Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ ಒಗ್ಗಟ್ಟಿನ ಜಪ

by admin January 27, 2024
written by admin January 27, 2024 2 comments 2 minutes read
2FacebookTwitterPinterestEmail
242

ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರ ಗೆಲ್ಲಲು ತಂತ್ರಗಾರಿಕೆ

ಬೆಂಗಳೂರು: ಕಿರಿಯರ ಜೊತೆ ಹಿರಿಯರನ್ನು ಕೈಜೋಡಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ ಇಂದಿಲ್ಲಿ ನಿರ್ಣಯಿಸಿದೆ.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸಮ್ಮುಖದಲ್ಲಿ ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದಲ್ಲದೆ, 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊಡುಗೆ ನೀಡಲು ನಿರ್ಣಯಿಸಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆದ ಲೋಪಗಳನ್ನು ಸರಿಪಡಿಸಿಕೊಂಡು ಎನ್ ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್ ಜೊತೆ ಒಗ್ಗಟ್ಟಿನಿಂದ ಚುನಾವಣೆಗೆ ಈಗಿನಿಂದಲೇ ಶ್ರಮಿಸಲು ತೀರ್ಮಾನಿಸಲಾಗಿದೆ.

ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು

ಕರಾವಳಿ, ಮಲೆನಾಡು, ಮುಂಬೈ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಮಗಿರುವ ಶಕ್ತಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳಬೇಕು. ಜೆಡಿಎಸ್ ಪ್ರಾಬಲ್ಯವಿರುವ ಕಡೆಗಳಲ್ಲಿ ನಾವು ಅವರಿಗೆ ಹೊರಗಿನಿಂದ ಬಲಕೊಟ್ಟು ಈ ಬಾರಿ 28 ಕ್ಷೇತ್ರಗಳನ್ನು ಗೆಲ್ಲಲ್ಲೇಬೇಕು.

ವಿಧಾನಸಭೆ ಚುನಾವಣೆಯಲ್ಲಿ ಹಿರಿಯರನ್ನು ಕಡೆಗಣಿಸಿದ್ದು, ಮತ್ತು ನಮ್ಮಲ್ಲಿನ ಗುಂಪುಗಾರಿಕೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಯಿತು ಎಂದು ಅಭಿಪ್ರಾಯಿಸಿರುವ ಸಭೆ, ಈ ಬಾರಿ ನಮ್ಮ ತಪ್ಪುಗಳನ್ನು ತಿದ್ದುಕೊಂಡು ಒಗ್ಗಟ್ಟಿನ ಹೋರಾಟ ಮಾಡೋಣ ಎಂದಿದೆ.

ನರೇಂದ್ರ ಮೋದಿ ಗ್ಯಾರಂಟಿಗೆ ಜನ ಬೆಂಬಲ

ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಭೂಪೇಂದ್ರ ಯಾದವ್ ಅವರು, ದೇಶದಲ್ಲಿ ಮೋದಿ ಗ್ಯಾರಂಟಿ ಎಂದರೆ, ಅದು ನೈಜ ಗ್ಯಾರಂಟಿ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ.

ಸುಳ್ಳು ಗ್ಯಾರಂಟಿಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂಬ ವಿಷಯವನ್ನು ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದಾಗ ಮತದಾರರಿಗೆ ಮನವರಿಕೆ ಮಾಡಿಕೊಡಿ ಎಂದು ಇಲ್ಲಿಯ ಮುಖಂಡರಿಗೆ ಕಿವಿ ಮಾತು ಹೇಳಿದರು.

ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್; 34 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ

ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಛತೀಸ್ಘಡ ರಾಜ್ಯಗಳ ಜನತೆ ಕಾಂಗ್ರೆಸ್ ಗ್ಯಾರಂಟಿಯನ್ನು ತಿರಸ್ಕರಿಸಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ರಾಷ್ಟ್ರದ ಏಕತೆ, ಅಭಿವೃದ್ಧಿ ಮತ್ತು ರಾಮರಾಜ್ಯ ನಿರ್ಮಾಣಕ್ಕಾಗಿ ಮೋದಿ ಅವರು, 2014ರಿಂದಲೂ ನಿರಂತರವಾಗಿ ಶ್ರಮಿಸುತ್ತಲೇ ಬಂದಿದ್ದಾರೆ. ಕಾಂಗ್ರೆಸ್ ಪಕ್ಷ  ಜಾತಿಗಳನ್ನು ವಿಭಜಿಸಿ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದು, ಇದಕ್ಕೆ ಜನರು ಮಣೆ ಹಾಕದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಕಳೆದ ಒಂದು ದಶಕದಿಂದ ರಾಷ್ಟ್ರದ ರಾಜಕೀಯ ಕ್ಷೇತ್ರದಲ್ಲಿ ಮಹಾನ್ ಪರಿವರ್ತನೆಯಾಗಿದೆ. ಬಡವರಿಗೆ ನ್ಯಾಯ ಕೊಡುವ ವಿಷಯಕ್ಕೆ ಆದ್ಯತೆ ಕೊಡಲಾಗಿದೆ ಎಂದರು.

ಆಂತರಿಕ ಕಲಹದಿಂದ ಕಾಂಗ್ರೆಸ್ ಸರ್ಕಾರದ ಆಡಳಿತ ಕುಸಿದಿದೆ

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜನರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್  ಆಂತರಿಕ ಕಲಹದಿಂದ ಆಡಳಿತಯಂತ್ರ ಕುಸಿದಿದೆ.

ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರ ನಡುವೆಯೂ ದುರ್ಮಾರ್ಗದಲ್ಲಿ ಮತಗಳಿಸುವ ಕುತಂತ್ರ ನಡೆಸಿದ್ದಾರೆ. ಜನರಿಗೆ ವಾಸ್ತವ ತಿಳಿಸಿ ನಾವು 28 ಕ್ಷೇತ್ರಗಳಲ್ಲಿ 28 ಅನ್ನು ಗೆಲ್ಲಲ್ಲೇಬೇಕೆಂದು ಪಣ ತೊಡೋಣ ಎಂದು ಕರೆ ನೀಡಿದರು.

ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಲೋಕಸಭೆ ಚುನಾವಣೆವರೆಗೂ ವಿಶ್ರಾಂತಿ ಪಡೆಯದೇ ಕಾಂಗ್ರೆಸ್ ಗೆ ಪಾಠ ಕಲಿಸೋಣ ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
B.Y. VijayendraBhupendra YadavBJP Special ExecutiveBS YeddyurappaFormer Chief MinisterLok Sabha electionsNarendra Modi guaranteePeople's supportstrategyunion ministerUnity Chantwin 28 constituencies
2 FacebookTwitterPinterestEmail
admin

previous post
ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು
next post
ಸೂರಜ್ ರೇವಣ್ಣ – ಡಿ.ಕೆ.ಶಿವಕುಮಾರ್ ಭೇಟಿಯ ರಹಸ್ಯವೇನು?

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ