Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಧಾನಮಂತ್ರಿ ಗ್ಯಾರಂಟಿ ಭರವಸೆಗೆ ಜನ ಮರುಳಾಗಬಾರದು: ಬಿಜೆಪಿ ಕೇವಲ ಸುಳ್ಳು ಹೇಳುತ್ತದೆ – ಸಿದ್ದರಾಮಯ್ಯ

by admin February 5, 2024
written by admin February 5, 2024 1 comment 2 minutes read
1FacebookTwitterPinterestEmail
127


ಹಿಂದೆ ಯಾವುದೇ ಸರ್ಕಾರ ಕಾಂಗ್ರೆಸ್‌ನಂತೆ ಗ್ಯಾರಂಟಿ ನೀಡಿರಲಿಲ್ಲ


ಬೆಂಗಳೂರು: ಕೇವಲ ಸುಳ್ಳನ್ನು ಹೇಳುವ ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗ್ಯಾರಂಟಿ ಎಂಬ ಭರವಸೆಗೆ ಜನರು ಮರುಳಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸ ವಿನ್ಯಾಸದ 100 ’ಅಶ್ವಮೇಧ ಕ್ಲಾಸಿಕ್’ ಬಸ್ಸುಗಳ ಲೋಕಾರ್ಪಣೆ ನಂತರ ಮಾತನಾಡಿದ ಅವರು, ಎಲ್ಲ ಜಾತಿ ಧರ್ಮಗಳ ಬಡವರಿಗೆ ಪಕ್ಷಾತೀತ, ಜಾತ್ಯತೀತವಾಗಿ, ಎಲ್ಲ ಮಹಿಳೆಯರಿಗೂ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ, ಹಿಂದೆ ಯಾವುದೇ ಸರ್ಕಾರ ಇಂತಹ ಪ್ರಯತ್ನ ಮಾಡಿರಲಿಲ್ಲ ಎಂದರು.

ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ, ಜಾರಿಗೊಳಿಸಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಯಾವುದೇ ಭರವಸೆಗಳನ್ನು ಈಡೇರಿಸದ ಪ್ರಧಾನಿ

ಬಿಜೆಪಿ 10 ವರ್ಷದಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಇಂತಹ ಗ್ಯಾರಂಟಿಗಳನ್ನು ಜನಗರಿಗೆ ನೀಡಲಿಲ್ಲ, ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತಂದರೆ ಭಾರತದ ಪ್ರತಿ ಕುಟುಂಬಕ್ಕೂ 15 ಲಕ್ಷ ರೂ. ನೀಡುವ, ಪ್ರತಿ ವರ್ಷ ೨ ಕೋಟಿ ಉದ್ಯೋಗ ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು.

ಈ ಯಾವುದೇ ಭರವಸೆಗಳನ್ನು ಈಡೇರಿಸದ ಪ್ರಧಾನಿ ಮೋದಿ ಈಗ ಗ್ಯಾರಂಟಿ ಎಂಬ ಸುಳ್ಳು ಹೇಳುತ್ತಿದ್ದಾರೆ. ಅವರ ಸುಳ್ಳುಗಳಿಗೆ ಜನರು ಮರುಳಾಗಬಾರದು ಎಂದರು.

1.17 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ, ಶಕ್ತಿ ಯೋಜನೆಯಡಿ 4,530 ಕೋಟಿ ರೂ. ವೆಚ್ಚವಾಗಿದೆ, ಅನ್ನಭಾಗ್ಯದಡಿ 5 ಕೆ.ಜಿ. ಅಕ್ಕಿಯ ಜೊತೆ 5 ಕೆ.ಜಿ. ಅಕ್ಕಿಯ ಮೊತ್ತ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಜನರಿಗೆ ಆರ್ಥಿಕ ಸಹಾಯ ನೀಡುತ್ತಿದ್ದೇವೆ.

ಪ್ರತಿ ಕುಟುಂಬಕ್ಕೆ ಆರ್ಥಿಕ ಸಹಾಯ

ರಾಜ್ಯದ ಪ್ರತಿ ಕುಟುಂಬಕ್ಕೆ ಮಾಸಿಕ 4 ರಿಂದ 5 ಸಾವಿರ ರೂ. ಆರ್ಥಿಕ ಸಹಾಯ ನೀಡುವ ಮೂಲಕ ಜನರ ಖರೀದಿ ಶಕ್ತಿಯನ್ನು ಹೆಚ್ಚಿಸಲಾಗಿದೆ. ಪಂಚಗ್ಯಾರಂಟಿಗಳು ರಾಜ್ಯದ 4.50 ಕೋಟಿ ಜನರಿಗೆ ತಲುಪುತ್ತಿವೆ.

ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ಬಿಟ್ಟಿ ಭಾಗ್ಯ ಎಂದು ಕೀಳುಮಟ್ಟದ ಮಾತುಗಳನ್ನು ಬಿಜೆಪಿಯವರು ಆಡಿದರು. ಬಡವರ ಬಗ್ಗೆ ಕಾಳಜಿ ಇದ್ದು, ರಾಜಕೀಯ ಇಚ್ಛಾಶಕ್ತಿ ಇದ್ದಾಗ ಮಾತ್ರ ಜನರಿಗೆ ಉತ್ತಮ ಕಾರ್ಯಕ್ರಮಗಳನ್ನು ನೀಡಲು ಸಾಧ್ಯ. ಬಡವರಿಗೆ ಆರ್ಥಿಕ ಶಕ್ತಿ ತುಂಬುವುದು ಕಾಂಗ್ರೆಸ್‌ನ ಬದ್ಧತೆ ಎಂದರು.

’ಅಶ್ವಮೇಧ ಕ್ಲಾಸಿಕ್’ ಬಸ್

ಇಂದು ಲೋಕಾರ್ಪಣೆಗೊಂಡ ಹೊಸ ವಿನ್ಯಾಸದ 100 ’ಅಶ್ವಮೇಧ ಕ್ಲಾಸಿಕ್’ ಬಸ್‌ಗಳಲ್ಲಿ ರಾಜ್ಯ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಇನ್ನು 800 ಬಸ್‌ಗಳನ್ನು 2024 ರ ಮೇ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಬಿಡಲು ಸಾರಿಗೆ ಇಲಾಖೆ ಉದ್ದೇಶಿಸಿದೆ. ಮೊದಲ ಹಂತದಲ್ಲಿ ರಸ್ತೆಗಿಳಿದಿರುವ 100 ಬಸ್‌ಗಳಿಗೆ ’ಅಶ್ವಮೇಧ ಕ್ಲಾಸಿಕ್’ ಎಂದು ಹೆಸರಿಡಲಾಗಿದೆ.

ಈ ಬಸ್‌ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತವೆ, ದರಗಳ ಮಾಹಿತಿ ಹಾಗೂ ಸಂಚರಿಸಲಿರುವ ಮಾರ್ಗಗಳ ಮಾಹಿತಿಯನ್ನು ಸಾರಿಗೆ ಸಂಸ್ಥೆಯ ಜಾಲತಾಣದಿಂದ ಪಡೆಯಬಹುದಾಗಿದೆ.

ಕೈ ಪಾಳಯಕ್ಕೆ ಖರ್ಗೆ ವಾರ್ನಿಂಗು

ಅಶ್ವಮೇಧ ಕ್ಲಾಸಿಕ್ ಬಸ್‌ಗಳು 3.42 ಮೀಟರ್ ಎತ್ತರವಿದ್ದು, 12 ಪ್ಯಾನಿಕ್ ಬಟನ್, ಜಿಪಿಎಸ್, 2 ರೇರ್ ಕ್ಯಾಮರಾ ಹಾಗೂ 6 ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿವೆ. 52 ಬಕೆಟ್ ಸೀಟು, ಬಸ್ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರ ಲಗೇಜ್‌ಗೆ ಹೆಚ್ಚು ಸ್ಥಳಾವಕಾಶ ನೀಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಂಗೇರಿ ವರ್ಕ್ ಶಾಪ್‌ಗೆ 100 ಹೊಸ ಬಸ್ ಬಂದಿದ್ದು, ಒಟ್ಟು 1,000 ಹೊಸ ಬಸ್‌ಗಳು ಬರಲಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
1ashwamedha busesdon't belive modi guarentyksrtc busesone thousand buses this yearonly congres can fullfil people's aspirations
1 FacebookTwitterPinterestEmail
admin

previous post
ಕೇಂದ್ರ ಗೃಹ ಸಚಿವರಿಂದ ಶಾಮನೂರು ಅತಿಥಿ ಗೃಹ ಉದ್ಘಾಟನೆ: ಮುಖ್ಯಮಂತ್ರಿ ಅವರಿಗೆ ಆಹ್ವಾನ ಇಲ್ಲ
next post
ಜೆಡಿಎಸ್ ಸೇರಿದ ತಕ್ಷಣ ಜ್ಯೋತಿ ಪ್ರಕಾಶ್ ಮಿರ್ಜಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ