Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಐಎಎಸ್, ಐಪಿಎಸ್ ಅಧಿಕಾರಿಗಳು, ಪತ್ರಕರ್ತರು ಲೋಕಸಭಾ ಚುನಾವಣಾ ಕಣಕ್ಕೆ

by KM Shivaraju February 3, 2024
written by KM Shivaraju February 3, 2024 0 comments 1 minutes read
2FacebookTwitterPinterestEmail
531

ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನಿಂದ ಸ್ಪರ್ಧಿಸಲು ಪೈಪೋಟಿ

ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಮತ್ತು ಪತ್ರಕರ್ತರು ರಾಜಕೀಯ ಪಕ್ಷಗಳ ಬಾಗಿಲು ತಟ್ಟಿದ್ದಾರೆ.

ಅಧಿಕಾರದಲ್ಲಿರುವವರು ಮತ್ತು ನಿವೃತ್ತಿ ಹೊಂದಿರುವ ಕೆಲವರು ಸಂಸತ್ ಪ್ರವೇಶಿಸಲು ಹಾತೊರೆಯುತ್ತಿದ್ದಾರೆ.

ತಮ್ಮ ಪ್ರಭಾವ ಬಳಸಿ ಟಿಕೆಟ್ ಪಡೆಯುವ ಯತ್ನ

ಸುಮಾರು 14 ಕ್ಕೂ ಹೆಚ್ಚು ಅಧಿಕಾರಿಗಳು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಅದರಲ್ಲೂ ಬಿಜೆಪಿ ಟಿಕೆಟ್‌ಗೆ ಹೆಚ್ಚು ಆಕಾಂಕ್ಷಿಗಳಾಗಿದ್ದು, ತಮ್ಮ ಪ್ರಭಾವ ಬಳಸಿ ಟಿಕೆಟ್ ಪಡೆಯುವ ಪ್ರಯತ್ನ ಮಾಡಿದ್ದಾರೆ.

ಮುಖ್ಯಮಂತ್ರಿ ಕಾರ್ಯಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರು ಚುನಾವಣಾ ಕಣಕ್ಕಿಳಿಯಲು ಬಯಸಿದ್ದಾರೆ. ಅವರಿಗೆ ಮಾತ್ರ ಮೀಸಲಾದ ಒಂದು ಕ್ಷೇತ್ರವನ್ನು ಬಿಟ್ಟುಕೊಡಲು ಮೂರು ಪಕ್ಷಗಳಲ್ಲಿ ಒಲವಿದೆ.

ಅವರು ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೋ ಎಂಬುದನ್ನು ಕಾದುನೋಡಬೇಕು. ಕಳೆದ ಕೆಲವು ಚುನಾವಣೆಗಳಲ್ಲಿ ಕಣಕ್ಕಿಳಿದು ಪರಾಭವಗೊಂಡ ಕೆಲವು ಅಧಿಕಾರಿಗಳು ಮರು ಪ್ರಯತ್ನ ಮಾಡಿದ್ದಾರೆ.

ರಾಜಕೀಯ ಮುಖಂಡರೊಂದಿಗಿನ ಒಡನಾಟ

ಸೇವೆಯಲ್ಲಿ ಕಾರ್ಯ ನಿರ್ವಹಿಸುವಾಗ ರಾಜಕೀಯ ಪಕ್ಷಗಳ ಮುಖಂಡರೊಂದಿಗಿನ ಒಡನಾಟವಿರುತ್ತದೆ. ಅದರಲ್ಲೂ ಕರ್ನಾಟಕ ಮೂಲದ ಅಧಿಕಾರಿಗಳಿಗೆ ರಾಜಕೀಯ ಪಕ್ಷಗಳು ಹಿಂದೆ ನೀಡಿವೆ. ಮುಂದೆಯೂ ನೀಡುವ ಸಾಧ್ಯತೆಗಳಿವೆ.

ಮೂರು ಪಕ್ಷಗಳಿಗೂ ಕೆಲವು ಕ್ಷೇತ್ರಗಳಲ್ಲಿ ವರ್ಚಸ್ವಿ ಮತ್ತು ಸಮರ್ಥ ಅಭ್ಯರ್ಥಿಗಳಿಲ್ಲ. ಅಂತಹ ಕ್ಷೇತ್ರಗಳಿಗೆ ಈ ಅಧಿಕಾರಿಗಳನ್ನು ಕಣಕ್ಕಿಳಿಸಬೇಕು ಎಂಬ ಉದ್ದೇಶ ರಾಜಕೀಯ ಪಕ್ಷಗಳಲ್ಲಿದೆ. ಕಣಕ್ಕಿಳಿಯುವ ಅಧಿಕಾರಿಗಳು ಚುನಾವಣಾ ವೆಚ್ಚವನ್ನು ಅವರೇ ಭರಿಸುಕೊಳ್ಳುತ್ತಾರೆ ಎಂಬ ಲೆಕ್ಕಾಚಾರವಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

ಆ ರೀತಿಯ ಸಾಮರ್ಥ್ಯ ಇರುವ ಅಧಿಕಾರಿಗಳೇ ಸ್ಪರ್ಧೆ ಬಗ್ಗೆ ಆಸಕ್ತಿ ತೋರಿರುವುದು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿದವರಿಗೆ ಕೆಲವು ಸೀಟು ನೀಡುವ ಚಿಂತನೆ ಬಿಜೆಪಿಯಲ್ಲಿದೆ. ಅದನ್ನು ಬಂಡವಾಳ ಮಾಡಿಕೊಳ್ಳಲು ಈ ಅಧಿಕಾರಿಗಳು ಪ್ರಯತ್ನ ಮಾಡಿದ್ದಾರೆ.

ಚುನಾವಣಾ ಕಣಕ್ಕಿಳಿಯಲು ಬಯಸಿ ಸೇವೆಯಲ್ಲಿರುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು, ಈ ವರ್ಷ ನಿವೃತ್ತಿಯಾಗುವವರು ಇದ್ದಾರೆ.

ಎರಡನೇ ಹಂತದ ಅಧಿಕಾರಿಗಳು ತೆರೆಮರೆಯಲ್ಲಿ ಯತ್ನ

ಇದರ ಜೊತೆಗೆ ಕಂದಾಯ, ಪೊಲೀಸ್, ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಎರಡನೇ ಹಂತದ ಅಧಿಕಾರಿಗಳು ತೆರೆಮರೆಯಲ್ಲಿ ಪ್ರಯತ್ನ ಮಾಡಿದ್ದಾರೆ. ಇವರಲ್ಲಿ ಯಾರಿಗೆ ಟಿಕೆಟ್ ದೊರೆಯುತ್ತದೋ ಕಾದು ನೋಡಬೇಕಿದೆ. ಇದರ ನಡುವೆ ರಾಜ್ಯ ಮತ್ತು ರಾಷ್ಟ್ರೀಯ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುವ ಮತ್ತು ಸಲ್ಲಿಸುತ್ತಿರುವವರು ಬಿಜೆಪಿ ಟಿಕೆಟ್ ಪಡೆಯಲು ಕದ ತಟ್ಟಿದ್ದಾರೆ.

ಈಗಾಗಲೇ ಒಬ್ಬ ಸಂಪಾದಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಸಾಲಿಗೆ ಇನ್ನೂ ಐವರು ಪತ್ರಕರ್ತರು ಕಮಲದ ಟಿಕೆಟ್ ಪಡೆಯಲು ಭಾರೀ ಕಸರತ್ತು ಮಾಡಿದ್ದಾರೆ.

ಪತ್ರಕರ್ತರಾಗಿದ್ದ ಪ್ರತಾಪಸಿಂಹ ಎರಡು ಬಾರಿ ಮೈಸೂರಿನ ಸಂಸದರಾಗಿ ಆಯ್ಕೆಗೊಂಡ ನಂತರ ಕೆಲವು ಪತ್ರಕರ್ತರಲ್ಲಿ ಸಂಸತ್ ಪ್ರವೇಶಿಸುವ ಆಸೆ ಇಮ್ಮಡಿಗೊಂಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
about 14 officers on ticket racebjp_jds_congres fielding officers as candidatesin contact with politiciansips_ias_journalists on race to get ticket of political partieslokasabha election-2024
2 FacebookTwitterPinterestEmail
KM Shivaraju

previous post
ಜಯದೇವ ಹೃದ್ರೋಗ ಸಂಸ್ಥೆಗೆ ಡಾ.ಮಂಜುನಾಥ್ ಮತ್ತೆ ನಿರ್ದೇಶಕರಾಗಿಸಲು ಶಿವಕುಮಾರ್ ಕಸರತ್ತು
next post
ವಾರ ಭವಿಷ್ಯ : ಭಾನುವಾರ, 4  ಫೆಬ್ರವರಿ 2024

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ