Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ವಿಧಾನಸೌಧ ಮೆಟ್ಟಿಲ ಮೇಲೆ ಜನತಾದರ್ಶನ

by admin January 17, 2024
written by admin January 17, 2024 2 comments 2 minutes read
3FacebookTwitterPinterestEmail
446


ಫೆಬ್ರವರಿ 8ರ ಇಡೀ ದಿನ ಸಾರ್ವಜನಿಕರ ಅಹವಾಲು ಆಲಿಕೆ


ಬೆಂಗಳೂರು:ಜನರ ಸಮಸ್ಯೆ ಆಲಿಸಿ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಇದುವರೆಗೂ ಅಧಿಕಾರದಲ್ಲಿದ್ದವರು, ತಮ್ಮ ಗೃಹ ಕಚೇರಿ ಕೃಷ್ಣಾ ಇಲ್ಲವೇ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜನತಾದರ್ಶನ ನಡೆಸುತ್ತಿದ್ದರು.

ಜನರ ಮನೆ ಬಾಗಿಲಿಗೆ ಸರ್ಕಾರ

ಜನರ ಮನೆ ಬಾಗಿಲಿಗೆ ಸರ್ಕಾರ ಎಂಬುದನ್ನು ಸಾಭೀತುಪಡಿಸುವ ಉದ್ದೇಶದಿಂದ ಈ ಬಾರಿ ಮುಖ್ಯಮಂತ್ರಿ ಅವರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜನತಾದರ್ಶನ ನಡೆಸುತ್ತಿದ್ದಾರೆ.

ಫೆಬ್ರವರಿ 8ರಂದು ಇಡೀ ದಿನ ಜನತಾದರ್ಶನ ನಡೆಯಲಿದ್ದು, ಅಂದು ಸರ್ಕಾರದ ಮುಖ್ಯಕಾಯದರ್ಶಿ ಸೇರಿದಂತೆ ಇಲಾಖೆಯ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿರಬೇಕು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಅವರು, ಹಿಂದಿನ ಜನತಾದರ್ಶನ ಕಾರ್ಯಕ್ರಮಗಳಲ್ಲಿ ಆಗಿರುವ ಪ್ರಗತಿ ಸೇರಿದಂತೆ ಉಳಿದ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲು ಜನವರಿ 31ರಂದು ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತ ಇಲಾಖಾ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಅಧಿಕಾರಿಗಳಿಗೆ ಐದು ಪ್ರಶ್ನಾವಳಿ

ಸಭೆಗೆ ಬರುವುದಕ್ಕೂ ಮುನ್ನ ತಮ್ಮ ಕಚೇರಿಯಿಂದ ಕಳುಹಿಸಿರುವ ಐದು ಪ್ರಶ್ನಾವಳಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಕಡತಗಳನ್ನು ಕಡ್ಡಾಯವಾಗಿ ತರುವಂತೆ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ನಂತರ ನೀವು ಎಷ್ಟು ಬಾರಿ ಆ ಜಿಲ್ಲೆಗೆ ತೆರಳಿದ್ದೀರಿ, ಜಿಲ್ಲೆಯಲ್ಲಿನ ಪ್ರಗತಿ ಪರಿಶೀಲನೆಗೆ ಎಷ್ಟು ಕಚೇರಿ ಮತ್ತು ಸಂಸ್ಥೆಗಳಿಗೆ ಭೇಟಿ ನೀಡಿದ್ದೀರಿ, ಜಿಲ್ಲೆಯಲ್ಲಿ ಯಾವ ಐದು ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ, ಯಾವ ಐದು ಇಲಾಖೆಗಳು ಕಳಪೆ ಕೆಲಸ ಮಾಡಿವೆ ಎಂಬ ಮಾಹಿತಿ ನೀಡಿ.

ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ

ಸರ್ಕಾರದ ಐದು ಪ್ರತಿಷ್ಠಿತ ಗ್ಯಾರಂಟಿ ಯೋಜನೆಗಳು ಯಾವ ಮಟ್ಟಕ್ಕೆ ಜನರನ್ನು ತಲುಪಿವೆ, ಇದರಿಂದ ಬಡವರಿಗೆ ಯಾವ ರೀತಿ ಸಹಕಾರಿಯಾಗಿದೆ, ಎಲ್ಲಿ ಇನ್ನೂ ಯೋಜನೆಗಳು ತಲುಪಿಲ್ಲ, ಏತಕ್ಕೆ ಎಂಬ ಮಾಹಿತಿ ನೀಡುವಂತೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಿಗೆ ಪಂಚ ಪ್ರಶ್ನೆಗಳನ್ನು ಇಟ್ಟಿದ್ದಾರೆ.

ಇದೆಲ್ಲದಕ್ಕೂ ಮಿಗಿಲಾಗಿ ಜನರ ಸಮಸ್ಯೆಯನ್ನು ಆಲಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ನಿಮ್ಮ ಬಳಿಗೆ ಬಂದ ಪತ್ರಗಳಿಗೆ ಯಾವ ರೀತಿ ಸ್ಪಂದನೆ ದೊರೆತಿದೆ ಎಂಬ ಮಾಹಿತಿ ಇಟ್ಟುಕೊಂಡು ಸಭೆಗೆ ಬರುವಂತೆ ಮುಖ್ಯಮಂತ್ರಿ ಅವರು ಆದೇಶಿಸಿದ್ದಾರೆ.

ಎರಡನೇ ಬೃಹತ್ ಜನತಾದರ್ಶನ

ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ನಂತರ ಎರಡನೇ ಬಾರಿಗೆ ಬೃಹತ್ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಸಾರ್ವಜನಿಕರು ನೀಡುವ ಅಹವಾಲುಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಲು ಹತ್ತು ಹಲವು ಕಾರ್ಯಕ್ರಮಗಳನ್ನೂ ರೂಪಿಸಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದ ಇಡೀ ಆವರಣ ಸಾರ್ವಜನಿಕರ ಪ್ರವೇಶಕ್ಕೆ ಅಂದು ಮುಕ್ತವಾಗಿರಲಿದೆ.

ದೇವೇಗೌಡರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜನತಾದರ್ಶನವನ್ನು ಜಿಲ್ಲಾ ಮಟ್ಟಗಳಲ್ಲಿ ನಡೆಸಿದರು, ಅದು ಭಾರೀ ಯಶಸ್ಸು ಕಂಡಿತ್ತು, ಶೇಕಡ 90ರಷ್ಟು ಪರಿಹಾರವನ್ನೂ ಕಂಡುಕೊಳ್ಳಲಾಗಿತ್ತು. ತದನಂತರ ಬಂದ ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾಕ್ಕೆ ಸೀಮಿತವಾಗಿ ಜನತಾದರ್ಶನ ನಡೆಸಿದರು.

22 ಸಾವಿರ ಕೋಟಿ ರೂ. ಪ್ರಸ್ತಾವನೆಗೆ ಅಂಕಿತ

ಒಂದು ಹೆಜ್ಜೆ ಮುಂದೆ ಹೋದ ಕುಮಾರಸ್ವಾಮಿ ಗ್ರಾಮೀಣ ಭಾಗದಲ್ಲಿ ತಂಗಿ ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದರು, ಅಲ್ಲದೆ, ರಾಜಧಾನಿಯಲ್ಲಿ ತಡರಾತ್ರಿವರೆಗೂ ಜನತಾದರ್ಶನ ನಡೆಸಿದ್ದುಂಟು.

ಹಾಲಿ ಮುಖ್ಯಮಂತ್ರಿ ಅವರು ತಮ್ಮ ಮೊದಲ ಜನತಾದರ್ಶನಕ್ಕೆ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಅರ್ಜಿ ಹಿಡಿದುಬಂದ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚು ಸ್ಥಳಾವಕಾಶ ಇರುವ ವಿಧಾನಸೌಧದ ಮೆಟ್ಟಿಲ ಮೇಲೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcongressfeb 8fight for cm postjanata darshanavidhana soudha grand stepvidhana soudha open to public on 8th februvery
3 FacebookTwitterPinterestEmail
admin

previous post
22 ಸಾವಿರ ಕೋಟಿ ರೂ. ಪ್ರಸ್ತಾವನೆಗೆ ಅಂಕಿತ
next post
ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ