Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಸರ್ಕಾರದಿಂದ ಮಾಧ್ಯಮ ಜಾಹೀರಾತಿಗೆ 140 ಕೋಟಿ ರೂ. ವೆಚ್ಚ

by KM Shivaraju December 4, 2023
written by KM Shivaraju December 4, 2023 0 comments 1 minutes read
ಬೆಂಗಳೂರು: ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ವಿಷಯಗಳ ಕುರಿತು ಇಂದು ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು ಹೈದರಾಬಾದಿನ ಅಂತರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಮಹತ್ವದ ಒಡಂಬಡಿಕೆಗೆ ಸಹಿ ಮಾಡಿವೆ. ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಹೆಚ್.ಎಸ್.ದೇವರಾಜ ಮತ್ತು ಹೈದರಾಬಾದ್ ನ ಐಸಿಆರ್ ಐಎಸ್ಎಟಿ ಉಪ ಮಹಾ ನಿರ್ದೇಶಕರಾದ ಡಾ. ಅರವಿಂದ ಕುಮಾರ್ಅವರು ಈ ಒಡಂಬಡಿಕೆಗೆ ಸಹಿ ಹಾಕಿದರು. ಕರ್ನಾಟಕ ರಾಜ್ಯ ಬೀಜ ನಿಗಮವು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರೈತರಿಗೆ ಗುಣಮಟ್ಟದ ಬೀಜ ಪೂರೈಕೆ ಮಾಡುವಲ್ಲಿ ರಾಜ್ಯದಲ್ಲಿ ಮುಂಚೂಣಿ ಸ್ಥಾನದಲ್ಲಿದೆ. ವರ್ಷಕ್ಕೆ ಸರಾಸರಿ ಮೂರುವರೆ ಲಕ್ಷ ಕ್ವಿಂಟಲ್ ಬೀಜ ಸರಬರಾಜು ಮಾಡುತ್ತಿದ್ದು, ಉತ್ತಮ ಗುಣಮಟ್ಟದ ಬೀಜ ಪೂರೈಕೆ ಸೌಲಭ್ಯಗಳನ್ನು ಹೊಂದಿದೆ. ಒಂದು ಅಂತರಾಷ್ಟ್ರೀಯ ಬೆಳೆ ತಳಿ ಸಂಶೋಧನಾ ಕೇಂದ್ರವಾಗಿದ್ದು ಹೊಸ ತಂತ್ರಜ್ಞಾನದ ಮೂಲಕ ಅರೆ ಶುಷ್ಕ ವಾತಾವರಣಕ್ಕೆ ಹೊಂದಿಕೊಳ್ಳುವ ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಪರಿಚಯಿಸುತ್ತಿದೆ. ಈಗಾಗಲೇ ಈ ಸಂಸ್ಥೆಯು ಅಭಿವೃದ್ಧಿಪಡಿಸಿದ ಶೇಂಗಾ, ತೊಗರಿ, ಜೋಳ, ಕಡಲೆ ಮತ್ತು ಸಜ್ಜೆ ತಳಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಚಲಿತದಲ್ಲಿವೆ. ಈ ಒಡಂಬಡಿಕೆಯಿಂದ ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಹೊಸ ತಳಿಗಳು ಲಭ್ಯವಾಗಲಿದ್ದು ಸಂಸ್ಥೆಯ ಉತ್ಪನ್ನಗಳ ಪಟ್ಟಿ ಬಲಿಷ್ಠವಾಗುತ್ತದೆ. ಇದರಿಂದ ರೈತರಿಗೆ ತೊಗರಿ, ಕಡಲೆ, ಜೋಳ, ಸಜ್ಜೆ, ಮತ್ತು ಸಿರಿಧಾನ್ಯಗಳಲ್ಲಿ ಹೊಸ ಶಕ್ತಿ ವರ್ಧಕ ತಳಿಗಳನ್ನು ಪರಿಚಯಿಸಲು ಅನುಕೂಲವಾಗುತ್ತದೆ. ಈ ಹೊಸ ತಳಿಗಳನ್ನು ಕೆ.ಎಸ್.ಎಸ್.ಸಿ ಯ ತಳಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಧಾರವಾಡದಲ್ಲಿ ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಮೌಲ್ಯವೀಕರಣ ಮಾಡಿ ವಿವಿಧ ಬೆಳೆಗಳಲ್ಲಿ ಹೊಸ ತಳಿ ಬಿಡುಗಡೆ ಮಾಡಲು ಸಹಾಯವಾಗುತ್ತದೆ. ಒಟ್ಟಾರೆ ಮೂರು ವರ್ಷಗಳ ಒಡಂಬಡಿಕೆಯ ಅವಧಿಯಲ್ಲಿ, ಬರ ಮತ್ತು ರೋಗ ನಿರೋಧಕ ತಳಿಗಳನ್ನು ರಾಜ್ಯದ ರೈತರಿಗೆ ತ್ವರಿತವಾಗಿ ತಲುಪಿಸಲು ಉಪಯೋಗವಾಗುತ್ತದೆ. ಹಾಗೂ ಈ ಬೆಳೆಗಳಲ್ಲಿ ರಾಜ್ಯದ ಸರಾಸರಿ ಉತ್ಪಾದಕತೆಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ.
3FacebookTwitterPinterestEmail
287
ಹಣ ಬಿಡುಗಡೆಗೆ ಸಿಎಂಗೆ ಸಚಿವ ಚಲುವರಾಯ ಸ್ವಾಮಿ ಪತ್ರ


ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಆರು ತಿಂಗಳಲ್ಲಿ ಮಾಧ್ಯಮಗಳಿಗೆ ಜಾಹೀರಾತು ನೀಡಲು 140 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪ್ರಕಟಿಸಿದ್ದ ಐದು ಗ್ಯಾರೆಂಟಿಗಳ ಅನುಷ್ಟಾನದ ಪ್ರಚಾರಕ್ಕಾಗಿ ಇದರಲ್ಲಿ ಹೆಚ್ಚಿನ ಹಣವನ್ನು ಜಾಹಿರಾತಿಗೆ ಬಳಕೆ ಮಾಡಲಾಗಿದೆ.

ಕೋಟಿ-ಕೋಟಿ ಮೌಲ್ಯದ ಕಾರುಗಳ ಖರೀದಿ

ಈ ಸಂಬಂಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರ ಭಾರೀ ವಿವಾದಕ್ಕೆ ಎಡೆ ಮಾಡಿದರೆ, ಮತ್ತೊಂದೆಡೆ ಬಿಜೆಪಿ, ಕೋಟಿ-ಕೋಟಿ ಮೌಲ್ಯದ ಕಾರುಗಳ ಖರೀದಿ, ಕಚೇರಿ, ಮನೆಗಳ ನವೀಕರಣಕ್ಕೆ ನೂರಾರು ಕೋಟಿ ರೂ. ದುಂದು ವೆಚ್ಚ ಮಾಡಿದ ನಂತರ ಈಗ ಮಾಧ್ಯಮ ಜಾಹೀರಾತುಗಳಿಗೆ 140 ಕೋಟಿ ರೂ. ವ್ಯಯಿಸಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಸರಣಿ ಟ್ವೀಟ್

ಚಲುವರಾಯ ಸ್ವಾಮಿ ಪತ್ರ ಬಹಿರಂಗಗೊಳ್ಳುತ್ತಿದ್ದಂತೆ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರಣಿ ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆರ್ಥಿಕ ಸುಧಾರಣೆಗಳ ಹರಿಕಾರ, ಅತಿ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ಮುಖ್ಯಮಂತ್ರಿಗಳು ಈ ರೀತಿ ತೆರಿಗೆದಾರರ ಹಣವನ್ನು ಪೋಲು ಮಾಡಬಹುದೆ ಎಂದು ಪ್ರಶ್ನಿಸಿದ್ದಾರೆ.

ರೈತರ ಬರ ಪರಿಹಾರಕ್ಕೆ ತಲಾ 2,000 ರೂ. ಕೊಟ್ಟು ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ 140 ಕೋಟಿ ರೂ. ಖರ್ಚು ಮಾಡಿದ ಜನದ್ರೋಹಿ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಗ್ಯಾರೆಂಟಿಗಳಿಗೂ ಹಣವಿಲ್ಲದೆ ಬಾಕಿ

ರೈತರಿಗೂ ಬಾಕಿ, ನಿಮ್ಮ ಗ್ಯಾರೆಂಟಿಗಳಿಗೂ ಹಣವಿಲ್ಲದೆ ಬಾಕಿ, ಯೋಜನೆಗಳಿಗೂ ಬಾಕಿ, ಅಭಿವೃದ್ಧಿಗೂ ಬಾಕಿ, ಈಗ ಮಾಧ್ಯಮಗಳಿಗೂ ಬಾಕಿ.

ರಾಜ್ಯವನ್ನು ಇನ್ನೆಷ್ಟು ಸಾಲದ ಸುಳಿಗೆ ಸಿಲುಕಿಸುವಿರೀ ಎಂದು ಯತ್ನಾಳ್, ಮುಖ್ಯಮಂತ್ರಿ ಹಾಗೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಧ್ಯಮಗಳಿಗೆ ನೀಡಿರುವ ಜಾಹೀರಾತು ಹಣವನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ, ತಕ್ಷಣವೇ 140 ಕೋಟಿ ರೂ. ಬಿಡುಗಡೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ, ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಕೃಷಿ ಸಚಿವರು, ಇಷ್ಟು ಬೃಹತ್ ಮೊತ್ತದ ಬಾಕಿಯಿಂದಾಗಿ ಮಾಧ್ಯಮ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ನನ್ನ ಬಳಿ ನಿವೇದಿಸಿಕೊಂಡಿದ್ದಾರೆ.

ಬಾಕಿ ಹಣವನ್ನು ತುರ್ತಾಗಿ ಬಿಡುಗಡೆ ಮಾಡಿ

ಬಾಕಿ ಹಣವನ್ನು ತುರ್ತಾಗಿ ಬಿಡುಗಡೆ ಮಾಡಿಸಿಕೊಟ್ಟು ಮಾಧ್ಯಮ ಸಂಸ್ಥೆಗಳ ನೆರವಿಗೆ ನಿಲ್ಲುವಂತೆ ಚಲುವರಾಯ ಸ್ವಾಮಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣಾ ಪೂರ್ವ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ, ಗೃಹಲಕ್ಷ್ಯೀ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ.

ಈ ಯೋಜನೆಗಳ ಅನುಷ್ಟಾನದ ಸಂದರ್ಭದಲ್ಲೇ ಹೆಚ್ಚು ಪ್ರಚಾರಕ್ಕೆ ಮಾಧ್ಯಮಗಳಲ್ಲಿ ಜಾಹೀರಾತಿಗೆ ಸರ್ಕಾರ ಹೆಚ್ಚು ಹಣ ಬಳಕೆ ಮಾಡಿಕೊಂಡಿದೆ. ಅದರಲ್ಲೂ ಗೃಹ ಲಕ್ಷ್ಮೀ ಯೋಜನೆಯ ಜಾಹೀರಾತಿಗಾಗಿ 32 ಕೋಟಿ ರೂ. ವೆಚ್ಚ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basana gowda patil yatnalbengalurubjpkarnatakakmskmskannadapoliticsSiddaramaiah
3 FacebookTwitterPinterestEmail
KM Shivaraju

previous post
ಸಂವಿಧಾನ ಪಾಠ; ಹಕ್ಕು-ಕರ್ತವ್ಯಗಳ ಮನನ
next post
ಜನವರಿಯಿಂದ ಶಾಲೆಯಲ್ಲಿ ನ್ಯಾಪ್ಕಿನ್‌ ವಿತರಣೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ