Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

14,497 ಉದ್ಯೋಗ ಸೃಷ್ಟಿ

by admin January 12, 2024
written by admin January 12, 2024 0 comments 1 minutes read
4FacebookTwitterPinterestEmail
406
₹3,935 ಕೋಟಿ ಹೂಡಿಕೆಯ 73 ಕೈಗಾರಿಕಾ ಯೋಜನೆಗಳಿಗೆ ಅಸ್ತು

ಬೆಂಗಳೂರು: ರಾಜ್ಯದಲ್ಲಿ 3,935 ಕೋಟಿ ರೂ.ಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ‘ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ.

ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ’ ಎಂದರು.

ಈ ಕಂಪನಿಗಳು ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿದ್ದು, ಒಟ್ಟು 9,200 ಉದ್ಯೋಗಗಳನ್ನು ಸೃಷ್ಟಿಸಲಿವೆ.

ಮೇಲ್ಕಂಡ ಉದ್ದಿಮೆಗಳು ಕನಿಷ್ಠ 96 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ.

ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ, ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಉದ್ಯಮಸ್ನೇಹಿಯಾಗಿದ್ದು, ಹೂಡಿಕೆದಾರರಿಗೆ ಸುಗಮ ಒಪ್ಪಿಗೆ ಸಿಗುವಂತೆ ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದಿದೆ.

ಹೂಡಿಕೆದಾರರನ್ನು ಉತ್ತೇಜಿಸವಂತಹ ಹಲವು ಅಂಶಗಳನ್ನು 2020-25ರ ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದ್ದು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ಕೊಡಲಾಗಿದೆ. ಇದರಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೂ ಗಮನ ಹರಿಸಲಾಗಿದ್ದು, ರಾಜ್ಯದ ಎಲ್ಲ ಭಾಗಗಳಲ್ಲೂ ಹೂಡಿಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಪಾಟೀಲ ವಿವರಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
000 jobs900 croreapproves 73 proposalsMinister-led clearance committeeOnus equitable development stateprojects to create 15worth over ₹3
4 FacebookTwitterPinterestEmail
admin

previous post
ಸಿಂಹಕ್ಕೆ ಆನೆ ಬಲ
next post
ವಚನ ಭ್ರಷ್ಟರಲ್ಲ; ನುಡಿದಂತೆ ನಡೆದಿದ್ದೇವೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕನ್ನಡಿಗರಿಗೆ ಕನ್ನಡದಲ್ಲೇ ರೈಲ್ವೆ ನೇಮಕಾತಿ ಪರೀಕ್ಷೆ

April 9, 2026

ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

April 4, 2026

ಏಪ್ರಿಲ್ 1ರಿಂದ ದೇಶಾದ್ಯಂತ ಐತಿಹಾಸಿಕ ಜನಗಣತಿ

March 30, 2026

ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಇಲ್ಲ

March 27, 2026

ಎಲ್‌ಪಿಜಿ ಪೂರೈಸಿ: ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ

March 20, 2026

ಸ್ಪೀಕರ್ ಖಾದರ್ ಕೋಪಕ್ಕೆ 8 ಅಧಿಕಾರಿಗಳಿಗೆ ನೋಟಿಸ್

March 17, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ