Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ರಾಮನಿಗೂ ಕರ್ನಾಟಕಕ್ಕೂ ಯುಗ-ಯುಗಾಂತರ ಸಂಬಂಧ

by admin January 20, 2024
written by admin January 20, 2024 2 comments 2 minutes read
2FacebookTwitterPinterestEmail
347

ಮಂದಿರ ನಿರ್ಮಾಣದಲ್ಲಿ ಕನ್ನಡಿಗರ ಮಹತ್ತರ ಕೊಡುಗೆ

ಬೆಂಗಳೂರು: ರಾಮ ಹಾಗೂ ಕರ್ನಾಟಕದ ನಡುವೆ ಯುಗ-ಯುಗಾಂತರಗಳ ಸಂಬಂಧ ಇರುವುದು ಸೋಜಿಗವಾದರೂ ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಅಯೋಧ್ಯೆಯ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯದಲ್ಲಿ ಕನ್ನಡಿಗರು ಹೆಮ್ಮೆ ಪಡುವಂತಹ ಕೊಡುಗೆಯನ್ನು ಕರ್ನಾಟಕ ನೀಡಿದೆ.

ವಿಶ್ವವೇ ಕಾತುರದಿಂದ ಕಾಯುತ್ತಿದೆ

ನಾಡಿದ್ದು ಸೋಮವಾರ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯನ್ನು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ.

ಪ್ರಭು ಶ್ರೀರಾಮಚಂದ್ರ ಮತ್ತು ಕರ್ನಾಟಕದ ಸಂಬಂಧವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದಿಲ್ಲಿ ಎಳೆ-ಎಳೆಯಾಗಿ ಬಿಚ್ಚಿಟ್ಟರು.

ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಸರ್ಕಾರವೇ!

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಾಯಣ ಯುಗದಿಂದ ಈ ಸಂಬಂಧ ಮುಂದುವರಿದಿದ್ದು, ಸೀತಾಮಾತೆಯ ಅಪಹರಣದ ನಂತರ ಶ್ರೀರಾಮ, ಲಕ್ಷ್ಮಣನ ಜೊತೆ ಕಿಷ್ಕಿಂಧೆ (ಇಂದಿನ ಹಂಪಿ)ಗೆ ಪ್ರಯಾಣ ಬೆಳೆಸಿದ ಕುರುಹುಗಳಿವೆ ಎಂದು ವಿವರಿಸಿದರು.

ಕರ್ನಾಟಕ ಹನುಮಂತನ ಜನ್ಮಭೂಮಿ

ಶ್ರೀರಾಮ ವಾನರ ಸೇನೆಯನ್ನು ಒಗ್ಗೂಡಿಸಿದ್ದು ಕರ್ನಾಟಕದಲ್ಲೇ, ಕೊಪ್ಪಳದ ಅಂಜನಾದ್ರಿ ಬೆಟ್ಟ ಹನುಮಂತನ ಜನ್ಮಭೂಮಿ. ತೊರವೆ ರಾಮಾಯಣ ಮೇರುಕೃತಿಯಾಗಿದೆ. ಕರ್ನಾಟಕದ ಪೇಜಾವರ ಶ್ರೀಗಳು ಟ್ರಸ್ಟಿ ಆಗಿದ್ದು, ರಾಮಮಂದಿರದ ಉಸ್ತುವಾರಿ ನೋಡಿಕೊಳ್ಳುತ್ತಿರುವವರು ಕನ್ನಡಿಗರೇ ಆಗಿದ್ದಾರೆ.

ಕರ್ನಾಟಕದ ಸಾದರಹಳ್ಳಿಯಿಂದ 800 ಟನ್ ಶಿಲೆಯನ್ನು ರಾಮಮಂದಿರ ನಿರ್ಮಾಣದಲ್ಲಿ ಬಳಸಲಾಗಿದೆ.

ರಾಮಲಲ್ಲಾ ವಿಗ್ರಹ ಕೆತ್ತಿದ ಶಿಲ್ಪಿ ಕನ್ನಡಿಗ

ರಾಮಲಲ್ಲಾ ವಿಗ್ರಹ ಕೆತ್ತಿದ ಶಿಲ್ಪಿ ಕನ್ನಡಿಗ, ಮೈಸೂರಿನ ಅರುಣ್ ಯೋಗಿರಾಜ್, ರಾಮಮಂದಿರ ದ್ವಾರ ಕೆತ್ತಿರುವುದು ಕೊಪ್ಪಳದ ರಾಮಮೂರ್ತಿ ಸ್ವಾಮಿ, ಧಾರವಾಡದಿಂದ ರಾಮನಿಗಾಗಿ ಎರಡು ವಿಶೇಷ ಕಂಬಳಿಯನ್ನು ಕಳುಹಿಸಲಾಗಿದೆ.

ರಾಮಲಲ್ಲಾ ವೀಕ್ಷಣೆಗೆ ರಜೆ ಕೊಡಿ

ಅಯೋಧ್ಯೆಯಲ್ಲಿ ವಿನಾಯಕನನ್ನು ಅರಳಿಸಿದ ಶಿಲ್ಪಿ ಉತ್ತರ ಕನ್ನಡ ಜಿಲ್ಲೆಯ ಕೆಕ್ಕೆರಿನ ವಿನಾಯಕ ಗೌಡ. ಅಯೋಧ್ಯೆಯಲ್ಲಿನ ಶಿಲ್ಪ ಕೆತ್ತನೆ ಕಾರ್ಯದಲ್ಲಿ ಕರ್ನಾಟಕದ 6 ಶಿಲ್ಪಿಗಳು ಪಾಲ್ಗೊಂಡಿದ್ದಾರೆ.

ಕರ್ನಾಟಕದ ಹನುಮಾನ್ ಗ್ರಾನೈಟ್ಸ್ ರಾಮಮಂದಿರಕ್ಕೆ ಅಗತ್ಯವಿದ್ದ ಸಂಪೂರ್ಣ ಶಿಲೆಗಳನ್ನು ಪೂರೈಸಿದೆ. ಕರ್ನಾಟಕದ ಶ್ರೀಗಂಧದ ಮರ, ಶ್ರೀಗಂಧದ ಎಣ್ಣೆ ಬಳಸಲಾಗಿದೆ.

ಅಯೋಧ್ಯೆಯಲ್ಲಿ ಜನವರಿ 19 ರಿಂದ 48 ದಿನಗಳ ಕಾಲ ರಾಮನಗರದ ವಿಜಯಕುಮಾರ್ ಮತ್ತು ಕಲಾವಿದರಿಂದ ಮಂಗಳವಾದ್ಯ ಸೇವೆ ನಡೆಯುತ್ತಿದೆ.

ಉದ್ಯೋಗ ಅನ್ವೇಷಣೆಗೆ ಸಚಿವರ ತಂಡ

ಕರ್ನಾಟಕದ ರಾಜೇಶ್ ಶೆಟ್ಟಿ ಕಂಪೆನಿ ರಾಮಮಂದಿರದ ಸಂಪೂರ್ಣ ವಿದ್ಯುತ್ ಸಂಪರ್ಕದ ಕಾರ್ಯ ಪೂರೈಸುತ್ತಿದೆ. ಅಯೋಧ್ಯೆ ರೈಲು ನಿಲ್ದಾಣಕ್ಕೆ ವಿದ್ಯುತ್ ವ್ಯವಸ್ಥೆ ಮಾಡಿರುವುದು ಕರ್ನಾಟಕದ ಮೂಡುಬಿದಿರೆಯ ರೋನಾಲ್ಡ್ ಸಿಲ್ಟನ್ ಡಿಸೋಜಾ ಅವರ ಲೆಕ್ಸಾ ಲೈಟಿಂಗ್ ಕಂಪೆನಿ.

ಅಯೋಧ್ಯೆಗೆ 35 ಸಾವಿರ ರಾಮಭಕ್ತರು

ಇಷ್ಟೇ ಅಲ್ಲದೆ, ಜನವರಿ 31 ರಿಂದ ಮಾರ್ಚ್ 25ರ ವರೆಗೆ ರಾಜ್ಯದಿಂದ 35 ಸಾವಿರ ರಾಮಭಕ್ತರು ೨೫ ರೈಲುಗಳಲ್ಲಿ ಅಯೋಧ್ಯೆಗೆ ಸ್ವಂತ ವೆಚ್ಚದಲ್ಲಿ ಯಾತ್ರೆ ಕೈಗೊಳ್ಳಲಿದ್ದಾರೆ. ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಿಂದ ರಾಮಭಕ್ತರಿಗೆ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ಒಂದು ರೈಲಿನಲ್ಲಿ 1,500 ಜನರ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದು ಪ್ರತಿ ರೈಲಿಗೆ ’ರೈಲ್ ಪ್ರಮುಖ್’ ಮತ್ತು ’ಬೋಗಿ ಪ್ರಮುಖ್’ ನೇಮಿಸಿದ್ದು, ಇವರು ರಾಮ ಭಕ್ತರ ಊಟೋಪಚಾರದ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ.

ಈ ಅಭಿಯಾನದ ಸಂಚಾಲಕರಾಗಿ ಬಿಜೆಪಿಯಿಂದ ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಸಹ-ಸಂಚಾಲಕರಾಗಿ ಪಕ್ಷದ ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರನ್ನು ನೇಮಿಸಲಾಗಿದೆ.

ರಾಮಭಕ್ತರಿಗೆ ಕ್ಯೂಆರ್ ಕೋಡ್

ಅಯೋಧ್ಯೆಗೆ ತೆರಳುತ್ತಿರುವ ಪ್ರತಿ ರಾಮಭಕ್ತರಿಗೆ ಕ್ಯೂಆರ್ ಕೋಡ್ ಐಡಿ ಕಾರ್ಡ್ ವಿತರಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ಕನ್ನಡ ಭಾಷೆ ಹೆಲ್ಪ್‌ಲೈನ್ ಕೇಂದ್ರ ಸ್ಥಾಪಿಸಿದ್ದು, ಕನ್ನಡ ಭಾಷೆಯಲ್ಲೇ ಪ್ರಕಟಣೆ ವ್ಯವಸ್ಥೆ ಮಾಡಲಾಗಿದೆ. ವಸತಿಗಾಗಿ ವ್ಯವಸ್ಥಿತವಾದ ಜರ್ಮನ್ ಟೆಂಟ್ ಹೌಸ್‌ಗಳಿವೆ.

ಮಾರ್ಚ್ ಮೊದಲ ವಾರ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ

ಅಯೋಧ್ಯೆಯಲ್ಲಿ 48 ಕಡೆ ಭೋಜನದ ವ್ಯವಸ್ಥೆ ಇದ್ದು, ಇದರಲ್ಲಿ 2 ಕಡೆ ಕರ್ನಾಟಕದಿಂದ ತೆರಳುವ ರಾಮಭಕ್ತರಿಗಾಗಿ ಭೋಜನ ವ್ಯವಸ್ಥೆ ಮಾಡಲಾಗಿದೆ.

ಪ್ರಾಣ ಪ್ರತಿಷ್ಠಾಪನೆ ನೇರ ವೀಕ್ಷಣೆ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ವಿಧಿ-ವಿಧಾನಗಳನ್ನು ಕರ್ನಾಟಕದಲ್ಲಿನ ಭಕ್ತರು ನೇರ ಪ್ರಸಾರದಲ್ಲಿ ವೀಕ್ಷಿಸಲು ಪಿವಿಆರ್ ಚಿತ್ರಮಂದಿರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್, ಉಜ್ಜಯಿನಿ, ನಮೋ ಗಂಗೆ ಕಾರ್ಯಕ್ರಮಗಳು ಅಭಿವೃದ್ಧಿಯಾಗುತ್ತಿದ್ದು, ಪ್ರಾಚೀನ ಪರಂಪರೆಯ ಪುನರುಜ್ಜೀವನಕ್ಕೆ ಸಾಕ್ಷಿಯಾಗಿವೆ.

ಮನೆಗಳಲ್ಲಿ 5 ದೀಪ ಬೆಳಗಿಸಿ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನದಂದು ರಾಜ್ಯದ ಜನತೆ ತಮ್ಮ ಮನೆಗಳಲ್ಲಿ ಉತ್ತರಾಭಿಮುಖವಾಗಿ 5 ದೀಪ ಬೆಳಗಿಸುವ ಮೂಲಕ ಶ್ರೀರಾಮನಿಗೆ ತಮ್ಮ ಭಕ್ತಿಯನ್ನು ಅರ್ಪಿಸಬೇಕು ಎಂದು ವಿಜಯೇಂದ್ರ ಮನವಿ ಮಾಡಿದರು.

ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನ ರಾಜ್ಯದಲ್ಲಿ ಅಶಾಂತಿ, ಅಡ್ಡಿ-ಆತಂಕ, ಅಹಿತಕರ ಘಟನೆಗಳು ಜರುಗದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅಂದು ಸರ್ಕಾರಿ ರಜೆ ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.

ಪರಿವರ್ತನಾ ಪಥ ಬಿಡುಗಡೆ

ಅಯೋಧ್ಯೆಯ ಪ್ರಮುಖ ಘಟನಾವಳಿಗಳನ್ನು ಒಳಗೊಂಡ ‘ಪರಿವರ್ತನಾ ಪಥ ರಾಮಮಂದಿರ ರಥ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
35 thousand devotees to ayodhyakarnataka birth place of hanumantalive telecast on 22ndqr code to karnataka devoteesramalalla consecrationspecial trainssree rama and karnataka
2 FacebookTwitterPinterestEmail
admin

previous post
ಮಾರ್ಚ್ ಆದಿಯಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ
next post
ಶ್ರೀಗಂಧ, ಬೀಟೆ, ತೇಗಕ್ಕೆ ಜಿಯೋ ಟ್ಯಾಗ್

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ