Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಕರ್ನಾಟಕದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕೆ ಘಟಕ

by admin January 31, 2024
written by admin January 31, 2024 0 comments 1 minutes read
4FacebookTwitterPinterestEmail
139

ವಿಸ್ಟ್ರಾನ್ ಕಂಪನಿಯಿಂದ ₹1,500 ಕೋಟಿ. ಹೂಡಿಕೆ: ಎಂ ಬಿ ಪಾಟೀಲ

ಬೆಂಗಳೂರು: ತೈವಾನ್ ಮೂಲದ ಜಗದ್ವಿಖ್ಯಾತ ಕಂಪನಿ ವಿಸ್ಟ್ರಾನ್, ರಾಜ್ಯದಲ್ಲಿ 1,500 ಕೋಟಿ ರೂ. ಹೂಡಿಕೆಯೊಂದಿಗೆ ತನ್ನ ಲ್ಯಾಪ್-ಟಾಪ್ ಉತ್ಪಾದನಾ ಘಟಕವನ್ನು ಆರಂಭಿಸಲಿದೆ. ಈ ಸಂಬಂಧ ಅದು ರಾಜ್ಯ ಸರ್ಕಾರದೊಂದಿಗೆ ಜನವರಿ 31ರಂದು ಅಧಿಕೃತವಾಗಿ ಒಡಂಬಡಿಕೆಗೆ ಅಂಕಿತ ಹಾಕಿತು.

ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವಿಸ್ಟ್ರಾನ್ ಕಂಪನಿಯ ಅಧ್ಯಕ್ಷ ಅಲೆಕ್ ಲಾಯ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು. ಖನಿಜ ಭವನದಲ್ಲಿ ಈ ಸಭೆ ನಡೆಯಿತು.

2026ರ ಜನವರಿ ವೇಳೆಗೆ ಉತ್ಪಾದನಾ ಚಟುವಟಿಕೆ ಆರಂಭ

ನಂತರ ಸಚಿವ ಪಾಟೀಲ ಮಾತನಾಡಿ, `ವಿಸ್ಟ್ರಾನ್ ಕಂಪನಿಯು ಈಗಾಗಲೇ ಕೋಲಾರದಲ್ಲಿ ತನ್ನ ಘಟಕವನ್ನು ಹೊಂದಿದೆ. ಆದರೆ, ಈ ಹೊಸ ಹೂಡಿಕೆಯ ಮೂಲಕ ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕಾ ಘಟಕವೂ ಬರುತ್ತಿದ್ದು, 2026ರ ಜನವರಿ ವೇಳೆಗೆ ಇದರಲ್ಲಿ ಉತ್ಪಾದನಾ ಚಟುವಟಿಕೆ ಆರಂಭಿಸಲಿದೆ. ಈ ಯೋಜನೆಯಿಂದ 3,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದರು.

ಮಾರ್ಚ್-ಏಪ್ರಿಲ್‌ನಲ್ಲಿ ಬಿಸಿಲಿನ ಬೇಗೆ ಹೆಚ್ಚಲಿದೆ, ಜನ – ಜಾನುವಾರಗಳ ರಕ್ಷಣೆಗೆ ಒತ್ತು ಕೊಡಿ

ವಿಸ್ಟ್ರಾನ್ ಕಂಪನಿಯ ಈ ಯೋಜನೆಗಾಗಿ 32 ಎಕರೆ ಜಮೀನನ್ನು ಬೆಂಗಳೂರಿನ ಸಮೀಪ ಕೇಳಿದ್ದು ಒಂದು ವಾರದಲ್ಲಿ ಇದು ಅಂತಿಮವಾಗಲಿದೆ. ಇಲ್ಲಿ ತಯಾರಾಗುವ ಲ್ಯಾಪ್-ಟಾಪ್ ಗಳ ಪೈಕಿ ಶೇಕಡ 50ರಷ್ಟು ಹೊರದೇಶಗಳಿಗೆ ರಫ್ತಾಗಲಿದೆ. ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಮೌಲಿಕ ಕೊಡುಗೆ ಸಿಗಲಿದೆ. ಉದ್ದೇಶಿತ ಘಟಕವು ಸಂಪೂರ್ಣ ಆಟೋಮೇಶನ್ ಸೌಲಭ್ಯ ಹೊಂದಿರಲಿದೆ ಎಂದು ಅವರು ವಿವರಿಸಿದರು.

ಕೈಗಾರಿಕಾ ಕ್ರಾಂತಿಯ ಆಶಯಗಳಿಗೆ ಪೂರಕ

ವಿಸ್ಟ್ರಾನ್ ಲ್ಯಾಪ್ಟಾಪ್ ತಯಾರಿಕಾ ಘಟಕವು ಸರ್ವರ್ ಗಳು,  ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್), ವಿದ್ಯುತ್ ಚಾಲಿತ ವಾಹನಗಳ ವಲಯಕ್ಕೆ ಸಂಬಂಧಿಸಿದ ಉಪಕರಣಗಳನ್ನು ತಯಾರಿಸಲಿದೆ. ಈ ವರ್ಷದ ಜುಲೈನಲ್ಲಿ ಘಟಕದ ಕಾಮಗಾರಿ ಆರಂಭವಾಗಲಿದ್ದು, ಈ ಘಟಕವು ರಾಜ್ಯ ಸರ್ಕಾರದ 4.0 ಕೈಗಾರಿಕಾ ಕ್ರಾಂತಿಯ ಆಶಯಗಳಿಗೆ ಪೂರಕವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.

ಸರ್ಕಾರವು ಕೈಗಾರಿಕೆ ಮತ್ತು ಹೂಡಿಕೆಗಳ ಪರವಾಗಿದ್ದು, ಉದ್ಯಮಸ್ನೇಹಿ ನೀತಿಗಳನ್ನು ಹೊಂದಿದೆ. ಜೊತೆಗೆ ಕಾಲಕಾಲಕ್ಕೆ ಹಲವು ಉಪಯುಕ್ತ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಜತೆಗೆ ರಾಜ್ಯದ ಉಳಿದ ಭಾಗಗಳಲ್ಲೂ ಆಧುನಿಕ ಉದ್ಯಮಗಳು ನೆಲೆಯೂರುವಂತೆ ಮಾಡಲು ಆದ್ಯತೆ ನೀಡಲಾಗಿದೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ವಿಸ್ಟ್ರಾನ್ ಕಂಪನಿಯ ಹಿರಿಯ ನಿರ್ದೇಶಕ ಡೆನಿಸ್ ಹಂಗ್, ಜನರಲ್ ಮ್ಯಾನೇಜರ್ ರಾಚೆಲ್ ಲೂ, ಉನ್ನತಾಧಿಕಾರಿಗಳಾದ ಸಿ.ಸುಧೀರ್, ಪ್ರಿಯವ್ರತ ಪಾಂಡಾ, ಉದ್ಯಮಿ ಸಿ.ಎ.ಸುರೇಶ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4 FacebookTwitterPinterestEmail
admin

previous post
ಮಾರ್ಚ್-ಏಪ್ರಿಲ್‌ನಲ್ಲಿ ಬಿಸಿಲಿನ ಬೇಗೆ ಹೆಚ್ಚಲಿದೆ, ಜನ – ಜಾನುವಾರಗಳ ರಕ್ಷಣೆಗೆ ಒತ್ತು ಕೊಡಿ
next post
ದಿನ ಭವಿಷ್ಯ : ಗುರುವಾರ, 01 ಫೆಬ್ರವರಿ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ