Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬೆಂಗಳೂರಿನ ಚಿರತೆ ಪಡೆ 2 ದಿನಗಳಲ್ಲಿ ಕಾರ್ಯಾರಂಭ

by KM Shivaraju November 23, 2023
written by KM Shivaraju November 23, 2023 0 comments 1 minutes read
0FacebookTwitterPinterestEmail
128

ಕಾಡಾನೆ ಹಾವಳಿ ಪ್ರದೇಶಗಳಲ್ಲಿ ಅಧಿಕಾರಿಗಳ  ಮೊಕ್ಕಾಂ: ಈಶ್ವರ ಖಂಡ್ರೆ

ಬೆಂಗಳೂರು: ಬೆಂಗಳೂರು ಹೊರ ವಲಯದಲ್ಲಿ ಪದೆ ಪದೆ ಚಿರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಇನ್ನು 2 ದಿನಗಳ ಒಳಗಾಗಿ ಕಾರ್ಯಾರಂಭ ಮಾಡಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಸಚಿವರು, ಮೂಡಿಗೆರೆಯಲ್ಲಿ ನಿನ್ನೆ ಕಾಡಾನೆ ನಿಗ್ರಹ ದಳದ ಕಾರ್ತಿಕ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಆನೆ ದಾಳಿ ಸಾವಿನ ಕುರಿತು ವರದಿಗೆ ಸೂಚನೆ

 ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಆನೆ ದಾಳಿ ಸಾವಿನ ಎಲ್ಲ ಪ್ರಕರಣಗಳ ಕುರಿತಂತೆ ಪರಾಮರ್ಶಿಸಿ, ಯಾವ ಭಾಗದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ. ಇದಕ್ಕೆ ಕಾರಣವೇನು ಎಂಬ ಬಗ್ಗೆ ತಿಳಿದು ಪರಿಹಾರೋಪಾಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಆನೆಗಳು ಯಾವ ಯಾವ ಋತುವಿನಲ್ಲಿ ಯಾವ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತವೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ  ಸ್ಥಳೀಯರಿಗೆ ಮುಂಚಿತವಾಗಿಯೇ ಜಾಗೃತಿ ಮೂಡಿಸಲು ಮತ್ತು ಮಾಹಿತಿ ನೀಡಲು ನಿರ್ದೇಶಿಸಿದರು.

ಕಾಡು ಪ್ರಾಣಿಗಳ ಸ್ವಭಾವ ಕುರಿತು ಅರಿವು ಕಾರ್ಯಕ್ರಮ

ಅರಣ್ಯದಂಚಿನ ಶಾಲೆ ಕಾಲೇಜುಗಳಿಗೆ ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ತಜ್ಞರು ತೆರಳಿ ವಿದ್ಯಾರ್ಥಿಗಳಿಗೆ ಆನೆಗಳು ಮತ್ತು ಕಾಡು ಪ್ರಾಣಿಗಳ ಸ್ವಭಾವದ ಬಗ್ಗೆ ಹಾಗೂ ಕಾಡು ಪ್ರಾಣಿಗಳ ನಾಡಿಗೆ ಬಂದಾಗ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಬಗ್ಗೆಯೂ ತಿಳಿಯ ಹೇಳಲು ಸೂಚಿಸಿದರು.

ರೈಲ್ವೆ ಬ್ಯಾರಿಕೇಡ್, ಆನೆ ನಿಗ್ರಹ ಕಂದಕ ಮತ್ತು ಸೌರ ಬೇಲಿಗಳನ್ನು ಅಳವಡಿಸುವ ಕುರಿತಂತೆಯೂ ಹೆಚ್ಚಿನ ಮುತುವರ್ಜಿ ವಹಿಸಬೇಕು. ವಿಳಂಬ ಮಾಡಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಎಲ್ಲ ಉನ್ನತ ಅಧಿಕಾರಿಗಳೂ ವಾರದಲ್ಲಿ ಕನಿಷ್ಠ 2 ದಿನ ಕಾಡಾನೆ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಬೇಕು.  ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕೆಂದು ತಿಳಿಸಲಾಗಿದ್ದು, ಹಿರಿಯ ಐ.ಎಫ್.ಎಸ್. ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ನೋಡಲ್ ಅಧಿಕಾರಿಗಳಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

 ಮಾನವ ವನ್ಯಜೀವಿ ಸಂಘರ್ಷ ಕುರಿತ ಪರಿಶೀಲನಾ ಸಭೆ

ಈ ಅಧಿಕಾರಿಗಳು ನಿಯೋಜಿತ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಕುರಿತಂತೆ ಪರಿಶೀಲನಾ ಸಭೆ ನಡಿ, ಜಿಲೆಯಲ್ಲಿ ಬಾಕಿ ಇರುವ ವಿವಿಧ ಪರಿಹಾರ ಧನ ಪಾವತಿಸುವ ಪ್ರಕರಣಗಳ ಕುರಿತೂ ಚರ್ಚಿಸಿ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.

ಆನೆಗಳು ನಾಡಿಗೆ ಬರುತ್ತಿರುವುದಕ್ಕೆ ಕಾಡಿನಲ್ಲಿ ನೀರು ಮತ್ತು ಆಹಾರದ ಕೊರತೆ ಕಾರಣ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಆನೆಗಳಿಗೆ ಕಾಡಿನಂಚಿನ ನೆಡುತೋಪುಗಳಲ್ಲಿ, ಪರಿಭಾವಿತ ಅರಣ್ಯದಲ್ಲಿ ಸೊಪ್ಪು, ಹಣ್ಣು, ಎಲೆ, ತೊಗಟೆ, ಬಿದುರು ಇತ್ಯಾದಿ ಸಿಗುವಂತೆ ಕ್ರಮ ವಹಿಸಲು ಹಾಗೂ ಅರಣ್ಯದೊಳಗೆ ಬೇಸಿಗೆಯಲ್ಲೂ ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ನಿರ್ದೇಶಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucheetah Padeforest areasishwara khandrekmskmskannadaoperation start in 2 days
0 FacebookTwitterPinterestEmail
KM Shivaraju

previous post
ಕರ್ನಾಟಕಕ್ಕೆ ಮತ್ತೊಂದು ಶಾಕ್
next post
ಪದವೀಧರ, ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ