Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಯದೇವ ಹೃದ್ರೋಗ ಸಂಸ್ಥೆಗೆ ಡಾ.ಮಂಜುನಾಥ್ ಮತ್ತೆ ನಿರ್ದೇಶಕರಾಗಿಸಲು ಶಿವಕುಮಾರ್ ಕಸರತ್ತು

by KM Shivaraju February 3, 2024
written by KM Shivaraju February 3, 2024 0 comments 2 minutes read
Share 4FacebookTwitterPinterestEmail
181

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಗೆ ಮತ್ತೆ ನಿರ್ದೇಶಕರಾಗಿ ಡಾ.ಮಂಜುನಾಥ್ ಅವರನ್ನು ರಾತ್ರೋರಾತ್ರಿ ಸರ್ಕಾರ ನೇಮಿಸಿತ್ತು.ಸರ್ಕಾರದ ಮನವಿಯನ್ನು ನಯವಾಗಿ ತಿರಸ್ಕರಿಸಿರುವ ಡಾ.ಮಂಜುನಾಥ್, ಕೇವಲ ಹೃದಯ ತಜ್ಞರಾಗಿಯೇ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಹಠಾತ್ ಬೆಳವಣಿಗೆಯೊಂದರಲ್ಲಿ ರಾತ್ರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಅವರ ಬಳಿ ತೆರಳಿ ಜಯದೇವ ಸಂಸ್ಥೆಗೆ ಡಾ.ಮಂಜುನಾಥ್ ಅವರನ್ನು ಮುಂದುವರೆಸಬೇಕೆಂದು ಮಾಡಿದ ಮನವಿಗೆ ಸ್ಪಂದಿಸಿ ತೀರ್ಮಾನ ಕೈಗೊಂಡಿದ್ದರು.

ಸಿಬ್ಬಂದಿ ಮತ್ತು ಇತರ ಸಂಸ್ಥೆಗಳಿಂದ ಬೀಳ್ಕೊಡುಗೆ ನಂತರ ನಿರ್ದೇಶಕ ಸ್ಥಾನದಲ್ಲಿ ಮುಂದುವರೆಯಲು ತಮಗೆ ಇಚ್ಛೆ ಇಲ್ಲ ಎಂದು ಡಾ.ಮುಂಜುನಾಥ್ ತಿಳಿಸಿದ್ದಾರೆ.

ಡಾ.ಮಂಜುನಾಥ್ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಇಲ್ಲವೇ ಬೆಂಗಳೂರು ಗ್ರಾಮಾಂತರದಿಂದ ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಕಾತುರದಲ್ಲಿವೆ.

ಉಭಯ ಪಕ್ಷಗಳ ನಾಯಕರ ಚರ್ಚೆ

ಗ್ರಾಮಾಂತರದಿಂದಾದರೆ ಬಿಜೆಪಿ ಚಿನ್ಹೆ ಅಡಿ, ಹಾಸನದಿಂದಾದರೆ ಜೆಡಿಎಸ್ ಚಿನ್ಹೆ ಅಡಿ ಕಣಕ್ಕಿಳಿಸುವ ಮಾತುಗಳು ಉಭಯ ಪಕ್ಷಗಳ ನಾಯಕರಲ್ಲಿ ಚರ್ಚೆಯಾಗಿವೆ. ಶಿವಕುಮಾರ್ ಸಹೋದರ ಹಾಗೂ ಹಾಲಿ ಸಂಸದ ಡಿ.ಕೆ.ಸುರೇಶ್ ಗ್ರಾಮಾಂತರದಿಂದ ಸತತವಾಗಿ ಲೋಕಸಭೆ ಪ್ರವೇಶಿಸುತ್ತಿದ್ದಾರೆ.

ಮಂಜುನಾಥ್ ಕಣಕ್ಕಿಳಿದರೆ ಸಹೋದರನಿಗೆ ಚುನಾವಣೆಯಲ್ಲಿ ಕಠಿಣ ಸವಾಲು ಎದುರಿಸಬೇಕಾಗಬಹುದೆಂಬ ರಾಜಕೀಯ ದೂರದೃಷ್ಟಿಯಿಂದ ಉಪಮುಖ್ಯಮಂತ್ರಿ ಅವರು ಇಂತಹ ಪ್ರಯತ್ನ ಮಾಡಿರಬಹುದು ಎಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಈ ಮಧ್ಯೆ ಸಮಾರಂಭವೊಂದರ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್, ರಾಜಕೀಯ ಪ್ರವೇಶ ಮಾಡುವ ಆಲೋಚನೆ ಇಲ್ಲ, ನಾನು ವೈದ್ಯಕೀಯ ವೃತ್ತಿಯಲ್ಲೇ ಮುಂದುವರೆಯುತ್ತೇನೆ, ನಾನು ಲೋಕಸಭಾ ಚುನಾವಣಾ ಕಣಕ್ಕಿಳಿಯುವ ವಿಚಾರ ಭಾರೀ ಚರ್ಚೆಯಲ್ಲಿದೆ, ಇದೆಲ್ಲಾ ಊಹಾಪೋಹ ಎಂದರು.

ಡಾ.ಮಂಜುನಾಥ್ ಅವರಿಗೆ
ರಾಜ್ಯ ಒಕ್ಕಲಿಗರ ಸಂಘದ ಸನ್ಮಾನ

ರಾಜ್ಯ ಒಕ್ಕಲಿಗರ ಸಂಘದ ಗೌರವಪೂರ್ವಕ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಮಾಡಬೇಕು, ಸೇವೆಯು ಪ್ರದರ್ಶನವಾಗದೆ ಆದರ್ಶವಾಗಿರಬೇಕು ಎಂದು ತಿಳಿಸಿದರು.

ಸೇವೆಯು ಕರುಣೆ, ಮಾನವೀಯತೆ, ಬದ್ಧತೆಯಿಂದ ಕೂಡಿರಬೇಕು, ಆಗ ನಿವೃತ್ತಿಯ ನಂತರವು ಸಮಾಜ ಗೌರವಿಸುತ್ತದೆ ಎಂದರು.

ಪ್ರತಿಯೊಬ್ಬರಿಗೂ ಯಾವುದೇ ಪದವಿಯಿಂದ ನಿವೃತ್ತಿ ಅನಿವಾರ್ಯ. ಆದರೆ ನೆನಪುಗಳು ಮಾತ್ರ ಅಮರವಾಗಿರುತ್ತದೆ. ಆಸ್ಪತ್ರೆ ದೇವಾಲಯವಿದ್ದಂತೆ. ಆಸ್ಪತ್ರೆಯ ಗೋಡೆಗಳಿಗೆ ದೇವಾಲಯಕ್ಕಿಂತಲೂ ಹೆಚ್ಚಿನ ಪ್ರಾರ್ಥನೆ ಸಲ್ಲಿಸಿರುತ್ತಾರೆ.

ಅನುದಾನಕ್ಕಿಂತ ಅನುಷ್ಠಾನ ಮುಖ್ಯ

ಬಡ ರೋಗಿಗಳ ಕಣ್ಣೀರು ಶೇ.1ರಷ್ಟಿದ್ದರೆ ಅದರ ಹಿಂದಿನ ನೋವು 99ರಷ್ಟು ಇರುತ್ತದೆ. ಹೀಗಾಗಿ ಕರುಣೆ, ಹೃದಯವಂತಿಕೆ, ಮಾನವೀಯತೆ, ದೂರದೃಷ್ಟಿಯಿಂದ ಕೆಲಸ ಮಾಡಬೇಕು. ಕೆಲಸ ಮಾಡುವ ಸ್ಥಳದಲ್ಲಿ ಉತ್ತಮ ವಾತಾವರಣವಿದ್ದು, ಪರಸ್ಪರ ಉತ್ತಮ ಸಂಬಂಧವಿರಬೇಕು. ಅನುದಾನಕ್ಕಿಂತ ಅನುಷ್ಠಾನ ಮುಖ್ಯ. ಸಹಾಯ ಮಾಡುವುದೇ ಧರ್ಮ ಎಂದು ಹೇಳಿದರು.

ಸೇವೆ ಸಲ್ಲಿಸುವಾಗ ಅನುಮಾನ, ಅಹಂಕಾರ ಇರಬಾರದು. ಮಾಡುವ ಸಾಧನೆ ಸಾಮಾನ್ಯ ಜನರಿಗೆ ತಲುಪಿದಾಗ ಗೌರವ ಭಾವನೆ ತನ್ನಿಂದ ತಾನೆ ಬರುತ್ತದೆ ಎಂದು ಹೇಳಿದರು.

17-18 ವರ್ಷಗಳ ಕಾಲ ಜಯದೇವ ಆಸ್ಪತ್ರೆಯಲ್ಲಿ 75 ಲಕ್ಷ ಹೊರ ರೋಗಿಗಳಿಗೆ ಚಿಕಿತ್ಸೆ, 8 ಲಕ್ಷ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಎಷ್ಟು ಪಾರಿತೋಷಕ ಪಡೆದೆ ಎನ್ನುವುದಕ್ಕಿಂತ ಎಷ್ಟು ಜನರ ಮನೆಯಲ್ಲಿ ಬೆಳಕು, ರೋಗಿಗಳ ಮುಖದಲ್ಲಿ ನಗುವನ್ನು ತಂದಿದ್ದೇವೆ ಎಂಬುದು ಮುಖ್ಯ ಎಂದರು.

ಬಡಮಕ್ಕಳ ಕಿಸೆಗೂ ಕೈಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರ: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೆಚ್ಚ ವಸೂಲಿ

ಖಾಸಗಿ ಪಂಚತಾರಾ ಆಸ್ಪತ್ರೆಯಲ್ಲಿ ಶ್ರೀಮಂತರಿಗೆ ಸಿಗುವ ಮಾದರಿಯಲ್ಲೇ ಜಯದೇವ ಆಸ್ಪತ್ರೆಯಲ್ಲಿ ಬಡವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ನಾವು ಸ್ವೀಕರಿಸುವ ಪ್ರಮಾಣವಚನದಂತೆ ನಡೆದುಕೊಂಡರೆ ದೇಶ ಮುಂದುವರೆಯಲಿದೆ. ರಾಷ್ಟ್ರಕವಿ ಕುವೆಂಪು ಹೇಳುವಂತೆ ನಾವು ಹುಟ್ಟುವಾಗಲು ವಿಶ್ವಮಾನವರು, ಹೋಗುವಾಗಲು ವಿಶ್ವಮಾನವರು. ನಡುವೆಯೂ ವಿಶ್ವಮಾನವರೆನಿಸಿಕೊಳ್ಳಬೇಕು ಎಂದರು.

ಒಕ್ಕಲಿಗರ ಸಂಘವು ಉತ್ತಮ ಕೆಲಸ ಮಾಡುತ್ತಿದೆ. ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಸಂಘ ಮತ್ತು ಸಂಸ್ಥೆಗಳು ನಮ್ಮದು ಎಂಬ ಮನೋಭಾವನೆ ಮೂಡಿಬಂದರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿದೆ ಎಂದರು.

Share this:

  • WhatsApp
  • Post
  • Tweet
  • Print
  • Email
contesting election is rumersjayadeva hospital-dr.manjunathnot ready to continue as directorservice is importent not medels
Share 4 FacebookTwitterPinterestEmail
KM Shivaraju

previous post
ಬಡಮಕ್ಕಳ ಕಿಸೆಗೂ ಕೈಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರ: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೆಚ್ಚ ವಸೂಲಿ
next post
ಐಎಎಸ್, ಐಪಿಎಸ್ ಅಧಿಕಾರಿಗಳು, ಪತ್ರಕರ್ತರು ಲೋಕಸಭಾ ಚುನಾವಣಾ ಕಣಕ್ಕೆ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ