Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬರ ಘೋಷಣೆಗೆ ರಾಜ್ಯಕ್ಕಿಲ್ಲ ಸ್ವಾತಂತ್ರ್ಯ

by KM Shivaraju December 4, 2023
written by KM Shivaraju December 4, 2023 0 comments 1 minutes read
2FacebookTwitterPinterestEmail
92
 ಮಾನದಂಡ ಪರಿಷ್ಕರಣೆ ಪ್ರತ್ರಕ್ಕೆ ಕೇಂದ್ರ ಸರ್ಕಾರದ ಉತ್ತರ ಸಿಕ್ಕಿಲ್ಲ

ಬೆಳಗಾವಿ: ಪ್ರಸ್ತುತ ವರ್ಷ ರಾಜ್ಯ ತೀವ್ರ ಬರಕ್ಕೆ ತುತ್ತಾಗಿದೆ. ಆದರೆ, ಬರ ಘೋಷಿತ ಪಟ್ಟಿಯಲ್ಲಿ ಯಾವ ತಾಲೂಕುಗಳನ್ನು ಸೇರಿಸಬೇಕು ಅಥವಾ ಬಿಡಬೇಕು ಎಂಬ ಆಯ್ಕೆಯ ಸ್ವಾತಂತ್ಯ್ರ ಮುಖ್ಯಮಂತ್ರಿಗಾಗಲಿ, ನನಗಾಗಲಿ ಇಲ್ಲ. ಬದಲಿಗೆ ಕೇಂದ್ರ ಸರ್ಕಾರದ ಮಾನದಂಡದಂತೆ ಬರ ಘೋಷಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು  ವಿಧಾನಸಭೆಗೆ ಸ್ಪಷ್ಟಪಡಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬರ ಘೋಷಣೆಗೆ ಸಂಬಂಧಿಸಿದಂತೆ ಮಾತನಾಡಿದ ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ “ನನ್ನ ಕ್ಷೇತ್ರದಲ್ಲೂ ತೀವ್ರ ಮಳೆ ಕೊರತೆಯಾಗಿದೆ. ರೈತರು ಸಾಕಷ್ಟು ಸಮಸ್ಯೆಗೆ ತುತ್ತಾಗಿದ್ದಾರೆ. ಆದರೆ, ಬರ ಘೋಷಿಸಿಲ್ಲ. ಇದರಿಂದಾಗಿ ರೈತರ ಪ್ರಶ್ನೆಗಳಿಗೆ ನಮ್ಮಿಂದ ಉತ್ತರಿಸಲಾಗುತ್ತಿಲ್ಲ” ಎಂದು ಅಸಮಾಧಾನ ಹೊರಹಾಕಿದರು.

ಶಾಸಕ ಹೆಚ್.ಡಿ. ತಮ್ಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಾಜ್ಯದಲ್ಲಿ ಈಗಾಗಲೇ ಎರಡು ಹಂತದಲ್ಲಿ 217 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಆದರೆ, ಯಾವ ತಾಲೂಕಿನಲ್ಲಿ ಬರ ಘೋಷಿಸಬೇಕು, ಬೇಡಾ? ಎಂಬ ವಿಚಾರದಲ್ಲಿ ನಮಗೆ ಯಾವುದೇ ಸ್ವಾತಂತ್ಯ್ರವಿಲ್ಲ.

ಈ ವಿಚಾರದಲ್ಲಿ ಕೇಂದ್ರದ ಮಾನದಂಡದಂತೆ ಬರ ಘೋಷಿಸಲಾಗಿದೆ. ಒಂದು ವೇಳೆ ಕೇಂದ್ರದ ನಿಯಮ ಮೀರಿದರೆ, ರಾಜ್ಯದ ಬರ ಘೋಷಣೆಯೇ ಪ್ರಶ್ನಾರ್ಥಕವಾಗುವ ಸಾಧ್ಯತೆಯೂ ಇದೆ” ಎಂದು ಕಳವಳ ವ್ಯಕ್ತಪಡಿಸಿದರು.

6200 ಕಡೆಗಳಲ್ಲಿ ಮಳೆ ಮಾಪನ ಕೇಂದ್ರ

 “ಕೇಂದ್ರದ ಮಾನದಂಡದಂತೆ ಬರ ಘೋಷಿಸಲು ಸತತ ಮೂರು ವಾರ ಶೇ.60ಕ್ಕಿಂತ ಹೆಚ್ಚು ಮಳೆ ಕೊರತೆ ಇರಬೇಕು ಮತ್ತು ಶುಷ್ಕ ವಾತಾವರಣ ಇರಬೇಕು. ರಾಜ್ಯದಲ್ಲಿ 6200 ಕಡೆಗಳಲ್ಲಿ ಮಳೆ ಮಾಪನ ಕೇಂದ್ರಗಳನ್ನು ಅಳವಡಿಸಲಾಗಿದೆ. ಈ ಕೇಂದ್ರಗಳಿಂದ ನಿಖರ ಮಾಹಿತಿ ಲಭ್ಯವಾಗುತ್ತಿದೆ.

ಸುವರ್ಣ ವಿಧಾನಸೌಧ

ಇದರ ಪ್ರಕಾರ ಚಿಕ್ಕಮಗಳೂರು ತಾಲೂಕಿಗೆ ಸಂಬಂಧಿಸಿದಂತೆ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ವಾಡಿಕೆಯ ಮಳೆ 433 ಮಿ.ಮೀ. ಆಗಿದೆ. ಆದರೆ, 667 ಮಿಮೀ ಮಳೆಯಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆಯಾಗಿರುವುದು ನಿಜ. ಆದರೂ, ಕೇಂದ್ರದ ಮಾನದಂಡದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬರ ಘೋಷಣೆ ಸಾಧ್ಯವಾಗಿಲ್ಲ” ಎಂದು ಅವರು ಸ್ಪಷ್ಟೀಕರಣ ನೀಡಿದರು.

ಮಾನದಂಡಗಳ ಪರಿಷ್ಕರಣೆಯಾಗಬೇಕು

ಇದೇ ವೇಳೆ ಕೇಂದ್ರ ಸರ್ಕಾರದ ಬರ ಘೋಷಣೆ ಮಾನದಂಡಗಳ ಬಗ್ಗೆಯೂ ಗಮನ ಸೆಳೆದ ಸಚಿವರು, “ಕೇಂದ್ರ ಸರ್ಕಾರದ ಬರ ಘೋಷಣೆ ಮಾನದಂಡಗಳು ಕಠಿಣವಾಗಿದ್ದು, ಇದರಿಂದ ರೈತರಿಗೆ-ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ. ಈ ಮಾನದಂಡಗಳ ಕಾರಣಕ್ಕೆ ರಾಜ್ಯದ ಅನೇಕ ತಾಲೂಕುಗಳನ್ನು ಬರ ಘೋಷಿತ ಪಟ್ಟಿಗೆ ಸೇರಿಸಲಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಬರೆದ ಪತ್ರಕ್ಕೂ ಉತ್ತರ ಬಂದಿಲ್ಲ” ಎಂದು ಅವರು ಅಸಮಾಧಾನ ಹೊರಹಾಕಿದರು.

“ಬರ ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರದ ಮಾನದಂಡ ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ಪುಟಗಳ ಸುದೀರ್ಘ ಪತ್ರವನ್ನು ಬರೆದಿದ್ದರು. ಆದರೆ, ಈವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ.

ಪರಿಣಾಮ ಕ್ಷೇತ್ರಗಳಲ್ಲಿ ರೈತರ ಪ್ರಶ್ನೆಗಳಿಗೆ ಉತ್ತರಿಸಲು ಶಾಸಕರಿಗೆ ಎಂತಹ ಸಂಕಟ ಪರಿಸ್ಥಿತಿ ಇದೆಯೋ? ಈ ಬಗ್ಗೆ ಶಾಸಕರಿಗೆ ಉತ್ತರಿಸಲು ಸಚಿವನಾಗಿ ನನಗೂ ಸಹ ಅಷ್ಟೇ ಸಂಕಟದ ವಾತಾವರಣ ನಿರ್ಮಾಣವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central governmentcopycriteria revisiondeclare droughtGuidelinesnot receivedstate not free
2 FacebookTwitterPinterestEmail
KM Shivaraju

previous post
 ‘ಪೋಡಿ ಮುಕ್ತ ಗ್ರಾಮ’ ಸಾಧಿಸುವವರೆಗೆ ಸುಮ್ಮನಿರೋಲ್ಲ
next post
ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್ ಅಲಂಕಾರ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ