Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸುರ್ಜೇವಾಲ ವಿರುದ್ಧ ಸಿದ್ದರಾಮಯ್ಯ ಬೆಂಬಲಿಗರು ಗರಂ

by KM Shivaraju February 9, 2024
written by KM Shivaraju February 9, 2024 1 comment 1 minutes read
2FacebookTwitterPinterestEmail
187


ರಾಜ್ಯ ಉಸ್ತುವಾರಿ ನಿಯಂತ್ರಣಕ್ಕೆ ಪಟ್ಟು

ಬೆಂಗಳೂರು:ಆಡಳಿತದಲ್ಲಿ ಅನಗತ್ಯವಾಗಿ ಮೂಗು ತೂರಿಸುವ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ರಾಜ್ಯ ಉಸ್ತುವಾರಿಯಿಂದ ವಿಮುಕ್ತಿಗೊಳಿಸಿ, ಇಲ್ಲವೇ, ನಿಯಂತ್ರಣದಲ್ಲಿಡಿ ಎಂದು ಸಿದ್ದರಾಮಯ್ಯ ಬೆಂಬಲಿಗ ಪರಿಶಿಷ್ಟ ಜಾತಿ ವರ್ಗ ಮತ್ತು ಪರಿಶಿಷ್ಟ ವರ್ಗದ ಸಚಿವರು ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಾ, ಪಕ್ಷದ ನೇಮಕಾತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.

ಇವರ ಈ ಕೃತ್ಯದಿಂದ ಉತ್ತಮ ಆಡಳಿತ ನೀಡಲು ನಮಗೆ ಕೆಲವೆಡೆ ಅಡ್ಡಿ ಉಂಟಾಗುತ್ತಿದೆ, ಪಕ್ಷ ಸಂಘಟನೆ ಮತ್ತು ಆಡಳಿತದ ಉಸ್ತುವಾರಿ ಜವಾಬ್ದಾರಿಯನ್ನು ನಿಭಾಯಿಸಬೇಕೇ ಹೊರತು ಎಲ್ಲಾ ವಿಷಯಗಳಲ್ಲೂ ಮೂಗು ತೂರಿಸುವುದಲ್ಲ ಎಂದಿದ್ದಾರೆ.

ಕೆ.ಎಚ್.ಮುನಿಯಪ್ಪ ನಿವಾಸದಲ್ಲಿ ಸಭೆ

ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಉಪಹಾರ ಕೂಟಕ್ಕೆ ಸೇರಿ ತಮ್ಮ ಸಮಾಜಕ್ಕೆ ಸಂಬಂಧಿಸಿದಂತೆ ಕೆಲವು ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಉಪಹಾರ ಕೂಟದಲ್ಲಿ ಮುನಿಯಪ್ಪ ಅಲ್ಲದೆ, ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಕೆ.ಎನ್. ರಾಜಣ್ಣ, ಆರ್.ಬಿ. ತಿಮ್ಮಾಪುರ ಭಾಗವಹಿಸಿದ್ದರು. ಅಲ್ಲದೆ ಆ ಸಮಾಜಕ್ಕೆ ಸೇರಿದ ಕೆಲವು ಹಿರಿಯ ಶಾಸಕರೂ ಉಪಹಾರ ಕೂಟದಲ್ಲಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 7 ಮೀಸಲು ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ನಾವು ಹೇಳಿದವರಿಗೇ ನೀಡಬೇಕು.

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪಕ್ಷಕ್ಕೆ ಮೂರು ಸ್ಥಾನ ದೊರೆಯಲಿದ್ದು, ಅದರಲ್ಲಿ ಒಂದು ಪರಿಶಿಷ್ಟರಿಗೆ ನೀಡಲೇಬೇಕು.

ಕಾರ್ಯಕರ್ತರಿಗೂ ಅಧಿಕಾರ ನೀಡುವ ತೀರ್ಮಾನ

ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರಿಗೂ ಅಧಿಕಾರ ನೀಡುವ ತೀರ್ಮಾನವನ್ನು ರಾಜ್ಯ ಘಟಕ ಕೈಗೊಂಡಿದೆ.

ಕಾಂಗ್ರೆಸ್‌ನ ಅಧಿನಾಯಕ ರಾಹುಲ್ ಗಾಂಧಿ ಅವರ ಅಣತಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ 34 ಕಾರ್ಯಕರ್ತರನ್ನು ಆಯ್ಕೆ ಮಾಡಿ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಪಟ್ಟಿ ಸಿದ್ಧಪಡಿಸಿದೆ.

ಈ ಪಟ್ಟಿಗೆ ವರಿಷ್ಠರ ಅನುಮತಿ ಇದುವರೆಗೂ ದೊರೆತಿಲ್ಲ, ಇದಕ್ಕೆ ರಾಜ್ಯ ಉಸ್ತುವಾರಿಯೇ ಕಾರಣ ಎಂದು ಸಭೆ ಪರಿಗಣಿಸಿದೆ.
ತಮಗೆ ಬೇಕಾದವರನ್ನು ಸೇರಿಸಿದ್ದಾರೆ

ರಾಜ್ಯ ಘಟಕ ಕಳುಹಿಸಿದ ಪಟ್ಟಿಯಲ್ಲಿ 9 ಮಂದಿಯನ್ನು ಬದಲಿಸಿ ಸುರ್ಜೇವಾಲ ತಮಗೆ ಬೇಕಾದವರನ್ನು ಸೇರಿಸಿದ್ದಾರೆ.

ರಾಜ್ಯಸಭಾ ಟಿಕೆಟ್: ಬಿಜೆಪಿ-ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ; ದೆಹಲಿಯಲ್ಲಿ ವಿಜಯೇಂದ್ರ-ನಡ್ಡ ಚರ್ಚೆ

ಈ ವ್ಯಕ್ತಿಗಳು ಪಕ್ಷದಲ್ಲಿ ಸಕ್ರಿಯರಾಗಿಲ್ಲ, ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಬೇಕು-ಬೇಡಗಳನ್ನು ನೋಡಿಕೊಳ್ಳುವವರಿಗೆ ಮಣೆ ಹಾಕಲಾಗಿದೆ.

ವರಿಷ್ಠರೇ ಆಡಳಿತದಲ್ಲಿ ಮತ್ತು ನೇಮಕಾತಿ ವಿಚಾರದಲ್ಲಿ ಮೂಗು ತೂರಿಸಿದರೆ, ನಮಗೇನು ಕೆಲಸ ಎಂದು ಸಭೆಯಲ್ಲಿದ್ದವರು ಪ್ರಶ್ನಿಸಿದ್ದಾರೆ.

ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು, ಶುಕ್ರವಾರ ಸಂಜೆ ಹಿಂತಿರುಗಿದ ನಂತರ ಇಲ್ಲವೇ ಶನಿವಾರ ಬೆಳಗ್ಗೆ ಭೇಟಿ ಮಾಡಿ ಸುರ್ಜೇವಾಲ ಹಸ್ತಕ್ಷೇಪಕ್ಕೆ ಕಡಿವಾಣ ಹಾಕಬೇಕು ಮತ್ತು ನೀವು ವರಿಷ್ಠರ ಗಮನಕ್ಕೆ ತರಬೇಕು ಎಂದು ಮನವಿ ಮಾಡಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
demanding to controlemeeting cm to solve the mattersome of congres state leaders angry on surjevala
2 FacebookTwitterPinterestEmail
KM Shivaraju

previous post
ಈ ಬಾರಿ ಕೇಂದ್ರ ಸಚಿವರಿಗೆ ರಾಜ್ಯಸಭಾ ಟಿಕೆಟ್ ಇಲ್ಲ?
next post
ದಿನ ಭವಿಷ್ಯ : ಶನಿವಾರ, 10 ಫೆಬ್ರವರಿ 2024

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ