Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೂವರು ಉಪಮುಖ್ಯಮಂತ್ರಿ ನೇಮಿಸಿ

by KM Shivaraju December 25, 2023
written by KM Shivaraju December 25, 2023 0 comments 1 minutes read
4FacebookTwitterPinterestEmail
135

ಕಾಂಗ್ರೆಸ್ ವರಿಷ್ಠರ ಮೇಲೆ ಮತ್ತೆ ಒತ್ತಡ

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟವನ್ನು ಪುನರ್ ರಚಿಸಿ ಹೊಸದಾಗಿ ಮೂವರು ಉಪಮುಖ್ಯಮಂತ್ರಿಗಳಿಗೆ ಅವಕಾಶ ಮಾಡಿಕೊಡುವಂತೆ ಕಾಂಗ್ರೆಸ್ ವರಿಷ್ಠರ ಮೇಲೆ ಮತ್ತೆ ಒತ್ತಡ ಹಾಕಲಾಗುತ್ತಿದೆ.

ಚುನಾವಣೆ ಸಮಯದಲ್ಲಿ ಮೌನವಾಗಿದ್ದ ಕೆಲವು ಮುಖಂಡರು ಮತ್ತೆ ಉಪಮಖ್ಯಮಂತ್ರಿ ನೇಮಕಾತಿಯನ್ನು ಮುನ್ನೆಲೆಗೆ ತಂದಿದ್ದಾರೆ.

ಸತೀಶ್ ಜಾರಕಿಹೊಳಿ ವರಿಷ್ಠರ ಮೇಲೆ ಒತ್ತಡ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ನಿಲುವನ್ನು ಮುಂದಿಟ್ಟುಕೊಂಡು ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದು ಇದಕ್ಕೆ ಕಾಂಗ್ರೆಸ್‌ನ ಕೆಲವು ಶಾಸಕರು ಬೆನ್ನೆಲುಬಾಗಿ ನಿಂತಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪರಿಶಿಷ್ಟ ಜಾತಿ, ವರ್ಗ ಹಾಗೂ ವೀರಶೈವ ಸಮುದಾಯದ ತಲಾ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ವರಿಷ್ಠರ ಮೇಲೆ ಸತೀಶ್ ಒತ್ತಡ ಹೇರಿದ್ದಾರೆ.

ಸಚಿವ ಸ್ಥಾನದಿಂದ ಬಡ್ತಿಗೆ ಮನವಿ

ತಮ್ಮ ಆಪ್ತರ ಜೊತೆಗೂಡಿ ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಬಿಡಾರ ಹೂಡಿದ್ದ ಸತೀಶ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಕೆಲವು ಮುಖಂಡರನ್ನು ಭೇಟಿ ಮಾಡಿ ತಮಗೆ ಸಚಿವ ಸ್ಥಾನದಿಂದ ಬಡ್ತಿ ನೀಡುವಂತೆ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನೀವು ನೀಡಿರುವ ಗುರಿ ಮುಟ್ಟಲು ಕರ್ನಾಟಕದಲ್ಲಿ ಜಾತಿ ಸಮೀಕರಣ ಅಗತ್ಯವಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆ ಜೊತೆಗೆ ಜಾತಿಗಳ ಸಮೀಕರಣದಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕಾದರೆ ಈ ಮೂರು ವರ್ಗಗಳಿಗೆ ಸೇರಿದ ಹಿರಿಯ ಶಾಸಕರಲ್ಲಿ ತಲಾ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ.

ಕನಿಷ್ಠ 20 ಸ್ಥಾನ ಗೆಲ್ಲಲು ಸಾಧ್ಯ

ಇದರಿಂದ ನಮಗೆ ಮತ ಗಳಿಕೆ ಹೆಚ್ಚಿ 28 ರಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸದಾ ಕತ್ತಿ ಮಸೆಯುತ್ತಿರುವ ಜಾರಕಿಹೊಳಿ ಕುಟುಂಬ ಇದೀಗ ಸಿದ್ದರಾಮಯ್ಯ ಸಂಪುಟದಲ್ಲಿ ಅವರ ಬಲವನ್ನು ಕುಗ್ಗಿಸಲು ಹೊರಟಿದೆ.

ಸರ್ಕಾರದಲ್ಲಿ ಶಿವಕುಮಾರ್ ಪ್ರಾಬಲ್ಯ ಸಾಧಿಸಿ ಮುಖ್ಯಮಂತ್ರಿ ಅವರ ಮೇಲೆಯೇ ಹಿಡಿತ ಸಾಧಿಸಲು ಹೊರಟಿರುವುದು ಜಾರಕಿಹೊಳಿ ಕುಟುಂಬಕ್ಕೆ ಸಹಿಸಲಾಗುತ್ತಿಲ್ಲ.

ಶಿವಕುಮಾರ್ ಅಧಿಕಾರ ಕುಗ್ಗಿಸುವ ಉದ್ದೇಶ

ಶಿವಕುಮಾರ್ ಅಧಿಕಾರವನ್ನು ಕುಗ್ಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ ಮೂರು ಉಪಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಠಿಸಿ ಎಂದು ಜಾರಕಿಹೊಳಿ ರಾಜಕೀಯ ದಾಳ ಹಾಕಿದ್ದಾರೆ.

ಸತೀಶ್ ಹಿಂದೆ ಸರ್ಕಾರದಲ್ಲಿರುವ ಮತ್ತು ರಾಜ್ಯ ಕಾಂಗ್ರೆಸ್ ಪ್ರಭಾವಿಗಳು ಬೆನ್ನೆಲುಬಾಗಿ ನಿಂತಿರುವುದು ವರಿಷ್ಠರಿಗೆ ನುಂಗಲಾರದ ತುತ್ತಾಗಿದೆ.

ಸತೀಶ್ ದೆಹಲಿಗೆ ತೆರಳುವುದಕ್ಕೂ ಮುನ್ನ ಪರಿಶಿಷ್ಟ ಜಾತಿ ಹಾಗೂ ವರ್ಗದ ಪಕ್ಷದ ಶಾಸಕರ ಜೊತೆ ಮತ್ತು ತಮ್ಮ ಹೋರಾಟಕ್ಕೆ ತೆರೆಮರೆಯಲ್ಲಿ ಬೆಂಬಲವಾಗಿ ನಿಂತವರ ಜೊತೆಯಲ್ಲೂ ಸಭೆಗಳನ್ನು ನಡೆಸಿದ್ದರು ಎನ್ನಲಾಗಿದೆ.

ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಎಐಸಿಸಿ, ಸತೀಶ್ ದಾಳವನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdk shivakumarkarnatakakmskmskannadanewspoliticsSiddaramaiah
4 FacebookTwitterPinterestEmail
KM Shivaraju

previous post
ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ
next post
ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ