Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹದಗೆಟ್ಟ ಕಾನೂನು ಸುವ್ಯವಸ್ಥೆ: ವಿಧಾನಸಭೆಯಲ್ಲಿ ಕೋಲಾಹಲ

by admin February 13, 2024
written by admin February 13, 2024 0 comments 2 minutes read
Share 3FacebookTwitterPinterestEmail
215

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಗಲಿನಲ್ಲೇ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಕೊಲೆ, ಸುಲಿಗೆ ನಡೆಯುತ್ತಿವೆ ಎಂದು ವಿಧಾನಸಭೆಯಲ್ಲಿಂದು ಪ್ರತಿಪಕ್ಷಗಳು ಮಾಡಿದ ಆರೋಪ ಭಾರೀ ಕೋಲಾಹಲಕ್ಕೆ ಎಡೆ ಮಾಡಿಕೊಟ್ಟಿತು.

ಸದನ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸುನೀಲ್ ಕುಮಾರ್ ಸೇರಿದಂತೆ ಹಲವರು ಮಾಡಿದ ಆರೋಪ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶ್ನೋತ್ತರ ವೇಳೆಯನ್ನು ಕೈಗೆತ್ತಿಕೊಳ್ಳಲು ಮುಂದಾದಾಗ ಮಧ್ಯ ಪ್ರವೇಶಿಸಿದ ಅಶೋಕ್, ಹಾವೇರಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ, ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಲಾಗಿದೆ, ಶಿವಮೊಗ್ಗದಲ್ಲಿ ಮಚ್ಚು-ಲಾಂಗ್‌ಗಳ ಬ್ಯಾನರ್ ಹಾಕುತ್ತಿದ್ದಾರೆ, ಭಗವಾಧ್ವಜ ಅಳವಡಿಸಲು ವಿರೋಧ ವ್ಯಕ್ತಪಡಿಸಲಾಗುತ್ತಿದೆ.

ಸೈಬರ್ ಕ್ರೈಮ್‌ಗಳು ಹೆಚ್ಚಾಗಿವೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪ್ರಶ್ನೋತ್ತರ ವೇಳೆಯನ್ನು ಬದಿಗಿರಿಸಿ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ನಿಯಮಾವಳಿ ಪ್ರಕಾರ ನಡೆಯಲಿ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ವಿರೋಧ ಪಕ್ಷಗಳ ಬೇಡಿಕೆಯಂತೆ ಚರ್ಚೆ ಮಾಡಲು ಅಭ್ಯಂತರ ಇಲ್ಲ, ನಿಯಮಾವಳಿ ಪ್ರಕಾರ ಮೊದಲು ಪ್ರಶ್ನೋತ್ತರ ನಡೆಯಲಿ ಎಂದರು.

ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಚರ್ಚೆಗೆ ಮೊದಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು.

ಪ್ರಿಯಾಂಕ ಖರ್ಗೆ ಸವಾಲು

ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಕಾನೂನು ಸುವ್ಯವಸ್ಥೆ ಹದಗೆಡಿಸುವವರು ನೀವೆ, ಇಲ್ಲಿ ಚರ್ಚೆ ಮಾಡುವವರು ನೀವೆ, ರಾಜ್ಯದ ರೈತರನ್ನು ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ, ಅದರ ಬಗ್ಗೆಯೂ ಚರ್ಚೆ ಮಾಡೋಣ, ಪಿಎಸ್‌ಐ ನೇಮಕಾತಿ ಹಗರಣದ ಕುರಿತು ನ್ಯಾಯಮೂರ್ತಿ ವೀರಪ್ಪ ನೇತೃತ್ವದ ನ್ಯಾಯಾಂಗ ತನಿಖಾ ಆಯೋಗದ ಕುರಿತು ಚರ್ಚೆಯಾಗಲಿ, ರಾಷ್ಟ್ರಧ್ವಜವನ್ನು ಕೆಳಗೆ ಇಳಿಸಿ ಭಗವಾಧ್ವಜ ಏರಿಸುವುದು ಚರ್ಚೆಯಾಗಲಿ, ಪ್ರಸ್ತಾಪ ಮಾಡಿ ಎಂದು ಸವಾಲು ಹಾಕಿದರು.

ಸುನೀಲ್ ಕುಮಾರ್, ನಾವು ಏನು ಪ್ರಸ್ತಾಪ ಮಾಡಬೇಕು ಎಂಬ ಬಗ್ಗೆ ನೀವು ನಿರ್ದೇಶನ ನೀಡುವ ಅಗತ್ಯ ಇಲ್ಲ ಎಂದರು. ಈ ವೇಳೆ ಪ್ರಿಯಾಂಕ್ ಖರ್ಗೆ ಮತ್ತು ಸುನೀಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆಯಿತು.

ಉಪ್ಪು, ಹುಳಿ, ಖಾರ ಏನೂ ಇಲ್ಲ

ಅಶೋಕ್, ನಮಗೆ ಬುದ್ಧಿ ಹೇಳಲು ಬರಬೇಡಿ, ನಿಮ್ಮ ಇಂಡಿಯಾ ಮಿತ್ರಕೂಟಕ್ಕೆ ಹೇಳಿಕೊಳ್ಳಿ ಎಂದು ತಿರುಗೇಟು ನೀಡಿದರು.

ಕೆಲಕಾಲ ಕಾವೇರಿದ ಚರ್ಚೆ ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್, ಸದಸ್ಯರು ಆರಂಭದ ಹುಮ್ಮಸ್ಸಿನಲ್ಲಿರುತ್ತಾರೆ, ನಿಧಾನಕ್ಕೆ ಸಮ ಪ್ರಮಾಣಕ್ಕೆ ಬರಲಿ, ಕೊಬ್ಬರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕು ಎಂಬ ವಿಚಾರ ಚರ್ಚೆ ಮಾಡಲು ಜೆಡಿಎಸ್‌ನ ಹೆಚ್.ಡಿ.ರೇವಣ್ಣ, ಬಾಲಕೃಷ್ಣ ಮೊದಲು ನಿಲುವಳಿ ಸೂಚನೆ ನೀಡಿದ್ದಾರೆ, ನಂತರ ಬಿಜೆಪಿ ನೀಡಿರುವ ಕಾನೂನು ಸುವ್ಯವಸ್ಥೆ ಸೂಚನೆ ತೆಗೆದುಕೊಳ್ಳೋಣ, ನಿಯಮದ ಪ್ರಕಾರ ಮೊದಲು ಸೂಚನಾ ಪತ್ರ ಕೊಟ್ಟವರಿಗೆ ಅವಕಾಶ ಮಾಡಿಕೊಡಲಾಗುವುದು. ಬಿಜೆಪಿ ಸದಸ್ಯರು ನಾಳೆ ಹೊಸದಾಗಿ ಸೂಚನಾ ಪತ್ರ ಕಳುಹಿಸಲಿ, ಪರಿಶೀಲಿಸುತ್ತೇನೆ ಎಂದರು.

ಸೂಚನಾ ಪತ್ರ ನೀಡಿ

ಅಶೋಕ್ ಹಾಗೂ ಅರಗ ಜ್ಞಾನೇಂದ್ರ ಮಾತನಾಡಿ, ಜೆಡಿಎಸ್ ನಮ್ಮ ಪಾಲುದಾರರಾಗಿದ್ದಾರೆ, ಅಧಿಕೃತ ವಿರೋಧ ಪಕ್ಷದ ನಿಲುವಳಿ ಸೂಚನೆ ಮೊದಲು ಕೈಗೆತ್ತಿಕೊಳ್ಳಬೇಕು, ವಿಚಾರ ಗಂಭೀರವಾಗಿದೆ ಎಂದಾಗ, ನಿಲುವಳಿ ಸೂಚನೆ ನೀಡುವಾಗ ಗಂಭೀರ ವಿಚಾರ ಎಂದು ಗೊತ್ತಿರಲಿಲ್ಲವೇ, ಮೊದಲು ಸಭಾಧ್ಯಕ್ಷರ ಕಚೇರಿಗೆ ಸೂಚನಾ ಪತ್ರ ನೀಡಬೇಕಲ್ಲವೇ ಎಂದು ಸಭಾಧ್ಯಕ್ಷರು ಪ್ರಶ್ನಿಸಿದರು.

ಸಚಿವ ಪರಮೇಶ್ವರ್, ಕಾನೂನು ಸುವ್ಯವಸ್ಥೆಯನ್ನು ನಿಲುವಳಿ ಸೂಚನೆಯಡಿ ಚರ್ಚಿಸಲು ಅವಕಾಶವಿದೆಯೇ ಎಂದರು.

ಈ ಹಂತದಲ್ಲಿ ವಿರೋಧ ಪಕ್ಷಗಳ ಸದಸ್ಯರು ಧ್ವನಿ ಏರಿಸಿ ವಾಗ್ವಾದಕ್ಕೆ ಇಳಿದಾಗ ಆಡಳಿತ ಪಕ್ಷದ ಶಾಸಕರಿಂದಲೂ ಪ್ರತಿಯಾಗಿ ಗದ್ದಲ ಕೇಳಿಬಂದಿತು. ಇದರಿಂದ ಸದನ ಕೆಲಕಾಲ ಗೊಂದಲದ ವಾತಾವರಣದಲ್ಲಿ ಮುಳುಗಿತು.

ಸಭಾಧ್ಯಕ್ಷರು, ಕೊಬ್ಬರಿ ಬೆಲೆ ಕುರಿತು ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ, ಕಾನೂನು ಸುವ್ಯವಸ್ಥೆ ಕುರಿತು ಹೊಸ ಸೂಚನೆ ಕೊಟ್ಟರೆ ನಾಳೆ ಪರಿಶೀಲಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

Share this:

  • WhatsApp
  • Post
  • Tweet
  • Print
  • Email
bjp objectionfirst take main opposition's matterlaw and order failure-opposition aligationspeaker - i will take it next daytake first jds mattervidhana sabha
Share 3 FacebookTwitterPinterestEmail
admin

previous post
ದಿನ ಭವಿಷ್ಯ : ಮಂಗಳವಾರ, 13 ಫೆಬ್ರವರಿ 2024
next post
ರಾಜ್ಯಸಭಾ ಚುನಾವಣೆ: ವಲಸಿಗರಿಗೆ ಕಾಂಗ್ರೆಸ್ ಟಿಕೆಟ್

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ