Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸರ್ಕಾರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದೆ

by KM Shivaraju December 13, 2023
written by KM Shivaraju December 13, 2023 0 comments 2 minutes read
2FacebookTwitterPinterestEmail
88
ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಬೆಳಗಾವಿಯಲ್ಲಿ ಇಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ಸರ್ಕಾರ ಬಂದು 6 ತಿಂಗಳು ಕಳೆದಿದೆ. ಭೀಕರ ಬರಗಾಲ ಇದ್ದರೂ ಕಾಂಗ್ರೆಸ್ ಸರ್ಕಾರವು ಜನರ ನಿರೀಕ್ಷೆ ಈಡೇರಿಸದೆ ಹುಸಿಯಾಗಿಸಿದೆ. 14 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಪ್ರಕಟಿಸಿದ ಮುಖ್ಯಮಂತ್ರಿ, ರೈತರ ಬಗ್ಗೆ ಮಾತನಾಡಿಲ್ಲ. ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲ ರೈತರಿಗೆ ಪರಿಹಾರ ಕೊಡಬೇಕು. ಆದರೆ, ಸರ್ಕಾರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದೆ ಎಂದು ಆಕ್ಷೇಪಿಸಿದರು.

ಯಡಿಯೂರಪ್ಪ ಅವರು ಸುವರ್ಣ ಸೌಧ ನಿರ್ಮಿಸಿದ್ದರು. ಇಲ್ಲಿನ ಸಮಸ್ಯೆಗಳ ಪರಿಹಾರದ ನಿರೀಕ್ಷೆ ಅವರದಾಗಿತ್ತು. ಆದರೆ, ಸಿದ್ದರಾಮಯ್ಯನವರು ರೈತರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಸಂಸತ್ತಿಗೆ ನುಗ್ಗಿದ ಯುವಕ

ರಾಜ್ಯದ ಕಾಂಗ್ರೆಸ್ಸಿಗರು ಕೇಂದ್ರ ಸರ್ಕಾರವನ್ನು ದೂಷಿಸುತ್ತಿದ್ದಾರೆ. ರೈತರ ಸಾಲಮನ್ನಾ ಮಾಡಬೇಕು. ಹೊಸ ಸಾಲವನ್ನು ಕೊಡಬೇಕು. ಸಾಲ ವಸೂಲಿಯನ್ನು ನಿಲ್ಲಿಸಿ ಎಂದು ಆಗ್ರಹಿಸಿದರು. ಈ ಸರ್ಕಾರಕ್ಕೆ ಚಾಟಿ ಬೀಸುವ ಕೆಲಸ ಮುಂದುವರೆಯಲಿದೆ ಎಂದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನೂ ಬಿಜೆಪಿ- ಜೆಡಿಎಸ್ ಸೇರಿ ಗೆಲ್ಲಬೇಕಿದೆ ಎಂದು ತಿಳಿಸಿದರು.

ನರೇಂದ್ರ ಮೋದಿಯವರಂಥ ನಾಯಕ ಕಾಂಗ್ರೆಸ್‍ನಲ್ಲಿಲ್ಲ

ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಹಣ, ಹೆಂಡ, ತೋಳಬಲದಿಂದ ಅಧಿಕಾರಕ್ಕೆ ಬರುವ ಭ್ರಮೆಯಿಂದ ಇದ್ದ ಕಾಂಗ್ರೆಸ್‍ಗೆ ಪಂಚರಾಜ್ಯ ಚುನಾವಣೆಯ ಫಲಿತಾಂಶ ಸಮರ್ಪಕ ಉತ್ತರ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರಂಥ ನಾಯಕ ಕಾಂಗ್ರೆಸ್‍ನಲ್ಲಿಲ್ಲ ಎಂದರು.

ಲೋಕಸಭೆ ಭದ್ರತಾ ವೈಫಲ್ಯ

ರಾಜ್ಯ ಸರ್ಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ ಮಾಡುವೆ. ರೈತರ ಪರವಾಗಿ ನಿಲ್ಲುವೆ ಎಂದು ತಿಳಿಸಿದರು. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ರೂ. ಕೊಟ್ಟರೆ ನಾನು 4 ಸಾವಿರ ರೂ. ಕೊಡುತ್ತಿದ್ದೆ.

ಅದನ್ನು ನಿಲ್ಲಿಸಿ ದ್ರೋಹ ಬಗೆದಿದ್ದೀರಲ್ಲವೇ? ನಿಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕ ಹಕ್ಕಿಲ್ಲ. ರೈತರ ಜೀವನದ ಜೊತೆ ಚೆಲ್ಲಾಟ ಸಲ್ಲದು ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಲೂಟಿ, ಹಗಲುದರೋಡೆ ಮುಂದುವರೆದಿದೆ. ತಮ್ಮ ಕಾಲದಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಜಾರಿ ಮಾಡಿದ್ದನ್ನು ನೆನಪಿಸಿದರು. ಎಲ್ಲ ಅಭಿವೃದ್ಧಿ ಕಾಮಗಾರಿ ಸ್ಥಗಿತವಾಗಿದೆ ಎಂದ ಅವರು, ರೈತರ ಸಾಲ ಮನ್ನಾ ತೀರ್ಮಾನ ಮಾಡಿ ಎಂದು ಆಗ್ರಹಿಸಿದರು.

ಲೋಕಸಭೆಯಲ್ಲಿ ಮೈಸೂರು ಯುವಕನ ದಾಂಧಲೆ

ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಣಕೊಡುತ್ತಾರೆ. ರೈತರ ಪರಿಸ್ಥಿತಿ ಏನು? ರೈತವಿರೋಧಿ, ಜನ ವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದು ಅವರು ಪ್ರಕಟಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದರೂ ಉತ್ತರ ಕರ್ನಾಟಕಕ್ಕಾಗಿ ಸಿದ್ದರಾಮಯ್ಯನವರು ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಅಗತ್ಯ ವಸ್ತುಗಳ ದರ ಏರಿಕೆ

ಮುಲ್ಲಾಗಳಿಗೆ 10 ಸಾವಿರ ಕೋಟಿ ರೂ.ಕೊಡುವುದಾಗಿ ಹೇಳಿದ್ದಾರೆ. ರೈತರಿಗೆ ಕೊಡಲು ಸರ್ಕಾರದ ಬಳಿ ಹಣ ಇಲ್ಲ. ಮಕ್ಕಳ ದತ್ತು ತೆಗೆದುಕೊಂಡರೆ ಸರ್ಕಾರಕ್ಕೆ ತೆರಿಗೆ ಕೊಡಬೇಕಿದೆ. 60 ತೆರಿಗೆಗಳನ್ನು ಏರಿಸಿದ್ದಾರೆ. ತೆರಿಗೆ, ತೆರಿಗೆಗಳ ಬಿಲ್ ಮಂಜೂರು ಮಾಡುತ್ತಿದ್ದಾರೆ.ವಿದ್ಯುತ್, ಹಾಲು, ಮದ್ಯ ಸೇರಿ ಎಲ್ಲ ವಸ್ತುಗಳ ದರ ಏರಿಕೆಯಾಗಿದೆ. ಉಚಿತ ನೆಪದಲ್ಲಿ ಮೋಸದ ಸರ್ಕಾರ ಇದು ಎಂದು ಆರೋಪಿಸಿದರು.

ಸರ್ಕಾರದ ಖಜಾನೆ ಖಾಲಿಯಾಗಿದೆ. ಯಡಿಯೂರಪ್ಪ ಅವರು ರೈತರಿಗೆ 25 ಸಾವಿರ ಕೊಟ್ಟರೆ ಈ ಸರ್ಕಾರ 2 ಸಾವಿರ ಕೊಡುತ್ತಿದೆ. ಈ ಸರ್ಕಾರಕ್ಕೆ ನಾಚಿಕೆ ಇಲ್ಲ. ಸದನದಲ್ಲಿ ಸಿದ್ದರಾಮಯ್ಯ ಗರ ಬಡಿದಂತೆ ಕುಳಿತಿರುತ್ತಾರೆ. ಈ ಕೆಟ್ಟ ಸರ್ಕಾರ ತೊಲಗಲಿ ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆರಗ ಜ್ಞಾನೇಂದ್ರ, ಸುನೀಲ್‍ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಪಕ್ಷದ ಸಂಸದರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಪಕ್ಷದ ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actingB.Y. VijayendraBelgaumBJP protestsblind peopleBS YeddyurappaGovernmentK.S. EshwarappaR. Ashokthey have eyes
2 FacebookTwitterPinterestEmail
KM Shivaraju

previous post
ಲೋಕಸಭೆ ಭದ್ರತಾ ವೈಫಲ್ಯ
next post
ಬೆಂಗಳೂರು ರಸ್ತೆಗಳ ವೈಟ್ ಟಾಪಿಂಗ್‌ಗೆ ಆದ್ಯತೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ