Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಜನವರಿ 22ರಂದು ಧಾರ್ಮಿಕ ಮೆರವಣಿಗೆ ನಿಷೇಧ

by admin January 20, 2024
written by admin January 20, 2024 1 comment 2 minutes read
6FacebookTwitterPinterestEmail
366
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ

ಬೆಂಗಳೂರು:ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಧಾರ್ಮಿಕ ಸಭೆ, ಮೆರವಣಿಗೆಗಳನ್ನು ನಿಷೇಧಿಸಿದ್ದು, ದೇವಸ್ಥಾನದ ಆವರಣದಲ್ಲಿ ಪೂಜೆಗೆ ಮಾತ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದಲ್ಲಿ ಕಿಡಿಗೇಡಿಗಳು ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಕಾನೂನು-ಸುವ್ಯವಸ್ಥೆ ಹಾಳು ಮಾಡಬಹುದೆಂಬ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಿ, ಪೊಲೀಸರಿಗೆ ಬಿಗಿ ಭದ್ರತೆ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ರಾಮನಿಗೂ ಕರ್ನಾಟಕಕ್ಕೂ ಯುಗ-ಯುಗಾಂತರ ಸಂಬಂಧ

ಜನವರಿ 21ರಿಂದ ಮೂರು ದಿನಗಳ ಕಾಲ ಯಾವುದೇ ಪೊಲೀಸ್ ಸಿಬ್ಬಂದಿ ರಜೆ ತೆಗೆದುಕೊಳ್ಳುವಂತಿಲ್ಲ, ರಜೆ ಮೇಲೆ ಹೋಗಿರುವವರೂ ಕರ್ತವ್ಯಕ್ಕೆ ಹಾಜರಾಗುವಂತೆ ಗೃಹ ಇಲಾಖೆ ಸೂಚಿಸಿದೆ.

ಈ ಹಿಂದಿನ ಕೋಮು ಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಬೇಕು. ಜೊತೆಗೆ ಆಯಾ ಪೊಲೀಸ್ ಠಾಣೆಗಳ ರೌಡಿಶೀಟರ್‌ಗಳು ಮತ್ತು ಹಳೆಯ ಆರೋಪಿಗಳು, ಸಮಾಜದ ಸ್ವಾಸ್ತ್ಯ ಕದಡುವ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ.

ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಸಿ

ಕರ್ನಾಟಕದ ಕೆಲವು ಭಾಗಗಳಲ್ಲಿ ಕೋಮು ಗಲಭೆಗಳು ಮರುಕಳಿಸಬಹುದಾದ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹೆಚ್ಚಾಗಿ ಅಳವಡಿಸುವುದು, ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ಇಡಲು ಡ್ರೋನ್ ಕ್ಯಾಮೆರಾ ಬಳಸಿಕೊಳ್ಳುವಂತೆಯೂ ತಿಳಿಸಲಾಗಿದೆ.

ಖಾಸಗಿ ಡ್ರೋನ್‌ ಕ್ಯಾಮರಾ ಬಳಸದಂತೆ ಕಟ್ಟಾದೇಶ

ಖಾಸಗಿಯವರು ಯಾವುದೇ ಕಾರಣಕ್ಕೂ ಈ ದಿನಗಳಲ್ಲಿ ಡ್ರೋನ್‌ಗಳನ್ನು ಬಳಸದಂತೆ ಕಟ್ಟಾದೇಶ ಮಾಡಲಾಗಿದೆ. 

ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಂತಿ-ಸೌಹಾರ್ದತಾ ಸಭೆಗಳನ್ನು ನಡೆಸಬೇಕು, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸುವುದಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಿಸುವಂತೆ ಆದೇಶಿಸಲಾಗಿದೆ.

ಶ್ರೀಗಂಧ, ಬೀಟೆ, ತೇಗಕ್ಕೆ ಜಿಯೋ ಟ್ಯಾಗ್

ವಿವಿಧ ಜಿಲ್ಲೆಗಳು, ಪಟ್ಟಣಗಳ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು, ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಬೇಕು. ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಬೇಕು.

ಶಾಂತಿಪಾಲನಾ ಸಭೆ ನಡೆಸಲು ಸೂಚನೆ

ಠಾಣೆಗಳ ವ್ಯಾಪ್ತಿಯಲ್ಲಿ ಎಲ್ಲಾ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿಪಾಲನಾ ಸಭೆ ನಡೆಸಿ ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಸೂಚಿಸಲಾಗಿದೆ. ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿ ನೀಡಲು ತಿಳಿಸುವಂತೆ ಮುಖಂಡರಿಗೆ ಹಿರಿಯ ಅಧಿಕಾರಿಗಳು ಸೂಚಿಸಲಿದ್ದಾರೆ.

ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಅವರ ಸೂಚನೆ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಸಿಟಿ ಪೊಲೀಸ್ ಕಮೀಷನರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವಂತೆ ಆದೇಶಿಸಿದ್ದಾರೆ.

ಮಾರ್ಚ್ ಆದಿಯಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ

ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ರಾಜ್ಯದಲ್ಲೂ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಇದು ಸೂಕ್ಷ್ಮ ವಿಚಾರವಾಗಿದ್ದು, ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಿ ಎಂದಿದ್ದಾರೆ.

ಪೊಲೀಸ್ ಹಿರಿಯ ಅಧಿಕಾರಿಗಳು, ಜಿಲ್ಲಾ ಆಡಳಿತದ ಜೊತೆ ಈ ಸಂಬಂಧ ಚರ್ಚೆ ನಡೆಸಿ ಕೆಲವು ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಅವರ ಗೋಧ್ರಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವಾಲಯ ಪೊಲೀಸ್ ಸಿಬ್ಬಂದಿಗೆ ಈ ರೀತಿ ಆದೇಶ ರವಾನಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ayodhyaJan22karnatakaPolice alertprana pratishthaRam LallaReligious procession banned
6 FacebookTwitterPinterestEmail
admin

previous post
ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಸಿ
next post
ಕೆಎಸ್ ಡಿಎಲ್ ನಿಂದ 21 ನೂತನ ಉತ್ಪನ್ನ ಬಿಡುಗಡೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ