ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನು
ಬೆಳಗಾವಿ: ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿಯು ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ಕೈಗಾರಿಕಾ ಸಚಿವ ಶರಣ ಬಸಪ್ಪ ದರ್ಶನಾಪುರ ವಿಧಾನ ಪರಿಷತ್ ನಲ್ಲಿ ಹೇಳಿದರು.
ಮಂಗಳವಾರ ಸದಸ್ಯ ಎಸ್. ಮುನಿರಾಜು ಗೌಡ ಪಿಎಂ ಕೇಳಿದ ಪ್ರಶ್ನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವರ ಪರವಾಗಿ ಅವರು ಉತ್ತರಿಸಿದರು.
ಬಿಎಂಐಸಿ ಯೋಜನೆಗಾಗಿ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನುಗಳ ಪೈಕಿ 554 ಎಕರೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತಂತೆ , ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳನ್ನು ಗುರುತಿಸಿ ಸರ್ವೇ ನಂ ಗಳೊಂದಿಗೆ ವಿವರವಾದ ಮಾಹಿತಿ ಸಲ್ಲಿಸುವಂತೆ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ ( ದಕ್ಷಿಣ) ಇವರಿಗೆ ಪತ್ರದ ಮೂಲಕ ತಿಳಿಸಲಾಗಿದೆ.
ಇವರಿಂದ ಮಾಹಿತಿ/ ಸ್ಪಷ್ಟವಾದ ವರದಿ ಪಡೆದು ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲು ನಿಯಮಾನುಸಾರ ಪರಿಶೀಲಿಸಿ ಕ್ರಮ ವಹಿಸಲಾಗುವುದು ಹಾಗೂ ಸದರಿ ಭೂ ಮಿಯನ್ನು ಹಿಂಪಡೆದ ನಂತರ ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದರು.
