ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ: ಸಿದ್ದು
ಗದಗ: ಕೋವಿಡ್ ಹೊಸ ತಳಿಯ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರೊನಾ ಇಡೀ ದೇಶದಲ್ಲಿ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ನೆರೆಯ ಕೇರಳದಲ್ಲಿ ಕೋವಿಡ್ ಸೋಂಕು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಈ ಸೋಂಕು ಹರಡದಂತೆ ಅಗತ್ಯವಿರು ಆರೋಗ್ಯ ಮುನ್ನೆಚ್ಚರಿಕೆ ಕ್ರ,ಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಅನಗತ್ಯವಾಗಿ ಆತಂಕಕ್ಕೆ ಒಳಗಾಗಬಾರದು ಎಂದು ಅವರು ತಿಳಿಸಿದರು.
ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿ ಭಾರತ
ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ
ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಕ.ರ.ಸಾ.ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಚಾಲಕರೇ ಆರೋಪಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು ಎಂದರು.
ಗ್ಯಾಸ್ಟ್ರಬಲ್ ಗೆ ಜೀರಿಗೆ ಕಾಳು ಪರಿಹಾರ
ಜಾತಿ ಜನಗಣತಿ ವರದಿ ಬರುವ ಮುನ್ನವೇ ವೈಜ್ಞಾನಿಕವಲ್ಲ ಎನ್ನುವುದು ಸರಿಯಲ್ಲ
ಕಾಂತರಾಜು ವರದಿಯ ಕುರಿತು ಮಾತನಾಡಿದ ಅವರು, ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ ಎಂದರು. ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ . ವರದಿ ವೈಜ್ಞಾನಿಕ ವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ.
ವರದಿ ಬರಲಿ ನೋಡೋಣ ಎಂದರು. ಶ್ರೀ ಶೈಲ ಜಗದ್ಗುರು ಚನ್ನಸಿದ್ಧರಾಮ ಸ್ವಾಮೀಜಿ 2 ವರ್ಷಗಳ ನಂತರ ವರದಿ ಬಿಡುಗಡೆ ಮಾಡಲಿ ಎಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆಯಾಗಲಿ ನನಗೇ ಆಗಲಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ವರದಿ ಬರುವ ಮುನ್ನವೇ ವೈಜ್ಞಾನಿಕ ವಲ್ಲ ಎನ್ನುವುದು ಸರಿಯಲ್ಲ ಎಂದರು.
ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ
ಶಕ್ತಿ ಯೋಜನೆಗೆ ಸರ್ಕಾರ ಮೀಸಲಿಟ್ಟ ಹಣ ಪೂರ್ಣಗೊಂಡಿದೆ ಎಂಬ ಬಗ್ಗೆ ಉತ್ತರಿಸಿ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಶಕ್ತಿ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ ಎಂದರು.
ಕರಾರಸಾ ನಿಗಮದಲ್ಲಿ ತಾಂತ್ರಿಕ ಸಹಾಯಕರ ನೇಮಕಾತಿ
ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ ಎಂದರು. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ .
ಅಭಿವೃದ್ಧಿ ಕೆಲಸಗಳು ನಿಂತಿಲ್ಲ
ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ 70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73, 928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು ಎಂದರು.
3000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈ ನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ . 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದರು.
ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರು
ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ತನಿಖೆಗೆ ಬೇಕಾದರೂ ವಹಿಸಲು ಸಿದ್ದ ಎಂದರು. ತನಿಖೆಯಾಗಿ ತಪ್ಪಿತಸ್ಥ ರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ ಎಂದರು.

