Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಷ್ಟ್ರ

ತಾಕತ್ತಿದ್ದರೆ ಕಾಂತರಾಜ್ ವರದಿ ಸ್ವೀಕರಿಸಿ : ಕುಮಾರಸ್ವಾಮಿ ಸವಾಲು

by admin January 30, 2024
written by admin January 30, 2024 1 comment 2 minutes read
2FacebookTwitterPinterestEmail
139


ವರದಿ ವೈಜ್ಞಾನಿಕವಲ್ಲ ಎಂದು ನಿಮ್ಮವರೇ ಸಭೆಗಳನ್ನು ಮಾಡಿದ್ದಾರೆ

ಬೆಂಗಳೂರು: ಕಾಂತರಾಜ್ ವರದಿಯನ್ನು ತಾಕತ್ತಿದ್ದರೆ ಸ್ವೀಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜ್ ವರದಿ ಅತ್ಯುತ್ತಮವಾಗಿದ್ದರೆ ಸ್ವೀಕರಿಸಿ, ನಿಮ್ಮವರೇ ವರದಿ ವೈಜ್ಞಾನಿಕವಾಗಿಲ್ಲ ಎಂದು ಸಭೆಗಳನ್ನು ಮಾಡಿದ್ದಾರೆ. ಇಂತಹ ವರದಿಯನ್ನು ಸ್ವೀಕರಿಸಿ ಅನುಷ್ಟಾನ ಮಾಡಲು ನಿಮ್ಮಿಂದ ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಮುಂದೆ ಪಾಪದ ಫಲ ಅನುಭವಿಸುತ್ತೀರಿ

ನಾಡಿನ ಜನರಿಗೆ ಅದರಲ್ಲೂ ಬಡ ವರ್ಗದ ಎಲ್ಲರಿಗೂ ಅನುಕೂಲವಾಗುವುದಾದರೆ ಜಾರಿಗೆ ತನ್ನಿ, ಅದನ್ನು ಬಿಟ್ಟು ನಿಮ್ಮ ದೃಷ್ಟಿಕೋನದಡಿ ಅನುಷ್ಟಾನಗೊಳಿಸಲು ಹೊರಟರೆ ಮುಂದೆ ಅದರ ಪಾಪದ ಫಲ ಅನುಭವಿಸುತ್ತೀರಿ ಎಂದು ಎಚ್ಚರಿಸಿದ್ದಾರೆ.

ನಾನು ಅಧಿಕಾರದಲ್ಲಿದ್ದಾಗ ಆ ವರದಿ ಸ್ವೀಕರಿಸಿಲ್ಲ ಎಂದು ಆರೋಪಿಸುವ ನೀವು, ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಇನ್ನು ಏಕೆ ತಾವು ವರದಿ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದರು.

ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಹಾಕದ ವರದಿಯನ್ನು ಸ್ವೀಕರಿಸಬಹುದೇ ಎಂದು ಪ್ರಶ್ನಿಸಿದ ಅವರು, ಎಲ್ಲ ಸಮುದಾಯದ ಬಡ ಕುಟುಂಬಗಳಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ನೆರವಾಗುವುದಾದರೆ ನಮ್ಮ ಪಕ್ಷ ಎಲ್ಲ ರೀತಿಯ ಸಹಕಾರ ಕೊಡಲಿದೆ. ಪ್ರಾಮಾಣಿಕವಾಗಿ ಅನುಷ್ಠಾನ ಮಾಡುವುದಾದರೆ ಷರತ್ತು ರಹಿತ ಬೆಂಬಲ ಕೊಡುತ್ತೇವೆ. ಇದು ನೀವು (ಮುಖ್ಯಮಂತ್ರಿ) ಬರೆಸಿರುವ ವರದಿ ಎಂದು ಆರೋಪಿಸಿದರು.

ಅನ್ಯಾಯವನ್ನು ಏಕೆ ಸರಿಪಡಿಸಲಿಲ್ಲ

ಶೋಷಿತ ವರ್ಗಗಳ ಅನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ರಾಜಕೀಯಕ್ಕೆ ಬಂದು 35 ವರ್ಷಕ್ಕೂ ಹೆಚ್ಚಾಗಿದೆ. ಅಂದಿನಿಂದ ಇಂದಿನವರೆಗೂ ಏಕೆ ಆಗಿರುವ ಅನ್ಯಾಯವನ್ನು ಅವರು ಸರಿಪಡಿಸಲಿಲ್ಲ ಎಂದು ಪ್ರಶ್ನಿಸಿದರು.

ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಒಬ್ಬ ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆದ ಅಂತಾ ನನ್ನ ಮೇಲೆ ವಿಷ ಕಾರ್ತಾರೆ ಅಂತ ಅಳಲು ತೋಡಿಕೊಂಡಿದ್ದಾರೆ, ಕುರಿ ಕಾಯುವ ಮಗನನ್ನೇ ಅಂದು ದೇವೇಗೌಡರು ಆರ್ಥಿಕ ಸಚಿವರನ್ನಾಗಿ ಮಾಡಿದ್ದರು, ನಿಮ್ಮ ಇಷ್ಟು ವರ್ಷದ ರಾಜಕೀಯದಲ್ಲಿ ಎಷ್ಟು ಸಲ ಸಚಿವರಾಗಿದ್ದಿರಿ, ಮುಖ್ಯಮಂತ್ರಿ ಆಗಿದ್ದೀರಿ, ಉಪಮುಖ್ಯಮಂತ್ರಿ ಆಗಿದ್ದೀರಿ, ಜಾತಿವ್ಯವಸ್ಥೆ, ಶೋಷಣೆ ಅಂತ್ಯ ಮಾಡಲು ಅವಕಾಶ ಇತ್ತು, ಯಾಕೆ ಮಾಡಲಿಲ್ಲ ಎಂದು ಅವರು ಸಿದ್ದರಾಮಯ್ಯ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಸಮಾಜ ಒಡೆಯುವ ರಾಜಕಾರಣ ನಿಲ್ಲಿಸಿ

ಸಮಾಜವನ್ನು ಒಡೆಯುವ ರಾಜಕಾರಣ ನಿಲ್ಲಿಸಿ, ಎಷ್ಟು ದಿನ ಅಧಿಕಾರದಲ್ಲಿ ಇರ್ತೀರಾ, ಕದ್ದುಮುಚ್ಚಿ ನಿಮ್ಮ ಹಾಗೆ ರಾಜಕೀಯ ಮಾಡೋನಲ್ಲ ನಾನು, ನೇರವಾಗಿಯೇ ನಾನು ಬಿಜೆಪಿ ಜೊತೆ ಕೈ ಜೋಡಿಸಿದ್ದೇನೆ. ನಿಮ್ಮ ಹಾಗೆ ಹೊಂದಾಣಿಕೆ ರಾಜಕಾರಣ ಮಾಡಲ್ಲ, ಜನಪರ ತೀರ್ಮಾನಗಳು ಇದ್ದರೆ ನಾವು ಕೂಡ ಬೆಂಬಲ ಕೊಡುತ್ತೇವೆ, ಕಮೀಷನ್ ಹೊಡೆಯುವುದನ್ನು ನಿಲ್ಲಿಸಿ, ಕೆಲಸ ಮಾಡಿ ಎಂದು ಸಿದ್ದರಾಮಯ್ಯ ಮೇಲೆ ಹರಿಹಾಯ್ದರು.

ನಾನು ಬೆಂಕಿ ಹಚ್ಚಲು ಮಂಡ್ಯಕ್ಕೆ ಹೋಗಿರಲಿಲ್ಲ, ಬೆಂಕಿ ಹಚ್ಚಿದ್ದು ನೀವು ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ತಿರುಗೇಟು ನೀಡಿದರು. ಕೆರಗೋಡು ಘಟನೆಗೂ, ನನಗೂ ಸಂಬಂಧವಿಲ್ಲ. ಕೆರಗೋಡು ಘಟನೆಗೆ ಸರ್ಕಾರದ ನಡವಳಿಕೆಗಳೇ ಕಾರಣ ಎಂದು ವಾಗ್ದಾಳಿ ನಡೆಸಿದರು.

ಯುವಜನರಿಗೆ ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧ – ಡಾ.ಶರಣ ಪ್ರಕಾಶ್ ಪಾಟೀಲ್

ಕೆರಗೋಡು ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ನನಗೆ ಆಹ್ವಾನ ನೀಡಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ.

ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡು ಜೆಡಿಎಸ್ ಕಾರ್ಯಕರ್ತರ ಶಕ್ತಿ ಕೊನೆಗೊಳಿಸಲು ಹೊರಟ್ಟಿದ್ದಾರೆ ಎಂದು ಪಾಪ ಹಳೆಯ ಸ್ನೇಹಿತರು (ಸಚಿವ ಚಲುವರಾಯಸ್ವಾಮಿ) ಹೇಳಿದ್ದಾರೆ, ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾ ಅಪರಾಧನಾ, ಕಾಂಗ್ರೆಸ್‌ನವರಿಗೆ ಕೇಸರಿ ಮೇಲೆ ಯಾಕೆ ಇಷ್ಟೊಂದು ಸಂಕುಚಿತ ಮನೋಭಾವ, ಮಂಡ್ಯ ಉಸ್ತುವಾರಿ ಸಚಿವರಿಂದ ನಾನು ನನ್ನ ಪಕ್ಷವನ್ನು ಹೇಗೆ ಉಳಿಸಿಕೊಳ್ಳಬೇಕೆಂಬುದನ್ನು ಕಲಿಯಬೇಕಿಲ್ಲ, ನನಗೆ ಜನ ಕೊಟ್ಟಿರುವ ಪ್ರೀತಿ ಇದೆ ಎಂದು ಹೇಳಿದರು.

ದಲಿತ ಸಮಾವೇಶದಲ್ಲಿ ಜೈಭೀಮ್‌ನ ನೀಲಿ ಶಾಲನ್ನು ನಾನು ಹಾಕಿಕೊಂಡಿದ್ದೆ, ಅದು ಕಾಂಗ್ರೆಸ್ ನಾಯಕರಿಗೆ ಕಾಣಿಸಲಿಲ್ಲವೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ತ್ರಿವರ್ಣ ಧ್ವಜದಲ್ಲೂ ಕೇಸರಿ ಬಣ್ಣವಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hd kumarswamykantaraj reportkeragodu protestSiddaramaiah
2 FacebookTwitterPinterestEmail
admin

previous post
ಯುವಜನರಿಗೆ ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧ – ಡಾ.ಶರಣ ಪ್ರಕಾಶ್ ಪಾಟೀಲ್
next post
ಕೃಷಿ ಸಾಲ ಮನ್ನಾ ಅಸಾಧ್ಯ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ