Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗಶಿಕ್ಷಣ

ನೇಮಕಾತಿ ಆದೇಶ ಪತ್ರ ನೀಡಿದ ರಾಮಲಿಂಗಾರೆಡ್ಡಿ

by admin January 17, 2024
written by admin January 17, 2024 0 comments 2 minutes read
4FacebookTwitterPinterestEmail
428
ಕೆಎಸ್ಆರ್ ಟಿಸಿಯ ತಾಂತ್ರಿಕ ಸಹಾಯಕ ಹುದ್ದೆ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ನೂತನವಾಗಿ ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ವಿತರಿಸಿದರು.

ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ನೇಮಕಾತಿಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಿ, ಅಭ್ಯರ್ಥಿಗಳಿಗೆ ಅವರಿಚ್ಚೆಯಂತೆಯೆ ಘಟಕಗಳನ್ನು ಆರಿಸಿಕೊಳ್ಳಲು ಗಣಕೀಕರಣದ ಮೂಲಕ ಅವಕಾಶ ಕಲ್ಪಿಸಲಾಗಿದೆ. ನೇಮಕಗೊಂಡಿರುವ ಸಿಬ್ಬಂದಿಗಳು ಶ್ರಮವಹಿಸಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ನಿಗಮಕ್ಕೆ ಕೀರ್ತಿ ತರುವಂತೆ ತಿಳಿಸಿದರು.

ಪ್ರತಿನಿತ್ಯ 32.34 ಲಕ್ಷ ಪ್ರಯಾಣಿಕರ ಪ್ರಯಾಣ

ನಿಗಮದ ಪ್ರಸಕ್ತ ಕಾರ್ಯಾಚರಣೆಯ ಅಂಕಿ-ಅಂಶಗಳ ವಿವರವು ಕೆಳಗಿನಂತಿವೆ.
ವಿಭಾಗಗಳು – 17, ಘಟಕಗಳು – 83, ಬಸ್ಸು ನಿಲ್ದಾಣಗಳು – 175, ಸಾರಿಗೆ ಸೇವೆಗಳು – 7640, ಒಟ್ಟು ಬಸ್ಸುಗಳು – 8358, ಪ್ರತಿನಿತ್ಯ ಕಾರ್ಯಾಚರಿಸಿರುವ ಕಿ.ಮೀ – 27.84 ಲಕ್ಷ ಕಿ.ಮೀ. ಪ್ರತಿನಿತ್ಯ ಪ್ರಯಾಣಿಸಿರುವ ಅಂದಾಜು ಒಟ್ಟು ಪ್ರಯಾಣಿಕರ ಸಂಖ್ಯೆ – 32.34 ಲಕ್ಷ. ಶಕ್ತಿ ಯೋಜನೆ- ಪ್ರಯಾಣಿಸುವ ಮಹಿಳೆಯರ ಸಂಖ್ಯೆ -18.40 ಲಕ್ಷ.‌ ಶಕ್ತಿ ಯೋಜನೆ- ಪ್ರಯಾಣಿಸುವ ಮಹಿಳೆಯರ ಟಿಕೇಟ್ ಮೊತ್ತ- 5.48 ಕೋಟಿ ರೂ. ಒಟ್ಟು ಸಿಬ್ಬಂದಿ – 33932.

ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ

ಕರಾರಸಾ ನಿಗಮದಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಕುರಿತು.
ನಿಗಮದಲ್ಲಿ ಪ್ರಸ್ತುತ 4588 ತಾಂತ್ರಿಕ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 353 ಮಹಿಳಾ ತಾಂತ್ರಿಕ ಸಿಬ್ಬಂದಿಗಳಾಗಿರುತ್ತಾರೆ. ಕೋವಿಡ್-19ರ ಕಾರಣ ಸ್ಥಗಿತಗೊಂಡಿದ್ದ 726 ತಾಂತ್ರಿಕ ಸಹಾಯಕ ಹುದ್ದೆಗಳಲ್ಲಿ 300 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಸುಮಾರು 8 ವರ್ಷಗಳ ನಂತರ ಅಂದರೆ ದಿನಾಂಕ: 13-10-2023 ರಂದು ಅನುಮತಿ ನೀಡಿರುತ್ತದೆ.

554 ಅಭ್ಯರ್ಥಿಗಳು ಅರ್ಹರು

ನಿಗಮದ ಪದವೃಂದ ಮತ್ತು ನೇಮಕಾತಿ ನಿಯಮಾವಳಿಯನ್ವಯ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಕನಿಷ್ಟ ಶೇ. 30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳು ಮಾತ್ರ ಮುಂದಿನ ಆಯ್ಕೆ ಪ್ರಕ್ರಿಯೆಗೆ ಅರ್ಹರಿದ್ದು, ಅದರಂತೆ 554 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಸರ್ಕಾರವು ಅನುಮತಿ ನೀಡಿದ 300 ಹುದ್ದೆಗಳ ನೇಮಕಾತಿಗೆ ನಿಗಮದ ವಿಶೇಷ ನಿರ್ದೇಶಕ ಮಂಡಳಿಯ ಅನುಮೋದನೆ ಪಡೆದು ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ವಿಂಗಡಣೆ ಮಾಡಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.

264 ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಅರ್ಹರಾದ ಅಭ್ಯರ್ಥಿಗಳಿಗೆ ಮೂಲ ದಾಖಲಾತಿ ಮತ್ತು ದೇಹದಾರ್ಢ್ಯತೆ ಪರಿಶೀಲನೆಯನ್ನು ದಿನಾಂಕ: 26-12-2023 ರಿಂದ 28-12-2023 ರವರೆಗೆ ಹಾಗೂ ಹೆಚ್ಚುವರಿಯಾಗಿ (ಗೈರುಹಾಜರಾದ ಅಭ್ಯರ್ಥಿಗಳಿಗೆ) ದಿನಾಂಕ: 3-1-2024 ರಂದು ನಡೆಸಲಾಯಿತು.

ವಿಧಾನಸೌಧ ಮೆಟ್ಟಿಲ ಮೇಲೆ ಜನತಾದರ್ಶನ

ದಿನಾಂಕ: 5-1-2024 ರಂದು 262 ಆಯ್ಕೆಯಾದ ಅಭ್ಯರ್ಥಿಗಳ ಸಂಭವನೀಯ ಆಯ್ಕೆಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಸಲ್ಲಿಸಿಲು 7 ದಿನಗಳ ಕಾಲಾವಕಾಶ ನೀಡಲಾಗಿರುತ್ತದೆ.

ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅರ್ಹ ಆಕ್ಷೇಪಣೆಗಳನ್ನು ಪುರಸ್ಕರಿಸಿ ಅಂತಿಮವಾಗಿ ದಿನಾಂಕ: 13-1-2024 ರಂದು 264 ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿರುತ್ತದೆ.

22 ಸಾವಿರ ಕೋಟಿ ರೂ. ಪ್ರಸ್ತಾವನೆಗೆ ಅಂಕಿತ

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದಿನಾಂಕ: 17.01.2024 ರಂದು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇರವಾಗಿ ಅವರ ಆಯ್ಕೆಯ ಘಟಕಗಳಿಗೆ ನಿಯೋಜನೆ ಮಾಡಲಾಗಿದೆ.

ತರಬೇತಿ ಭತ್ಯೆಯನ್ನು 9,100 ರೂ. ರಿಂದ 14,000 ರೂ.ಗೆ ಏರಿಕೆ

ಇದೇ ಪ್ರಪ್ರಥಮ ಬಾರಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗಣಕೀಕೃತ ಕೌನ್ಸಿಲಿಂಗ್ ಮೂಲಕ ನೇರವಾಗಿ ಘಟಕಗಳನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಿ ಕೊಟ್ಟು ಸ್ಥಳ ನಿಯೋಜನೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಲಾಗಿದೆ. ತಾಂತ್ರಿಕ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು 3 ತಿಂಗಳ ಒಳಗಾಗಿಯೇ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ.

2000 ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅಧಿಸೂಚನೆ ಸಂದರ್ಭದಲ್ಲಿ ನಿಗಧಿಪಡಿಸಲಾಗಿದ್ದ 2 ವರ್ಷಗಳ ತರಬೇತಿ ಅವಧಿಯನ್ನು 1 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ಮುಂದುವರೆದು, ಮಾಹೆಯಾನ ನಿಗಧಿಪಡಿಸಲಾಗಿದ್ದ ತರಬೇತಿ ಭತ್ಯೆಯನ್ನು 9,100 ರೂ. ರಿಂದ 14,000 ರೂ.ಗೆ ಏರಿಕೆ ಮಾಡಲಾಗಿದೆ.

2024ರಲ್ಲಿ  ವಯೋ ನಿವೃತ್ತಿ ಯಾರಾಗುತ್ತಾರೆ ಗೊತ್ತೆ?

ನಿಗಮವು 2000 ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿಗಾಗಿ ಸದ್ಯದಲ್ಲಿಯೇ ಚಾಲನಾ ಪರೀಕ್ಷೆಗೆ ಕ್ರಮ ಜರುಗಿಸಲಿದೆ.
ಈ ಸಮಾರಂಭದಲ್ಲಿ ಕ ರಾ ರ ಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರು (ಸಿಬ್ಬಂದಿ ಮಾತ್ತು ಜಾಗೃತೆ ಡಾ. ನಂದಿನಿ ದೇವಿ. ಕೆ, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4 FacebookTwitterPinterestEmail
admin

previous post
ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ
next post
ಸಂಸತ್ತಿಗೆ ಬನ್ನಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಕೌನ್ಸಿಲಿಂಗ್ ವರ್ಗಾವಣೆ ಭ್ರಷ್ಟಾಚಾರ ತಡೆಗೆ ಅಸ್ತ್ರ

February 21, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ