Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಗಾದಿಗೆ ಡಿಕೆಶಿ ರಣತಂತ್ರ

by KM Shivaraju January 3, 2024
written by KM Shivaraju January 3, 2024 0 comments 2 minutes read
2FacebookTwitterPinterestEmail
389


ಅಡ್ಡಿಯಾಗುವ ಸಚಿವ, ಶಾಸಕರು ಲೋಕಸಭಾ ಕಣಕ್ಕೆ

ಬೆಂಗಳೂರು:ಅಧಿಕಾರದ ಗದ್ದುಗೆ ಹಿಡಿಯಲು ಅಡ್ಡಿಯಾಗುತ್ತಾರೆನ್ನುವ ಸಚಿವ, ಶಾಸಕರನ್ನು ಲೋಕಸಭಾ ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ.

ಮುಂಬರುವ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕರ್ನಾಟಕದ 28 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ತಂತ್ರಗಾರಿಕೆ ಸೇರಿದಂತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರಿಗೆ ವರಿಷ್ಠರು ಬುಲಾವ್ ಮಾಡಿದ್ದಾರೆ.

ನಾಳೆ ವರಿಷ್ಠರಿಗೆ ಪಟ್ಟಿ ಸಲ್ಲಿಕೆ

ವರಿಷ್ಠರ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿರುವ ಉಭಯ ನಾಯಕರು ನಾಳೆ 28 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಘಟಕ, ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಹಾಗೂ ಚುನಾವಣಾ ಪೂರ್ವ ಸಮೀಕ್ಷೆ ಆಧಾರದ ಮೇಲೆ ಪ್ರತಿ ಕ್ಷೇತ್ರಕ್ಕೆ ಸಂಭವನೀಯ ಮೂರು ಹೆಸರುಗಳನ್ನು ಪಟ್ಟಿ ಮಾಡಿದ್ದು ಅದನ್ನು ನಾಳೆ ವರಿಷ್ಠರಿಗೆ ಸಲ್ಲಿಸಿ ಚರ್ಚೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಸಿದ್ಧಪಡಿಸಿರುವ ಪಟ್ಟಿಯಲ್ಲಿ 20 ಕ್ಷೇತ್ರಗಳಿಗೆ ಒಮ್ಮತ ಮತ್ತು ಸಮ್ಮತದ ಅಭ್ಯರ್ಥಿಗಳಿದ್ದರೆ, ಉಳಿದ 8 ಕ್ಷೇತ್ರಗಳಿಗೆ ಪ್ರತ್ಯೇಕ ಪಟ್ಟಿಯನ್ನು ಇಡುತ್ತಿದ್ದಾರೆ.

ಶಿವಕುಮಾರ್ ಸಿದ್ಧತೆ

ಶಿವಕುಮಾರ್ ಅವರು, ಸಚಿವರು ಮತ್ತು ಶಾಸಕರನ್ನು ನಿರ್ದಿಷ್ಟ ಕ್ಷೇತ್ರಗಳಲ್ಲಿ ಕಣಕ್ಕಿಳಿಸಿದರೆ ಗೆಲುವು ಸಾಧ್ಯ ಎಂಬ ಅಂಕಿ-ಅಂಶಗಳನ್ನು ಮುಂದಿಟ್ಟುಕೊಂಡು ವರಿಷ್ಠರ ಮುಂದೆ ತಮ್ಮ ವಾದ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ ಅಲ್ಲದೆ, ಇತರ ಮುಖಂಡರು ಭಾಗವಹಿಸಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರತಿ ಕ್ಷೇತ್ರದ ಬಗ್ಗೆ ಮಾಹಿತಿ ಮತ್ತು ಅಭ್ಯರ್ಥಿ ಗೆಲುವಿಗೆ ಯಾವ ಮಾನದಂಡಗಳನ್ನು ಅನುಸರಿಸಬೇಕು ಎಂಬ ಬಗ್ಗೆ ವಿವರಿಸಲಿದ್ದಾರೆ.

ಅಧಿಕಾರ ಹಂಚಿಕೆ ಸೂತ್ರದಂತೆ ಸಿದ್ದರಾಮಯ್ಯ ಅವರು ಎರಡು ವರ್ಷಗಳ ಅವಧಿ ಪೂರ್ಣಗೊಳಿಸಿದ ನಂತರ ಉಪಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡಬೇಕು.


ಮುಖ್ಯಮಂತ್ರಿ ಆಪ್ತರ ಖ್ಯಾತೆ

ಅಧಿಕಾರ ಹಸ್ತಾಂತರಕ್ಕೆ ಸಮಯ ಇನ್ನೂ ದೂರವಿದ್ದರೂ ಮುಖ್ಯಮಂತ್ರಿ ಅವರ ಆಪ್ತರು ಈಗಿನಿಂದಲೇ ಖ್ಯಾತೆ ತೆಗೆದು ಉಪಮುಖ್ಯಮಂತ್ರಿ ಅವರಿಗೆ ದೊರೆಯಬಹುದಾದ ಬಡ್ತಿಗೆ ಅಡ್ಡಗಾಲು ಹಾಕಿದ್ದಾರೆ.

ತಮಗೆ ಅಧಿಕಾರ ತಪ್ಪಿಸಲು ಸಂಚು ನಡೆಸುತ್ತಿರುವವರನ್ನೇ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸಿದರೆ ತಮ್ಮ ಮುಂದಿನ ಹಾದಿ ಸುಗಮ ಎಂಬ ಉದ್ದೇಶದಿಂದ ಶಿವಕುಮಾರ್ ಅವರು, ಬೆಳಗಾವಿ, ತುಮಕೂರು, ಕೊಪ್ಪಳ, ಬಾಗಲಕೋಟೆ, ರಾಯಚೂರು, ಬೆಂಗಳೂರು ಕೇಂದ್ರ ಸೇರಿದಂತೆ ಎಂಟು ಕ್ಷೇತ್ರಗಳಲ್ಲಿ ಸಚಿವರು, ಶಾಸಕರನ್ನು ಕಣಕ್ಕಿಳಿಸಲು ತಂತ್ರಗಾರಿಕೆ ರೂಪಿಸಿ ವರಿಷ್ಠರ ಮೂಲಕ ಒತ್ತಡ ತರುವ ಯತ್ನ ಮಾಡಿದ್ದಾರೆ.

ಸಿದ್ದರಾಮಯ್ಯ ವಿರೋಧ

ಶಿವಕುಮಾರ್ ಅವರ ಈ ತಂತ್ರಕ್ಕೆ ಸಿದ್ದರಾಮಯ್ಯ ವಿರೋಧವಿದ್ದು, ಅಷ್ಟೇ ಅಲ್ಲದೆ, ತಮ್ಮ ಬೆಂಬಲಿಗ ಶಾಸಕರನ್ನು ಕಣಕ್ಕಿಳಿಸಲು ಆಸಕ್ತಿ ತೋರುತ್ತಿಲ್ಲ.

ಉಭಯ ನಾಯಕರು ನಾಳೆ ತಮ್ಮ ವಾದವನ್ನು ವರಿಷ್ಠರ ಮುಂದೆ ಮಂಡಿಸಲಿದ್ದಾರೆ, ಅಂತಿಮ ನಿರ್ಧಾರವನ್ನು ಎಐಸಿಸಿ ತೆಗೆದುಕೊಳ್ಳಬೇಕಿದೆ.

ರಾಜ್ಯ ನಾಯಕರು ನೀಡಿರುವ ಸಂಭವನೀಯ ಪಟ್ಟಿಯನ್ನು ಮುಂದಿಟ್ಟುಕೊಂಡು ಎಐಸಿಸಿ ಮತ್ತೆ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ ಈ ತಿಂಗಳ ಮೂರನೇ ವಾರದ ವೇಳೆಗೆ ರಾಜ್ಯದ 15 ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಹೆಸರು ಪ್ರಕಟಿಸಲಿದೆ.

ರಾಷ್ಟ್ರದ 252 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಎಐಸಿಸಿ ಪ್ರಕಟಿಸಲಿದ್ದು ಆ ಪಟ್ಟಿಯಲ್ಲಿ ಕರ್ನಾಟಕದ ಈ ಕ್ಷೇತ್ರಗಳು ಸೇರಿರಲಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
15 candidates name may anounceaicccm siddaramaiahcongres candidate s listdk shivakumar
2 FacebookTwitterPinterestEmail
KM Shivaraju

previous post
ಶಾಲಾ ಮಕ್ಕಳ ಪ್ರಾಣಕ್ಕೆ ಕುತ್ತು
next post
ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ