Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸದ್ದಿಲ್ಲದೆ ಆಪರೇಷನ್ ಕಮಲ

by KM Shivaraju December 28, 2023
written by KM Shivaraju December 28, 2023 2 comments 1 minutes read
3FacebookTwitterPinterestEmail
231


ಅದುರಿ ಹೋದ ಕಾಂಗ್ರೆಸ್ ನಾಯಕರು

ಬೆಂಗಳೂರು: ಸದ್ದಿಲ್ಲದೆ ನಡೆಯುತ್ತಿರುವ ಆಪರೇಷನ್ ಕಮಲದ ಕಾರ್ಯಾಚರಣೆಗೆ ಕಾಂಗ್ರೆಸ್ ನಾಯಕರು ಅದುರಿ ಹೋಗಿದ್ದಾರೆ.
ಸಂಪುಟದಲ್ಲಿ ಅವಕಾಶ ದೊರೆಯದ, ಕೆಲವು ಉದ್ದಿಮೆಗಳನ್ನು ನಡೆಸುತ್ತಿರುವ ಪ್ರಭಾವೀ ಶಾಸಕರನ್ನು ಗುರುತಿಸಿ, ಬಿಜೆಪಿ ಮುಖಂಡರು ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಆಪರೇಷನ್ ಕಮಲದ ಕಾರ್ಯಾಚರಣೆಗೆ ಈ ಬಾರಿ ಯಾವುದೇ ರಾಜ್ಯ ನಾಯಕರನ್ನು ಬಳಸಿಕೊಂಡಿಲ್ಲ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಸ್ತುವಾರಿಯಲ್ಲಿ ನಡೆಯುತ್ತಿದೆ.

ಕರಾವಳಿ ನಾಯಕರ ಮೂಲಕ ಆಪರೇಷನ್

ಕರಾವಳಿ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಮುಂದಿಟ್ಟುಕೊಂಡು, ಸದ್ದಿಲ್ಲದೆ ಆಪರೇಷನ್ ಕಮಲಕ್ಕೆ ಬುನಾದಿ ಹಾಕುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೆಳೆಯಲ್ಪಡುವವರ ದೊಡ್ಡ ಪಟ್ಟಿಯೇ ಸಿದ್ಧಗೊಂಡಿದೆ, ಇದರ ಮಾಹಿತಿ ತಿಳಿಯುತ್ತಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮವರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೂ ಅಖಾಡಕ್ಕೆ
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
DK Shivakumar

ತಮ್ಮ ಶಾಸಕರನ್ನು ಬಿಜೆಪಿ ಸೆಳೆಯುತ್ತಿರುವುದನ್ನು ಪತ್ತೆ ಹಚ್ಚಿ, ಅವರ ಮನವೊಲಿಸಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅಖಾಡಕ್ಕೆ ಇಳಿದಿದ್ದಾರೆ.

ಬಿಜೆಪಿ ಪಟ್ಟಿಯಲ್ಲಿರುವ ಕೆಲವು ಶಾಸಕರನ್ನು ಮನೆಗೆ ಕರೆಸಿಕೊಂಡು ಮಾತನಾಡಿದರೆ, ಮತ್ತೆ ಕೆಲವು ಶಾಸಕರ ಮನೆಗೆ ತೆರಳಿ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅಸಮಾಧಾನಿತ ಶಾಸಕರು ಪಕ್ಷದ ಚಟುವಟಿಕೆಗಳಿಂದ ಅಲ್ಲದೆ, ಶಾಸಕಾಂಗ ಪಕ್ಷದ ಸಭೆಗಳಿಂದಲೂ ದೂರ ಉಳಿದಿದ್ದಾರೆ.

ಅಪ್ಪ-ಮಗ ಅಸಮಾಧಾನ

ಲೇಔಟ್ ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಕೃಷ್ಣ ಕೂಡಾ ಅಸಮಾಧಾನಿತರಲ್ಲಿ ಪ್ರಮುಖರು, ಚುನಾವಣಾ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದ್ದನ್ನು ಚಾಚೂ ತಪ್ಪದೆ ಮಾಡಿದರೂ ತಮಗೆ ಅಧಿಕಾರ ನೀಡಲಿಲ್ಲ ಎಂಬ ಅಸಮಾಧಾನ ಅಪ್ಪ-ಮಗನಲ್ಲಿದೆ.

ನೀಡಿದ ಭರವಸೆಗಳನ್ನೂ ಈಡೇರಿಸಿಲ್ಲ, ಅದು ಹೋಗಲಿ ಎಂದರೆ ಕ್ಷೇತ್ರಕ್ಕೆ ಅನುದಾನವನ್ನೂ ನೀಡುತ್ತಿಲ್ಲ ಎಂಬ ಬೇಸರದಲ್ಲಿದ್ದಾರೆ, ಇದು ಇವರದ್ದಷ್ಟೇ ಅಲ್ಲದೆ, ಬಂಡಾಯದ ಗುಂಪಿನಲ್ಲಿರುವ ಬಹುತೇಕ ಶಾಸಕರದ್ದಾಗಿದೆ.

ಶಿವಕುಮಾರ್ ಹಾಗೂ ಕೃಷ್ಣಪ್ಪ ರಾಜಕೀಯವಾಗಿ ಸಮಾನಾಂತರ ದೂರ ಕಾಯ್ದುಕೊಂಡವರು, ಇಷ್ಟಾದರೂ ಕಳೆದ ಎರಡು ದಿನಗಳ ಹಿಂದೆ, ಕೃಷ್ಣಪ್ಪ ಅವರ ಮನೆಗೆ ಶಿವಕುಮಾರ್ ತೆರಳಿ ನಾಲ್ಕು ಗಂಟೆಗಳ ಕಾಲ ಚರ್ಚೆ ನಡೆಸಿದ್ದಲ್ಲದೆ, ಮನವೊಲಿಸುವ ಕಾರ್ಯವನ್ನೂ ಮಾಡಿದ್ದಾರೆ.

ತಮಗಿರುವ ಎಲ್ಲ ಬೇಸರವನ್ನು ಕೃಷ್ಣಪ್ಪ ಎಳೆ ಎಳೆಯಾಗಿ ಬಿಡಿಸಿಟ್ಟು, ಸಿದ್ದರಾಮಯ್ಯ ಅವರು ಹೇಳಿದ ಎಲ್ಲವನ್ನೂ ಮಾಡಿದರೂ ನಮಗೆ ಇಂತಹ ಸ್ಥಿತಿ ಬಂದಿದೆ, ನಮಗೂ ರಾಜಕೀಯ ಮಾಡಲು ಬರುತ್ತದೆ, ಅದನ್ನು ಮಾಡಿ ತೋರಿಸುತ್ತೇವೆ ಎಂದಿದ್ದಾರೆ.

ಮಾತುಕತೆ ಮುಗಿದ ನಂತರ ಕೊನೆಯಲ್ಲಿ ಶಿವಕುಮಾರ್, ನನ್ನ ಬೆಂಬಲಕ್ಕೆ ನಿಲ್ಲಿರಪ್ಪಾ ಎಂದು ಅಪ್ಪ-ಮಗನನ್ನು ಕೋರಿದಾಗಲೂ, ಕೃಷ್ಣಪ್ಪ ಯಾವುದೇ ಪ್ರತಿಕ್ರಿಯೆಯನ್ನೇ ನೀಡಲಿಲ್ಲ.

ಹಲವು ಶಾಸಕರ ಜೊತೆಯೂ ಚರ್ಚೆ

ಶಿವಕುಮಾರ್ ಇವರನ್ನಷ್ಟೇ ಅಲ್ಲದೆ, ಇನ್ನೂ ಹಲವಷ್ಟು ಶಾಸಕರನ್ನು ಸಂಪರ್ಕಿಸಿ ಚರ್ಚೆ ಮಾಡಿದ್ದಾರೆ, ಅವರನ್ನು ಸಮಾಧಾನಪಡಿಸುವ, ಓಲೈಸುವ ಕೆಲಸವನ್ನೂ ಪಕ್ಷದ ಅಧ್ಯಕ್ಷರಾಗಿ ಮಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನವೇ ಚೌಕಾಸಿ ನಾಯಕರೊಬ್ಬರು ಪಕ್ಷವನ್ನು ಒಡೆದು ಬಿಜೆಪಿ ಬೆಂಬಲಿಸುತ್ತಾರೆಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ಈ ಘಟನಾವಳಿಗಳು ನಡೆಯುತ್ತಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjpcongressdk shivakumarkarnatakakmskmskannadanewspolitics
3 FacebookTwitterPinterestEmail
KM Shivaraju

previous post
ಕನ್ನಡ ನಾಮಫಲಕ ಅಳವಡಿಕೆಗೆ ಸುಗ್ರೀವಾಜ್ಞೆ
next post
ಯತ್ನಾಳ್ ಆರೋಪದಲ್ಲಿ ಸತ್ಯಾಂಶ ಇರಬಹುದು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ