Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸೂರಜ್ ರೇವಣ್ಣ – ಡಿ.ಕೆ.ಶಿವಕುಮಾರ್ ಭೇಟಿಯ ರಹಸ್ಯವೇನು?

by admin January 27, 2024
written by admin January 27, 2024 1 comment 2 minutes read
2FacebookTwitterPinterestEmail
418

ಇಬ್ಬರೂ ಅರ್ಧಗಂಟೆ ಕಾಲ ಗೌಪ್ಯ ಮಾತುಕತೆ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ತಪ್ಪಬಹುದು ಎಂಬ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕುಟುಂಬ ಕಾಂಗ್ರೆಸ್ ಬಾಗಿಲು ತಟ್ಟಿದೆ.

ಹಠಾತ್ ಬೆಳವಣಿಗೆಯಲ್ಲಿ ರೇವಣ್ಣ ಅವರ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರದ ನಂತರ ಕಿಡಿಕಾರಿದ್ದ ಶಿವಕುಮಾರ್, ನಾವು ಕೈ ಹಾಕಿದರೆ ಎಲ್ಲರ ಮನೆ ಖಾಲಿಯಾಗುತ್ತವೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ ಒಗ್ಗಟ್ಟಿನ ಜಪ

ಜೆಡಿಎಸ್, ಎನ್ ಡಿಎ ಮೈತ್ರಿಕೂಟ ಸೇರಿದ ನಂತರ ಬಿಜೆಪಿ ಜತೆಗೂಡಿ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಸಮೀಕ್ಷಾ ವರದಿಯಂತೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಿದರೆ  ಸೋಲು ಎಂಬ ಮಾಹಿತಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಪರ್ಯಾಯ ಅಭ್ಯರ್ಥಿ ಕಣಕ್ಕಿಳಿಸಲು ಗಮನ ಹರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಟಿಕೆಟ್ ಕೈ ತಪ್ಪುವ  ಆತಂಕ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಪದೇ ಪದೇ ಹೇಳಿದ್ದರೂ ರೇವಣ್ಣ ಅವರ ಕುಟುಂಬಕ್ಕೆ ವಿಶ್ವಾಸ ಮೂಡುತ್ತಿಲ್ಲ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ರೇವಣ್ಣ ಮತ್ತು ಅವರ ಕುಟುಂಬದವರು ಭವಾನಿ ರೇವಣ್ಣ ಅವರನ್ನು ಕಣಕ್ಕಿಳಿಸಲು ಭಾರೀ ಕಸರತ್ತು ನಡೆಸಿದ್ದರು. ಆದರೆ, ತಾವು ಹಿಡಿದ ಹಠದಂತೆ ಕುಮಾರಸ್ವಾಮಿ ಅವರು, ಕಾರ್ಯಕರ್ತನಿಗೆ ಟಿಕೆಟ್ ನೀಡಿ ಆ ಕ್ಷೇತ್ರದಲ್ಲಿ ಗೆಲುವು ಸಾಧದಿಸಿದ್ದರು.

ಮತ್ತೆ ಲೋಕಸಭಾ ಚುನಾವಣೆಯಲ್ಲಿ ಇದೇ ಪುನರಾರಂಭಗೊಳ್ಳಬಹುದು ಎಂಬ ಭಯ ರೇವಣ್ಣ ಅವರ ಕುಟುಂಬದಲ್ಲಿ ಕಾಡುತ್ತಿದೆ. ಇತ್ತೀಚೆಗಂತು ರೇವಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವೇ ಸಾರ್ವಜನಿಕವಾಗಿ ನಿಂತಿದ್ದಾರೆ.

ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು

ಕುಟುಂಬ ವರ್ಗ ಮುಂದಾಲೋಚನೆಯಿಂದ ಕಾಂಗ್ರೆಸ್ ಬಾಗಿಲು ಬಡಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ. ಸೂರಜ್ ರೇವಣ್ಣ  ಅವರು ಶಿವಕುಮಾರ್ ಜೊತೆ ಮುಖಾಮುಖಿ ಬಹು ಸಮಯ ಚರ್ಚೆ ಮಾಡಿದ್ದಾರೆ.

ಇತ್ತೀಚಿನ ಬೆಳವಣಿಗೆಗಳನ್ನು ಶಿವಕುಮಾರ್ ಅವರ ಗಮನಕ್ಕೆ ಸೂರಜ್ ತಂದಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾದದ್ದು, ಬಿಜೆಪಿ ಜೊತೆ ಕೈಜೋಡಿಸಿದ್ದು, ಅವರ ಇಚ್ಚೆಯಂತೆ ನಡೆದುಕೊಳ್ಳುತ್ತಿರುವುದು. ಪ್ರಧಾನಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರ ಭೇಟಿ ಸಂದರ್ಭದಲ್ಲಿ ತಮ್ಮ ಕುಟುಂಬದವರನ್ನುಹೊರಗಿಟ್ಟಿದ್ದಾರೆ.

 ಇತ್ತೀಚೆಗೆ ಅಯೋಧ್ಯೆಯ ರಾಮದೇವರ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲೂ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಅಸಮಾಧಾನ ಸೇರಿದಂತೆ ಅನೇಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆನ್ನಲಾಗಿದೆ.

ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್; 34 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ

ಇವರಿಬ್ಬರ ಭೇಟಿ ವಿಚಾರ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅವರು ಯಾವುದೇ ಅನುದಾನದ ವಿಚಾರಕ್ಕೆ ಭೇಟಿಯಾಗಿದ್ದರೂ ಎಂಬ ಮಾತು ಈ ವಲಯದಿಂದ ಕೇಳಿಬಂದಿದೆ.

ಸೂರಜ್ ಜೊತೆ ಡಿ.ಕೆ.ಶಿವಕುಮಾರ್ ಮುಖಾಮುಖಿ ಮಾತನಾಡುವಾಗ ಯಾರನ್ನು ಹತ್ತಿರ ಸುಳಿಯಗೊಡಲಿಲ್ಲ. 30 ನಿಮಿಷಗಳ ಕಾಲ ಗೌಪ್ಯ ಚರ್ಚೆಯಾಗಿದೆ. ಚರ್ಚೆಯ ಫಲಿತಾಂಶವೇನು ಎಂಬುದು ಮುಂದಿನ ದಿನಗಳಲ್ಲಷ್ಟೇ ಬಹಿರಂಗಗೊಳ್ಳಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
half an hourlosing Hassan's ticketmeeting secret? Bo conversationPrajwal RevannaSuraj Revanna - DK Shivakumarworried
2 FacebookTwitterPinterestEmail
admin

previous post
ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ ಒಗ್ಗಟ್ಟಿನ ಜಪ
next post
ರಾಜ್ಯದ 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ