Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯ ಬಿಜೆಪಿ ಭಿನ್ನರಿಗೆ ವರಿಷ್ಠರ ಬುಲಾವ್

by KM Shivaraju November 25, 2023
written by KM Shivaraju November 25, 2023 0 comments 2 minutes read
Share 2FacebookTwitterPinterestEmail
67
ಡಿಸೆಂಬರ್ ನಲ್ಲಿ ದೆಹಲಿಗೆ ಬರುವಂತೆ ಆಹ್ವಾನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ನೇಮಕಾತಿಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ಮಾಜಿ ಸಚಿವರಾದ ವಿ. ಸೋಮಣ್ಣ, ರಮೇಶ್ ಜಾರಕಿಹೊಳಿ ಮತ್ತಿತರರು ದೆಹಲಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.

ರಾಜ್ಯಾಧ್ಯಕ್ಷರ ನೇಮಕಾತಿ ನಂತರ ಪಕ್ಷದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಬಗೆಹರಿಸಲು ವರಿಷ್ಠರು ಮಧ್ಯೆ ಪ್ರವೇಶಿಸಿದ್ದು, ಅಸಮಾಧಾನಗೊಂಡವರನ್ನು ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.

ನಿನ್ನೆ ರಾತ್ರಿ ಪಕ್ಷದ ಪ್ರಮುಖ ನಾಯಕರೊಬ್ಬರು ಸೋಮಣ್ಣ ಅವರನ್ನು ಸಂಪರ್ಕಿಸಿ ಪಂಚರಾಜ್ಯಗಳ ಚುನಾವಣೆ ಪ್ರಕಿಯೆ ಮುಗಿದ ನಂತರ ಡಿಸೆಂಬರ್ ಮೊದಲ ವಾರದಲ್ಲಿ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ಮೂರು ದಿನ ದೆಹಲಿ ಬಿಡಾರ

ವರಿಷ್ಠರ ಆಹ್ವಾನದ ಮೇರೆಗೆ ಸೋಮಣ್ಣ, ರಮೇಶ್, ಜಾರಕಿಹೊಳಿ ಅಲ್ಲದೆ, ಅರವಿಂದ ಲಿಂಬಾವಳಿ, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಮುಖಂಡರು ಡಿಸೆಂಬರ್ 7 ರಂದು ದೆಹಲಿಗೆ ತೆರಳಿ ಮೂರು ದಿನಗಳ ಕಾಲ ಅಲ್ಲಿಯೇ ಬಿಡಾರ ಹೂಡಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದ ಆಶ್ರಯದಲ್ಲಿ ಡಿಸೆಂಬರ್ 6ರಂದು ಸೋಮಣ್ಣ ತಮ್ಮ ಕುಟುಂಬದ ವತಿಯಿಂದ ನಿರ್ಮಿಸಿರುವ ದಾಸೋಹ ಭವನವನ್ನು ಸಮರ್ಪಣೆ ಮಾಡಲಿದ್ದಾರೆ.

bjp logo

ಸಮಾರಂಭದ ನಂತರ ತಮ್ಮ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ತಮ್ಮ ಬೆಂಬಲಿಗರು ಹಾಗೂ ಮುಖಂಡರ ಸಭೆ ಕರೆದಿದ್ದರು.

ವರಿಷ್ಠರಿಗೆ ಇದರ ಮನವರಿಕೆ ಆಗುತ್ತಿದ್ದಂತೆ ನಿನ್ನೆ ರಾತ್ರಿ ಸೋಮಣ್ಣ ಅವರನ್ನು ಸಂಪರ್ಕಿಸಿ, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳದಂತೆ, ಸಮಸ್ಯೆ ಪರಿಹರಿಸಲು ತಾವುಗಳು ದೆಹಲಿಗೆ ಬರುವಂತೆಯೂ ಆಹ್ವಾನ ನೀಡಿದ್ದಾರೆ.

ದುಗುಡ–ದುಮ್ಮಾನ ವರಿಷ್ಠರ ಮುಂದಿಡುತ್ತೇವೆ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ನಾವು ಹಿರಿಯರು, ನಮ್ಮದೇ ಆದ ಸೇವೆ, ಅನುಭವ, ಆಲೋಚನೆಗಳಿವೆ. ಎಲ್ಲವೂ ನಮ್ಮದೇ ಸರಿ ಎನ್ನಲಾಗದು. ನಮ್ಮಲ್ಲಿರುವ ದುಗುಡ-ದುಮ್ಮಾನ ವರಿಷ್ಠರ ಮುಂದಿಡುತ್ತೇವೆ. ಅವರು ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಮ್ಮ ಮುಂದಿನ ನಡೆ ಎಂದು ಮಾರ್ಮಿಕವಾಗಿ ನುಡಿದರು.

ಸೋಮಣ್ಣ ಮತ್ತು ರಮೇಶ್ ಜಾರಕಿಹೊಳಿ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್ ಕೈಜೋಡಿಸಿದ್ದು, ಇವರ ನಾಯಕತ್ವದಲ್ಲಿ ಯಡಿಯೂರಪ್ಪ ವಿರೋಧಿ ಬಣ ಡಿಸೆಂಬರ್ 7ರಂದು ದೆಹಲಿಗೆ ತೆರಳಲಿದೆ.

ವಿಜಯೇಂದ್ರ ನೇಮಕಾತಿ ಬಗ್ಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ನಾಯಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ramesh jarakiholi

ಸೇಡಿನ ಮನೋಭಾವ ಹೊಂದಿರುವ ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ನಮ್ಮನ್ನು ರಾಜಕೀಯವಾಗಿ ತುಳಿಯಬಹುದು.

ನೀವು ರಕ್ಷಣೆಗೆ ಬರದಿದ್ದರೆ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಕೆಲವು ಅಂಕಿ-ಅಂಶಗಳನ್ನು ವರಿಷ್ಠರ ಮುಂದಿಡಲಿದ್ದಾರೆ. ಅಷ್ಟೇ ಅಲ್ಲ, ಪಕ್ಷದಲ್ಲಿ ಮುಂದೆ ನಮ್ಮ ಸ್ಥಾನಮಾನದ ಬಗ್ಗೆ ನೀವೇ ನಿರ್ಧಾರ ಕೈಗೊಳ್ಳಬೇಕು ಎಂದು ವಿನಂತಿಸಲಿದ್ದಾರೆ.

ಕೆಲವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸುವ ಕ್ಷೇತ್ರಗಳ ಟಿಕೆಟ್ ಪಡೆಯಲು ಒತ್ತಡ ಹಾಕಲಿದ್ದಾರೆ.

ವರಿಷ್ಠರು ತಮ್ಮ ಮನವಿಗೆ ಸ್ಪಂದಿಸದಿದ್ದರೆ, ಕೆಲವರು ರಾಜಕೀಯವಾಗಿ ತಟಸ್ಥವಾಗಿ ಉಳಿದರೆ ಮತ್ತೆ ಕೆಲವರು ಪಕ್ಷ ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ.

aravindalimbavali

ವರಿಷ್ಠರನ್ನು ಭೇಟಿ ಮಾಡಲು ಡಿಸೆಂಬರ್ 7ರಂದು ಮೂರು ದಿನಗಳಿಗೆ ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯ ನಿರ್ಧಾರ ಕೈಗೊಳ್ಳಲಿರುವ ಸೋಮಣ್ಣ ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಳಿ ಚುನಾವಣೆಯಲ್ಲಿ ತಮಗಾದ ಸೋಲು ಮತ್ತು ನಂತರದ ಬೆಳವಣಿಗೆಯ ಬಗ್ಗೆ ಅಳಲು ತೋಡಿಕೊಂಡರು.

ಕೇಂದ್ರ ಗೃಹ ಸಚಿವ ಅಮಿತ್ ಷಾ ನಮ್ಮ ಮನೆಯಲ್ಲಿ ಎರಡು ಗಂಟೆ ಕುಳಿತು ವರುಣಾದಿಂದ ಕಣಕ್ಕಿಳಿಯುವಂತೆ ಒತ್ತಡ ಹೇರಿದರು.

ಆದರೆ ನಾನು, ಗೋವಿಂದರಾಜ ಕ್ಷೇತ್ರ ಬಿಟ್ಟು ಹೊರಹೋಗಲು ಸಮ್ಮತಿಸಲಿಲ್ಲ. ನಂತರ ಪ್ರಧಾನಿ ಅವರು ತಮ್ಮನ್ನು ದೆಹಲಿಗೆ ಕರೆಸಿಕೊಂಡು ಸ್ಫರ್ಧೆ ಮಾಡುವಂತೆ ಸೂಚಿಸಿದರು.

ಅವರ ಮಾತಿಗೆ ತಲೆಬಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಚಿನ್ನದಂತಹ ಕ್ಷೇತ್ರ ಬಿಟ್ಟುಹೋಗಿದ್ದಕ್ಕೆ ಎರಡು ಕಡೆಯೂ ಸೋತೆ.

ಸೋಲಿಗೆ ನಮ್ಮ ಪಕ್ಷದ ಮುಖಂಡರು ಮತ್ತು ಸ್ವಜಾತಿಯವರೇ ಕಾರಣ. ಇದೆಲ್ಲಾ ಮಾಹಿತಿಯನ್ನು ವರಿಷ್ಠರಿಗೆ ನೀಡಿದ್ದೆ.ನನ್ನನ್ನು ಸೋಲಿಸಿದವರಿಗೆ ಪಕ್ಷದಲ್ಲಿ ಸ್ಥಾನಮಾನ ಸಿಕ್ಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share this:

  • WhatsApp
  • Post
  • Tweet
  • Print
  • Email
bengalurubjpdelhikarnatakakms
Share 2 FacebookTwitterPinterestEmail
KM Shivaraju

previous post
ವರದಿ ಯಥಾವತ್ ಜಾರಿಗೊಳಿಸಿ
next post
ಬಿಎಂಟಿಸಿಯ ಎಂಎಫ್ ಬಸ್ ಸೇವೆ ಹೆಚ್ಚಳ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ