನ್ನೋ ರಕ್ಷಿಸುವ ಸಂಶಯ ಮೂಡುತ್ತಿದೆ, ವರದಿಯಲ್ಲಿನ ವಿವಾದಾತ್ಮಕ ಅಂಶಗಳ ಕಾರಣ ಹಿಂದಿನ ಬಿಜೆಪಿ ಸರ್ಕಾರ ವರದಿ ಸ್ವೀಕಾರಕ್ಕೆ ಮುಂದಾಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂಬುದಕ್ಕೆ ತಮ್ಮ ಪಕ್ಷದ ಸಹಮತವಿದೆ, ಆದರೆ, ಅವೈಜ್ಞಾನಿಕ ಹಾಗೂ ವಿವಾದಾತ್ಮಕ ವರದಿ ಆಧರಿಸಿ ಕ್ರಮಕ್ಕೆ ಮುಂದಾದರೆ ವಿರೋಧವಿದೆ ಎಂದರು.

ಪಾರದರ್ಶಕವಾಗಿ ಮರು ಸಮೀಕ್ಷೆ ನಡೆಸಲಿ

ದುರ್ಬಲರಿಗೆ ನಿಜವಾಗಿಯೂ ಮೀಸಲು ನೀಡುವಲ್ಲಿ ಬದ್ಧತೆ ಇದ್ದರೆ ಪಾರದರ್ಶಕವಾಗಿ ಮರು ಸಮೀಕ್ಷೆ ನಡೆಸಲಿ, ವಿರೋಧ ವ್ಯಕ್ತಪಡಿಸುತ್ತಿರುವ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳನ್ನು ಕರೆದು ಅಭಿಪ್ರಾಯ ಪಡೆದುಕೊಳ್ಳಲಿ ಎಂದು ಆಗ್ರಹಿಸಿದರು.

ಕಳೆದ ಅವಧಿಯಲ್ಲಿ ವೀರಶೈವರ-ಲಿಂಗಾಯತ ವಿಚಾರದಲ್ಲಿ ಕೈಹಾಕಿ ಏನಾಯಿತು, ಮತ್ತೆ ಅದೇ ರೀತಿ ಜಾತಿ-ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸಕ್ಕೆ ಸಿದ್ದರಾಮಯ್ಯ ಕೈಹಾಕಬಾರದು ಎಂದರು.

ವರದಿ ಕಳುವಿಗೆ ಕಾರಣಗಳನ್ನು ಪತ್ತೆ ಹಚ್ಚಲಿ, ವೈಜ್ಞಾನಿಕವಾಗಿ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಕಾಂತರಾಜು ಹೇಳಿರುವುದು ನಿಜವಾಗಿದ್ದರೆ ಕಾರ್ಯದರ್ಶಿ ಏಕೆ ಸಹಿ ಮಾಡಿಲ್ಲ, ಸಹಿ ಹಾಕಿಸಲು ಆಗಿಲ್ಲ ಎಂದಾದರೆ ಯಾರನ್ನೋ ಮೆಚ್ಚಿಸಲು, ಯಾರದೋ ಮನೆಯಲ್ಲಿ ಕುಳಿತು ವರದಿ ಬರೆದಿರಬಹುದು ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವಿಷಯದಲ್ಲಿ ಗೊಂದಲ ಮೂಡಿಸುತ್ತಿದ್ದಾರೆ

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವಿಷಯದಲ್ಲಿ ಮೊದಲಿನಿಂದಲೂ ಗೊಂದಲ ಮೂಡಿಸುತ್ತಿದ್ದಾರೆ, ಆರಂಭದಲ್ಲಿ ಜಾತಿಗಣತಿ ಎಂದರು, ಆಮೇಲೆ ಆರ್ಥಿಕ-ಶೈಕ್ಷಣಿಕ-ಸಾಮಾಜಿಕ ವರದಿ ಅಂದರು, ಸರ್ಕಾರಿ ಆದೇಶದಲ್ಲಿ ಸಾಮಾಜಿಕ-ಶೈಕ್ಷಣಿಕ ವರದಿ ಎಂಬುದಾಗಿ ನಮೂದಿಸಲಾಗಿದೆ ಎಂದರು.

ಹಿಂದುಳಿದ ವರ್ಗಗಳ ಆಯೋಗ ಸರಿಯಾಗಿ ಸಮೀಕ್ಷೆ ಮಾಡಿಲ್ಲ, ಸದಸ್ಯರು, ಅಧ್ಯಕ್ಷರಿಗೆ ಸಾಮ್ಯತೆ ಇರಲಿಲ್ಲ, ರಾಜಕೀಯ ಹಸ್ತಕ್ಷೇಪ ಇತ್ತು, ಹಿಂದೆ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಿದ್ದರಾಮಯ್ಯ ವರದಿ ಸ್ವೀಕರಿಸಲಿಲ್ಲ, ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಲಾಭ ಪಡೆಯಲು ಸ್ಪಷ್ಟ ವರದಿ ಬಂದ ಮೇಲೆ ತೀರ್ಮಾನ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjpindiakantaraj rportkarnatakakmskmskannadaopposition leaderpoliticsr.ashokSiddaramaiah
2 FacebookTwitterPinterestEmail
KM Shivaraju

previous post
ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂಬುದೇ ತಿಳಿದಿಲ್ಲ
next post
ಕರ್ನಾಟಕಕ್ಕೆ ಮತ್ತೊಂದು ಶಾಕ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ