Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಂಗಳೂರಿನಲ್ಲಿ ಸುರಂಗ ಯೋಜನೆ: ಇಬ್ಬರು ಸಚಿವರ ನಡುವೆ ಫೈಟ್

by admin December 30, 2023
written by admin December 30, 2023 1 comment 3 minutes read
Share 2FacebookTwitterPinterestEmail
213
ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ನಿರ್ಮಾಣ ಮಾಡುವ ಯೋಜನೆಗಾಗಿ ಇಬ್ಬರು ಸಚಿವರ ನಡುವೆ ಫೈಟ್ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸುರಂಗ ಯೋಜನೆಗೆ 80,000 ಕೋಟಿ ರೂ. ವೆಚ್ಚ ಆಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ, ಈ ಯೋಜನೆಯನ್ನು ಯಾವಾಗ ಪೂರ್ಣ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮಿನ್ಸ್ ಚೌಕ್ ರಸ್ತೆಯಿಂದ ಹೆಬ್ಬಾಳದವರಿಗೆ ಸುರಂಗ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ್ದೆ.

 ಅದಕ್ಕೆ ಅಂತಿಮ ಹಂತದ ಅನಿಮೋದನೆಯನ್ನೂ ಕೊಡಲಾಗಿತ್ತು. ಆದರೆ, ಅಷ್ಟರಲ್ಲಿ ನನ್ನ ಸರ್ಕಾರ ಹೋಯಿತು. ಆ ಯೋಜನೆ ಅಲ್ಲಿಗೇ ನಿಂತು ಹೋಯಿತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪ್ರತಿ ಚದರ ಅಡಿಗೆ 100 ರೂಪಾಯಿ ವಸೂಲಿ

ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎಷ್ಟೆಲ್ಲಾ ಕೊಳ್ಳೆ ಹೊಡೆಯಬೇಕೋ ಅಷ್ಟನ್ನೂ ಮಾಡಲು ಈ ಸರ್ಕಾರ ಹೊರಟಿದೆ. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪ್ರತಿ ಚದರ ಅಡಿಗೆ 100 ರೂಪಾಯಿ ವಸೂಲಿ ಮಾಡುವುದರಲ್ಲಿ ಇವರು ಬ್ಯುಸಿ ಇದ್ದಾರೆ. ಜನರ ಬಗ್ಗೆ ಆಲೋಚನೆ ಮಾಡುವುದಕ್ಕೆ ಇವರಿಗೆ ಸಮಯ ಇಲ್ಲ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಮನುಷ್ಯತ್ವ ಅಂತಿಮ ಗುರಿಯಾಗಬೇಕು

ಸರ್ಕಾರಿ ಶಾಲೆಗಳನ್ನು ಸ್ವಚ್ಛ ಮಾಡಲು ಹಣವೂ ಇಲ್ಲ, ಸಿಬ್ಬಂದಿಯೂ ಇಲ್ಲ. ಶಿಕ್ಷಕರು ಮಕ್ಕಳಿಂದ ಸ್ವಚ್ಚತಾ ಕಾರ್ಯ ಮಾಡಿಸುತ್ತಾರೆ. ತಪ್ಪು ಸರ್ಕಾರದ್ದು, ಶಿಕ್ಷೆ ಶಿಕ್ಷಕರಿಗೆ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎನ್ನುತ್ತಿದೆ ಸರ್ಕಾರ.

ಆದರೆ, ಸಮಾಜ ಕಲ್ಯಾಣ ಇಲಾಖೆಯಿಂದ 11 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲಾಗಿದೆ.  ಶಾಲೆಗಳಲ್ಲಿ ಚಾಕ್ ಪೀಸ್, ಡಸ್ಟರ್ ತರಲಿಕ್ಕೂ ಶಿಕ್ಷಕರೇ ಹಣ ಖರ್ಚು ಮಾಡಬೇಕು. ರಾಜ್ಯದಲ್ಲಿ 17 ಸಾವಿರ ಶಾಲೆಗಳಿಗೆ ಕಟ್ಟಡವೇ ಇಲ್ಲ. ಕಟ್ಟಡ ಇರುವ ಕಡೆ ಟೀಚರ್ ಇರಲ್ಲ. ಟೀಚರ್ ಇರುವ ಕಡೆ ಕಟ್ಟಡ ಇಲ್ಲ. ಇದು ಸರ್ಕಾರದ ಶಿಕ್ಷಣ ನೀತಿ ಎಂದು ಚಾಟಿ ಬೀಸಿದರು.

ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿ

ಕೋಲಾರದಲ್ಲಿ ಮಾಧ್ಯಮದವರನ್ನು ಹೊರಗೆ ಹಾಕಿ ಕೆಡಿಪಿ ಮೀಟಿಂಗ್ ಮಾಡಿದ್ದೀರಿ. ಈಗ ಹೊಸದಾಗಿ ಉದ್ಯೋಗ ಮೇಳ ಮಾಡುತ್ತೇವೆ ಎಂದು ಹೊರಟಿದ್ದಾರೆ. ಉದ್ಯೂಗ ಮೇಳ ಇರಲಿ, ಮೊದಲು ಸರ್ಕಾರದಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿ ಎಂದರು.

ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ

ರಾಜ್ಯದಲ್ಲಿ ನೇಕಾರರ ಪರಿಸ್ಥಿತಿ ದಯನೀಯವಾಗಿದೆ. ದಿನಪೂರ್ತಿ ಇಡೀ ಕುಟುಂಬ ದುಡಿದರೂ 500 ರೂಪಾಯಿ ಸಂಪಾದನೆ ಮಾಡುವುದು ಕಷ್ಟವಾಗಿದೆ. ರಾಜ್ಯದ 39 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅವರಲ್ಲಿ 22 ಮಂದಿ ಬೆಳಗಾವಿ ಜಿಲ್ಲೆಯವರು ಎಂಬ ಸುದ್ದಿಯನ್ನು ಪತ್ರಿಕೆಯಲ್ಲಿ ಓದಿದೆ. ಇವರಿಗೆ ಗ್ಯಾರಂಟಿ ಹಣ ತಲುಪುಲ್ಲ. ಅದಕ್ಕೆ ಸರ್ಕಾರ ಏನು ಮಾಡಿದೆ ಎಂದು ಅವರು ಪ್ರಶ್ನೆ ಮಾಡಿದರು.

ಕುಸಿದ ವಿದೇಶಿ ನೇರ ಹೂಡಿಕೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಕುಸಿದಿದೆ. ಈ ವರ್ಷದಲ್ಲಿ ರಾಜ್ಯಕ್ಕೆ ವಿದೇಶಿ ನೇರ ಹೂಡಿಕೆ ಶೆ.46ರಷ್ಟು ಅಂದರೆ; 2.8 ಶತಕೋಟಿ ಡಾಲರ್ ನಷ್ಟು ಹೂಡಿಕೆ ಕಡಿಮೆ ಆಗಿದೆ. ಪರಿಣಾಮವಾಗಿ ಉದ್ಯೋಗ ಸೃಷ್ಟಿಯೂ ಕುಸಿದಿದೆ. ಸಚಿವ ಎಂಬಿ ಪಾಟೀಲ್ ಅಮೇರಿಕಾಗೆ ಹೋಗಿದ್ದರು. 25 ಸಾವಿರ ಕೋಟಿ ರೂ. ಹೂಡಿಕೆ ಆಗಿದೆ ಎಂದು ಅವರು ಹೇಳಿದ್ದರು. ಬಹುಶಃ ಆ ಹಣ ವಿಮಾನದಲ್ಲಿ ಬರ್ತಾ ಇರಬೇಕು ಎಂದು ಅವರು ವ್ಯಂಗ್ಯವಾಡಿದರು.

ಬಿಜೆಪಿ ಸರ್ಕಾರ ಇದ್ದಾಗ 5 ಲಕ್ಷ 20 ಸಾವಿರ ಕೋಟಿ ರೂ.ಗೆ ವಿದೇಶಿ ಹೂಡಿಕೆ ಬಂದಿದೆ ಅಂದರು. ಅದಕ್ಕೆ 75 ಕೋಟಿ ರೂ ಖರ್ಚು ಮಾಡಿದ್ದರು. ಇದರಲ್ಲಿ 90% ರಷ್ಟು ಬೆಂಗಳೂರಿನ ಹೊರಗಡೆ ಹೂಡಿಕೆ ಆಗ್ತಿದೆ ಎಂದು ಹೇಳಲಾಗಿತ್ತು.

ರಾಜ್ಯಾದ್ಯಂತ ಏಕರೂಪ ತೆರಿಗೆ

2023ನಲ್ಲಿ ಶೆ.46ರಷ್ಟು ವಿದೇಶಿ ಹೂಡಿಕೆ ಇಳಿಕೆಯಾಗಿದೆ ಎಂದರೆ ಸಣ್ಣ ಮಾತಲ್ಲ. ಬಿಜೆಪಿ ಸರ್ಕಾರ ಇದ್ದ 2022-2023 ಸಾಲಿನಲ್ಲಿ 5.3 ಶತಕೋಟಿ ಹೂಡಿಕೆ ಬಂದಿದ್ದರೆ, 2023ರಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ) 2.2 ಶತಕೋಟಿ ಹೂಡಿಕೆಯಷ್ಟೇ ಬಂದಿದೆ ಎಂದು ಮಾಜಿ ಸಿಎಂ ಅಂಕಿಅಂಶಗಳ ಸಮೇತ ಹೇಳಿದರು.

ಈ ಸರ್ಕಾರದ ಕಾರ್ಯ ವೈಖರಿ ಸರಿ ಇಲ್ಲ. ದಾವೋಸ್ ಗೆ ಹೋಗಲಿಕ್ಕೆ 9 ಕೋಟಿ ರೂಪಾಯಿ ತೆಗೆದುಕೊಂಡಿದ್ದಾರೆ. ಇದೆಲ್ಲ ಜನರ  ತೆರಿಗೆ ಹಣ. ಅದನ್ನು ಮನಸೋಇಚ್ಛೆ ಪೋಲು ಮಾಡಲಾಗುತ್ತಿದೆ ಎಂದು ಅವರು ದೂರಿದರು.

ಕಾಂಗ್ರೆಸ್ ಯತ್ನಾಳ್ ಆರೋಪದ ರಕ್ಷಣೆ ಪಡೆಯುತ್ತದೆ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೋವಿಡ್ ನಲ್ಲಿ 40,000 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಡಿರುವ ಆರೋಪದಿಂದ ಕಾಂಗ್ರೆಸ್ ರಕ್ಷಣೆ ಪಡೆಯುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಬಿಜೆಪಿಯಲ್ಲಿರುವ ರಾಜಕೀಯ ಭಿನ್ನಾಭಿಪ್ರಾಯಗಳಿಂದ ಇಂತಹ ಮಾತುಗಳು ಕೇಳಿ ಬರುತ್ತಿವೆ. ಇದೇ ಕಾಂಗ್ರೆಸ್ ಗೆ ಹೊಸ ಅಸ್ತ್ರವಾಗಿಬಿಟ್ಟಿದೆ. ಸಚಿವರಾದ ಪರಮೇಶ್ವರ್, ಎಂ.ಬಿ.ಪಾಟೀಲ್ ಅವರು ನೀಡುತ್ತಿರುವ ಹೇಳಿಕೆಗಳೇ ಇದಕ್ಕೆ ಸಾಕ್ಷಿ. ಇಷ್ಟು ದೊಡ್ಡ ಅಕ್ರಮ ನಡೆದಿದೆ ಎಂದರೆ ನಂಬಲಾಗುತ್ತಿಲ್ಲ ಎಂದರು.

ಬೆಂಗಳೂರಿನಲ್ಲಿರಾಜ್ಯಮಟ್ಟದ ಉದ್ಯೋಗ ಮೇಳ

 ಹಿಂದೆ ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಸ್ಪೀಕರ್ ರಮೇಶ ಕುಮಾರ್ ಭಾಷಣ ಮಾಡಿದ್ದರು. ಗಾಂಧಿ ಕುಟುಂಬ ಹೆಸರು ಹೇಳಿಕೊಂಡು ಮೂರು ತಲೆಮಾರಿಗೆ ಅಗುವಷ್ಟು ಮಾಡಿಕೊಂಡಿದ್ದೇವೆ. ಆ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕು ಅಂತ ಹೇಳಿದ್ದರು. ಕೋವಿಡ್ ಕಾಲದಲ್ಲಿ ಎಷ್ಟು ಹಣ ಬಿಡುಗಡೆ ಆಗಿದೆ ಎಂದು ಲೆಕ್ಕ ತೆಗೆದರೆ ಎಲ್ಲವೂ ಗೊತ್ತಾಗಿಬಿಡುತ್ತದೆ ಎಂದು ಅವರು ಹೇಳಿದರು.

ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಹಿರಿಯ ಮುಖಂಡ ಕೆ.ಟಿ.ಶಾಂತಕುಮಾರ್ ಉಪಸ್ಥಿರಿದ್ದರು.

Share this:

  • WhatsApp
  • Post
  • Tweet
  • Print
  • Email
bangaloreCongress gets defenseExplosive StatementFdi state falls 46%fight betweenFormer CMhd kumaraswamytunnel projecttwo ministersYatnal charges
Share 2 FacebookTwitterPinterestEmail
admin

previous post
ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ
next post
ರೈತರು, ಬರ ಪರಿಹಾರಕ್ಕೆ ದುಡ್ಡಿಲ್ಲ

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

1 comment

ಬಿಜೆಪಿ ಗೆಲುವಿನ ನಾಗಾಲೋಟ ತಡೆಯಲಸಾಧ್ಯ – KMS December 30, 2023 - 5:10 pm

[…] ರಾಜ್ಯ […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ