Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದು ಸಂಪುಟ ದೆಹಲಿಯತ್ತ

by KM Shivaraju December 16, 2023
written by KM Shivaraju December 16, 2023 2 comments 1 minutes read
3FacebookTwitterPinterestEmail
309

ಬೆಳಗಾವಿ-ಬೆಂಗಳೂರು-ದೆಹಲಿ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿಸಿಕೊಂಡು ಬಂದ ಮುಖ್ಯಮಂತ್ರಿ ಮತ್ತು ಅವರ ಸಂಪುಟದ ಅನೇಕ ಸದಸ್ಯರು ದೆಹಲಿಯತ್ತ ಹೊರಟಿದ್ದಾರೆ.

ಸಚಿವ ಆಕಾಂಕ್ಷಿಗಳಾಗಿದ್ದ ಹಿರಿಯ ಸದಸ್ಯರಿಗೆ ನಿಗಮ-ಮಂಡಳಿಗಳಿಗೆ ನೇಮಕಾತಿ ಹಾಗೂ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ವರಿಷ್ಠರು ರಾಜ್ಯ ನಾಯಕರಿಗೆ ಬುಲಾವ್ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಾಳೆಯಿಂದ ಎರಡು-ಮೂರು ದಿನಗಳ ಕಾಲ ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸುವ ಬಗ್ಗೆ ಚರ್ಚೆ ನಡೆಯಲಿದೆ.

ವರಿಷ್ಠರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಸಚಿವರು ದೆಹಲಿಗೆ ತೆರಳುತ್ತಿದ್ದಾರೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು

ಪಂಚ ರಾಜ್ಯಗಳ ಚುನಾವಣಾ ವೈಫಲ್ಯದ ನಂತರ ಲೋಕಸಭಾ ಚುನಾವಣೆಯಲ್ಲಿ ಇದು ಪುನರಾವರ್ತನೆ ಆಗದಂತೆ ನೋಡಿಕೊಳ್ಳಲು ಅದರಲ್ಲೂ ಎಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಬೆಂಬಲ ಇದೆಯೋ ಅಂತಹ ಕಡೆ ಮುಂಜಾಗೃತಾ ಕ್ರಮ ಹಾಗೂ ಅಭ್ಯರ್ಥಿಗಳ ಆಯ್ಕೆ ಕಸರತ್ತನ್ನು ಎಐಸಿಸಿ ಆರಂಭಿಸಿದೆ.

ಕರ್ನಾಟಕದಿಂದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳ ಗೆಲುವಿನ ಗುರಿ ಇಟ್ಟಿರುವ ವರಿಷ್ಠರು ಎಲ್ಲ ರೀತಿಯ ತಂತ್ರಗಳನ್ನು ಹೆಣೆಯುತ್ತಿದ್ದಾರೆ.
ಸಿದ್ದರಾಮಯ್ಯ ಸಂಪುಟದಲ್ಲಿ ಅವಕಾಶ ದೊರೆಯದೆ ಅಸಮಾಧಾನಗೊಂಡಿರುವ ಹಿರಿಯ ಸದಸ್ಯರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ಕಲ್ಪಿಸುವುದು ಸೇರಿದೆ.

ಯಾರಿಗೆ ನಿಗಮ-ಮಂಡಳಿ

ಈಗಾಗಲೇ ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯ ನಾಯಕರೊಂದಿಗೆ ಚರ್ಚಿಸಿ, 34 ಶಾಸಕರನ್ನು ಗುರುತಿಸಿ, ಇವರಿಗೆ ಯಾವ ನಿಗಮ-ಮಂಡಳಿ ನೀಡಬೇಕೆಂಬ ಒಂದು ಚಿತ್ರಣ ಸಿದ್ಧಪಡಿಸಿದ್ದಾರೆ.

ಯಾವ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಗೆಲುವಿನ ಸಮೀಪ ಇದೆಯೋ ಅದನ್ನು ಮತ್ತಷ್ಟು ಭದ್ರ ಮಾಡಿಕೊಳ್ಳಲು ಅಂತಹ ಕ್ಷೇತ್ರಗಳಿಗೆ ನಿಗಮಗಳ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುತ್ತಿದೆ.

ಇದೆಲ್ಲದ್ದಕ್ಕೂ ಮಿಗಿಲಾಗಿ ರಾಜ್ಯದಲ್ಲಿ ಬಲಿಷ್ಠ ಸರ್ಕಾರ ಇದ್ದರೂ ಆಪರೇಷನ್ ಕಮಲದ ಭೂತ ವರಿಷ್ಠರನ್ನು ಕಾಡುತ್ತಿದೆ.

ಎರಡು-ಮೂರು ದಿನಗಳ ಮ್ಯಾರಥಾನ್ ಚರ್ಚೆ

ಮುನ್ನೆಚ್ಚರಿಕೆಯಾಗಿ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಂಡು, ಲೋಕಸಭಾ ಚುನಾವಣೆ ಎದುರಿಸಿ ಹೆಚ್ಚು ಸ್ಥಾನ ಗಳಿಸುವ ಉದ್ದೇಶದಿಂದಲೇ ದೆಹಲಿಯಲ್ಲಿ ಎರಡು-ಮೂರು ದಿನಗಳ ಮ್ಯಾರಥಾನ್ ಚರ್ಚೆ ನಡೆಯಲಿದೆ.

ಇದಕ್ಕಾಗಿಯೇ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನೇಮಕವಾಗಿದ್ದ ಸಚಿವರುಗಳನ್ನು ದೆಹಲಿಗೆ ಕರೆಸಿಕೊಂಡು ಅವರೊಂದಿಗೆ ಮುಖಾಮುಖಿ ಚರ್ಚೆ ನಡೆಸಲಿದ್ದಾರೆಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯದ ನಾಯಕರೊಂದಿಗೆ ಚರ್ಚೆ ಮಾಡಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aiccbengaluruboard-corporationcongressdelhikarnatakakmskmskannadamlflikarjuna khargenewspoliticsSiddaramaiah
3 FacebookTwitterPinterestEmail
KM Shivaraju

previous post
ಬಿಜೆಪಿ ರಾಜಕೀಯ
next post
ಗ್ಯಾಸ್ಟ್ರಬಲ್ ಗೆ ಜೀರಿಗೆ ಕಾಳು ಪರಿಹಾರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ