Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ರೈತರಿಗೆ ಮೊದಲ ಬರ ಪರಿಹಾರ

by KM Shivaraju December 6, 2023
written by KM Shivaraju December 6, 2023 0 comments 2 minutes read
Share 0FacebookTwitterPinterestEmail
52
ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ  ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. 

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು. ನಿಗದಿತವಾಗಿ ತಮಗೆ ನಿಗಧಿ ಆಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಧಿಕಾರಿಗಳುಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ

ಸರ್ಕಾರ ಸಮರ್ಪಕವಾಗಿ ನಡೆಯಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು- ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ  ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು ಎಂದು ತಿಳಿಸಿದರು.

ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳ ಹಾಜರಿ ಕಡ್ಡಾಯ

ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು.

 ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ಸರ್ಕಾರಕ್ಕೆ ಹೆಸರು ಬರುತ್ತದೆ ಎಂದು ತಿಳಿಸಿದರು.

ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ

ಅನಿವಾರ್ಯ ಸಂದರ್ಭಗಳನ್ನು ಹೊರತು ಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ ಎಂದು ತಿಳಿಸಿದರು.

ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಕುರಿತು ಆದ್ಯತೆ ನೀಡಲು ಸಲಹೆ ನೀಡಿದ ಮುಖ್ಯಮಂತ್ರಿಗಳು ಟೆಂಡರ್‌ ಅಂದಾಜು ಸಿದ್ಧಪಡಿಸುವಾಗಲೇ ಎಲ್ಲ ಅಂಶಗಳನ್ನೂ ಒಳಗೊಂಡಂತೆ ಸಮಗ್ರವಾಗಿ ಅಂದಾಜನ್ನು ಸಿದ್ಧಪಡಿಸಬೇಕು.

ಪರಿಷ್ಕೃತ ಅಂದಾಜುಗಳನ್ನು ಸಲ್ಲಿಸುವುದರಿಂದ ಯೋಜನೆಯ ವೆಚ್ಚ ಗಣನೀಯವಾಗಿ ಹೆಚ್ಚುತ್ತಿರುವುದಲ್ಲದೆ ಅನುಷ್ಠಾನವೂ ವಿಳಂಬವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ಘರ್ಷಣೆ; ಸದನ ಕೋಲಾಹಲ

ಇದಕ್ಕೆ ಸಂಬಂಧಿಸಿದಂತೆ  ಆರ್ಥಿಕ ಇಲಾಖೆಯು ಹಿರಿಯ ಅಧಿಕಾರಿಗಳ ಸಮಿತಿ ರಚಿಸಿದ್ದು, ಈ ಸಮಿತಿಯು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಅಪರ  ಕಾರ್ಯದರ್ಶಿ ಎಲ್.ಕೆ. ಅತೀಕ್‌ ತಿಳಿಸಿದರು.

ತೆರಿಗೆ ಸಂಗ್ರಹ ಇನ್ನಷ್ಟು ಚುರುಕಾಗಬೇಕು

ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡುವಂತೆ ಸೂಚಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share this:

  • WhatsApp
  • Post
  • Tweet
  • Print
  • Email
Chief Ministerdistributefirst droughtinstructsnext weekrelief to farmerstake action
Share 0 FacebookTwitterPinterestEmail
KM Shivaraju

previous post
ಅನುದಾನ ಘರ್ಷಣೆ; ಸದನ ಕೋಲಾಹಲ
next post
ಸ್ಥಳೀಯ ವಿದ್ಯಾರ್ಥಿಗಳಿಗೆ 60 % ಸ್ಥಾನ ಮೀಸಲು

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ