Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ

by KM Shivaraju December 11, 2023
written by KM Shivaraju December 11, 2023 0 comments 3 minutes read
0FacebookTwitterPinterestEmail
333
ಪ್ರತಿ ತಾಲೂಕಿನಲ್ಲೂ ಟಾಸ್ಕ್ ಫೋರ್ಸ್ ರಚನೆ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದ್ದು, ಈಗಾಗಲೇ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಖಾತೆಗಳಲ್ಲಿ ಬರ ನಿರ್ವಹಣೆಗೆ ಒಟ್ಟು 895 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

ವಿಧಾನಸಭೆ ಕಲಾಪದಲ್ಲಿ ಬರ ನಿರ್ವಹಣೆ ಕುರಿತ ಚರ್ಚೆಗೆ ಉತ್ತರ ನೀಡಿದ ಸಚಿವರು,  ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಜೂನ್‍ನಲ್ಲಿ ಶೇ.57, ಆಗಸ್ಟ್‍ನಲ್ಲಿ ಶೇ.73, ಸ್ಪೆಪ್ಟಂಬರ್‍ನಲ್ಲಿ ಶೇ.10 ರಷ್ಟು ಹಾಗೂ ಅಕ್ಟೋಬರ್‍ನಲ್ಲಿ ಶೇ.65 ರಷ್ಟು ಮಳೆಯ ಕೊರತೆಯಾಗಿದೆ ಎಂದರು.

ಪ್ರಸಕ್ತ ವರ್ಷ 82.95 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೇ ಶೇ.74 ರಷ್ಟು ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಮಳೆ ಕೊರತೆಯಿಂದಾಗಿ 46 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿ 48 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು. 

ಸಚಿವರ ಬರ ಅಧ್ಯಯನ

ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ ಜನರ ಸಂಕಷ್ಟಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತೊಂದರೆಯಾಗದಂತೆ ಕ್ರಮವಹಿಸಲು ರಾಜ್ಯ ಸರ್ಕಾರ ಅನೇಕ ರೀತಿಯ ಪರಿಹಾರಗಳನ್ನು ಕೈಗೊಂಡಿದೆ.

ಮುಖ್ಯಮಂತ್ರಿಗಳು ಬರ ನಿರ್ವಹಣೆಗಾಗಿ ಮೂರು ಸಭೆಗಳನ್ನು ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಅಲ್ಲದೇ ಸರ್ಕಾರವು ಬರ ನಿರ್ವಹಣೆಗಾಗಿ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಈಗಾಗಲೇ 8 ಸಭೆಗಳನ್ನು ನಡೆಸಿ ಬರ ಪರಿಸ್ಥಿತಿ ಹಾಗೂ ಜಿಲ್ಲಾಡಳಿತಗಳು ಕೈಗೊಂಡಿರುವ ಮುಂಜಾಗ್ರತೆ ಹಾಗೂ ಪರಿಹಾರ ಕ್ರಮಗಳನ್ನು ಪರಾಮರ್ಶಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ ಎಂದು ಹೇಳಿದರು.

ರಾಜ್ಯದ 22 ಜಿಲ್ಲೆಗಳಿಗೆ ಸ್ವತಃ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಬರಗಾಲದ ಸ್ಥಿತಿಯನ್ನು ಅವಲೋಕಿಸಿದ್ದೇನೆ. ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ಆಯಾ ವಿಭಾಗದ ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರರ ಸಭೆ ಜರುಗಿಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ನಿರ್ದೇಶನ ನೀಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ 133 ಸಭೆಗಳನ್ನು ನಡೆಸಿದ್ದಾರೆ ಎಂದರು.

18,171 ಕೋಟಿ ನೆರವು ಕೋರಿ ಕೇಂದ್ರಕ್ಕೆ ಮನವಿ:

ರಾಜ್ಯದ 223 ತಾಲೂಕುಗಳು ತೀವ್ರ ಬರ ಪೀಡಿತ ಪ್ರದೇಶ ಆಗಿರುವುದರಿಂದ ರಾಜ್ಯ ಸರ್ಕಾರವು ರಾಜ್ಯದ ಪರಿಸ್ಥಿತಿಯನ್ನು ಅಧ್ಯಯನ ನಡೆಸಿ, ಅವಲೋಕಿಸಿ, ರೂ. 18,171 ಕೋಟಿ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ಅಂತರ ಮಂತ್ರಾಲಯ ತಾಂತ್ರಿಕ ಸಮಿತಿ (ಐ.ಎಮ್.ಟಿ.ಸಿ.) ರಾಜ್ಯದ 13 ಜಿಲ್ಲೆಗಳಲ್ಲಿ ಬರ ಅಧ್ಯಯನ ಪ್ರವಾಸ ಮಾಡಿದೆ.

ಅಧ್ಯಯನದ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳು, ಮುಖ್ಯಮಂತ್ರಿಗಳೊಂದಿಗೂ ಸಮಾಲೋಚಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಆದರೆ ಕೇಂದ್ರದಿಂದ ಇಲ್ಲಿಯವರೆಗೂ ಯಾವುದೇ ಪರಿಹಾರ ರಾಜ್ಯಕ್ಕೆ ಬಂದಿಲ್ಲ. ಆದಷ್ಟು ಬೇಗ ಕೇಂದ್ರ ನೆರವು ನೀಡಬೇಕೆಂದು ಕಂದಾಯ ಸಚಿವರು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ:

ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಯಾವುದೇ ಗ್ರಾಮ ಹಾಗೂ ನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಂಡು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ 26 ಗ್ರಾಮಗಳಲ್ಲಿ ಈಗ ಕುಡಿಯುವ ನೀರಿನ ಸಮಸ್ಯೆ ಇದೆ.

ಇವುಗಳಲ್ಲಿ 11 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಮತ್ತು 9 ಗ್ರಾಮಗಳಿಗೆ ಖಾಸಗಿ ಬೋರವೇಲ್ ಬಾಡಿಗೆ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶದ ನಾಲ್ಕು ವಾರ್ಡ್‍ಗಳಲ್ಲಿ ಕುಡಿಯುವ ನೀರಿನ  ಕೊರತೆಯಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಭವಿಷ್ಯದಲ್ಲಿ 6,237 ಗ್ರಾಮಗಳಲ್ಲಿ ಸಮಸ್ಯೆ ಸಾಧ್ಯತೆ:

ರಾಜ್ಯ ಸರ್ಕಾರವು ಸಮರ್ಥವಾಗಿ ಬರ ನಿರ್ವಹಿಸಲು ಪ್ರೋ ಆ್ಯಕ್ಟಿವ್ ಆಗಿ ಕೆಲಸ ಮಾಡಿದೆ. ಕಳೆದ 10 ವರ್ಷಗಳ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಜನವರಿ-ಫೆಬ್ರವರಿ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಸುಮಾರು 6,237 ಸಮಸ್ಯಾತ್ಮಕ ಗ್ರಾಮಗಳನ್ನು ಮತ್ತು ನಗರ ಪ್ರದೇಶದ 914 ವಾರ್ಡ್‍ಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಪ್ರದೇಶಗಳೆಂದು ಗುರುತಿಸಿ ಮುಂಜಾಗ್ರತೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಈಗಾಗಲೇ 3,672 ಖಾಸಗಿ ಬೋರವೇಲ್‍ಗಳನ್ನು ಗುರುತಿಸಿ ಬಾಡಿಗೆಗೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಮತ್ತು ಉಳಿದಂತೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಶಾಸಕರ ಅಧ್ಯಕ್ಷತೆಯ ಟಾಸ್ಕ್‍ಫೋರ್ಸ್ ಕ್ರಿಯಾಶೀಲ:

ಪ್ರತಿ ತಾಲೂಕಿನಲ್ಲಿ ಬರ ನಿರ್ವಹಣೆಗಾಗಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‍ಫೋರ್ಸ್ ಸಮಿತಿಗಳನ್ನು ರಚಿಸಿ, ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಶಾಸಕರ ಅಧ್ಯಕ್ಷತೆಯ 183 ಟಾಸ್ಕ್‍ಫೋರ್ಸ್ ಸಮಿತಿ ಸಭೆಗಳು ಜರುಗಿವೆ ಎಂದರು.

ಗ್ರಾಮ ಪಂಚಾಯತ್ ಮಟ್ಟದ ಟಾಸ್ಕ್‍ಫೋರ್ಸ್ ಸಮಿತಿ ರಚನೆ:

ಬರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕ್ಷೇತ್ರ ಮಟ್ಟದ ಸಮಸ್ಯೆಗಳನ್ನು ಗುರುತಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ಟಾಸ್ಕ್‍ಪೋರ್ಸ್ ರಚಿಸಿದೆ.

ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ.), ಕುಡಿಯುವ ನೀರು ವಿಭಾಗದ ಅಸಿಸ್ಟಂಟ್ ಇಂಜನಿಯರ್ ಮತ್ತು ಗ್ರಾಮ ಆಡಳಿತ ಅಧಿಕಾರಿ ಇರುವ ಈ ಸಮಿತಿಯು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಈ ಕುರಿತು ನಿರ್ಣಯ ಕೈಗೊಂಡು ತಹಶೀಲ್ದಾರರಿಗೆ ಸಲ್ಲಿಸಬೇಕು.

ಈ ಸಮಿತಿ ಮನವಿಯನ್ನು ಪರಿಗಣಿಸಿ 24 ಗಂಟೆಯಲ್ಲಿ ನೀರು ಪೂರೈಸಲು ತಹಶೀಲ್ದಾರರು ತಕ್ಷಣ ಕ್ರಮವಹಿಸಬೇಕು. ವಿಶೇಷವಾಗಿ ಈ ಸಮಿತಿ ಕುಡಿಯುವ ನೀರಿನ ಕುರಿತು ಮತ್ತು ಮೇವು, ಟ್ಯಾಂಕರ್ ನೀರು ಸರಬರಾಜು, ಬಾಡಿಗೆ ಬೋರವೇಲ್, ನೀರು ಸರಬರಾಜು ಪೈಪ್‍ಲೈನ್ ದುರಸ್ತಿ ಕಾರ್ಯಗಳಿಗೆ ಗಮನಹರಿಸಲಿದೆ.

ಇದಕ್ಕಾಗಿ ಅನುದಾನ ಕೊರತೆಯಾಗದಂತೆ ತಹಶೀಲ್ದಾರರ ಖಾತೆಗೆ ರೂ. 50 ಲಕ್ಷ ಬಿಡುಗಡೆ ಮಾಡುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಅವರು ಸದನದಲ್ಲಿ ತಿಳಿಸಿದರು.

ಮೊದಲ ಕಂತು ರೂ. 2,000 ಗಳ ಬರ ಪರಿಹಾರ ಬಿಡುಗಡೆ

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಪರಿಹಾರ ಹಣ ಬಿಡುಗಡೆ ಮಾಡಿಲ್ಲ.  ಆದರೂ ರಾಜ್ಯ ಸರ್ಕಾರವು ಮೊದಲ ಕಂತಾಗಿ ರೂ. 2,000 ಗಳನ್ನು ಬರ ಪರಿಹಾರವಾಗಿ ನೀಡಲು ನಿರ್ಧರಿಸಿದೆ.

ಈ ವಾರದಲ್ಲಿ ರಾಜ್ಯದ ರೈತರಿಗೆ ಪರಿಹಾರ ಹಣ ಜಮೆಯಾಗಲಿದೆ. ಪರಿಹಾರ ಹಣ ದುರುಪಯೋಗ ಆಗಿರುವ ಬಗ್ಗೆ ಹಿಂದಿನ ಪ್ರಕರಣಗಳ ಹಿನ್ನೆಲೆಯಲ್ಲಿ ಯಾವುದೆ ಹಸ್ತಕ್ಷೇಪ ಇಲ್ಲದೇ ನೇರವಾಗಿ ಆಯಾ ರೈತರ ಖಾತೆಗೆ ಆಟೋಮೆಟಿಕ್ ಮೋಡ್‍ನಲ್ಲಿ ಜಮೆಯಾಗುವಂತೆ ಕ್ರಮಕೈಗೊಳ್ಳಲಾಗಿದೆ.

ಈ ವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಪರಿಹಾರ ಜಮೆ ಮೊದಲ ಪೇಮೆಂಟ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವರು ಸದನದಲ್ಲಿ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Carefuldrinking waterevery talukformedKrishna Byre GowdaproblemRevenue MinisterTask force
0 FacebookTwitterPinterestEmail
KM Shivaraju

previous post
ಚೌಕಾಸಿ ನಾಯಕನ ಪ್ರಭಾವ
next post
ರೈತರ ಸಾಲ ಮರುಪಾವತಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ