Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಾರ್ಚ್-ಏಪ್ರಿಲ್‌ನಲ್ಲಿ ಬಿಸಿಲಿನ ಬೇಗೆ ಹೆಚ್ಚಲಿದೆ, ಜನ – ಜಾನುವಾರಗಳ ರಕ್ಷಣೆಗೆ ಒತ್ತು ಕೊಡಿ

by admin January 31, 2024
written by admin January 31, 2024 2 comments 2 minutes read
5FacebookTwitterPinterestEmail
228


ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ

ಬೆಂಗಳೂರು:ಭೀಕರ ಬರಗಾಲದ ನಡುವೆಯೇ ಬರುವ ಮಾರ್ಚ್-ಏಪ್ರಿಲ್‌ನಲ್ಲಿ ಬಿಸಿಲಿನ ಬೇಗೆ ಹೆಚ್ಚಲಿದೆ, ಜನ ಹಾಗೂ ಜಾನುವಾರಗಳ ರಕ್ಷಣೆಗೆ ಒತ್ತು ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತ ಪ್ರಧಾನ ಕಾರ್ಯದರ್ಶಿಗಳಿಗೆ ಇಂದಿಲ್ಲಿ ಸಲಹೆ ಮಾಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಫೆಬ್ರವರಿ 8ರಂದು ಹಮ್ಮಿಕೊಂಡಿರುವ ಜನಸ್ಪಂದನ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಆಗದಂತೆ, ಜನರು ಗುಳೆ ಹೋಗದಂತೆ ನೋಡಿಕೊಳ್ಳುವುದು ನಿಮ್ಮ ಕರ್ತವ್ಯ, ಇದರಲ್ಲಿ ವ್ಯತ್ಯಾಸ ಕಂಡುಬಂದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯದ ಬಹುಭಾಗ ಮಳೆ ಇಲ್ಲದೆ ಬರಗಾಲಕ್ಕೆ ಸಿಲುಕಿದೆ

ಈಗಾಗಲೇ ರಾಜ್ಯದ ಬಹುಭಾಗ ಮಳೆ ಇಲ್ಲದೆ ಬರಗಾಲಕ್ಕೆ ಸಿಲುಕಿದೆ, ಮುಂದಿನ ಮೂರ‍್ನಾಲ್ಕು ತಿಂಗಳು ನಮಗೆ ಸವಾಲಾಗಿದೆ, ಇದನ್ನು ನೀವು ನಿಭಾಯಿಸಬೇಕು ಎಂದರು.

ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ನೀರು, ಮೇವು ದೊರೆಯದೆ ನಾಡಿಗೆ ನುಗ್ಗುವ ಸಾಧ್ಯತೆ ಇದೆ, ಅರಣ್ಯ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತು ಕೊಡಿ. ಈ ರೀತಿ ಕ್ರಮಕೈಗೊಳ್ಳುವುದರಿಂದ ಮಾನವ-ವನ್ಯಜೀವಿ ಸಂಘರ್ಷಕ್ಕೆ ಪರಿಹಾರ ದೊರೆಯುವ ಜೊತೆಗೆ ರೈತರ ಜಮೀನಿಗೆ ವನ್ಯ ಜೀವಿಗಳು ನುಗ್ಗುವುದನ್ನು ತಪ್ಪಿಸಬಹುದಾಗಿದೆ.

ಮೇವಿಗೆ ಕೊರತೆಯಾಗದಂತೆ ನೋಡಿಕೊಳ್ಳಿ

ಮೇವು ಸಾಲದಾದರೆ, ಬೆಳೆಯಬೇಕು, ಇಲ್ಲವೇ ರೈತರಿಂದ ಖರೀದಿಸಿ, ಎಲ್ಲಿಯೂ ಮೇವಿಗೆ ಕೊರತೆಯಾಗದಂತೆ ನೋಡಿಕೊಳ್ಳಿ. ಖಾಸಗಿ ಮತ್ತು ಸರ್ಕಾರಿ ಜಾಗಗಳಲ್ಲಿ ಮೇವು ಬೆಳೆಯಲು ಒತ್ತು ಕೊಡಿ, ಎಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂಬ ಮಾಹಿತಿ ಈಗಾಗಲೇ ನಿಮಗೆ ಇರುತ್ತದೆ, ಅಂತಹ ಕಡೆಗಳಲ್ಲಿ ಮುಂಜಾಗ್ರತೆಯಾಗಿ ಕ್ರಮಕೈಗೊಳ್ಳಿ ಎಂದರು.

ಕಠಿಣ ಸಂದರ್ಭದಲ್ಲಿ ಜಿಲ್ಲಾಡಳಿತ ಚಾಕಚಕ್ಯತೆಯಿಂದ ಕೆಲಸ ಮಾಡಬೇಕು, ಕರ್ತವ್ಯ ಲೋಪ, ನಿರ್ಲಲಕ್ಷ್ಯ ಮಾಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ, ನೀವು ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾ ಮಟ್ಟದಲ್ಲಿ ಶಿಸ್ತು ಇರುವುದಿಲ್ಲ.

ನಿಮಗೆ ಹೊಣೆಗಾರಿಕೆ ವಹಿಸಿರುವ ಜಿಲ್ಲೆಗಳಿಗೆ ಹೋಗಿ ಆಡಳಿತ ಪರಿಶೀಲಿಸಿದ್ದೀರಾ, ನೀವು ಎಷ್ಟು ಪೊಲೀಸ್ ಠಾಣೆ ಮತ್ತು ಶಾಲೆಗಳಿಗೆ ಭೇಟಿ ನೀಡಿದ್ದೀರಿ ಮಾಹಿತಿ ನೀಡಿ, ನೀವು ಇಲ್ಲಿಯೇ ಕುಳಿತು ಆಡಳಿತ ನಡೆಸಿದರೆ ಶಿಸ್ತು ಬರುವುದಿಲ್ಲ.

ಸಿಇಟಿ ಅರ್ಜಿ: ಶಿಕ್ಷಣ ಮಂಡಳಿ ಹೆಸರು ತಪ್ಪಿದ್ದರೂ ಸ್ವೀಕೃತವಾಗಲಿದೆ, ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಬೇಕಾಗಿಲ್ಲ – ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸ್ಪಷ್ಟನೆ

ನಿಮಗೆ ಎಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿರುವುದಿಲ್ಲವೂ ಅಂತಹವನ್ನು ಮುಖ್ಯಕಾರ್ಯದರ್ಶಿ ಗಮನಕ್ಕೆ ತಂದು ಕ್ರಮಕೈಗೊಳ್ಳಿ.

ಅಧಿಕಾರಿಗಳಿಗೆ ಮುಂದುವರೆಯುವ ಅಧಿಕಾರ ಇಲ್ಲ

ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಹೊಣೆಗಾರಿಕೆ ಇರಬೇಕು, ಸಂವಿಧಾನದ ಬಗ್ಗೆ ಗೌರವ ಇರಬೇಕು, ಇದರ ವಿರುದ್ಧ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಅಧಿಕಾರ ಮತ್ತು ಹಕ್ಕೂ ಇಲ್ಲ ಎಂದು ಎಚ್ಚರಿಸಿದರು.

ನೀವು ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ನಂತರ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಿಮ್ಮಿಂದ ಯಾವ ಸಲಹೆ-ಸೂಚನೆ ಹೋಗಿದೆ ಎಂಬುದನ್ನು ಸಭೆಯ ಗಮನಕ್ಕೆ ತನ್ನಿ ಎಂದರು.

ಕೃಷಿ, ಕಂದಾಯ, ಪೊಲೀಸ್ ಠಾಣೆಗಳಿಗೆ ಜನ ಬರುತ್ತಾರೆ, ನೀವು ಇಂತಹ ಎಷ್ಟು ಕಚೇರಿಗಳಿಗೆ ಭೇಟಿ ನಿಡಿದ್ದೀರಿ ಎಂದು ಪ್ರಶ್ನಿಸಿದರು.

ಜನಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ, ವಿಧಾನಸೌಧದ ಮುಂದೆ ನಡೆಯುವ ಸ್ಪಂದನ ಕಾರ್ಯಕ್ರಮಕ್ಕೆ ಪ್ರತಿ ಇಲಾಖೆಗೂ ಪ್ರತ್ಯೇಕ ಟೆಂಟ್ ತೆರೆಯಲಾಗುವುದು. ನಿಮ್ಮ ಇಲಾಖಾ ಟೆಂಟ್‌ನಲ್ಲೇ ಹಾಜರಿದ್ದು ಸಮಸ್ಯೆಗಳನ್ನು ಫೆಬ್ರವರಿ 8 ರಂದು ಬಗೆಹರಿಸಿ ಎಂದು ಆದೇಶಿಸಿದರು.

ಎಸಿ, ಡಿಸಿ, ತಹಸೀಲ್ದಾರ್‌ಗಳು ಮಾಡಬೇಕಾದ್ದನ್ನು ನಾವು ಮಾಡಬೇಕಿದೆ, ನೀವು ಅವರ ಮೇಲೆ ಬಿಗಿ ಹಿಡಿತ ಇಟ್ಟರೆ, ಜನರು ವಿಧಾನಸೌಧದವರೆಗೂ ಅರ್ಜಿ ಹಿಡಿದು ಬರುತ್ತಿರಲಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm_siddaramaiahdistrict incharge principle secreteriesmake sure foder and water available to forest animalsmeeting with officers
5 FacebookTwitterPinterestEmail
admin

previous post
ಸಿಇಟಿ ಅರ್ಜಿ: ಶಿಕ್ಷಣ ಮಂಡಳಿ ಹೆಸರು ತಪ್ಪಿದ್ದರೂ ಸ್ವೀಕೃತವಾಗಲಿದೆ, ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಬೇಕಾಗಿಲ್ಲ – ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸ್ಪಷ್ಟನೆ
next post
ಕರ್ನಾಟಕದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕೆ ಘಟಕ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ