Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಖರ್ಗೆಗೆ ಧನ್ಯವಾದ ಹೇಳಿದ ಮಾಜಿ ಪ್ರಧಾನಿ ದೇವೇಗೌಡರು

by admin February 8, 2024
written by admin February 8, 2024 0 comments 3 minutes read
Share 3FacebookTwitterPinterestEmail
411

ದೇವೇಗೌಡರ ಮಾತುಗಳನ್ನು ಸದನದಲ್ಲಿ ಹಾಜರಿದ್ದು ಮೌನವಾಗಿ ಆಲಿಸಿದ ಖರ್ಗೆ

ನವದೆಹಲಿ: ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತೀಕ್ಷ್ಣವಾಗಿ ಪ್ರಶ್ನೆ ಮಾಡಿದ್ದಾರೆ. ತಮ್ಮ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಾಂಧವ್ಯದ ಬಗ್ಗೆ ಲಘುವಾಗಿ ಮಾತನಾಡಿದ ಖರ್ಗೆ ಅವರಿಗೆ ತಿರುಗೇಟು ನೀಡಿದ ಮಾಜಿ ಪ್ರಧಾನಿ; “ಖರ್ಗೆ ಅವರೇ.. ನೀವು ಪ್ರಧಾನಮಂತ್ರಿಯಾದರೆ, ನೀವು ಅಧ್ಯಕ್ಷರಾಗಿರುವ ಕಾಂಗ್ರೆಸ್ ಪಕ್ಷ ಮುಕ್ತವಾಗಿ ಬೆಂಬಲ ಕೊಡುತ್ತದೆಯೇ? ಆ ಬಗ್ಗೆ ಹೇಳಿ” ಎಂದು ಅವರು ಕೇಳಿದರು.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ದೇವೇಗೌಡರು; ರಾಜ್ಯಸಭೆಯಲ್ಲಿ ಮೊದಲು ಮಾತನಾಡಿದ ಪ್ರಧಾನಿ ಮೋದಿಯವರು ಹಿಂದಿನ ಪ್ರಧಾನ ಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು; ಮನಮೋಹನ್ ಸಿಂಗ್ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಬಗ್ಗೆ ಪ್ರಧಾನಿ ಅವರು ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅದಕ್ಕಾಗಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ.ಒಳ್ಳೆಯ ಕೆಲಸಗಳನ್ನು ಮೆಚ್ಚಿಕೊಂಡು ಕೆಟ್ಟದ್ದನ್ನು ಟೀಕಿಸಬೇಕು ಎಂದು ಖರ್ಗೆ ಹೇಳಿದ್ದರು.

ದೊರೆಗೆ ದೂರುಗಳ ಸುರಿಮಳೆ

ಈ ಮಾತಿನ ಭರದಲ್ಲಿ ಮಾಜಿ ಪ್ರಧಾನಿಗಳ ಹೆಸರನ್ನು ಎಳೆದು ತಂದಿದ್ದ ಖರ್ಗೆ ಅವರು; ‘ಮೋದಿ ಮತ್ತು ದೇವೇಗೌಡರ ಪ್ರೇಮ ಸ್ವಲ್ಪ ತಡವಾಗಿದೆ ಮೂಡಿದೆ’ ಎಂದಿದ್ದರು. ಇದಕ್ಕೆ ದೇವೇಗೌಡರು ಉತ್ತರ ನೀಡಿದರು. ಸದನದಲ್ಲಿ ಖರ್ಗೆ ಅವರ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ ಮಾಜಿ ಪ್ರಧಾನಿ; ಮಲ್ಲಿಕಾರ್ಜುನ ಖರ್ಗೆ ಅವರು ಪ್ರಾಮಾಣಿಕ ವ್ಯಕ್ತಿ. ಡಾ.ಮನಮೋಹನ್ ಸಿಂಗ್ ಅವರು ಅಪ್ಪಟ ಪ್ರಾಮಾಣಿಕ ವ್ಯಕ್ತಿ, ಆದರೆ, ಕಾಂಗ್ರೆಸ್ ತನ್ನನ್ನು ತಾನೇ ದುರ್ಬಲಗೊಳಿಸಿಕೊಳ್ಳುತ್ತಿದೆ. ಖರ್ಗೆ ಅವರು ಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಏರಿದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ? ಎಂದು ದೇವೇಗೌಡರು ಟೀಕಾ ಪ್ರಹಾರ ನಡೆಸಿದರು.

ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಪೇಕ್ಷೆ ಆಗಿತ್ತು. ಅವರೇನು ನನ್ನ ಸ್ವಂತದವರು ಅಲ್ಲ, ನನ್ನ ಸ್ವಂತ ಮಗನೂ ಅಲ್ಲ. ಆದರೆ, ಅವರಿಗೆ ಅರ್ಹತೆ ಇದೆ. ಅವರು ಉನ್ನತ ಸ್ಥಾನಕ್ಕೆ ಬಂದರೆ ಕಾಂಗ್ರೆಸ್ ನಾಯಕರು ಸಹಿಸಿಕೊಳ್ಳುತ್ತಾರೆಯೇ? ಎಂದು ನೇರವಾಗಿ ಪ್ರಶ್ನಿಸಿದರು. 1991ರಲ್ಲಿ ನರಸಿಂಹ ರಾವ್ ಅವರು ಪ್ರಧಾನಿ ಆಗಿದ್ದರು, ಡಾ.ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ಈ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಅವರು ಏನೆಲ್ಲಾ ಮಾಡಿದ್ದಾರೆ ಎಂಬುದರ ಬಗ್ಗೆ ನಾನು ಸಾಕಷ್ಟು ಮಾತನಾಡಬಲ್ಲೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಟಾಂಗ್ ಕೊಟ್ಟರು.

ಮನಮೋಹನ್ ಸಿಂಗ್ ಅವರು ದೇಶದ ಹಣಕಾಸು ಸಚಿವರಾಗಿದ್ದಾಗ ಈ ದೇಶದ ಆರ್ಥಿಕ ಸ್ಥಿತಿ ಹೇಗಿತ್ತು ಎನ್ನುವುದು ನನಗೆ ಗೊತ್ತಿದೆ. 130 ಟನ್ ಬಂಗಾರವನ್ನು ಭಾರತ ಸರ್ಕಾರ ವಿದೇಶಿ ಬ್ಯಾಂಕುಗಳಲ್ಲಿ ಒತ್ತೆ ಇಟ್ಟಿತ್ತು. ಆ ಸಂದರ್ಭದಲ್ಲಿ ನರಸಿಂಹರಾವ್ ಅವರ ನೇತೃತ್ವದಲ್ಲಿ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಏನೆಲ್ಲಾ ಮಾಡಿದರು ಎನ್ನುವುದು ನನಗೆ ಬಹಳ ಚೆನ್ನಾಗಿ ಗೊತ್ತಿದೆ. ಅಂತಹ ಮನಮೋಹನ್ ಸಿಂಗ್ ಅವರು ಈ ಸದನದಲ್ಲಿ ಕಣ್ಣೀರು ಹಾಕಿದರು ಎಂದು ದೇವೇಗೌಡರು ಹೇಳಿದರು.

ಖರ್ಗೆಗೆ ಧನ್ಯವಾದ ಹೇಳಿದ ಮಾಜಿ ಪ್ರಧಾನಿ:

ಹಿಂದೆ ರಾಜ್ಯಸಭೆ ಚುನಾವಣೆ ಪ್ರಸಂಗವನ್ನು ನೆನಪಿಸಿಕೊಂಡ ಮಾಜಿ ಪ್ರಧಾನಿಗಳು; “ಕಾಂಗ್ರೆಸ್ ಎರಡನೇ ಅಭ್ಯರ್ಥಿ ಹಾಕುವ ಪ್ರಯತ್ನ ಮಾಡಿತ್ತು. ಆದರೆ, ಖರ್ಗೆ ಅವರು ದೇವೇಗೌಡರು ಸೋಲಬಾರದು. ಒಂದು ವೇಳೆ ಹಾಗೆ ಆಗುವುದೇ ಆಗಿದ್ದರೆ ನಾನು ಚುನಾವಣೆ ಕಣದಲ್ಲಿಯೇ ಇರುವುದಿಲ್ಲ ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು. ಅದಕ್ಕಾಗಿ ನಾನು ಖರ್ಗೆ ಅವರಿಗೆ ಆಭಾರಿ ಆಗಿದ್ದೇನೆ. ಇಂತಹ ಖರ್ಗೆ ಅವರನ್ನು, ಅದರಲ್ಲೂ 30ರಿಂದ 40 ವರ್ಷ ಸ್ವಚ್ಚ ರಾಜಕೀಯ ಮಾಡಿರುವ ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಆಗಲು ನೀಡುತ್ತದೆಯೇ?” ಎಂದು ಅವರು ನೇರವಾಗಿ ಪ್ರಶ್ನಿಸಿದರು.

ಕೇಂದ್ರದ ವಿರುದ್ಧ ಸಿದ್ದು ರಣಕಹಳೆ

ನಿಮ್ಮ ಹೆಸರನ್ನು ಪ್ರಧಾನಿ ಹುದ್ದೆಗೆ ನಿಮ್ಮದೇ ಮೈತ್ರಿಕೂಟದ ಕೆಲ ನಾಯಕರು ಪ್ರಸ್ತಾಪ ಮಾಡಿದರು. ಆದರೆ, I.N.D.I.A. ಮೈತ್ರಿಕೂಟದ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಈ ವ್ಯಕ್ತಿ ಸಿಎಂ ಆಗಬೇಕು ಎಂದು ನಾನು ಬಯಸಿದೆ. ನನ್ನ ಮಗ ಕುಮಾರಸ್ವಾಮಿ ಅವರ ಬದಲಿಗೆ ಖರ್ಗೆ ಅವರೇ ಸಿಎಂ ಆಗಬೇಕು ಎಂದು ನಾನು ಹೇಳಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್, ಖರ್ಗೆ ಬೇಡ, ನಿಮ್ಮ ಮಗನೇ ಸಿಎಂ ಆಗಲಿ ಎಂದು ಪಟ್ಟು ಹಿಡಿದರು. ಗುಲಾಂ ನಬಿ ಆಜಾದ್ ಹಾಗೂ ರಾಜಸ್ತಾನದ ಅಂದಿನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಅಂದು ನನ್ನ ಮನೆಗೆ ಬಂದು ಹಠ ಹಿಡಿದರು. ನನ್ನ ಮಗನನ್ನು ಸಿಎಂ ಮಾಡುವುದು ನನಗೆ ಇಷ್ಟ ಇರಲಿಲ್ಲ. ಖರ್ಗೆ ಅವರೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿ ಅವರೇ ಅವರೇ ಸಿಎಂ ಆಗಬೇಕು ಎಂದರು. ಖರ್ಗೆ ಅವರು ಈ ಸದನದಲ್ಲಿಯೇ ಇದ್ದಾರೆ ಎಂದು ದೇವೇಗೌಡರು ಗಟ್ಟಿ ದನಿಯಲ್ಲಿ ಹೇಳಿದರು.

ಕುಮಾರಸ್ವಾಮಿ ಸರಕಾರ ತೆಗೆದಿದ್ದು ಖರ್ಗೆ ಅವರಲ್ಲ:

ಅವತ್ತು ಹದಿಮೂರು ತಿಂಗಳು ಸಿಎಂ ಆಗಿದ್ದ ಕುಮಾರಸ್ವಾಮಿ ಆಗಿದ್ದ ಖರ್ಗೆ ಅವರನ್ನು ಕೆಳಗೆ ಇಳಿಸಿದ್ದು ಯಾರು? ಆ ಕೆಲಸ ಮಾಡಿದ್ದು ಖರ್ಗೆ ಅವರಲ್ಲ. ಖರ್ಗೆ ಪ್ರಾಮಾಣಿಕ ವ್ಯಕ್ತಿ. ಆದರೆ, ಅದೇ ಪಕ್ಷದ ಕಾಂಗ್ರೆಸ್ ನಾಯಕರು ಸರ್ಕಾರವನ್ನು ತೆಗೆದರು ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿ ನಿಭಾಯಿಸಲು ಸರ್ಕಾರ ವಿಫಲ

ನಾನೆಂದೂ ಪಕ್ಷದಿಂದ ಪಕ್ಷವನ್ನು ಬದಲಿಸಿಲ್ಲ. ರಾಜಕೀಯ ನೈತಿಕತೆ ಕಳೆದುಕೊಂಡಿಲ್ಲ. ಆದರೆ, ಕಾಂಗ್ರೆಸ್ ನಾಯಕರು ನನ್ನ ಪಕ್ಷವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡಿದ್ದಾಗ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇನೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆ. ಆ ವ್ಯಕ್ತಿಗಳ ಹೆಸರುಗಳನ್ನು ನಾನು ಇಲ್ಲಿ ಪ್ರಸ್ತಾಪ ಮಾಡುವುದಿಲ್ಲ, ಏಕೆಂದರೆ ಅವರು ಈ ಸದನರ ಸದಸ್ಯರು ಅಲ್ಲ. ನನ್ನ ಮಿತಿ ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ಪ್ರಜಾಪ್ರಭುತ್ವ ಜನರ ಹೃದಯಲ್ಲಿದೆ:

ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕೆಲವರು ಹೇಳುತ್ತಾರೆ. ಅದನ್ನು ನಾನು ಒಪ್ಪುವುದಿಲ್ಲ. ಏಕೆಂದರೆ, ಪ್ರಜಾಪ್ರಭುತ್ವ ಈ ದೇಶದ ಜನರ ಹೃದಯದಲ್ಲಿ ಇದೆ. ಈ ದೇಶದಲ್ಲಿ ಸರ್ವಾಧಿಕಾರ ಎನ್ನುವುದು ಬರಲು ಸಾಧ್ಯವೇ ಇಲ್ಲ ಎಂದು ಮಾಜಿ ಪ್ರಧಾನಿಗಳು ಸಂವಿಧಾನ ರಚಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿದರು. ಮಾಜಿ ಪ್ರಧಾನಿಗಳ ಎಲ್ಲಾ ಮಾತುಗಳನ್ನು ಸದನದಲ್ಲಿಯೇ ಹಾಜರಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಮೌನವಾಗಿ ಆಲಿಸಿದರು.

Share this:

  • WhatsApp
  • Post
  • Tweet
  • Print
  • Email
hd devegowdamallikarjuna khargerajyasbha
Share 3 FacebookTwitterPinterestEmail
admin

previous post
ದೊರೆಗೆ ದೂರುಗಳ ಸುರಿಮಳೆ
next post
ದಿನ ಭವಿಷ್ಯ : ಶುಕ್ರವಾರ, 09 ಫೆಬ್ರವರಿ 2024

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ