Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭಾ ಸ್ಪರ್ಧೆಗೆ ಬಿಜೆಪಿಯಲ್ಲಿ ಪೈಪೋಟಿ

by KM Shivaraju January 2, 2024
written by KM Shivaraju January 2, 2024 0 comments 1 minutes read
3FacebookTwitterPinterestEmail
385

ಕೇಂದ್ರ ಸಚಿವ ಸ್ಥಾನದ ಮೇಲೆ ಕಣ್ಣು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿ.ಪಿ ಯೋಗೇಶ್ವರ್ ಸೇರಿದಂತೆ ಹಲವು ಮುಖಂಡರು ದೆಹಲಿ ರಾಜಕಾರಣಕ್ಕೆ ತೆರಳಲು ಆಸಕ್ತಿ ತೋರುತ್ತಿದ್ದಾರೆ.

ಹೀನಾಯ ಸೋಲು ಕಂಡಿದ್ದ ನಾಯಕರು

ರಾಜ್ಯ ಬಿಜೆಪಿ ಆಡಳಿತದಲ್ಲಿ ಸತತವಾಗಿ ಅಧಿಕಾರ ಅನುಭವಿಸಿದ ಗೋವಿಂದ ಕಾರಜೋಳ್, ಶ್ರೀರಾಮುಲು ಅಲ್ಲದೆ, ಸಿ.ಟಿ. ರವಿ, ಡಾ.ಕೆ.ಸುಧಾಕರ್ ಸೇರಿದಂತೆ ಕೆಲವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದರು.

ಇವರೆಲ್ಲರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಅಲೆಯಲ್ಲಿ ಜಯಗಳಿಸಿ ಸಂಸದರಾಗುದಷ್ಟೇ ಅಲ್ಲದೆ, ಸಚಿವ ಸ್ಥಾನವೂ ಧಕ್ಕಬಹುದೆಂಬ ಆಶಾಭಾವನೆಯಲ್ಲಿದ್ದಾರೆ.

ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಕೇಂದ್ರ ರಾಜಕಾರಣಕ್ಕೆ ತೆರಳುವ ಉತ್ಸಾಹದಲ್ಲಿದ್ದಾರೆ.

ಹಿರಿತನ, ಜಾತಿ ಆಧಾರ

ಸಂಸದರಾದರೆ ತಮ್ಮ ಹಿರಿತನ, ಜಾತಿ ಆಧಾರದ ಮೇಲೆ ತಮಗೆ ಕೇಂದ್ರದಲ್ಲಿ ಅಧಿಕಾರ ದಕ್ಕಬಹುದು ಎಂಬ ಆಲೋಚನೆಯಲ್ಲಿದ್ದಾರೆ.

ಇನ್ನು ಗೋವಿಂದ ಕಾರಜೋಳ್ ವಿಜಯಪುರ ಮೀಸಲು ಕ್ಷೇತ್ರದಿಂದ, ಶ್ರೀರಾಮುಲು ಬಳ್ಳಾರಿ ಮೀಸಲು, ಸಿ.ಟಿ. ರವಿ ಬೆಂಗಳೂರು ಉತ್ತರ ಇಲ್ಲವೆ ಉಡುಪಿ-ಚಿಕ್ಕಮಗಳೂರು, ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಇಲ್ಲವೇ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಬೆಂಗಳೂರು ಗ್ರಾಮಾಂತರದಿಂದ ಕಣಕ್ಕಿಳಿದು ಸಂಸದರಾಗಿ ಒಕ್ಕಲಿಗ ಕೋಟಾದ ಮೇಲೆ ಸಚಿವರಾಗಬಹುದೆಂಬ ಲೆಕ್ಕಾಚಾರದಲ್ಲಿದ್ದಾರೆ.

ಅಧಿಕಾರ ಪಡೆಯುವ ಹಂಬಲ

ಇದೇ ರೀತಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಪ್ರಭಾವೀ ನಾಯಕರುಗಳು ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ಅಧಿಕಾರ ಪಡೆಯುವ ಹಂಬಲದಲ್ಲಿದ್ದಾರೆ, ಅಷ್ಟೇ ಅಲ್ಲ, ಟಿಕೆಟ್ ಪಡೆಯಲು ತಮ್ಮ ಮುಖಂಡರುಗಳ ಮೂಲಕ ಪ್ರಭಾವ ಬೀರುತ್ತಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವು ದಿನಗಳಲ್ಲೇ ಹಲವು ಕಾರಣಗಳಿಗೆ ತಮ್ಮ ವರ್ಚಸ್ಸನ್ನು ಕುಂದಿಸಿಕೊಂಡಿದೆ.

ಕುಂದುತ್ತಿರುವ ಗ್ಯಾರಂಟಿ ವರ್ಚಸ್ಸು

ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನದಿಂದ ಸರ್ಕಾರಕ್ಕೆ ಪ್ರಾರಂಭದಲ್ಲಿ ಇದ್ದ ವರ್ಚಸ್ಸು ನಂತರದ ಬೆಳವಣಿಗೆಗಳಲ್ಲಿ ಕುಂದುತ್ತಿದೆ ಎಂಬ ಭಾವನೆ ಬಿಜೆಪಿಯಲ್ಲಿದೆ.

ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಟಾನಕ್ಕೆ ಮುಂದಾದುದು, ಲಿಂಗಾಯತ ಹಾಗೂ ಒಕ್ಕಲಿಗರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದೆ.

ಎರಡೂ ಸಮುದಾಯಗಳು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು, ಈ ಕಾರಣಕ್ಕೆ ವಿರೋಧವಾಗುವುದರ ಜೊತೆಗೆ ಅತಿಯಾಗಿ ಅಲ್ಪಸಂಖ್ಯಾತರನ್ನು ಓಲೈಸುತ್ತಿರುವುದು ಉಳಿದ ಸಮಾಜಗಳವರಿಗೆ ಕಿರಿಕಿರಿ ಉಂಟು ಮಾಡಿದೆ.

ಮತದಾರರಲ್ಲಿ ಬೇಸರ

ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಗುಂಗಿನಲ್ಲಿ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ಕೊಡುತ್ತಿಲ್ಲ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುತ್ತಿಲ್ಲ, ಇದು ಮತದಾರರಲ್ಲಿ ಬೇಸರ ಮೂಡಿಸಿದೆ.

ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಗಾವರ್ಗಿ ದಂಧೆಯೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಇದೆಲ್ಲದಕ್ಕೂ ಮಿಗಿಲಾಗಿ ಮತ್ತೆ ರಾಷ್ಟ್ರದಲ್ಲಿ ಸದೃಢ ಸರ್ಕಾರ ತರಲು ನರೇಂದ್ರ ಮೋದಿ ಅವರನ್ನೇ ಬೆಂಬಲಿಸಬೇಕೆಂಬ ಹುಮ್ಮಸ್ಸು ಮತದಾರರಲ್ಲಿ ಕಂಡುಬರುತ್ತಿದೆ.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅಧಿಕಾರ ಇಲ್ಲದೆ ಮನೆಯಲ್ಲಿರುವ ಬಿಜೆಪಿ ನಾಯಕರು ಲೋಕಸಭಾ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcabinet berthcompitition for ticketdelhiserching for placesstate bjp leaders to conest to lokasabha
3 FacebookTwitterPinterestEmail
KM Shivaraju

previous post
ಕೋವಿಡ್ ರೂಪಾಂತರಿ: ಮುಂಜಾಗ್ರತೆ ವಹಿಸಿ
next post
123.42 ಕೋಟಿ  ರೂಪಾಯಿಯ  852 ಟನ್ ಮಾರ್ಜಕ ಉತ್ಪಾದನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ