Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು

by admin January 27, 2024
written by admin January 27, 2024 2 comments 1 minutes read
2FacebookTwitterPinterestEmail
514

ಪ್ರಮುಖ ದೇವಾಲಯಗಳಲ್ಲಿ ಕುಟುಂಬ ಸಹಿತ ವಿಶೇಷ ಪೂಜೆ

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ಪ್ರಮುಖ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಕಳೆದ ಕೆಲವು  ತಿಂಗಳಿಂದ ವಯೋ ಸಹಜ ತೊಂದರೆ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದ ಗೌಡರು, ಇದೀಗ ಪ್ರಮುಖ ದೇವಾಲಯಗಳಿಗೆ ತೆರಳಿ ಪೂಜೆ-ಪುನಸ್ಕಾರ ಮಾಡಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಮಹಾನ್ ದೈವ ಭಕ್ತರಾದ ಗೌಡರು, ಯಾವುದೇ ಶುಭ ಕಾರ್ಯ ಕೈಗೊಳ್ಳುವ ಮುನ್ನ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಳ್ಳುತ್ತಾರೆ.

ದೇವೇಗೌಡರ ತವರು ಕ್ಷೇತ್ರ ಹಾಸನದಿಂದ ಸ್ಪರ್ಧೆಗಿಳಿಸಲು ಕುಮಾರಸ್ವಾಮಿ ಕಸರತ್ತು

ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀರಾಮ ಮಂದಿರ ಟ್ರಸ್ಟ್ ನ ಆಹ್ವಾನದ ಮೇರೆಗೆ ಕುಟುಂಬದ ಜೊತೆಗೂಡಿ ಅಯೋಧ್ಯೆಗೆ ತೆರಳಿ ಬೆಳಗ್ಗಿನಿಂದ ಸಂಜೆಯವರೆಗೂ ಪೂಜಾ ಕೈಂಕರ್ಯದ ಸಮಾಭಾರಂಭದಲ್ಲಿ ಭಾಗಿಯಾಗಿದ್ದರು.

ಗೌಡರಿಗೆ ಭಕ್ತರ ನೂಕು ನುಗ್ಗಲಿಂದ ದೇವರ ದರ್ಶನ ಸಾಧ್ಯವಾಗಿರಲಿಲ್ಲ

ಬಾಲ ರಾಮ ಪ್ರಾಣ ಪ್ರತಿಷ್ಠಾಪನೆ ನಂತರ ದೇವರ ದರ್ಶನ ಪಡೆಯಲು ಅವರಿಗೆ ಭಕ್ತರ ನೂಕು ನುಗ್ಗಲಿಂದ ಪಡೆಯಲು ಸಾಧ್ಯವಾಗಿರಲಿಲ್ಲ. ಈ ಸಂದರ್ಭದಲ್ಲಿ ತಾವು ಬಾಲ ರಾಮ ದೇವರ ದರ್ಶನ ಮತ್ತು ಆಶೀರ್ವಾದ ಪಡೆದೇ ಹೋಗಬೇಕು ಎಂದು ಅಲ್ಲಿಯೇ ಕುಳಿತುಬಿಟ್ಟರು.

ತಮ್ಮ ತಂದೆ ಜೊತೆಗೂಡಿ ಸಮಾರಂಭದಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು, ಈ ನೂಕು ನುಗ್ಗಲಿನಲ್ಲಿ ದೇವರ ದರ್ಶನ ಸಾಧ್ಯವಾಗುವುದಿಲ್ಲ. ನಾವು ಇನ್ನೊಮ್ಮೆ ಬರೋಣ ಎಂದು ಗೌಡರ ಮನವೊಲಿಸುವ ಪ್ರಯತ್ನ ಮಾಡಿದರು.

ಆದರೂ ಪಟ್ಟುಬಿಡದ ಗೌಡರು ದರ್ಶನ ಮಾಡಿದ ನಂತರವೇ ತೆರಳುವುದಾಗಿ ಹೇಳಿ ಅಲ್ಲಿಯೇ ಕುಳಿತರು. ಚೆನ್ನಮ್ಮ ಅವರೂ ಕೂಡ ಅದೇ ರೀತಿ ಹಠವಿಡಿದಿದ್ದರು. ಕೊನೆಗೆ ಕುಮಾರಸ್ವಾಮಿ ಆಹ್ವಾನಿತರ ಶಿಷ್ಟಾಚಾರದ ಪಟ್ಟಿಯಲ್ಲಿದ್ದ ಅಧಿಕಾರಿಗಳ ಮೂಲಕ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ಮಾಜಿ ಪ್ರಧಾನಿ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡರು.

ಧರ್ಮ ಸ್ಥಳ, ಕುಕ್ಕೆ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೌಡರು

ತಕ್ಷಣವೇ ಜಾಗೃತರಾದ ಉತ್ತರ ಪ್ರದೇಶ ಮುಖ್ಯಕಾರ್ಯದರ್ಶಿ ಅವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಮಾಹಿತಿ ನೀಡಿದರು. ಮಾಹಿತಿ ತಲುಪುತ್ತಿದ್ದಂತೆ ಮುಖ್ಯಮಂತ್ರಿ ಅವರು, ಗೌಡರಿದ್ದ ಸ್ಥಳಕ್ಕೆ ಧಾವಿಸಿ, ಆಗಿರುವ ಲೋಪದ ಬಗ್ಗೆ ಕ್ಷಮೆ ಯಾಚಿಸಿ, ಆ ಸ್ಥಳದಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡದ್ದಲ್ಲದೆ, ತಾವೇ ಖುದ್ದಾಗಿ ಬಾಲ ರಾಮದೇವರ ದರ್ಶನ ಮಾಡಿಸಿ ಬೀಳ್ಕೊಟ್ಟರು.

ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್; 34 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ

ಅಯೋಧ್ಯೆಯಿಂದ ಹಿಂದಿರುಗುತ್ತಿದ್ದಂತೆ ಕುಮಾರಸ್ವಾಮಿ ಅವರು ರಾಜಕೀಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದರೆ, ಗೌಡರು, ಅಂದಿನಿಂದ ಇಲ್ಲಿಯವರೆಗೂ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನ ಜೆಪಿ ನಗರದ ಶ್ರೀನಿವಾಸ ದೇವಾಲಯದಿಂದ ಪೂಜೆ  ಆರಂಭಿಸಿದ ಗೌಡರು, ಧರ್ಮಸ್ಥಳದ ಮಂಜುನಾಥಸ್ವಾಮಿ ಹಾಗೂ ಕುಕ್ಕೆ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ayodhyadarshan of BalaramadevegowdafamilyFormer Chief MinisterH. D. KumaraswamyHdmajor templesperseveredSpecial pooja
2 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 27ಜನವರಿ 2024
next post
ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ ಒಗ್ಗಟ್ಟಿನ ಜಪ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ