Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಮಲಕ್ಕೆ ಕೈಕೊಟ್ಟ ಶಾಸಕರು

by KM Shivaraju December 14, 2023
written by KM Shivaraju December 14, 2023 3 comments 2 minutes read
Share 2FacebookTwitterPinterestEmail
171
ಕಾಂಗ್ರೆಸ್ ಸಭೆಯಲ್ಲಿ ಸೋಮಶೇಖರ್, ಹೆಬ್ಬಾರ್, ವಿಶ್ವನಾಥ್


ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು, ಉತ್ತರ ಕನ್ನಡ ಕ್ಷೇತ್ರಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಆಕಾಂಕ್ಷಿಗಳಾಗಿರುವ ಬಿಜೆಪಿಯ ಶಾಸಕರಾದ ಎಚ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಎಚ್. ವಿಶ್ವನಾಥ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲೇ ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ.

ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ಬಹಿರಂಗವಾಗಿಯೇ ಬಿಜೆಪಿ ಮತ್ತು ಅದರ ನಾಯಕರನ್ನು ಟೀಕಿಸುತ್ತಾ, ಕಾಂಗ್ರೆಸ್ ನಾಯಕರನ್ನು ಹೊಗಳುತ್ತಾ ಆ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕರಿಂದಲೂ ಹಸಿರು ನಿಶಾನೆ

ಅಧಿಕಾರ ಕಳೆದುಕೊಂಡ ತಕ್ಷಣವೇ ಬಿಜೆಪಿಯ ನಾಯಕರನ್ನು ನಿಂದಿಸಿ ಆ ಪಕ್ಷದ ಕಾರ್ಯಕ್ರಮಗಳಿಗೂ ಹೋಗದೆ, ಕಾಂಗ್ರೆಸ್ ಮುಖಂಡರ ಜೊತೆ ಬೆರೆಯುತ್ತಿರುವ ಸೋಮಶೇಖರ್ ಹಾಗೂ ಹೆಬ್ಬಾರ್ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರಿಂದಲೂ ಹಸಿರು ನಿಶಾನೆ ದೊರೆತಂತಿದೆ.

ನಿನ್ನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಕಾಣಿಸಿಕೊಂಡು ನಂತರ ಡಿ.ಕೆ. ಶಿವಕುಮಾರ್ ಕರೆದಿದ್ದ ಔತಣಕೂಟ ಹಾಗೂ ಸಾಧು ಕೋಕಿಲ ಅವರ ಮನರಂಜನಾ ಕಾರ್ಯಕ್ರಮದಲ್ಲಿ ಇತರ ಶಾಸಕರ ಜೊತೆ ಸ್ಟೆಪ್ ಹಾಕಿದ್ದಾರೆ.

ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು

ಮುಖ್ಯಮಂತ್ರಿ ಅವರಿಗೆ ತಮ್ಮ ತವರು ಜಿಲ್ಲೆಯ ಲೋಕಸಭಾ ಕ್ಷೇತ್ರವನ್ನು ಪಕ್ಷದ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದಾರೆ.

ಯಡಿಯುರಪ್ಪ ಮತ್ತು ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದ ಸೋಮಶೇಖರ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ವಹಿಸಲಾಗಿತ್ತು, ಆ ಸಂದರ್ಭದಲ್ಲಿ ಅವರು ಜಿಲ್ಲಾ ಜನರಿಗೆ ಚಿರಪರಿಚಿತರಾಗಿದ್ದರು, ಇದಕ್ಕೂ ಮಿಗಿಲಾಗಿ ಅವರು ಒಕ್ಕಲಿಗ ಸಮಯದಾಯಕ್ಕೆ ಸೇರಿದವರಾಗಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸೋಮಶೇಖರ್ ಅವರಿಗೆ ಜೆಡಿಎಸ್ ಮುಖಂಡರ ಬೆಂಬಲವೂ ದೊರೆಯಬಹುದು.

ಅಲ್ಪಸಂಖ್ಯಾತರು, ಪರಿಶಿಷ್ಟ ಹಾಗೂ ಹಿಂದುಳಿದ ಸಮಯದಾಯ ಸೇರಿದಂತೆ ಒಂದಿಷ್ಟು ಒಕ್ಕಲಿಗ ಮತಗಳನ್ನೂ ಪಡೆದರೆ ಈ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಬಹುದು ಎಂಬುದು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಅಭಿಪ್ರಾಯವಾಗಿದೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ

ಈ ಕಾರಣದಿಂದಲೇ ಸೋಮಶೇಖರ್ ಅವರನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಮುಂದಾಗಿದ್ದಾರೆ. ಇದರ ಮಧ್ಯೆ ವಿಶ್ವನಾಥ್ ಕೂಡ ಇದೇ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸತ್ ಪ್ರವೇಶಿಸಲು ಆಸಕ್ತಿ ತೋರಿರುವ ಹೆಬ್ಬಾರ್ ಕಾಂಗ್ರೆಸ್ ಟಿಕೆಟ್ ಬಯಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಸದಸ್ಯ ಆರ್.ವಿ. ದೇಶಪಾಂಡೆ ಪುತ್ರನಿಗೆ ಈ ಬಾರಿ ಬಿಜೆಪಿ ಟಿಕೆಟ್ ದೊರೆಯಲಿದೆ ಎಂಬ ಮಾತು ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ದೇಶಪಾಂಡೆ ಮಗನ ವಿರುದ್ಧ ಕಣಕ್ಕಿಳಿಯಲು ಹೆಬ್ಬಾರ್, ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ, ಇದಕ್ಕೆ ಕಾಂಗ್ರೆಸ್ ನಾಯಕರ ಬೆಂಬಲವೂ ಇದೆ ಎನ್ನಲಾಗಿದೆ.

ಬಿಜೆಪಿ ಶಾಸಕಾಂಗ ಸಭೆಯಿಂದ ದೂರ

ಸೋಮಶೇಖರ್ ಮತ್ತು ಹೆಬ್ಬಾರ್ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದರು.

ಆದರೆ ನಿನ್ನೆ ನಡೆದ ಕಾಂಗ್ರೆಸ್‌ನ ಸಭೆ ಮತ್ತು ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗವಹಿಸುವ ಮೂಲಕ ರಾಜಕೀಯ ಅಂಗಳದಲ್ಲಿ ನಡೆಯುತ್ತಿರುವ ಚರ್ಚೆಗೆ ಪುಷ್ಟಿ ಕೊಟ್ಟಿದ್ದಾರೆ.

ಬಿಜೆಪಿ ಸದಸ್ಯರು ಪಕ್ಷದ ಔತಣಕೂಟ ಮತ್ತು ಸಭೆಯಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ಶಾಸಕರಾದ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ನಿನ್ನೆ ರಾತ್ರಿ ಪಕ್ಷದ ಸಭೆಗೆ ಬಂದಿಲ್ಲ. ನಾವು ಆಹ್ವಾನ ನೀಡಿದ್ದ ಭೋಜನಕೂಟಕ್ಕೆ ಬಂದಿದ್ದರು ಎಂದು ತಿಳಿಸಿದ್ದಾರೆ.

ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು ಉಪಹಾರ ಕೂಟಕ್ಕೆ ಬಂದಿದ್ದರು, ನಮ್ಮ ಶಾಸಕಾಂಗ ಸಭೆಗೆ ಏಕೆ ಬರುತ್ತಾರೆ. ಅವರು ನಮ್ಮ ಪಕ್ಷದ ಶಾಸಕರಲ್ಲ. ಹೀಗಾಗಿ ಅವರು ನಮ್ಮ ಶಾಸಕಾಂಗ ಸಭೆಗೆ ಬಂದಿಲ್ಲ ಎಂದರು.

Share this:

  • WhatsApp
  • Post
  • Tweet
  • Print
  • Email
Belagavibengalurubjp. congressindiakarnatakakmskmskannadapolitics
Share 2 FacebookTwitterPinterestEmail
KM Shivaraju

previous post
ಅಕ್ರಮ-ಸಕ್ರಮ
next post
ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

3 comments

ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆ – KMS December 14, 2023 - 2:42 pm

[…] ರಾಜ್ಯ […]

Reply
ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ – KMS December 14, 2023 - 3:10 pm

[…] ರಾಜ್ಯ […]

Reply
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು – KMS December 14, 2023 - 3:26 pm

[…] ರಾಜ್ಯ […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ